‘ಲಕ್ಷ್ಮಿ ನಿವಾಸ’ದ ನಟಿ ಚಂದನಾ ಅನಂತಕೃಷ್ಣ (Chandana Ananthakrishna) ನ.28ರಂದು ಉದ್ಯಮಿ ಪ್ರತ್ಯಕ್ಷ್ ಜೊತೆ ಹಸೆಮಣೆ ಏರೋಕೆ ರೆಡಿಯಾಗಿದ್ದಾರೆ. ಸದ್ಯ ಮೆಹೆಂದಿ ಶಾಸ್ತ್ರ, ಸಂಗೀತ ಕಾರ್ಯಕ್ರಮವು ಅದ್ಧೂರಿಯಾಗಿ ಜರುಗಿದ್ದು, ಭಾವಿ ಪತಿ ಜೊತೆ ‘ಬಾರೇ ಬಾರೇ ಕಲ್ಯಾಣ ಮಂಟಪಕೆ ಬಾ’ ಎಂದು ನಟಿ ಭರ್ಜರಿಯಾಗಿ ಹೆಜ್ಜೆ ಹಾಕಿದ್ದಾರೆ.
ಬೆಂಗಳೂರಿನಲ್ಲಿ ಮೆಹಂದಿ ಶಾಸ್ತ್ರ, ಸಂಗೀತ ಕಾರ್ಯಕ್ರಮ ಅದ್ಧೂರಿಯಾಗಿ ಜರುಗಿದ್ದು, ಕ್ಯೂಟ್ ಜೋಡಿ ಚಂದನಾ ಮತ್ತು ಪ್ರತ್ಯಕ್ಷ್ ‘ಬಾರೇ ಬಾರೇ ಕಲ್ಯಾಣ ಮಂಟಪಕ್ಕೆ ಬಾ’ ಅಂತ ಹೆಜ್ಜೆ ಹಾಕಿ ಸಂಭ್ರಮಿಸಿದೆ. ಅಪ್ಪು ಸಿನಿಮಾದ ಹಾಡಿಗೆ ಡ್ಯಾನ್ಸ್ ಮಾಡಿ ಖುಷಿಪಟ್ಟಿದ್ದಾರೆ. ಈ ಸಂಭ್ರಮದಲ್ಲಿ ‘ಲಕ್ಷ್ಮಿ ನಿವಾಸ’ ಸೀರಿಯಲ್ ತಂಡ ಕೂಡ ಜೊತೆಯಾಗಿದೆ. ಮಾನಸಾ ದಂಪತಿ, ದಿಶಾ ಮದನ್ ದಂಪತಿ, ನಟ ಮಧು, ಕ್ಲೋಸ್ ಫ್ರೆಂಡ್ ನಯನಾ ದಂಪತಿ ಸೇರಿದಂತೆ ಕಿರುತೆರೆಯ ಕಲಾವಿದರು ಆತ್ಮಿಯರು ಭಾಗಿಯಾಗಿದರು.
ಇನ್ನೂ ನ.28ರಂದು ಉದ್ಯಮಿ ಪ್ರತ್ಯಕ್ಷ್ ಜೊತೆ ಪ್ಯಾಲೇಸ್ ಗ್ರೌಂಡ್ನಲ್ಲಿ ನಟಿ ಮದುವೆಯಾಗಲಿದ್ದಾರೆ. ಈ ಮದುವೆಗೆ (Wedding) ಬಿಗ್ ಬಾಸ್ ಮನೆಯ ಮಾಜಿ ಸ್ಪರ್ಧಿಗಳು, ಕಿರುತೆರೆಯ ಕಲಾವಿದರು ಭಾಗಿಯಾಗಲಿದ್ದಾರೆ. ಇದನ್ನೂ ಓದಿ:ಬಾಲಿವುಡ್ ನೆಪೋಟಿಸಂ ಬಗ್ಗೆ ಕೃತಿ ಸನೋನ್ ಶಾಕಿಂಗ್ ಕಾಮೆಂಟ್
View this post on Instagram
ಪ್ರತ್ಯಕ್ಷ್ ಅವರು ಉದ್ಯಮಿಯಾಗಿದ್ದಾರೆ. ವಿಶೇಷ ಅಂದರೆ, ಪ್ರತ್ಯಕ್ಷ್ ಪೋಷಕರು ಕೂಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ದಿವಂಗತ ಉದಯ್ ಹುತ್ತಿನಗದ್ದೆ ಅವರು ಡಾ.ರಾಜ್ಕುಮಾರ್ ಜೊತೆ ದೇವತಾ ಮನುಷ್ಯ ಚಿತ್ರದಲ್ಲಿ ನಟಿಸಿದ್ದರು. ಆರಂಭ, ಅಗ್ನಿಪರ್ವ, ಶುಭ ಮಿಲನ ಸೇರಿದಂತೆ ಹಲವು ಸಿನಿಮಾಗಳಲ್ಲಿ ಅವರು ನಟಿಸಿದರು. ಅವರ ಪತ್ನಿ ಲಲಿತಾಂಜಲಿ ಉದಯ್ ಕೂಡ ಹಿರಿತೆರೆ, ಕಿರುತೆರೆಯಲ್ಲಿ ಸಕ್ರಿಯರಾಗಿದ್ದಾರೆ.
ಇನ್ನೂ ರಾಜ ರಾಣಿ, ಹೂ ಮಳೆ, ಬಿಗ್ ಬಾಸ್ ಕನ್ನಡ ಸೀಸನ್ 7 ಶೋ ಸೇರಿದಂತೆ ಹಲವು ಪ್ರಾಜೆಕ್ಟ್ಗಳಲ್ಲಿ ಚಂದನಾ ಕಾಣಿಸಿಕೊಂಡಿದ್ದಾರೆ. ಪ್ರಸ್ತುತ ‘ಲಕ್ಷ್ಮಿ ನಿವಾಸ’ (Lakshmi Nivasa) ಸೀರಿಯಲ್ನಲ್ಲಿ ಜಾಹ್ನವಿ ಪಾತ್ರದ ಮೂಲಕ ಅಭಿಮಾನಿಗಳ ಮನಗೆದ್ದಿದ್ದಾರೆ. ಜೊತೆಗೆ ‘ಭಾವ ತೀರ ಯಾನ’ ಸಿನಿಮಾದಲ್ಲಿ ಧೃತಿ ಪಾತ್ರಕ್ಕೆ ನಟಿ ಜೀವ ತುಂಬಿದ್ದಾರೆ.