Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಒಂದು ದೇಶ, ಒಂದು ಚುನಾವಣೆ ಹಿಂದೆ ‘ನಂಬರ್‌ ಗೇಮ್’‌ – ಬಿಲ್‌ ಪಾಸ್‌ ಆಗುತ್ತಾ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಒಂದು ದೇಶ, ಒಂದು ಚುನಾವಣೆ ಹಿಂದೆ ‘ನಂಬರ್‌ ಗೇಮ್’‌ – ಬಿಲ್‌ ಪಾಸ್‌ ಆಗುತ್ತಾ?

Latest

ಒಂದು ದೇಶ, ಒಂದು ಚುನಾವಣೆ ಹಿಂದೆ ‘ನಂಬರ್‌ ಗೇಮ್’‌ – ಬಿಲ್‌ ಪಾಸ್‌ ಆಗುತ್ತಾ?

Public TV
Last updated: December 21, 2024 11:49 pm
Public TV
Share
5 Min Read
one nation one election
SHARE

ಪ್ರಸ್ತುತ ದೇಶದಲ್ಲಿ ‘ಒಂದು ದೇಶ, ಒಂದು ಚುನಾವಣೆ’ ಮಸೂದೆ ಬಹು ಚರ್ಚೆಯಲ್ಲಿದೆ. ದೇಶದಲ್ಲಿ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ಮಸೂದೆ ಇದಾಗಿದೆ. ಈ ಬಿಲ್ ಜಾರಿಗೆ ಪರ-ವಿರೋಧದ ಮಾತು ಜೋರಾಗಿದೆ. ಬಿಜೆಪಿಯ ಪ್ರಮುಖ ಕಾರ್ಯಸೂಚಿಯನ್ನು ಜಾರಿ ತರಲು ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟದಲ್ಲೇ ಒಮ್ಮತದ ಅಭಿಪ್ರಾಯ ಮೂಡಿಲ್ಲ. ಮಂಗಳವಾರ ಕೇಂದ್ರ ಸರ್ಕಾರ ಈ ಮಸೂದೆಯನ್ನು ಮಂಡಿಸಿತು. ಆದರೆ, ಅಂಗೀಕಾರಕ್ಕೆ ಬೇಕಾದ ಬಹುಮತ ಮಾತ್ರ ಸಿಗಲಿಲ್ಲ. ಇದರಿಂದ ‘ಒನ್ ನೇಷನ್ ಒನ್ ಎಲೆಕ್ಷನ್’ ವಿವಾದಿತ ಬಿಲ್ ಆಗಿ ದೇಶದಲ್ಲಿ ಚರ್ಚೆ ಹುಟ್ಟುಹಾಕಿದೆ.

ಮಸೂದೆ ಮೂಲಕ ಕೇಂದ್ರ ಸರ್ಕಾರವು ಸಂವಿಧಾನಕ್ಕೆ ತಿದ್ದುಪಡಿ ಮಾಡಲು ಮುಂದಾಗಿದೆ. ಆದರೆ, ಸಂಖ್ಯಾಬಲದ ಕೊರತೆಯಿಂದ ತನ್ನ ಕನಸನ್ನು ಸಾಕಾರಗೊಳಿಸಲು ಸಾಧ್ಯವಾಗಿಲ್ಲ. ನಿರೀಕ್ಷೆಯಂತೆ ಲೋಕಸಭೆಯಲ್ಲಿ ಕಾಂಗ್ರೆಸ್, ಸಮಾಜವಾದಿ ಪಕ್ಷ, ತೃಣಮೂಲ ಕಾಂಗ್ರೆಸ್, ಡಿಎಂಕೆ, ಅಸಾದುದ್ದೀನ್ ಓವೈಸಿ ಎಐಎಂಐಎಂ ಸೇರಿದಂತೆ ಸಣ್ಣ ಪಕ್ಷಗಳು ಕೂಡ ಬಿಲ್‌ಗೆ ತೀವ್ರ ವಿರೋಧ ವ್ಯಕ್ತಪಡಿಸಿವೆ. ಬಿಜೆಪಿಯ ಇಬ್ಬರು ಮಿತ್ರಪಕ್ಷಗಳಾದ ಆಂಧ್ರದ ಆಡಳಿತಾರೂಢ ತೆಲುಗು ದೇಶಂ ಪಕ್ಷ ಹಾಗೂ ಮಹಾರಾಷ್ಟçದ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಬಣ ಮಾತ್ರ ಮಸೂದೆಗೆ ಬೆಂಬಲ ವ್ಯಕ್ತಪಡಿಸಿವೆ. ಒಟ್ಟಾರೆಯಾಗಿ ‘ಒಂದು ದೇಶ, ಒಂದು ಚುನಾವಣೆ’ ಜಾರಿ ಹಿಂದೆ ನಂಬರ್ ಗೇಮ್ ಶುರುವಾಗಿದೆ.

