ಶಿರಸಿ, ಕುಮಟಾದ ಪಶ್ಚಿಮ ಘಟ್ಟ ಭಾಗದಲ್ಲಿ ಭೂಕಂಪನ – ಭಯಭೀತರಾದ ಜನ

Public TV
1 Min Read
numerous locations in uttara kannada district experienced earthquakes

ಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆಯ ಶಿರಸಿ (Sirsi) ಹಾಗೂ ಕುಮಟಾ (Kumta) ಭಾಗದ ಘಟ್ಟ ಪ್ರದೇಶದಲ್ಲಿ ಮೂರು ಸೆಕೆಂಡ್‌ಗೂ ಹೆಚ್ಚಿನ ಸಮಯ ಭೂಕಂಪನದ (Earthquakes) ಅನುಭವವಾಗಿದೆ. ಇದರಿಂದ ಆ ಪ್ರದೇಶದ ಜನ ಭಯಭೀತರಾಗಿದ್ದಾರೆ.

ಕುಮಟಾ ತಾಲೂಕಿನ ದೇವಿಮನೆ ಘಟ್ಟ, ಶಿರಸಿ ತಾಲೂಕಿನ ಗ್ರಾಮವಾದ ರಾಗಿ ಹೊಸಳ್ಳಿ, ಕಸಗೆ, ಬಂಡಳ ಭಾಗದಲ್ಲಿ ಭೂಮಿ ಕಂಪಿಸಿದೆ. ಈ ಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಸಹ ನಡೆಯುತ್ತಿದೆ. ಗುಡ್ಡ ಕೊರೆದು ರಸ್ತೆ ಮಾಡಲಾಗುತಿದ್ದು ಕಲ್ಲುಗಳನ್ನು ಸಿಡಿಸಿರಬಹುದು ಇದರಿಂದ ಕಂಪನ ಉಂಟಾಗಿದೆ ಎಂದು ಆರಂಭದಲ್ಲಿ ಊಹಿಸಲಾಗಿತ್ತು.

ಈಗ ಹಿಂದೂ ಮಹಾಸಾಗರದಲ್ಲಿ 10 ಕಿ.ಮೀ ಆಳದ ರಿಡ್ಜ್ ಮಧ್ಯದಲ್ಲಿ ಅಲ್ಪ ಮಟ್ಟದ ಭೂಕಂಪನವಾಗಿದೆ. ಇದರಿಂದಲೇ ಪಶ್ಚಿಮ ಘಟ್ಟ ಭಾಗದಲ್ಲೂ ಭೂಮಿ ಕಂಪಿಸಿರುವ ಸಾಧ್ಯತೆ ಇದೆ ಎಂದು ತಜ್ಞರು ಊಹಿಸಿದ್ದಾರೆ.

Share This Article