Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉಡುಪಿ: ಬಾನೆತ್ತರದಲ್ಲಿ ಆಚಾರ್ಯ ಮಧ್ವರು ವಿರಾಜಮಾನ ಏಕಶಿಲಾ ವಿಗ್ರಹ ಪ್ರತಿಷ್ಠಾಪನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಉಡುಪಿ: ಬಾನೆತ್ತರದಲ್ಲಿ ಆಚಾರ್ಯ ಮಧ್ವರು ವಿರಾಜಮಾನ ಏಕಶಿಲಾ ವಿಗ್ರಹ ಪ್ರತಿಷ್ಠಾಪನೆ

Districts

ಉಡುಪಿ: ಬಾನೆತ್ತರದಲ್ಲಿ ಆಚಾರ್ಯ ಮಧ್ವರು ವಿರಾಜಮಾನ ಏಕಶಿಲಾ ವಿಗ್ರಹ ಪ್ರತಿಷ್ಠಾಪನೆ

Public TV
Last updated: March 30, 2017 10:42 am
Public TV
Share
3 Min Read
madwacharyaru 1 2
SHARE

ಉಡುಪಿ: ಮೂರು ದಿನಗಳ ನಿರಂತರ ಕಾರ್ಯಾಚರಣೆಯ ಬಳಿಕ ಆಚಾರ್ಯ ಮಧ್ವರ 32 ಅಡಿ ಎತ್ತರದ ಏಕಶಿಲಾ ವಿಗ್ರಹವನ್ನು ಪ್ರತಿಷ್ಠಾಪನೆ ಮಾಡಲಾಗಿದೆ. ಮಧ್ವಾಚಾರ್ಯರು ಹುಟ್ಟಿ- ಓಡಾಡಿದ ಜಾಗ ಉಡುಪಿ ಜಿಲ್ಲೆಯ ಪಾಜಕ ಕ್ಷೇತ್ರದಲ್ಲಿ. ಇಲ್ಲಿಗೆ ಸಮೀಪದ ಕುಂಜಾರುಗಿರಿಯ ತಪ್ಪಲು ಪ್ರದೇಶದಲ್ಲಿ ಮಧ್ವಾಚಾರ್ಯರ ಏಕಶಿಲಾ ವಿಗ್ರಹವನ್ನು ಪ್ರತಿಷ್ಟಾಪಿಸಲಾಗಿದೆ.

40 ಅಡಿ ಎತ್ತರದ ಪೀಠದ ಮೇಲೆ 10 ಅಡಿ ಎತ್ತರದ ಪದ್ಮಪೀಠ ರಚನೆ ಮಾಡಲಾಗಿದ್ದು, ಅದರ ಮೇಲೆ ಮಧ್ವಾಚಾರ್ಯರ ಏಕಶಿಲಾ ಮೂರ್ತಿಯನ್ನು ನಿಲ್ಲಿಸಲಾಗಿದೆ. ಬೃಹತ್ ಮೂರ್ತಿಯ ಹಿಂಭಾಗದಲ್ಲಿ ದುರ್ಗಾದೇವಿ ದೇವಸ್ಥಾನ, ಮುಂಭಾಗದಲ್ಲಿ ಪರಶುರಾಮ ಬೆಟ್ಟವಿದ್ದು ಎರಡು ಬೆಟ್ಟಗಳ ಮಧ್ಯೆ ಮಧ್ವಾಚಾರ್ಯರು ವಿರಾಜಮಾನರಾಗಿ ನಿಂತಿದ್ದಾರೆ.

