Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಳಪೆ ಬೀಜಗಳ ಮಾರಾಟ ಹೆಚ್ಚಳ – ರೈತರಿಗೆ ಭಾರೀ ನಷ್ಟ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bellary | ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಳಪೆ ಬೀಜಗಳ ಮಾರಾಟ ಹೆಚ್ಚಳ – ರೈತರಿಗೆ ಭಾರೀ ನಷ್ಟ

Bellary

ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಳಪೆ ಬೀಜಗಳ ಮಾರಾಟ ಹೆಚ್ಚಳ – ರೈತರಿಗೆ ಭಾರೀ ನಷ್ಟ

Public TV
Last updated: November 26, 2024 5:18 pm
Public TV
Share
3 Min Read
poor seeds copy
SHARE

– ವಿಜಯನಗರಕ್ಕೆ ಮೊದಲ ಸ್ಥಾನ

ಕೊಪ್ಪಳ: ಮುಂಗಾರು, ಹಿಂಗಾರು ಸಮಯದಲ್ಲಿ ಬಿತ್ತನೆ ಮಾಡುವ ರೈತರಿಗೆ ಕಂಪನಿಗಳು ಕಳಪೆ ಗುಣಮಟ್ಟದ ಬಿತ್ತನೆ ಬೀಜಗಳನ್ನು ನೀಡುತ್ತಿದ್ದು, ಈ ರೀತಿಯ ಪ್ರಕರಣಗಳು ಕಲ್ಯಾಣ ಕರ್ನಾಟಕ ಭಾಗದ 7 ಜಿಲ್ಲೆಗಳಲ್ಲಿ ಕಂಡುಬಂದಿದೆ. ಈ ಪೈಕಿ ವಿಜಯನಗರ ಜಿಲ್ಲೆ ಮೊದಲ ಸ್ಥಾನದಲ್ಲಿರುವ ಅಂಶ ಬೆಳಕಿಗೆ ಬಂದಿದೆ.

ಹಿಂದುಳಿದ ಜಿಲ್ಲೆಗಳು ಎಂದು ಗುರುತಿಸಿಕೊಂಡಿರುವ ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳ ಜನರು ಹೆಚ್ಚಿನ ಪ್ರಮಾಣದಲ್ಲಿ ಕೃಷಿಯನ್ನು ಅವಲಂಬಿಸಿದ್ದಾರೆ. ಪ್ರತಿ ವರ್ಷ ಮುಂಗಾರು ಮಳೆಯ ಸಂದರ್ಭದಲ್ಲಿ ಮಳೆಯನ್ನು ಆಧಾರಿಸಿ ರೈತರು ಬೆಳೆ ಬೆಳೆಯಲು ಮುಂದಾಗುತ್ತಾರೆ.ಇದನ್ನೂ ಓದಿ: ನೀವು ಗೆದ್ದಾಗ ಮಾತ್ರ ಇವಿಎಂ ತಿರುಚಿರಲ್ವಾ? – ಬ್ಯಾಲೆಟ್‌ ಪೇಪರ್‌ ಮತದಾನ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

ರೈತರನ್ನು ಗುರಿ ಮಾಡಿಕೊಂಡಿರುವ ಕೆಲ ಬೀಜದ ಕಂಪನಿಗಳು ನಕಲಿ, ಕಳಪೆ ಗುಣಮಟ್ಟದ ಬೀಜಗಳನ್ನು ನೀಡಿ, ರೈತರನ್ನು ಯಾಮಾರಿಸುವ ಪ್ರಕರಣಗಳು ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಳೆದ ಕೆಲ ವರ್ಷಗಳಿಂದ ನಡೆಯುತ್ತಿದೆ. ಅದನ್ನು ತಡೆಯಬೇಕು ಎನ್ನುವ ಉದ್ದೇಶದಿಂದ ಆಯಾ ಜಿಲ್ಲೆಗಳ ಕೃಷಿ ಇಲಾಖೆಯ ಕೃಷಿ ಜಾಗೃತ ದಳದ ಅಧಿಕಾರಿಗಳು ಬೀಜದ ಅಂಗಡಿಗಳ ಮೇಲೆ ದಾಳಿ ನಡೆಸಿ, ಬೀಜದ ಮಾದರಿಗಳನ್ನು ಪಡೆದುಕೊಂಡು ಬೀಜ ಪರೀಕ್ಷಾ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ. ಪರೀಕ್ಷೆಗೆ ಕಳುಹಿಸಿದ ಬೀಜಗಳಲ್ಲಿ ಅಧಿಕ ಸಂಖ್ಯೆಯ ಕಳಪೆ ಗುಣಮಟ್ಟದ ಬೀಜಗಳು ಇರುವುದು ಗಮನಾರ್ಹ ವಿಷಯವಾಗಿದೆ.

