ವೈಯಕ್ತಿಕ ದ್ವೇಷದ ಶಂಕೆ – ರೌಡಿಶೀಟರ್‌ ಬರ್ಬರ ಹತ್ಯೆ

Public TV
1 Min Read
Kalaburagi 2

ಕಲಬುರಗಿ:‌ ಅಪರಿಚಿತ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ನನ್ನ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರಗಿ (Kalaburagi) ನಗರದ ಹೊರವಲಯದ ಮಾಲಗತ್ತಿ ಕ್ರಾಸ್ ಬಳಿ ನಡೆದಿದೆ.

ಖಲೀಲ್ ಅಹಮದ್ (38) ಹತ್ಯೆಗೀಡಾದ ರೌಡಿಶೀಟರ್. ವೈಕ್ತಿಯ ದ್ವೇಷದ ಹಿನ್ನೆಲೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮೋಸ್ಟ್ ವಾಂಟೆಡ್ ಆಗಿದ್ದ ಖಲೀಲ್‌, ಹಲವು ವರ್ಷಗಳಿಂದ ಪೊಲೀಸರಿಗೆ ಬೇಕಾಗಿದ್ದ ಎನ್ನಲಾಗಿದೆ. ಇದನ್ನೂ ಓದಿ: ಹೂದೋಟಕ್ಕೆ ದೃಷ್ಟಿ ಆಗದಂತೆ ನಟಿ ಶ್ರೀಲೀಲಾ ಫೋಟೋ ಹಾಕಿದ ರೈತ!

crime 1

ಇನ್ನೂ ಖಲೀಲ್‌ ಸ್ನೇಹಿತ ಅಲಿಲ್ ಪಟೇಲ್ ಮೇಲೂ ಹಲ್ಲೆ ನಡೆದಿದ್ದು, ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಲಬುರಗಿ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಬದುಕಿನ ಯಾತ್ರೆ ಮುಗಿಸಿದ ಎಸ್‌.ಎಂ ಕೃಷ್ಣ ಪಂಚಭೂತಗಳಲ್ಲಿ ಲೀನ

Share This Article