Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಳಪೆ ಬೀಜಗಳ ಮಾರಾಟ ಹೆಚ್ಚಳ – ರೈತರಿಗೆ ಭಾರೀ ನಷ್ಟ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bellary | ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಳಪೆ ಬೀಜಗಳ ಮಾರಾಟ ಹೆಚ್ಚಳ – ರೈತರಿಗೆ ಭಾರೀ ನಷ್ಟ

Bellary

ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಳಪೆ ಬೀಜಗಳ ಮಾರಾಟ ಹೆಚ್ಚಳ – ರೈತರಿಗೆ ಭಾರೀ ನಷ್ಟ

Public TV
Last updated: November 26, 2024 5:18 pm
Public TV
Share
3 Min Read
poor seeds copy
SHARE

– ವಿಜಯನಗರಕ್ಕೆ ಮೊದಲ ಸ್ಥಾನ

ಕೊಪ್ಪಳ: ಮುಂಗಾರು, ಹಿಂಗಾರು ಸಮಯದಲ್ಲಿ ಬಿತ್ತನೆ ಮಾಡುವ ರೈತರಿಗೆ ಕಂಪನಿಗಳು ಕಳಪೆ ಗುಣಮಟ್ಟದ ಬಿತ್ತನೆ ಬೀಜಗಳನ್ನು ನೀಡುತ್ತಿದ್ದು, ಈ ರೀತಿಯ ಪ್ರಕರಣಗಳು ಕಲ್ಯಾಣ ಕರ್ನಾಟಕ ಭಾಗದ 7 ಜಿಲ್ಲೆಗಳಲ್ಲಿ ಕಂಡುಬಂದಿದೆ. ಈ ಪೈಕಿ ವಿಜಯನಗರ ಜಿಲ್ಲೆ ಮೊದಲ ಸ್ಥಾನದಲ್ಲಿರುವ ಅಂಶ ಬೆಳಕಿಗೆ ಬಂದಿದೆ.

ಹಿಂದುಳಿದ ಜಿಲ್ಲೆಗಳು ಎಂದು ಗುರುತಿಸಿಕೊಂಡಿರುವ ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳ ಜನರು ಹೆಚ್ಚಿನ ಪ್ರಮಾಣದಲ್ಲಿ ಕೃಷಿಯನ್ನು ಅವಲಂಬಿಸಿದ್ದಾರೆ. ಪ್ರತಿ ವರ್ಷ ಮುಂಗಾರು ಮಳೆಯ ಸಂದರ್ಭದಲ್ಲಿ ಮಳೆಯನ್ನು ಆಧಾರಿಸಿ ರೈತರು ಬೆಳೆ ಬೆಳೆಯಲು ಮುಂದಾಗುತ್ತಾರೆ.ಇದನ್ನೂ ಓದಿ: ನೀವು ಗೆದ್ದಾಗ ಮಾತ್ರ ಇವಿಎಂ ತಿರುಚಿರಲ್ವಾ? – ಬ್ಯಾಲೆಟ್‌ ಪೇಪರ್‌ ಮತದಾನ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

ರೈತರನ್ನು ಗುರಿ ಮಾಡಿಕೊಂಡಿರುವ ಕೆಲ ಬೀಜದ ಕಂಪನಿಗಳು ನಕಲಿ, ಕಳಪೆ ಗುಣಮಟ್ಟದ ಬೀಜಗಳನ್ನು ನೀಡಿ, ರೈತರನ್ನು ಯಾಮಾರಿಸುವ ಪ್ರಕರಣಗಳು ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಳೆದ ಕೆಲ ವರ್ಷಗಳಿಂದ ನಡೆಯುತ್ತಿದೆ. ಅದನ್ನು ತಡೆಯಬೇಕು ಎನ್ನುವ ಉದ್ದೇಶದಿಂದ ಆಯಾ ಜಿಲ್ಲೆಗಳ ಕೃಷಿ ಇಲಾಖೆಯ ಕೃಷಿ ಜಾಗೃತ ದಳದ ಅಧಿಕಾರಿಗಳು ಬೀಜದ ಅಂಗಡಿಗಳ ಮೇಲೆ ದಾಳಿ ನಡೆಸಿ, ಬೀಜದ ಮಾದರಿಗಳನ್ನು ಪಡೆದುಕೊಂಡು ಬೀಜ ಪರೀಕ್ಷಾ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ. ಪರೀಕ್ಷೆಗೆ ಕಳುಹಿಸಿದ ಬೀಜಗಳಲ್ಲಿ ಅಧಿಕ ಸಂಖ್ಯೆಯ ಕಳಪೆ ಗುಣಮಟ್ಟದ ಬೀಜಗಳು ಇರುವುದು ಗಮನಾರ್ಹ ವಿಷಯವಾಗಿದೆ.