7 ಜಿಲ್ಲೆಗಳಲ್ಲಿ 1,963 ಮಾದರಿಗಳ ಸಂಗ್ರಹ:
ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳಲ್ಲಿ ಕಳಪೆ ಗುಣಮಟ್ಟದ ಬೀಜಗಳ ಮಾರಾಟದ ದಂಧೆ ಜೋರಾಗಿಯೇ ನಡೆಯುತ್ತಿದೆ. ನಾಟಿ ಮಾಡಿದ ಬೀಜಗಳು ಮೊಳಕೆಯಾಗದೆ ಇರುವುದು, ಬೆಳೆದಿರುವ ಬೆಳೆ ಹೂ ಬಿಡದೇ ಇರುವುದು ಹಾಗೂ ಕಾಳು ಕಟ್ಟದೆ ಇರುವ ಕಾರಣಕ್ಕೆ ಈ ಭಾಗದ ಲಕ್ಷಾಂತರ ರೈತರು ನಷ್ಟವನ್ನು ಅನುಭವಿ ಸಿದ್ದಾರೆ.

ಸಾಕಷ್ಟು ದೂರುಗಳು ಕೇಳಿ ಬಂದಿರುವ ಹಿನ್ನೆಲೆ ಪ್ರಸಕ್ತ 2023-24ನೇ ಸಾಲಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ 7 ಜಿಲ್ಲೆಗಳನ್ನು ಸೇರಿಕೊಂಡು ಕೃಷಿ ಜಾಗೃತ ದಳದ ಅಧಿಕಾರಿಗಳು 1,963 ಬೀಜದ ಮಾದರಿಗಳನ್ನು ಪಡೆದುಕೊಂಡು ಬೀಜ ಪರೀಕ್ಷಾ ಕೇಂದ್ರಕ್ಕೆ ಗುಣಮಟ್ಟ ಪರೀಕ್ಷೆಗಾಗಿ ಕಳುಹಿಸಿ ಕೊಟ್ಟಿದ್ದಾರೆ.

ಇದರಲ್ಲಿ ಪರೀಕ್ಷಾ ಕೇಂದ್ರದ ಅಧಿಕಾರಿಗಳು 1,919 ಮಾದರಿಗಳನ್ನು ಪರೀಕ್ಷೆ ನಡೆಸಲಾಗಿದ್ದು, ಪರೀಕ್ಷೆಯಲ್ಲಿ 63 ಕಂಪನಿಗಳ ಬೀಜಗಳು ಕಳಪೆ ಗುಣಮಟ್ಟದಿಂದ ಕೂಡಿದ್ದು, ಬಿತ್ತನೆಗೆ ಯೋಗ್ಯವಲ್ಲ ಎನ್ನುವ ಅಂಶ ತಿಳಿದುಬಂದಿದೆ. ಇನ್ನೂಳಿದ 44 ಮಾದರಿಗಳು ಅಧಿಕಾರಿಗಳು ಸರಿಯಾಗಿ ಸಂಗ್ರಹ ಮಾಡಿಲ್ಲ ಎನ್ನುವ ಕಾರಣಕ್ಕೆ ಪರೀಕ್ಷಾ ಕೇಂದ್ರದಲ್ಲಿ ತಿರಸ್ಕೃತಗೊಂಡಿವೆ.