madwacharyaru 1 1

ಮೂರು ಕೋಟಿ ವೆಚ್ಚ: ಎತ್ತರದಲ್ಲಿ ನಿಂತಿರುವ ಭಂಗಿಯಲ್ಲಿರುವ ಆಚಾರ್ಯರ ಮೂರ್ತಿ ಎಲ್ಲರನ್ನೂ ಸೆಳೆಯುತ್ತಿದೆ. ಸುಮಾರು 3 ಕೋಟಿ ರೂ. ವೆಚ್ಚದಲ್ಲಿ ಮೂರ್ತಿಯನ್ನು ನಿರ್ಮಾಣ ಮಾಡಿದ್ದು, ಪಲಿಮಾರು ಮಠಾಧೀಶ ವಿದ್ಯಾಧೀಶ ಸ್ವಾಮೀಜಿ ಇದರ ನೇತೃತ್ವ ವಹಿಸಿದ್ದಾರೆ. ಅದಮಾರು ಮಠ ಮತ್ತು ಸ್ಥಳೀಯರ ಸಹಕಾರದಿಂದ ಸುತ್ತಲಿನ ಜಮೀನನ್ನು ಖರೀದಿಸಿ ಈ ಮೂರ್ತಿಯನ್ನು ಸ್ಥಾಪನೆ ಮಾಡಲಾಗಿದೆ. ಉಡುಪಿಗೆ ಬರುವ ಧಾರ್ಮಿಕ ಪ್ರವಾಸಿಗರಿಗೆ ಮಧ್ವಮೂರ್ತಿಯ ವಿಶೇಷ ದರ್ಶನ ಸಿಗಲಿದೆ.

ಕೃಷ್ಣಮಠ ಸ್ಥಾಪಿಸಿದ ಆಚಾರ್ಯರು: ಉಡುಪಿ ಅಂದ್ರೆ ಎಲ್ಲರಿಗೂ ನೆನಪಾಗೋದು ಕಡೆಗೋಲು ಶ್ರೀಕೃಷ್ಣ. ಕಡೆಗೋಲು ಶ್ರೀಕೃಷ್ಣನನ್ನು ಉಡುಪಿಯಲ್ಲಿ ಪ್ರತಿಷ್ಠಾಪನೆ ಮಾಡಿದವರು ಮಧ್ವಾಚಾರ್ಯರು. ಹೀಗಾಗಿ ಮಧ್ವಾಚಾರ್ಯರ ಜನ್ಮಸ್ಥಾನದಲ್ಲಿ ಆಚಾರ್ಯರ ಬೃಹತ್ ಪುತ್ಥಳಿ ಸ್ಥಾಪನೆ ಮಾಡಬೇಕೆಂಬ ಅಭಿಲಾಷೆಯಿಂದ ಈ ಕಾರ್ಯಕ್ಕೆ ಪಲಿಮಾರು ಮಠ ಈ ಯೋಜನೆಯನ್ನು ಹಾಕಿಕೊಂಡಿತ್ತು. ಮುಂದಿನ ಪರ್ಯಾಯ ಪೀಠಾರೋಹಣ ಮಾಡಲಿರುವ ಪಲಿಮಾರು ಮಠಾಧೀಶ ವಿದ್ಯಾಧೀಶ ಸ್ವಾಮೀಜಿಯವರ ಹಲವು ಕನಸುಗಳಲ್ಲಿ ಇದೂ ಒಂದಾಗಿತ್ತು.

madwacharyaru 1 15

ಮಧ್ವಾಚಾರ್ಯರು ನೋಡಲು ಅತೀ ಸುಂದರವಾಗಿದ್ದರು. ಆಚಾರ್ಯರನ್ನು ಹನುಮ-ಭೀಮರ ಅವತಾರ ಎಂಬ ನಂಬಿಕೆಯಿದೆ. ಶಿಲ್ಪಿಯೊಬ್ಬರಿಗೆ ಮಧ್ವರೇ ಕಲ್ಪನಾ ಮೂರ್ತಿ. 32 ಲಕ್ಷಣಗಳು ಮಧ್ವರ ದೇಹದಲ್ಲಿತ್ತು. ಅದನ್ನು ಜಗತ್ತಿಗೆ ತೋರಿಸುವ ಸಲುವಾಗಿ 32 ಅಡಿ ಎತ್ತರ ಮೂರ್ತಿಯನ್ನು ಸ್ಥಾಪಿಸಲಾಗಿದೆ. ಸಂತ್ರಸಾರದ ಲಕ್ಷಣಗಳನ್ನು ಒಳಗೊಂಡಂತೆ ಮೂರ್ತಿಯನ್ನು ಕೆತ್ತಲಾಗಿದೆ. ಆಚಾರ್ಯರು ನಮ್ಮೆಲ್ಲರನ್ನು ಮತ್ತು ನಾವು ಆಚಾರ್ಯರನ್ನು ಕಣ್ತುಂಬಿಕೊಳ್ಳಲು ಸಾಧ್ಯವಾಗಿದೆ ಎಂದು ಪಲಿಮಾರು ಮಠಾಧೀಶ ವಿದ್ಯಾಧೀಶರು ಹೇಳಿದ್ದಾರೆ.