‘ಒಎನ್‌ಒಪಿ’ ನಂಬರ್ ಗೇಮ್!
ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಸಮಿತಿಯು ಶಿಫಾರಸು ಮಾಡಿರುವ ಸಂವಿಧಾನ ತಿದ್ದುಪಡಿಗಳಿಗೆ ಲೋಕಸಭೆಯಲ್ಲಿ ಅಂಗೀಕಾರ ಸಿಗಲು ಮೂರನೇ ಎರಡರಷ್ಟು ಬಹುಮತದ ಅಗತ್ಯವಿದೆ. ಮಸೂದೆ ಮಂಡಿಸುವಾಗ ಮತ ಚಲಾಯಿಸಿದ ಸಂಸದರ ಸಂಖ್ಯೆಯನ್ನು ಆಧರಿಸಿ ನೋಡಿದರೆ, ಬಿಜೆಪಿಗೆ ಬಹುಮತವಿಲ್ಲ ಎಂದು ತೋರುತ್ತದೆ.

ಮತ ವಿಭಜನೆಗೆ ಹಾಕಿದಾಗ ಏನಾಯ್ತು?
ಡಿ.17 ರಂದು ಲೋಕಸಭೆಯಲ್ಲಿ ವಿಪಕ್ಷಗಳು ಮತ ವಿಭಜನೆಗೆ ಪಟ್ಟು ಹಿಡಿದವು. ಆಗ, ಮಸೂದೆಯನ್ನು ಸದನದಲ್ಲಿ ಮಂಡಿಸಬಹುದೇ ಎಂದು ಪ್ರಶ್ನಿಸಿ ಮತಕ್ಕೆ ಹಾಕಲಾಯಿತು. ಪರವಾಗಿ 269 ಮತಗಳು ಹಾಗೂ ವಿರುದ್ಧವಾಗಿ 198 ಮತಗಳು ಬಿದ್ದವು. ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವುದಕ್ಕೆ ಸಂವಿಧಾನಕ್ಕೆ ತಿದ್ದುಪಡಿ ತರುವ, ‘ಸಂವಿಧಾನ (129ನೇ ತಿದ್ದುಪಡಿ) ಮಸೂದೆ-2024’ ಅಂಗೀಕಾರಕ್ಕೆ ಮೂರನೇ ಎರಡರಷ್ಟು ಬಹುಮತ ಬೇಕು. ಆದರೆ, ಮಸೂದೆ ಮಂಡನೆ ಪರವಾಗಿ ಬಿದ್ದ ಮತಗಳ ಮತಗಳ ಪ್ರಮಾಣ ಮೂರನೇ ಎರಡರಷ್ಟು ಬಹುಮತಕ್ಕಿಂತ ಕಡಿಮೆ ಇದೆ.

ನಂಬರ್ ಲೆಕ್ಕಾಚಾರ ಹೇಗಿದೆ?
ಎನ್‌ಡಿಎ ಮೈತ್ರಿಕೂಟ – 293, ಇಂಡಿಯಾ ಮೈತ್ರಿಕೂಟ – 236, ಅಕಾಲಿದಳ 1, ಎಎಸ್‌ಪಿ (ಕಾನ್ಶಿರಾಮ್) 1, ಎಐಎಂಐಎಂ 1, ವೈಎಸ್‌ಆರ್ ಕಾಂಗ್ರೆಸ್ 4, ವಿಒಟಿಟಿಪಿ 1, ಝಡ್‌ಪಿಎಂ 1, ಪಕ್ಷೇತರ 4 ಲೋಕಸಭಾ ಸದಸ್ಯರಿದ್ದಾರೆ.