ಪರೀಕ್ಷಾ ಕೇಂದ್ರದಲ್ಲಿ ಬೀಜಗಳ ಪರೀಕ್ಷೆ ನಡೆಸಿದ ವೇಳೆ ವಿಜಯನಗರ ಜಿಲ್ಲೆಯಲ್ಲಿಯೇ ಅತಿ ಹೆಚ್ಚು ಅಂದರೆ 30 ಕಂಪನಿಗಳ ಬೀಜಗಳು ಕಳಪೆಯಾಗಿರುವುದು ಬೆಳಕಿಗೆ ಬಂದಿದೆ. ಇನ್ನೂ ಕೊಪ್ಪಳ ಜಿಲ್ಲೆಯಲ್ಲಿ 13 ಕಂಪನಿಗಳ ಬೀಜಗಳು ಕಳಪೆಯಾಗಿದ್ದು, ಎರಡನೇ ಸ್ಥಾನದಲ್ಲಿ ಇದೆ.

ಜಿಲ್ಲಾವಾರು ಬೀಜಗಳ ಸಂಗ್ರಹ:
ಕೊಪ್ಪಳ: ಒಟ್ಟು ಬೀಜಗಳು 287, ತಿರಸ್ಕೃತ ಬೀಜಗಳು 00, ಪರೀಕ್ಷಿಸಿದ ಬೀಜಗಳು 287, ಕಳಪೆ ಬೀಜ ಕಂಪನಿಗಳು 13
ರಾಯಚೂರು: ಒಟ್ಟು ಬೀಜಗಳು 242, ತಿರಸ್ಕೃತ ಬೀಜಗಳು 12, ಪರೀಕ್ಷಿಸಿದ ಬೀಜಗಳು 230, ಕಳಪೆ ಬೀಜ ಕಂಪನಿಗಳು 04
ಬಳ್ಳಾರಿ: ಒಟ್ಟು ಬೀಜಗಳು 359, ತಿರಸ್ಕೃತ ಬೀಜಗಳು 01, ಪರೀಕ್ಷಿಸಿದ ಬೀಜಗಳು 358, ಕಳಪೆ ಬೀಜ ಕಂಪನಿಗಳು 06
ವಿಜಯನಗರ: ಒಟ್ಟು ಬೀಜಗಳು 390, ತಿರಸ್ಕೃತ ಬೀಜಗಳು 08, ಪರೀಕ್ಷಿಸಿದ ಬೀಜಗಳು 382, ಕಳಪೆ ಬೀಜ ಕಂಪನಿಗಳು 30
ಕಲಬುರಗಿ: ಒಟ್ಟು ಬೀಜಗಳು 251, ತಿರಸ್ಕೃತ ಬೀಜಗಳು 05, ಪರೀಕ್ಷಿಸಿದ ಬೀಜಗಳು 246, ಕಳಪೆ ಬೀಜ ಕಂಪನಿಗಳು 01
ಯಾದಗಿರಿ: ಒಟ್ಟು ಬೀಜಗಳು 146, ತಿರಸ್ಕೃತ ಬೀಜಗಳು 05, ಪರೀಕ್ಷಿಸಿದ ಬೀಜಗಳು 141, ಕಳಪೆ ಬೀಜ ಕಂಪನಿಗಳು 03
ಬೀದರ್: ಒಟ್ಟು ಬೀಜಗಳು 288, ತಿರಸ್ಕೃತ ಬೀಜಗಳು 13, ಪರೀಕ್ಷಿಸಿದ ಬೀಜಗಳು 275, ಕಳಪೆ ಬೀಜ ಕಂಪನಿಗಳು 06.ಇದನ್ನೂ ಓದಿ: ರಾಮನಗರ| ಆಯುಧಪೂಜೆಯಲ್ಲಿ ರೌಡಿಶೀಟರ್‌ಗಳನ್ನು ಸನ್ಮಾನಿಸಿದ ಪೊಲೀಸರು

