Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಂಡಿಯಾ ಒಕ್ಕೂಟದಲ್ಲಿ ಬಿರುಕು – ನಾಯಕತ್ವ ಬದಲಾವಣೆಗೆ ಆಂತರಿಕ ಕಲಹ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಇಂಡಿಯಾ ಒಕ್ಕೂಟದಲ್ಲಿ ಬಿರುಕು – ನಾಯಕತ್ವ ಬದಲಾವಣೆಗೆ ಆಂತರಿಕ ಕಲಹ

Latest

ಇಂಡಿಯಾ ಒಕ್ಕೂಟದಲ್ಲಿ ಬಿರುಕು – ನಾಯಕತ್ವ ಬದಲಾವಣೆಗೆ ಆಂತರಿಕ ಕಲಹ

Public TV
Last updated: December 7, 2024 5:01 pm
Public TV
Share
2 Min Read
Rahul Gandhi INDIA Meeting 1
SHARE

ನವದೆಹಲಿ: ಹರಿಯಾಣ, ಮಹಾರಾಷ್ಟ್ರ ಚುನಾವಣೆಯಲ್ಲಿ ಸೋಲಿನ ಬಳಿಕ ಇಂಡಿಯಾ (INDIA) ಒಕ್ಕೂಟದಲ್ಲಿ ಬಿರುಕು ಮೂಡಿದೆ. ಇಂಡಿಯಾ ಒಕ್ಕೂಟದ ನಾಯಕತ್ವ ಬದಲಾಗಬೇಕು ಎಂದು ಸಮಾಜವಾದಿ ಪಕ್ಷ ಆಗ್ರಹಿಸಿದರೆ, ಕಾಂಗ್ರೆಸ್ (Congress) ಇದನ್ನು ವಿರೋಧಿಸಿದೆ. ಇತ್ತ ಒಕ್ಕೂಟದ ಶಿಲ್ಪಿ ನಾವು ಎಂದು ಆರ್‌ಜೆಡಿ (RJD) ಪ್ರತಿಪಾದಿಸಿದೆ.

ಸಮಾಜವಾದಿ ಪಕ್ಷ ಮತ್ತು ಸಿಪಿಐ ಮೈತ್ರಿಕೂಟದಲ್ಲಿ ತಮ್ಮ ಪಾತ್ರ ಹೆಚ್ಚಿಸುವ ಹೇಳಿಕೆ ನೀಡಿದ ಬೆನ್ನಲ್ಲೇ ಈ ಹೇಳಿಕೆಗಳು ಬಂದಿವೆ. ಸಮಾಜವಾದಿ ಪಕ್ಷದ ರಾಷ್ಟ್ರೀಯ ವಕ್ತಾರ ಉದಯವೀರ್ ಸಿಂಗ್, ಇಂಡಿಯಾ ಬಣವು ಬ್ಯಾನರ್ಜಿಯವರ ಸಲಹೆಯನ್ನು ಚರ್ಚಿಸಬೇಕು ಮತ್ತು ಟಿಎಂಸಿ ವರಿಷ್ಠರಿಗೆ 100% ಬೆಂಬಲ ಮತ್ತು ಸಹಕಾರ ವಿಸ್ತರಿಸಬೇಕು ಎಂದು ಹೇಳಿದ್ದರು.ಇದನ್ನೂ ಓದಿ: ದೆಹಲಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಅಮಿತ್ ಶಾ ವಿಫಲವಾಗಿದ್ದಾರೆ: ಕೇಜ್ರಿವಾಲ್ ಆರೋಪ

ಮಮತಾ ಬ್ಯಾನರ್ಜಿ ಅವರಿಗೆ ಒಕ್ಕೂಟ ಮುನ್ನಡೆಸುವ ಆಸೆ ವ್ಯಕ್ತಪಡಿಸಿದ್ದರೆ, ಮೈತ್ರಿಕೂಟದ ನಾಯಕರು ಅದನ್ನು ಪರಿಗಣಿಸಿ ಅವರಿಗೆ ಬೆಂಬಲ ನೀಡಬೇಕು. ಇದು ಮೈತ್ರಿಯನ್ನು ಬಲಪಡಿಸುತ್ತದೆ. ಬಂಗಾಳದಲ್ಲಿ ಬಿಜೆಪಿಯನ್ನು ನಿಲ್ಲಿಸುವಲ್ಲಿ ಮಮತಾ ಬ್ಯಾನರ್ಜಿ ಮುಂದಾಳತ್ವ ವಹಿಸಿದರು. ಅವರ ಬಗ್ಗೆ ನಮಗೆ ಗೌರವ ಇದೆ ಎಂದು ಉದಯವೀರ್ ಸಿಂಗ್ ಹೇಳಿದ್ದಾರೆ.

ಹರಿಯಾಣ ಮತ್ತು ಮಹಾರಾಷ್ಟ್ರ ಚುನಾವಣೆಗಳಲ್ಲಿ ತನ್ನ ಮಿತ್ರಪಕ್ಷಗಳಿಗೆ ಅವಕಾಶ ನೀಡದ ಕಾಂಗ್ರೆಸ್‌ನ ವಿರುದ್ಧ ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ ರಾಜಾ ಅಸಮಧಾನ ಹೊರಹಾಕಿದ್ದಾರೆ. ಕಾಂಗ್ರೆಸ್ ಆತ್ಮಾವಲೋಕನ ಮಾಡಿಕೊಳ್ಳಬೇಕು. ಹರಿಯಾಣ ಮತ್ತು ಮಹಾರಾಷ್ಟ್ರ ಚುನಾವಣೆಯಲ್ಲಿ ಮೈತ್ರಿಕೂಟದ ಪಾಲುದಾರರಿಗೆ ಅವಕಾಶ ನೀಡಲಿಲ್ಲ. ಕಾಂಗ್ರೆಸ್ ಇಂಡಿಯಾ ಬ್ಲಾಕ್ ಪಾಲುದಾರರನ್ನು ವಿಶ್ವಾಸಕ್ಕೆ ತೆಗೆದುಕೊಂಡಿದ್ದರೆ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಯಲ್ಲಿ ಫಲಿತಾಂಶಗಳು ವಿಭಿನ್ನವಾಗಿರುತ್ತಿದ್ದವು ಎಂದು ಹೇಳಿದರು.