7 ಜಿಲ್ಲೆಗಳಲ್ಲಿ 1,963 ಮಾದರಿಗಳ ಸಂಗ್ರಹ:
ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳಲ್ಲಿ ಕಳಪೆ ಗುಣಮಟ್ಟದ ಬೀಜಗಳ ಮಾರಾಟದ ದಂಧೆ ಜೋರಾಗಿಯೇ ನಡೆಯುತ್ತಿದೆ. ನಾಟಿ ಮಾಡಿದ ಬೀಜಗಳು ಮೊಳಕೆಯಾಗದೆ ಇರುವುದು, ಬೆಳೆದಿರುವ ಬೆಳೆ ಹೂ ಬಿಡದೇ ಇರುವುದು ಹಾಗೂ ಕಾಳು ಕಟ್ಟದೆ ಇರುವ ಕಾರಣಕ್ಕೆ ಈ ಭಾಗದ ಲಕ್ಷಾಂತರ ರೈತರು ನಷ್ಟವನ್ನು ಅನುಭವಿ ಸಿದ್ದಾರೆ.

ಸಾಕಷ್ಟು ದೂರುಗಳು ಕೇಳಿ ಬಂದಿರುವ ಹಿನ್ನೆಲೆ ಪ್ರಸಕ್ತ 2023-24ನೇ ಸಾಲಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ 7 ಜಿಲ್ಲೆಗಳನ್ನು ಸೇರಿಕೊಂಡು ಕೃಷಿ ಜಾಗೃತ ದಳದ ಅಧಿಕಾರಿಗಳು 1,963 ಬೀಜದ ಮಾದರಿಗಳನ್ನು ಪಡೆದುಕೊಂಡು ಬೀಜ ಪರೀಕ್ಷಾ ಕೇಂದ್ರಕ್ಕೆ ಗುಣಮಟ್ಟ ಪರೀಕ್ಷೆಗಾಗಿ ಕಳುಹಿಸಿ ಕೊಟ್ಟಿದ್ದಾರೆ.

ಇದರಲ್ಲಿ ಪರೀಕ್ಷಾ ಕೇಂದ್ರದ ಅಧಿಕಾರಿಗಳು 1,919 ಮಾದರಿಗಳನ್ನು ಪರೀಕ್ಷೆ ನಡೆಸಲಾಗಿದ್ದು, ಪರೀಕ್ಷೆಯಲ್ಲಿ 63 ಕಂಪನಿಗಳ ಬೀಜಗಳು ಕಳಪೆ ಗುಣಮಟ್ಟದಿಂದ ಕೂಡಿದ್ದು, ಬಿತ್ತನೆಗೆ ಯೋಗ್ಯವಲ್ಲ ಎನ್ನುವ ಅಂಶ ತಿಳಿದುಬಂದಿದೆ. ಇನ್ನೂಳಿದ 44 ಮಾದರಿಗಳು ಅಧಿಕಾರಿಗಳು ಸರಿಯಾಗಿ ಸಂಗ್ರಹ ಮಾಡಿಲ್ಲ ಎನ್ನುವ ಕಾರಣಕ್ಕೆ ಪರೀಕ್ಷಾ ಕೇಂದ್ರದಲ್ಲಿ ತಿರಸ್ಕೃತಗೊಂಡಿವೆ.

ಪರೀಕ್ಷಾ ಕೇಂದ್ರದಲ್ಲಿ ಬೀಜಗಳ ಪರೀಕ್ಷೆ ನಡೆಸಿದ ವೇಳೆ ವಿಜಯನಗರ ಜಿಲ್ಲೆಯಲ್ಲಿಯೇ ಅತಿ ಹೆಚ್ಚು ಅಂದರೆ 30 ಕಂಪನಿಗಳ ಬೀಜಗಳು ಕಳಪೆಯಾಗಿರುವುದು ಬೆಳಕಿಗೆ ಬಂದಿದೆ. ಇನ್ನೂ ಕೊಪ್ಪಳ ಜಿಲ್ಲೆಯಲ್ಲಿ 13 ಕಂಪನಿಗಳ ಬೀಜಗಳು ಕಳಪೆಯಾಗಿದ್ದು, ಎರಡನೇ ಸ್ಥಾನದಲ್ಲಿ ಇದೆ.