TAGGED:farmersKoppalPoor Quality SeedsSeeds Companyಕಲ್ಯಾಣ ಕರ್ನಾಟಕಕಳಪೆ ಬೀಜಬೀಜದ ಕಂಪನಿಗಳು
Share This Article
Facebook Whatsapp Whatsapp Telegram

Cinema news

santosh kumar sukhibhava movie
‘ಸುಖೀಭವ’ ಚಿತ್ರ ನಿರ್ಮಾಣಕ್ಕೆ ಉದ್ಯಮಿ ಸಂತೋಷ್ ಕುಮಾರ್ ಸಾಥ್
Cinema Latest Sandalwood Top Stories
Bengaluru International Film Festival
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
Bengaluru City Cinema Karnataka Latest Sandalwood States Top Stories
arvind reddy threat
ಉದ್ಯಮಿ ಅರವಿಂದ್‌ ರೆಡ್ಡಿಗೆ ಕೊಲೆ ಬೆದರಿಕೆ; ಆರೋಪಿ ಬಂಧನ
Bengaluru City Cinema Latest Main Post Sandalwood
again Bigg Boss Rajat controversy photo shoot in villain look while smoking a cigarette Mysuru
ಸಿಗರೇಟ್ ಸೇದುತ್ತಾ ವಿಲನ್ ಲುಕ್‌ನಲ್ಲಿ ಫೋಟೋ ಶೂಟ್ – ಮತ್ತೆ ರಜತ್‌ ವಿವಾದ
Cinema Crime Karnataka Latest Mysuru Top Stories TV Shows

You Might Also Like

Harley Davidson bike trump
Automobile

India-US Trade Deal | ಭಾರತದಲ್ಲಿ ಹಾರ್ಲೆ- ಡೇವಿಡ್ಸನ್‌ ಬೈಕ್ ಬೆಲೆ ಭಾರೀ ಇಳಿಕೆ!

Public TV
By Public TV
55 minutes ago
Kanakapura 40 Wild Elephant Spotted
Districts

ಕನಕಪುರದ ಕಾಡಂಚಿನ ಗ್ರಾಮದಲ್ಲಿ 40 ಕಾಡಾನೆಗಳ ಹಿಂಡು ಪ್ರತ್ಯಕ್ಷ – ಗ್ರಾಮಸ್ಥರಲ್ಲಿ ಆತಂಕ

Public TV
By Public TV
1 hour ago
Daughter in law commits suicide by hanging herself at home Basava kalyana Bidar
Bidar

ವೇಶ್ಯಾವಾಟಿಕೆ ಮಾಡುವಂತೆ ಅತ್ತೆಯಿಂದ ಕಿರುಕುಳ – ಮನೆಯಲ್ಲೇ ನೇಣು ಬಿಗಿದು ಸೊಸೆ ಆತ್ಮಹತ್ಯೆ

Public TV
By Public TV
2 hours ago
Namma Metro Yellow Line
Bengaluru City

ಕೇಂದ್ರದಿಂದ ಪತ್ರ ಬಾರದೇ ಇದ್ದರೆ ಮೆಟ್ರೋ ದರ ಏರಿಕೆ ಫಿಕ್ಸ್‌

Public TV
By Public TV
2 hours ago
Pakistan blast At least 25 killed in suicide bombing at religious shrine in Islamabad
Latest

ಇಸ್ಲಾಮಾಬಾದ್‌ ಮಸೀದಿಯಲ್ಲಿ 36 ಅಲ್ಲ 200 ಸಾವು – ಹೊಣೆ ಹೊತ್ತುಕೊಂಡ ಇಸ್ಲಾಮಿಕ್‌ ಸ್ಟೇಟ್‌

Public TV
By Public TV
3 hours ago
China conducted nuclear test days after Galwan clash
Latest

ಗಲ್ವಾನ್ ಘರ್ಷಣೆ ನಡೆದ 7 ದಿನದ ಬಳಿಕ ಚೀನಾದಿಂದ ರಹಸ್ಯ ಅಣು ಪರೀಕ್ಷೆ!

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?