Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿ.ಟಿ ರವಿ ಅಶ್ಲೀಲ ಪದ ಬಳಸಿದ್ದರೆ ಅದನ್ನ ನಾನೂ ಸಮರ್ಥಿಸಲ್ಲ – ಹೆಚ್‌ಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಸಿ.ಟಿ ರವಿ ಅಶ್ಲೀಲ ಪದ ಬಳಸಿದ್ದರೆ ಅದನ್ನ ನಾನೂ ಸಮರ್ಥಿಸಲ್ಲ – ಹೆಚ್‌ಡಿಕೆ

Latest

ಸಿ.ಟಿ ರವಿ ಅಶ್ಲೀಲ ಪದ ಬಳಸಿದ್ದರೆ ಅದನ್ನ ನಾನೂ ಸಮರ್ಥಿಸಲ್ಲ – ಹೆಚ್‌ಡಿಕೆ

Public TV
Last updated: December 20, 2024 1:51 pm
Public TV
Share
3 Min Read
HD Kumaraswamy 2 1
SHARE

– ಆ ಗೂಂಡಾಗಳು ಕೊಲೆಗೆತ್ನಿಸುತ್ತಾರೆಂದರೆ ಬಂಡೆ ಬೆಂಬಲವಿದೆ ಎಂದೇ ಅರ್ಥ
– MLC ಸಿ.ಟಿ ರವಿ ಮೇಲೆ ಹಲ್ಲೆ ಯತ್ನ; ಕುಮಾರಸ್ವಾಮಿ ತೀವ್ರ ಖಂಡನೆ

ನವದೆಹಲಿ: ಬೆಳಗಾವಿಯ ಸುವರ್ಣಸೌಧದಲ್ಲಿಯೇ ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಅವರ ಮೇಲೆ ನಡೆದಿರುವ ಹಲ್ಲೆ ಯತ್ನವನ್ನು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಅವರು ಖಂಡಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಕೇಂದ್ರ ಸಚಿವರು, ಸಚಿವೆ ಬಗ್ಗೆ ಸಿ.ಟಿ.ರವಿ (CT Ravi) ಅವರು ಅಶ್ಲೀಲ ಪದ ಬಳಸಿದ್ದರೆ ಅದನ್ನು ನಾನು ಸಹ ಸಮರ್ಥಿಸುವುದಿಲ್ಲ. ಅದಕ್ಕೆ ಪ್ರತಿಯಾಗಿ ಸಚಿವೆ ವರ್ತಿಸಿದ ರೀತಿ, ಅವರ ಬೆಂಬಲಿಗರ ಗೂಂಡಾಗಿರಿ ಅತಿರೇಖದ್ದು ಎಂದು ಕಿಡಿಕಾರಿದ್ದಾರೆ.

ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ ಎನ್ನುವುದು ನನ್ನ ಅನುಮಾನ.
ಪ್ರತಿಪಕ್ಷ ನಾಯಕರಿಗೇ ರಕ್ಷಣೆ ಇಲ್ಲ ಎಂದ ಮೇಲೆ ವಿಧಾನಮಂಡಲದಲ್ಲಿ ಯಾರ ಭಾವಚಿತ್ರ ಹಿಡಿದರೇನು ಫಲ? ವಿಧಾನ ಪರಿಷತ್ ಸದಸ್ಯರಾದ ಶ್ರೀ @CTRavi_BJP ಮೇಲೆ ಸುವರ್ಣಸೌಧದಲ್ಲಿಯೇ ಹಲ್ಲೆ ಯತ್ನ ನಡೆದಿರುವುದು ಖಂಡನೀಯ.

