– ಮೈಸೂರು, ಬೆಂಗ್ಳೂರಿಂದ ಪ್ರತಿ 30 ನಿಮಿಷಕ್ಕೊಮ್ಮೆ ವಿಶೇಷ ಬಸ್ ಸೌಲಭ್ಯ
ಮಂಡ್ಯ: ಜಿಲ್ಲೆಯ ನಾನಾ ಭಾಗಗಳಿಂದ ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸುವವರಿಗೆ ಉಚಿತ ಸಾರಿಗೆ ವ್ಯವಸ್ಥೆ ಮಾಡಲಾಗಿದೆ ಎಂದು ಸಚಿವ ಚಲುವರಾಯಸ್ವಾಮಿ (ChaluvarayaSwamy) ತಿಳಿಸಿದರು.
ಮಂಡ್ಯದಲ್ಲಿ ಮಾತನಾಡಿದ ಅವರು, 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ (87th Kannada Sahitya Sammelana) ಆಗಮಿಸುವ ಸಾಹಿತ್ಯಾಸಕ್ತರು ಹಾಗೂ ಸಾರ್ವಜನಿಕರಿಗೆ ಸಾಕಷ್ಟು ಸಂಖ್ಯೆಯಲ್ಲಿ ಕೆಎಸ್ಆರ್ಟಿಸಿ ವತಿಯಿಂದ ಬಸ್ ವ್ಯವಸ್ಥೆ ಮಾಡಲಾಗಿದೆ. ಮೂರು ದಿನ 7 ತಾಲೂಕು ಕೇಂದ್ರಗಳಿಂದ ಸಮ್ಮೇಳನ ನಡೆಯುವ ಸ್ಥಳಕ್ಕೆ ಬಸ್ ಸೌಲಭ್ಯ ಒಳಗೊಂಡಂತೆ 105 ವಿಶೇಷ ವಾಹನಗಳ ವ್ಯವಸ್ಥೆ ಮಾಡಲಾಗಿದೆ. ಮೈಸೂರು ಮತ್ತು ಬೆಂಗಳೂರಿನಿಂದ (Bengaluru) ಪ್ರತಿ 30 ನಿಮಿಷಕ್ಕೆ ಒಂದರಂತೆ ವಿಶೇಷ ಬಸ್ ಸೌಲಭ್ಯ ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದರು.
ಮಂಡ್ಯ ನಗರದ ವಿವಿಧ ಸ್ಥಳಗಳಿಂದ ಸಮ್ಮೇಳನದ ಸ್ಥಳಕ್ಕೆ ಜನರನ್ನು ಕರೆತರಲು 15 ಬಸ್ಗಳ ಸೌಲಭ್ಯವನ್ನು ಉಚಿತವಾಗಿ ಕಲ್ಪಿಸಲಾಗಿದೆ ಎಂದರು. ಇದನ್ನೂ ಓದಿ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಕ್ಕರೆ ನಾಡು ಸಿದ್ಧ – ʻನುಡಿ ಜಾತ್ರೆಯ ಸ್ವರ ಯಾತ್ರೆʼ
ಸಮ್ಮೇಳನಕ್ಕೆ ಬಸ್ ತಲುಪುವ ಮಾರ್ಗ:
ಮಾರ್ಗ-1:
ಮಂಡ್ಯ ಬಸ್ ನಿಲ್ದಾಣದಿಂದ ರೈಲ್ವೆ ನಿಲ್ದಾಣ, ನಂದಾ ಸರ್ಕಲ್, ಫ್ಯಾಕ್ಟರಿ ಸರ್ಕಲ್, ಸ್ವರ್ಣಸಂದ್ರ, ಮಾಂಡವ್ಯ ಕಾಲೇಜ್, ಉಮ್ಮಡಹಳ್ಳಿ ಗೇಟ್, ಹೊಸಬೂದನೂರು ಮಾರ್ಗವಾಗಿ ಸಮ್ಮೇಳನದ ಸ್ಥಳ ತಲುಪಲಿದೆ. ಇದನ್ನೂ ಓದಿ: ಜಮ್ಮು ಕಾಶ್ಮೀರದ ಕಥುವಾದಲ್ಲಿ ಮನೆಗೆ ಬೆಂಕಿ – ಮಾಜಿ ಡಿಎಸ್ಪಿ ಸೇರಿ 6 ಮಂದಿ ಸಾವು
ಮಾರ್ಗ-2:
ಮಂಡ್ಯ ಬಸ್ ನಿಲ್ದಾಣದಿಂದ ಕೋರ್ಟ್ ನಿಲ್ದಾಣ, ವಿಶ್ವವಿದ್ಯಾಲಯ, ಕಲ್ಲಹಳ್ಳಿ, ವಿ.ವಿ ನಗರ, ಶನೇಶ್ವರ ದೇವಸ್ಥಾನ, ಚಾಮುಂಡೇಶ್ವರಿ ದೇವಸ್ಥಾನ, ಕನ್ನಿಕಾ ಪರಮೇಶ್ವರಿ ದೇವಸ್ಥಾನ, ಕರ್ನಾಟಕ ಬಾರ್ ಸರ್ಕಲ್, ಹೊಸಹಳ್ಳಿ ಸರ್ಕಲ್, ಬೆ.ರಾಮಣ್ಣ ಸರ್ಕಲ್, ಎಂವಿಜಿ ಬೇಕರಿ, ನಂದಾ ಸರ್ಕಲ್, ಫ್ಯಾಕ್ಟರಿ ಸರ್ಕಲ್, ಸ್ವರ್ಣಸಂದ್ರ, ಮಾಂಡವ್ಯ ಕಾಲೇಜ್, ಉಮ್ಮಡಹಳ್ಳಿ ಗೇಟ್, ಹೊಸಬೂದನೂರು ಮಾರ್ಗವಾಗಿ ಸಮ್ಮೇಳನದ ಸ್ಥಳ ತಲುಪಲಿದೆ.
ಮಾರ್ಗ-3:
ಹುಣಸೇಮರ, ಕಾಳಿಕಾಂಬ ದೇವಸ್ಥಾನ, ನಂದಾ ಸರ್ಕಲ್, ಫ್ಯಾಕ್ಟರಿ ಸರ್ಕಲ್, ಗುತ್ತಲು ಕಾಲೋನಿ, ಜಯಲಕ್ಷ್ಮಿ ಟಾಕೀಸ್, ಅರಕೇಶ್ವರ ದೇವಸ್ಥಾನ, ಉಮ್ಮಡಹಳ್ಳಿ ಗೇಟ್, ಹೊಸಬೂದನೂರು ಮಾರ್ಗವಾಗಿ ಸಮ್ಮೇಳನದ ಸ್ಥಳ ತಲುಪಲಿದೆ.
ಮಾರ್ಗ-4:
ಸತ್ವ ಪಾರ್ಕಿಂಗ್ ಸ್ಥಳದಿಂದ ಉಮ್ಮಡಹಳ್ಳಿ ಗೇಟ್, ಹೊಸಬೂದನೂರು ಮಾರ್ಗವಾಗಿ ಸಮ್ಮೇಳನದ ಸ್ಥಳ ತಲುಪಲಿದೆ. ಜೊತೆಗೆ ಅದೇ ಮಾರ್ಗದಲ್ಲಿ ಬಸ್ ವಾಪಸ್ ಆಗಲಿದೆ ಎಂದು ಸಚಿವರು ವಿವರಿಸಿದರು.