ಮೂರ್ತಿ ಕೆತ್ತಿದ್ದು ಯಾರು..?: ದೇಶಾದ್ಯಂತ ಹಲವು ಬೃಹತ್ ಮೂರ್ತಿಗಳನ್ನು ಕೆತ್ತಿರುವ ಹಿರಿಯ ಹಾಗೂ ಪ್ರಸಿದ್ಧ ಶಿಲ್ಪಿ ಅಶೋಕ್ ಗುಡಿಗಾರು ಮತ್ತು ತಂಡ ಈ ಸುಂದರ ಶಿಲ್ಪದ ಕೆತ್ತನೆಯನ್ನು ಮಾಡಿದೆ. ಚೆನ್ನೈನ ಎಲ್ ಆಂಡ್ ಟಿ ಕಂಪನಿಯ ಇಂಜಿನಿಯರ್‍ಗಳು ಮತ್ತು ಸಿಬ್ಬಂದಿ . ಸುಮಾರು 32 ತಿಂಗಳುಗಳ ಕಾಲ ಸುಂದರ ಮೂರ್ತಿ ಪ್ರತಿಷ್ಠಾಪಿಸುವ ಕಾರ್ಯದಲ್ಲಿ ತೊಡಗಿದ್ದರು. ಸಾವಿರಾರು ಮಂದಿ ಸ್ಥಳೀಯರು ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದರು.

madwacharyaru 1 14

ಅಮೇರಿಕನ್ ಟೆಕ್ನಾಲಜಿ: ಮಲಗಿದ್ದ ಮಧ್ವಾಚಾರ್ಯರ ಮೂರ್ತಿಯನ್ನು ಎದ್ದು ನಿಲ್ಲಿಸಲು ಅಮೇರಿಕಾದ ಕ್ರೈನ್ ಬಳಸಲಾಯ್ತು. ಚೆನ್ನೈನ ಎಲ್ ಆಂಡ್ ಟಿ ಕಂಪನಿಯ ಇಂಜಿನಿಯರ್‍ಗಳು- ಕಾರ್ಮಿಕರು ಮೂರು ದಿನ ಈ ಕಾರ್ಯದಲ್ಲಿ ತೊಡಗಿದರು. ಬೃಹತ್ ಕ್ರೈನ್‍ಗಳು, ರೋಡ್ ರೋಲರ್, ಜೆಸಿಬಿ, ಕಬ್ಬಿಣದ ರೋಪ್‍ಗಳ ಸಹಿತ ಹತ್ತಕ್ಕೂ ಹೆಚ್ಚು ಇಂಜಿನಿಯರ್‍ಗಳು, ಸುಮಾರು 25 ಸಿಬ್ಬಂದಿ ಮೂರ್ತಿ ಎತ್ತಿ, ಪೀಠದ ಮೇಲೆ ಪ್ರತಿಷ್ಠಾಪಿಸುವಲ್ಲಿ ತೊಡಗಿದ್ದರು.

ಡ್ರೋನ್ ಮೂಲಕ ಪಕ್ಷಿನೋಟ: ಎರಡು ಬೆಟ್ಟಗಳು- ಸುತ್ತಲೂ ಹಚ್ಚ ಹಸುರಿನ ಕಾಡು. ಈ ನಡುವೆ ಮಧ್ವಾಚಾರ್ಯರ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಗಿದೆ. ಡ್ರೋನ್ ಕ್ಯಾಮೆರಾ ದೃಶ್ಯ ಮತ್ತು ಫೋಟೋಗಳನ್ನು, ಸುತ್ತಲ ರಮಣೀಯ ಪರಿಸರವನ್ನು ಸೆರೆಹಿಡಿದಿದ್ದು ನೋಡಲು ಸುಂದರ- ನಯನ ಮನೋಹರವಾಗಿದೆ.