ಗೌರವಾನ್ವಿತ ಸಚಿವೆ ಬಗ್ಗೆ ಸಿ.ಟಿ.ರವಿ… pic.twitter.com/40oYfSJnFM

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) December 20, 2024

ಕರ್ನಾಟಕದಲ್ಲಿ ಪ್ರಜಾಪ್ರಭುತ್ವ (Democracy in Karnataka) ಕೊನೆಯುಸಿರೆಳೆಯುತ್ತಿದೆಯೇ ಎನ್ನುವುದು ನನ್ನ ಅನುಮಾನ. ಪ್ರತಿಪಕ್ಷ ನಾಯಕರಿಗೇ ರಕ್ಷಣೆ ಇಲ್ಲ ಅಂದ್ಮೇಲೆ ವಿಧಾನಮಂಡಲದಲ್ಲಿ ಯಾರ ಭಾವಚಿತ್ರ ಹಿಡಿದರೇನು ಫಲ? ವಿಧಾನ ಪರಿಷತ್ ಸದಸ್ಯರಾದ ಸಿ.ಟಿ ರವಿ ಅವರ ಮೇಲೆ ಸುವರ್ಣಸೌಧದಲ್ಲಿಯೇ ಹಲ್ಲೆ ಯತ್ನ ನಡೆದಿರುವುದು ಖಂಡನೀಯ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಸಿಟಿ ರವಿ ಹೇಳಿಕೆ ಸತ್ಯಶೋಧನೆ ಆಗುವ ಮೊದಲು ಯಾವ್ದೇ ನಿರ್ಧಾರಕ್ಕೆ ಬರೋದು ತಪ್ಪು: ಬೊಮ್ಮಾಯಿ

CT Ravi 3

ಗೌರವಾನ್ವಿತ ಸಚಿವೆ ಬಗ್ಗೆ ಸಿ.ಟಿ.ರವಿ ಅವರು ಅಶ್ಲೀಲ ಪದ ಬಳಸಿದ್ದರೆ ಅದನ್ನು ನಾನು ಸಮರ್ಥಿಸುವುದಿಲ್ಲ. ಅದಕ್ಕೆ ಪ್ರತಿಯಾಗಿ ಸಚಿವೆ ವರ್ತಿಸಿದ ರೀತಿ, ಅವರ ಬೆಂಬಲಿಗರ ಗೂಂಡಾಗಿರಿ ಅತಿರೇಖದ್ದು. ಎಲ್ಲದ್ದಕ್ಕೂ ಡಾ.ಅಂಬೇಡ್ಕರ್ ಅವರ ಸಂವಿಧಾನದಡಿಯಲ್ಲಿ ರೂಪಿತವಾದ ಕಾನೂನಿದೆ. ಸಭಾಪತಿಗಳೂ ರೂಲಿಂಗ್ ನೀಡಿದ್ದಾರೆ. ಆ ನಂತರವೂ ನಡೆಯುತ್ತಿರುವ ಘಟನಾವಳಿಗಳು, ಸಭಾಪತಿಗಳನ್ನೇ ನಿಂದಿಸುವ ಕೆಟ್ಟ ನಡವಳಿಕೆಗಳು ಆಘಾತಕಾರಿ. ಸರ್ಕಾರದಲ್ಲಿರುವ ಕೆಲವರು ಈ ಘಟನೆಗೆ ಜ್ವಾಲೆ ಸ್ವರೂಪ ನೀಡಿ ಪ್ರಚೋದಿಸುತ್ತಿರುವ ಬಗ್ಗೆ ಕೇಂದ್ರ ಸಚಿವರು ಕಳವಳ ವ್ಯಕ್ತಪಡಿಸಿದ್ದಾರೆ.