ಲಾಲು ಪ್ರಸಾದ್ ಯಾದವ್ ಅವರ ಉಪಕ್ರಮದ ಮೇರೆಗೆ ಪ್ರತಿಪಕ್ಷಗಳ ಮೈತ್ರಿಕೂಟದ ಮೊದಲ ಸಭೆ ಪಾಟ್ನಾದಲ್ಲಿ ನಡೆಯಿತು ಎಂದು ಆರ್‌ಜೆಡಿಯ ಮೃತ್ಯುಂಜಯ ತಿವಾರಿ ಪ್ರತಿಪಾದಿಸಿದರು. ಬಿಜೆಪಿ ವಿರುದ್ಧ ಪ್ರತಿಪಕ್ಷಗಳ ಮೈತ್ರಿಯ ನಿಜವಾದ ಶಿಲ್ಪಿ ಲಾಲು ಪ್ರಸಾದ್ ಯಾದವ್. ಎಲ್ಲರೂ ತಮ್ಮ ರಾಜ್ಯಗಳಲ್ಲಿ ಬಿಜೆಪಿ ವಿರುದ್ಧದ ಹೋರಾಟದಲ್ಲಿ ತೊಡಗಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಪ್ರಬಲವಾಗಿ ಹೋರಾಡುತ್ತಿದ್ದಾರೆ. 2025ರಲ್ಲಿ ಬಿಹಾರದ ಸರದಿ ಎಂದರು.

ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿಯೂ ಇಂಡಿಯಾ ಒಕ್ಕೂಟದಲ್ಲಿನ ಬಿರುಕು ಗೋಚರಿಸಿತು. ಗೌತಮ್ ಅದಾನಿ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆಯಿಂದ ಟಿಎಂಸಿ ಮತ್ತು ಸಮಾಜವಾದಿ ಪಕ್ಷಗಳು ದೂರವಿದ್ದವು. ಹೀಗಾಗೀ ಒಕ್ಕೂಟದಲ್ಲಿ ನಾಯಕತ್ವಕ್ಕಾಗಿ ಹೋರಾಟ ಶುರುವಾಗಿದೆ.ಇದನ್ನೂ ಓದಿ: Namma Metro | ಒಂದೇ ದಿನ ದಾಖಲೆಯ 9.20 ಲಕ್ಷಕ್ಕೂ ಅಧಿಕ ಪ್ರಯಾಣಿಕರು ಸಂಚಾರ

TAGGED:assembly electionhariyanaINDIA alliancemaharashtrarjdTMCಇಂಡಿಯಾ ಒಕ್ಕೂಟಚುನಾವಣೆಮಹಾರಾಷ್ಟ್ರಹರಿಯಾಣ
Share This Article
Facebook Whatsapp Whatsapp Telegram

Cinema news

TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories

You Might Also Like

Zameer Ahmed Khan
Bengaluru City

ನಾನು ಜೆಡಿಎಸ್‌ಗೆ ಹೋಗ್ತೀನಿ ಅನ್ನೋದು ಊಹಾಪೋಹ – ಜಮೀರ್ ಅಹ್ಮದ್ ಸ್ಪಷ್ಟನೆ

Public TV
By Public TV
41 seconds ago
UP teen murder case
Crime

ಲವ್ವರ್‌ ಜೊತೆ ಬ್ರೇಕಪ್‌ ಮಾಡಿಕೊಳ್ಳಲ್ಲ ಎಂದಿದ್ದಕ್ಕೆ ತಂದೆಯಿಂದ ಮಗಳ ಬರ್ಬರ ಹತ್ಯೆ

Public TV
By Public TV
23 minutes ago
SN Narayanaswamy Bangarpet MLA
Bengaluru City

ಸಂಪುಟ ಪುನರ್ ರಚನೆ ಮಾಡಲು ಹೈಕಮಾಂಡ್‌ಗೆ ಮನವಿ: ಬಂಗಾರಪೇಟೆ ನಾರಾಯಣಸ್ವಾಮಿ

Public TV
By Public TV
31 minutes ago
Sharad Pawar
Latest

ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಆಸ್ಪತ್ರೆಗೆ ದಾಖಲು

Public TV
By Public TV
1 hour ago
Mohammed Nalapad ED Raid
Bengaluru City

ಬಿಟ್ ಕಾಯಿನ್ ಕೇಸಲ್ಲಿ ನಲಪಾಡ್‌ಗೆ ಶಾಕ್ – ಸತತ 21 ಗಂಟೆಗಳ ಸುದೀರ್ಘ ಶೋಧ ಕಾರ್ಯ ಮುಗಿಸಿದ ಇಡಿ

Public TV
By Public TV
2 hours ago
karnataka High Court
Court

SSLC ತೃತೀಯ ಭಾಷೆಗೆ ಈ ವರ್ಷ ಗ್ರೇಡ್ ಬೇಡ, ಅಂಕವನ್ನೇ ನೀಡಿ: ಹೈಕೋರ್ಟ್ ಆದೇಶ

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?