madwacharyaru 1 10

ಉಡುಪಿಯ ಪಲಿಮಾರು ಮಠ ಈ ಮೂರ್ತಿ ಮೇ ತಿಂಗಳಲ್ಲಿ ಲೋಕಾರ್ಪಣೆಯಾಗಲಿದೆ. ಮೂರ್ತಿಯ ಕೆಳಭಾಗದಲ್ಲಿ ಮುಂದಿನ ದಿನಗಳಲ್ಲಿ ಮುಂದಿ ದಿನಗಳಲ್ಲಿ ಧ್ಯಾನ- ಭಜನೆ, ಪ್ರವಚನಗಳು ನಡೆಯಲಿದೆ. ಕುಂಜಾರು ಗಿರಿಯ ತಪ್ಪಲಿನಲ್ಲಿ ಉದ್ಯಾನವನ ಸ್ಥಾಪನೆ ಮಾಡಲಿದ್ದು ಮಧ್ವಾಚಾರ್ಯರಿಗೆ ದಿನವೂ ಪೂಜೆ ಪುನಸ್ಕಾರ ನಡೆಯಲಿದೆ.

madwacharyaru 1 5

madwacharyaru 1 4

madwacharyaru 1 3

TAGGED:L & T CompanyMadhvacaryamonolithic sculpturePublic TVudupiಉಡುಪಿಎಲ್ ಆಂಡ್ ಟಿ ಕಂಪನಿಏಕಶಿಲಾ ಮೂರ್ತಿಪಬ್ಲಿಕ್ ಟಿವಿಮಧ್ವಚಾರ್ಯ
Share This Article
Facebook Whatsapp Whatsapp Telegram

Cinema news

jayamala
ಹಿರಿಯ ನಟಿ ಜಯಮಾಲಾಗೆ ಡಾ. ರಾಜ್‌ಕುಮಾರ್‌ ಪ್ರಶಸ್ತಿ
Cinema Latest Main Post Sandalwood
Kichcha Sudeep Rocking Star Yash
ಈ ಹೊಸ ಹೆಜ್ಜೆ ನಿಮಗೆ ಅದೃಷ್ಟ ತರಲಿ – ಯಶ್‍ಗೆ ಕಿಚ್ಚನ ಹಾರೈಕೆ
Cinema Latest Sandalwood Top Stories
Toxic Teaser RGV
ಟಾಕ್ಸಿಕ್ ಟೀಸರ್ ನೋಡಿ ಆರ್‌ಜಿವಿ ಹೇಳಿದ್ದೇನು ಗೊತ್ತಾ..?
Cinema Latest Top Stories
Toxic Movie Yash
ಟಾಕ್ಸಿಕ್ ರಾಯ ಹೆಸರಿನ ಗುಟ್ಟು ಇದೇನಾ..?
Cinema Latest Sandalwood Top Stories

You Might Also Like

WPL 2025
Cricket

ಇಂದಿನಿಂದ ಮಹಿಳಾ ಪ್ರೀಮಿಯರ್‌ ಲೀಗ್‌ – ಉದ್ಘಾಟನಾ ಪಂದ್ಯದಲ್ಲಿ ಹಾಲಿ Vs ಮಾಜಿ ಚಾಂಪಿಯನ್ಸ್‌ಗಳ ಹಣಾಹಣಿ

Public TV
By Public TV
16 minutes ago
WEATHER 1 e1679398614299
Bengaluru City

ಹವಾಮಾನ ವರದಿ 09-01-2026

Public TV
By Public TV
37 minutes ago
daily horoscope dina bhavishya
Latest

ದಿನ ಭವಿಷ್ಯ 09-01-2026

Public TV
By Public TV
37 minutes ago
Siddaramaiah Pinarayi Vijayan
Bengaluru City

ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಲಯಾಳಂ ಕಡ್ಡಾಯ – ಕೇರಳ ಸರ್ಕಾರದ ನಡೆಗೆ ಸಿಎಂ ಸಿದ್ದರಾಮಯ್ಯ ಖಂಡನೆ

Public TV
By Public TV
8 hours ago
rent house
Bengaluru City

ಕರ್ನಾಟಕ ಬಾಡಿಗೆ ತಿದ್ದುಪಡಿ ವಿಧೇಯಕಕ್ಕೆ ರಾಜ್ಯಪಾಲರಿಂದ ಅಂಕಿತ

Public TV
By Public TV
8 hours ago
01 6
Big Bulletin

ಬಿಗ್‌ ಬುಲೆಟಿನ್‌ 08 January 2026 ಭಾಗ-1

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?