CT Ravi 4

ಯಾವ ಬಂಡೆಯ ಕರಾಮತ್ತು?
ಮೀಸಲಾತಿಗಾಗಿ ಪಂಚಮಸಾಲಿ ಮುಖಂಡರು ಸುವರ್ಣಸೌಧದ ಮುಂದೆ ಪ್ರತಿಭಟಿಸಿದ್ದಕ್ಕೆ ಪೊಲೀಸರಿಂದ ಲಾಠಿಚಾರ್ಜ್ ಮಾಡಿಸಿ ಪೌರುಷ ಮೆರೆದಿತ್ತು ಕಾಂಗ್ರೆಸ್ ಸರ್ಕಾರ. ಅಂದು ಪೊಲೀಸರ ಪ್ರತಾಪ ಹೇಳತೀರದು. ಗೇಟಿನಲ್ಲಿಯೇ ತಡೆದು ಆ ಪಂಚಮಸಾಲಿ ಜನರಿಗೆ ರಕ್ತ ಬರುವಂತೆ ಲಾಠಿ ಬೀಸಿದ ಪೊಲೀಸರೇ, ಈ ಗೂಂಡಾಗಳು ಸುವರ್ಣಸೌಧದೊಳಕ್ಕೆ ಹೇಗೆ ಬಂದರು? ಅಥವಾ ಅವರೇ ನಿಮ್ಮ ಕಣ್ತಪ್ಪಿಸಿ ಒಳ ನುಸುಳಿದರೋ ಅಥವಾ ಸರ್ಕಾರವೇ ಷಡ್ಯಂತ್ರ ಮಾಡಿ ಒಳ ನುಗ್ಗಿಸಿತೋ? ಇಲ್ಲವೇ ಯಾವುದಾದರೂ ಕಲ್ಲು ಬಂಡೆಯ ಕರಾಮತ್ತು, ಕುಮ್ಮಕ್ಕು ಇದೆಯಾ? ಎಂದು ಕುಮಾರಸ್ವಾಮಿ ಅವರು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಬೆಳಗಾವಿ ಕೋರ್ಟ್ ಹಾಲ್‌ನಲ್ಲಿ ಕಣ್ಣೀರಿಟ್ಟ ಸಿ.ಟಿ ರವಿ – ಜಾಮೀನಿಗೆ ವಕೀಲರ ಮನವಿ, ಆದೇಶ ಕಾಯ್ದಿರಿಸಿದ ಕೊರ್ಟ್

CT Ravi 1

ಸದನದ ಕಾರಿಡಾರಿನಲ್ಲಿಯೇ ಆ ಗೂಂಡಾಗಳು ಶಾಸಕರನ್ನು ಅಟ್ಟಾಡಿಸುತ್ತಾರೆ, ಕೊಲೆಗೆತ್ನಿಸುತ್ತಾರೆ, ಮಾರ್ಷಲ್’ಗಳನ್ನು ಕೆಳಕ್ಕೆ ಕೆಡವಿ ಕ್ರಿಮಿನಲ್ ಪ್ರವೃತ್ತಿ ಮೆರೆಯುತ್ತಾರೆಂದರೆ ಬಂಡೆ ಬೆಂಬಲವಿದೆ ಎಂದೇ ಅರ್ಥ. ಆ ಗೌರವಾನ್ವಿತ ಸಚಿವೆಯ ಆಪ್ತ ಸಹಾಯಕ ಶಾಸಕರ ಮೇಲೇರಿ ಹೋಗುವ, ಕಾರಿಡಾರಿನ ಕಬ್ಬಿಣದ ಬಾಗಿಲನ್ನೇ ಮುರಿಯಲೆತ್ನಿಸಿ ಹಲ್ಲೆಗೆ ಯತ್ನಿಸುವ ದೃಶ್ಯಗಳು ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರವಾಗಿವೆ. ರಾಜ್ಯದಲ್ಲಿ ಆಡಳಿತ ಸುರಕ್ಷಿತ ಕೈಗಳಲ್ಲಿ ಇಲ್ಲ ಎನ್ನುವುದಕ್ಕೆ ಆ ದೃಶ್ಯಗಳೇ ಸಾಕ್ಷಿ ಎಂದು ಅವರು ಹೇಳಿದ್ದಾರೆ.