ಮೂರನೇ ಎರಡರಷ್ಟು ಬೆಂಬಲಕ್ಕ ಎಷ್ಟು ನಂಬರ್ ಬೇಕು?
543 ಸದಸ್ಯ ಬಲದ ಲೋಕಸಭೆಯಲ್ಲಿ ಒಂದು ಸ್ಥಾನ ಖಾಲಿಯಿದೆ. ಸದನವು ಪೂರ್ಣ ಬಲದಲ್ಲಿದ್ದಾಗ ಮೂರನೇ ಎರಡರಷ್ಟು ಬಹುಮತಕ್ಕೆ 362 ಮತಗಳ ಅಗತ್ಯವಿದೆ. ಮತ ವಿಭಜನೆ ಆಧಾರದಲ್ಲಿ ಮಸೂದೆ ಮಂಡನೆಗೆ ಕೇಳಿದ ಸಂದರ್ಭದಲ್ಲಿ ಸಂಸತ್‌ನಲ್ಲಿ 461 ಸಂಸದರಿದ್ದರು. ಆ ಸಂದರ್ಭದಲ್ಲಿ ಮಸೂದೆ ಪರವಾಗಿ 307 ಮತಗಳ (ಮೂರನೇ ಎರಡರಷ್ಟು ಬಹುಮತಕ್ಕೆ) ಅಗತ್ಯವಿತ್ತು. ಆದರೆ, ಬಿಜೆಪಿಯ ಮಸೂದೆ ಪರವಾಗಿ ಬಿದ್ದಿದ್ದು 269 ಮತಗಳು. ಹೀಗಾಗಿ, ಮಸೂದೆ ಮಂಡನೆಗೂ ಬಿಜೆಪಿಗೆ ಬಹುಮತ ಸಿಗಲಿಲ್ಲ.

9 ಸಂಸದರನ್ನು ಹೊಂದಿರುವ ಆರು ಪಕ್ಷಗಳು ಯಾವುದೇ ಮೈತ್ರಿಕೂಟಕ್ಕೆ ಬೆಂಬಲವನ್ನು ಸೂಚಿಸಿಲ್ಲ. ಇವುಗಳ ಪೈಕಿ ಅಕಾಲಿದಳ, ಎಐಎಂಐಎಂ ಮತ್ತು ಎಎಸ್‌ಪಿ (ಕಾನ್ಶಿರಾಮ್) ಪಕ್ಷಗಳ ಸಂಸದರು ಮಸೂದೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಆದರೆ, ಈ ಹಿಂದೆ ವೈಎಸ್‌ಆರ್ ಕಾಂಗ್ರೆಸ್ ಏಕಕಾಲದಲ್ಲಿ ನಡೆಸುವ ಚುನಾವಣೆಗೆ ಬೆಂಬಲ ಸೂಚಿಸಿತ್ತು. ಆ ಪಕ್ಷದಲ್ಲಿ ನಾಲ್ಕು ಮಂದಿ ಸಂಸದರಿದ್ದಾರೆ. ಇತ್ತ ಎನ್‌ಡಿಎ ಮೈತ್ರಿಕೂಟದ ಭಾಗವಾಗಿದ್ದರೂ ಟಿಡಿಪಿಯು ಬಿಜೆಪಿ ಜೊತೆ ಅಂತರ ಕಾಯ್ದುಕೊಂಡಿದೆ. ಮಸೂದೆ ವಿಚಾರದಲ್ಲಿ ಈ ಪಕ್ಷ ತನ್ನ ನಿಲುವು ಬದಲಿಸುವ ಸಾಧ್ಯತೆ ಇದೆ. ಎನ್‌ಡಿಎ ಮೈತ್ರಿಕೂಟದ ಸಂಖ್ಯಾಬಲ (292)ದ ಲೆಕ್ಕಾಚಾರದಲ್ಲಿ ನೋಡುವುದಾದರೆ, ಸಂಸತ್‌ನಲ್ಲಿ ