Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ – ರಾಜ್ಯ ಸರ್ಕಾರದ ನಡೆಗೆ ಬಿಜೆಪಿ ಸಂಸದರು ಕೆಂಡ

Public TV
Last updated: December 12, 2024 4:41 pm
Public TV
Share
2 Min Read
panchamasali protest
SHARE

ನವದೆಹಲಿ: ಪಂಚಮಸಾಲಿ ಮೀಸಲಾತಿ (Panchamasali Reservation) ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ನಡೆಯನ್ನು ರಾಜ್ಯ ಬಿಜೆಪಿ (BJP) ಸಂಸದರು ಖಂಡಿಸಿದ್ದಾರೆ. ಮೀಸಲಾತಿ ಹೋರಾಟಗಾರರ ವಿರುದ್ಧ ಲಾಠಿಚಾರ್ಜ್ ಖಂಡನೀಯ. ಪಂಚಮಸಾಲಿ ಸಮುದಾಯದಲ್ಲಿ ಬಡವರಿದ್ದಾರೆ. ಅವರಿಗೂ ಮೀಸಲಾತಿ ಸಿಗಬೇಕು ಎಂದು ಮಾಜಿ ಡಿಸಿಎಂ ಗೋವಿಂದ ಕಾರಜೋಳ (Govinda Karajola) ಆಗ್ರಹಿಸಿದ್ದಾರೆ.

ನವದೆಹಲಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ (Siddaramaiah) ಸರ್ಕಾರ ಬಡವರ ವಿರೋಧಿ ಸರ್ಕಾರ. ನಾವು 2ಡಿ ಮೀಸಲಾತಿ ಮಾಡಿದ್ದೇವೆ. ಅದನ್ನು ಮೊದಲು ಜಾರಿ ಮಾಡಲಿ. ನ್ಯಾಯಕೇಳಲು ಬಂದವರ ಮೇಲೆ ಲಾಠಿ ಚಾರ್ಚ್ ಮಾಡುವುದು ಸರಿಯಲ್ಲ. ಭಯದ ವಾತಾವರಣ ನಿರ್ಮಿಸಲು ಲಾಠಿ ಚಾರ್ಜ್ ಮಾಡಿದೆ. ಹೋರಾಟವನ್ನು ಹತ್ತಿಕ್ಕಲು ಸರ್ಕಾರ ಮುಂದಾಗಬಾರದು ಎಂದು ಕಿಡಿಕಾರಿದರು. ಇದನ್ನೂ ಓದಿ: 2ಎ ಮೀಸಲಾತಿಗಾಗಿ ಪಂಚಮಸಾಲಿಗಳ ಒತ್ತಾಯ ಸಂವಿಧಾನ ವಿರೋಧಿ: ಸಿಎಂ

ಮಾಜಿ ಸಿಎಂ, ಸಂಸದ ಜಗದೀಶ್ ಶೆಟ್ಟರ್ ಮಾತನಾಡಿ, ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಮಾಡಿರುವುದು ಅಕ್ಷಮ್ಯ ಅಪರಾಧ. ಒಂದು ಪ್ರತಿಭಟನೆಗೆ ಅಗತ್ಯ ವ್ಯವಸ್ಥೆ ಮಾಡಲು ಇವರಿಗೆ ಸಾಧ್ಯವಾಗಿಲ್ಲ. ಈಗ ಪ್ರತಿಭಟನಾಕಾರರು ಕಲ್ಲು ತೂರಿದರು ಎಂದು ಸಿದ್ಧ ಉತ್ತರ ಕೊಡುತ್ತಾರೆ. ಸರ್ಕಾರದ ಈ ವರ್ತನೆಯನ್ನು ಸಹಿಸಲು ಸಾಧ್ಯವಿಲ್ಲ. ಹೋರಾಟಗಾರರ ಮೇಲೆ ಈಗಾಗಲೇ ಪ್ರಕರಣ ದಾಖಲಿಸಿದೆ. ಅಧಿವೇಶನ ಅಂತ್ಯವಾಗುತ್ತಿದ್ದಂತೆ ಅವರನ್ನು ಬಂಧಿಸುವ ಕೆಲಸ ಮಾಡಲಾಗುತ್ತದೆ. ಮೀಸಲಾತಿ ನೀಡುವಂತೆ ಕೇಂದ್ರಕ್ಕೆ ಶಿಫಾರಸು ಮಾಡಲು ಹೋರಾಟಗಾರರು ಕೇಳುತ್ತಿದ್ದಾರೆ. ಅದನ್ನು ಸರ್ಕಾರ ಮಾಡುತ್ತಿಲ್ಲ ಎಂದು ಆಕ್ರೋಶ ಹೊರ ಹಾಕಿದರು. ಇದನ್ನೂ ಓದಿ: ಹಿಂದೂ ಪದ ವಿವಾದ – ಸಚಿವ ಸತೀಶ್ ಜಾರಕಿಹೊಳಿಗೆ ಬಿಗ್ ರಿಲೀಫ್

ಮಾಜಿ ಸಿಎಂ, ಸಂಸದ ಬಸವರಾಜ್ ಬೊಮ್ಮಾಯಿ ಮಾತನಾಡಿ, ಸರ್ಕಾರಕ್ಕೆ ಈ ರೀತಿಯ ಸಮಸ್ಯೆ ಸಹಜ. ಜನರ ಆಶೋತ್ತರಗಳು ಬದಲಾದಗ ಈ ರೀತಿಯ ಬೇಡಿಕೆ ಬರುತ್ತವೆ. ಮೀಸಲಾತಿ ಮೂಲಕ ಬದಲಾವಣೆ ಕೇಳುತ್ತಾರೆ. ಈಗ ಸಾಮಾಜಿಕವಾಗಿ, ಆರ್ಥಿಕವಾಗಿ ಬದಲಾವಣೆಯಾಗಿವೆ. ಇಂತಹ ಬೇಡಿಕೆ ಬಂದಾಗ ಸೂಕ್ಷ್ಮವಾಗಿ ನಿಭಾಯಿಸಬೇಕು ಎಂದರು. ಇದನ್ನೂ ಓದಿ: 2024-25ರಲ್ಲಿ 1.4 ಲಕ್ಷ ಕೋಟಿ ಸಾಲ ಮಾಡಿದ್ದೇವೆ, ಬೇರೆ ರಾಜ್ಯಗಳಿಗಿಂತ ನಮ್ಮದು ಕಡಿಮೆ: ಸಿದ್ದರಾಮಯ್ಯ

ಪಂಚಮಸಾಲಿ ಹೋರಾಟಗಾರರಿಗೆ ಸಿಎಂ ಭೇಟಿಗೆ ಅವಕಾಶ ನೀಡಿಲ್ಲ. ನೀಡಿದಾಗಲೂ ಸರಿಯಾಗಿ ಮಾತನಾಡಿಲ್ಲ. ಧಾರ್ಮಿಕ ಮೀಸಲಾತಿ ಸಾಧ್ಯವಿಲ್ಲ ಎಂದು ಕೋರ್ಟ್ ಹೇಳಿದೆ. ಅದನ್ನು ತೆಗೆದು ಅಗತ್ಯ ಇರುವವರಿಗೆ ಮೀಸಲಾತಿ ನೀಡಬೇಕು. ನಾವು ಅದನ್ನೇ ಮಾಡಿದ್ದೆವು. ಆದರೆ ಕಾಂಗ್ರೆಸ್ ಬೆಂಬಲಿಗರು ಸುಪ್ರೀಂ ಕೋರ್ಟ್‌ಗೆ ಹೋಗಿದ್ದರು. ಕೋರ್ಟ್ ಮಧ್ಯಂತರ ತಡೆ ನೀಡಿತ್ತು. ಮುಂದಿನ ವಿಚಾರಣೆವರೆಗೂ ನಾವು ಅದಕ್ಕೆ ಒಪ್ಪಿಗೆ ನೀಡಿದ್ದೆವು. ಹೊಸ ಸರ್ಕಾರ ಬಂದಮೇಲೆ ಕ್ರಮ ತೆಗೆದುಕೊಂಡಿಲ್ಲ ಎಂದು ಗುಡುಗಿದರು. ಇದನ್ನೂ ಓದಿ: ಸೋನಿಯಾ ಗಾಂಧಿ ಮನವೊಲಿಸಲು ವಯನಾಡಿಗೆ ನೂರು ಮನೆ: ಈಶ್ವರಪ್ಪ ವ್ಯಂಗ್ಯ

ಕೋರ್ಟ್‌ನಲ್ಲೂ ಈ ಬಗ್ಗೆ ಯಾವ ಬೆಳವಣಿಗೆ ನಡೆದಿಲ್ಲ. ಈಗಲಾದರೂ ನ್ಯಾಯ ಕೊಡಿಸುವ ಕೆಲಸ ಮಾಡಬೇಕು. ಇದು ರಾಷ್ಟ್ರದ ವಿಚಾರವಾಗಿದೆ. ಬೇರೆ ಬೇರೆ ರಾಜ್ಯಗಳಲ್ಲಿ ಈ ರೀತಿಯ ಬೇಡಿಕೆ ಇದೆ. ಮುಂದೆ ರಾಷ್ಟ್ರಮಟ್ಟದಲ್ಲಿ ಚರ್ಚೆಯಾಗಿ ಬದಲಾವಣೆಯಾಗಲಿದೆ. ರಾಜ್ಯ ಸರ್ಕಾರಕ್ಕೆ ಇದನ್ನು ಮಾಡಲು ಮನಸ್ಸಿಲ್ಲ. ಸಂವಿಧಾನ ಕೈಯಲ್ಲಿ ಹಿಡಿದು ಅದರ ವಿರುದ್ಧ ನಿರ್ಣಯ ಮಾಡುತ್ತಾರೆ. ಲಾಠಿ ಚಾರ್ಜ್ ನಿರಕುಂಶವಾದ ನಡೆ. ಕೂಡಲೇ ಹೋರಾಟಗಾರರನ್ನು ಕರೆದು ಮಾತನಾಡಿ ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಉಕ್ಕು ಕ್ಷೇತ್ರದಲ್ಲಿ ಹಸಿರು ಕ್ರಾಂತಿ – ಪ್ರಧಾನಿ ಮೋದಿ ಕನಸು ಅನಾವರಣಗೊಳಿಸಿದ ಹೆಚ್‌ಡಿಕೆ

TAGGED:bjpcongressNew DelhiPanchamasali 2A Reservationಕಾಂಗ್ರೆಸ್ನವದೆಹಲಿಪಂಚಮಸಾಲಿ ಮೀಸಲಾತಿಬಿಜೆಪಿ
Share This Article
Facebook Whatsapp Whatsapp Telegram

You Might Also Like

amit shah
Latest

ತುರ್ತು ಪರಿಸ್ಥಿತಿ ಕಾಂಗ್ರೆಸ್‌ನ ಪ್ರಜಾಪ್ರಭುತ್ವ ವಿರೋಧಿ ಮನಸ್ಥಿತಿಯ ಪ್ರತಿಬಿಂಬವಾಗಿತ್ತು: ಅಮಿತ್ ಶಾ

Public TV
By Public TV
8 minutes ago
salman khan 2
Cinema

ಭದ್ರತೆಗೆ ಹೊಸ ಬುಲೆಟ್‌ ಪ್ರೂಫ್‌ ಕಾರು ಖರೀದಿಸಿದ ಸಲ್ಮಾನ್ ಖಾನ್

Public TV
By Public TV
11 minutes ago
flood threat restrictions on tourist destinations along the cauvery riverbed
Districts

ಪ್ರವಾಹ ಭೀತಿ – ಕಾವೇರಿ ನದಿ ಪಾತ್ರದ ಪ್ರವಾಸಿ ತಾಣಗಳಿಗೆ ನಿರ್ಬಂಧ

Public TV
By Public TV
50 minutes ago
KRS Dam cauvery water
Latest

KRS ಡ್ಯಾಂ ಒಳಹರಿವಿನಲ್ಲಿ ಭಾರೀ ಏರಿಕೆ – ಕಾವೇರಿ ನದಿಗೆ 29,000 ಕ್ಯೂಸೆಕ್‌ ನೀರು ಬಿಡುಗಡೆ

Public TV
By Public TV
58 minutes ago
Young man Kills his Lover in Mandya
Crime

10 ದಿನದಲ್ಲಿ ಪ್ರೀತಿ, ಪ್ರಣಯ – ಇನ್ಸ್ಟಾದಲ್ಲಿ ಪರಿಚಯವಾದ ವಿವಾಹಿತ ಪ್ರಿಯತಮೆಯ ಕೊಲೆಯಲ್ಲಿ ಅಂತ್ಯ!

Public TV
By Public TV
1 hour ago
pm modi on emergency
Latest

ಯಾವ ಭಾರತೀಯನು ಎಂದಿಗೂ ಮರೆಯುವುದಿಲ್ಲ: ತುರ್ತು ಪರಿಸ್ಥಿತಿ ಕರಾಳತೆ ನೆನೆದು ಕಾಂಗ್ರೆಸ್‌ ವಿರುದ್ಧ ಮೋದಿ ವಾಗ್ದಾಳಿ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?