ಸುವರ್ಣಸೌಧಕ್ಕೆ ನುಗ್ಗಿದ ಗೂಂಡಾಗಳನ್ನು ಕೂಡಲೇ ಬಂಧಿಸಿ, ಅವರ ವಿರುದ್ಧ ರೌಡಿಪಟ್ಟಿ ತೆರೆಯಬೇಕು. ಸಮಾಜದ ಶಾಂತಿಗೆ ಬೆದರಿಕೆಯಾಗಿರುವ ಆ ಕಿಡಿಗೇಡಿಗಳನ್ನು ಸುವರ್ಣಸೌಧ, ವಿಧಾನಸೌಧದಿಂದ ಶಾಶ್ವತವಾಗಿ ನಿರ್ಬಂಧಿಸಬೇಕು ಎಂದು ಕೇಂದ್ರ ಸಚಿವರು ಒತ್ತಾಯಿಸಿದ್ದಾರೆ. ಪೊಲೀಸರೇ, ಇಡೀ ಪ್ರಕರಣದ ಬಗ್ಗೆ ನೀವು ಉತ್ತರಿಸಬೇಕಾಗುತ್ತದೆ. ಇಡೀ ರಾತ್ರಿ ಸಿ.ಟಿ.ರವಿ ಅವರನ್ನು ಪೊಲೀಸ್ ಜೀಪಿನಲ್ಲಿ ಸುತ್ತಿಸುತ್ತೀರಿ ಎಂದರೆ, ಇದಕ್ಕೆ ಯಾರ ಫರ್ಮಾನು ಕಾರಣ? ಈ ಗೂಂಡಾಗಳ ಗ್ಯಾಂಗ್ ಲೀಡರ್ ಯಾರು? ನಿಮಗೆ ಎಲ್ಲಾ ಮಾಹಿತಿ ಇರುತ್ತದೆ, ನೀವೂ ಸತ್ಯ ಹೇಳಬೇಕಾಗುತ್ತದೆ ಎಂದು ಅವರು ಗುಡುಗಿದ್ದಾರೆ. ಇದನ್ನೂ ಓದಿ: ರಾಮಮಂದಿರ ಕಟ್ಟೋದ್ರಿಂದ ಹಿಂದೂ ನಾಯಕನಾಗಲು ಸಾಧ್ಯವಿಲ್ಲ: ಮೋಹನ್‌ ಭಾಗವತ್‌

TAGGED:belagaviCT RaviDK Shivakumarhd kumaraswamyLakshmi Hebbalkarನವದೆಹಲಿಲಕ್ಷ್ಮಿ ಹೆಬ್ಬಾಳ್ಕರ್ಸಿ.ಟಿ ರವಿಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi
Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories

You Might Also Like

krishna river 200361 960 720
Latest

ಕೃಷ್ಣಾ ನದಿಯಲ್ಲಿ ಕುರಿಗಾಹಿ ಮೇಲೆ ಮೊಸಳೆ ದಾಳಿ – ಬಲಗೈ ಕಟ್‌

Public TV
By Public TV
42 minutes ago
Vinay Kulkarni 1 1
Bengaluru City

ಸೆಲ್‌ ಒಳಗೆ ಹೋಗ್ತಿದ್ದಂತೆ ಕಣ್ಣೀರು – ಪರಪ್ಪನ ಅಗ್ರಹಾರ ಜೈಲಲ್ಲಿ ಇಡೀ ರಾತ್ರಿ ನಿದ್ದೆ ಮಾಡದ ಕುಲಕರ್ಣಿ

Public TV
By Public TV
1 hour ago
pm modi mann ki baat
Latest

ಮಹಿಳೆಯರನ್ನು ಗೌರವಿಸುವುದು ದೇಶವನ್ನೇ ಗೌರವಿಸಿದಂತೆ: ಮಹಿಳಾ ಮೀಸಲಾತಿ ಕಾನೂನು ಶ್ಲಾಘಿಸಿದ ಮೋದಿ

Public TV
By Public TV
2 hours ago
DK Shivakumar
Bengaluru City

ಕುರ್ಚಿ ಆಸೆಗಾಗಿ ಡಿಕೆಶಿ ವಿರೋಧಿ ಬಣದ ನಾಯಕರನ್ನು ಹೊಂಚು ಹಾಕಿ, ಸಂಚು ರೂಪಿಸಿ ಮುಗಿಸುತ್ತಿದ್ದಾರೆ: ಜೆಡಿಎಸ್ ಕಿಡಿ

Public TV
By Public TV
2 hours ago
Russian firms india
Latest

ರಷ್ಯಾ, ಇರಾನ್‌ ತೈಲ ಖರೀದಿಗೆ ಭಾರತಕ್ಕೆ ಅವಕಾಶ ನೀಡುವ ವಿನಾಯಿತಿಯಲ್ಲಿ ಬದಲಾವಣೆ ಮಾಡಲ್ಲ: ಅಮೆರಿಕ

Public TV
By Public TV
3 hours ago
Raichuru Accident 1
Districts

ಮಂತ್ರಾಲಯ ಬಳಿ ಭೀಕರ ಅಪಘಾತ – ಮೂರು ವರ್ಷದ ಮಗು ಸೇರಿ 8 ಜನ ದುರ್ಮರಣ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?