ಜಿಲ್ಲಾವಾರು ಬೀಜಗಳ ಸಂಗ್ರಹ:
ಕೊಪ್ಪಳ: ಒಟ್ಟು ಬೀಜಗಳು 287, ತಿರಸ್ಕೃತ ಬೀಜಗಳು 00, ಪರೀಕ್ಷಿಸಿದ ಬೀಜಗಳು 287, ಕಳಪೆ ಬೀಜ ಕಂಪನಿಗಳು 13
ರಾಯಚೂರು: ಒಟ್ಟು ಬೀಜಗಳು 242, ತಿರಸ್ಕೃತ ಬೀಜಗಳು 12, ಪರೀಕ್ಷಿಸಿದ ಬೀಜಗಳು 230, ಕಳಪೆ ಬೀಜ ಕಂಪನಿಗಳು 04
ಬಳ್ಳಾರಿ: ಒಟ್ಟು ಬೀಜಗಳು 359, ತಿರಸ್ಕೃತ ಬೀಜಗಳು 01, ಪರೀಕ್ಷಿಸಿದ ಬೀಜಗಳು 358, ಕಳಪೆ ಬೀಜ ಕಂಪನಿಗಳು 06
ವಿಜಯನಗರ: ಒಟ್ಟು ಬೀಜಗಳು 390, ತಿರಸ್ಕೃತ ಬೀಜಗಳು 08, ಪರೀಕ್ಷಿಸಿದ ಬೀಜಗಳು 382, ಕಳಪೆ ಬೀಜ ಕಂಪನಿಗಳು 30
ಕಲಬುರಗಿ: ಒಟ್ಟು ಬೀಜಗಳು 251, ತಿರಸ್ಕೃತ ಬೀಜಗಳು 05, ಪರೀಕ್ಷಿಸಿದ ಬೀಜಗಳು 246, ಕಳಪೆ ಬೀಜ ಕಂಪನಿಗಳು 01
ಯಾದಗಿರಿ: ಒಟ್ಟು ಬೀಜಗಳು 146, ತಿರಸ್ಕೃತ ಬೀಜಗಳು 05, ಪರೀಕ್ಷಿಸಿದ ಬೀಜಗಳು 141, ಕಳಪೆ ಬೀಜ ಕಂಪನಿಗಳು 03
ಬೀದರ್: ಒಟ್ಟು ಬೀಜಗಳು 288, ತಿರಸ್ಕೃತ ಬೀಜಗಳು 13, ಪರೀಕ್ಷಿಸಿದ ಬೀಜಗಳು 275, ಕಳಪೆ ಬೀಜ ಕಂಪನಿಗಳು 06.ಇದನ್ನೂ ಓದಿ: ರಾಮನಗರ| ಆಯುಧಪೂಜೆಯಲ್ಲಿ ರೌಡಿಶೀಟರ್‌ಗಳನ್ನು ಸನ್ಮಾನಿಸಿದ ಪೊಲೀಸರು

TAGGED:farmersKoppalPoor Quality SeedsSeeds Companyಕಲ್ಯಾಣ ಕರ್ನಾಟಕಕಳಪೆ ಬೀಜಬೀಜದ ಕಂಪನಿಗಳು
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

nitish kumar bihar cm oath
Latest

ರಾಜ್ಯಸಭೆ ಸದಸ್ಯರಾಗಿ ಶುಕ್ರವಾರ ನಿತೀಶ್ ಕುಮಾರ್ ಪ್ರಮಾಣ ಸ್ವೀಕಾರ – ಏ.14 ರಂದು ಬಿಹಾರಕ್ಕೆ ನೂತನ ಸಿಎಂ?

Public TV
By Public TV
17 minutes ago
congress flag
Latest

ಬಾರಾಮತಿ ಉಪಚುನಾವಣೆ; ಸ್ಪರ್ಧೆಯಿಂದ ಹಿಂದೆ ಸರಿದ ಕಾಂಗ್ರೆಸ್

Public TV
By Public TV
28 minutes ago
karnataka High Court
Bengaluru City

ಶಾಲೆಗಳಲ್ಲಿ `ವಂದೇ ಮಾತರಂ’ ಆರು ಚರಣಗಳೊಂದಿಗೆ ಹಾಡೋದು ಕಡ್ಡಾಯ – ಹೈಕೋರ್ಟ್‌ನಿಂದ ಅರ್ಜಿ ವಜಾ

Public TV
By Public TV
29 minutes ago
Strait of Hormuz 2
Latest

ಭಾರತ ತಲುಪಿದ ʻಗ್ರೀನ್ ಆಶಾʼ – 15,000 ಟನ್ LPG ಹೊತ್ತು ತಂದ ನೌಕೆ

Public TV
By Public TV
36 minutes ago
AI Image 1
Crime

11 ದಿನಗಳಲ್ಲಿ ಹಣ ಡಬಲ್‌ ಆಗುತ್ತೆ ಅಂತ ಆಸೆಗೆ ಬಿದ್ದು 12 ಕೋಟಿ ಕಳ್ಕೊಂಡ ವೈದ್ಯ

Public TV
By Public TV
50 minutes ago
Yelahanka Suicide
Bengaluru City

ಪ್ರೀತಿ ನಿರಾಕರಿಸಿದ್ದಕ್ಕೆ ಯುವಕ ಆತ್ಮಹತ್ಯೆ

Public TV
By Public TV
55 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?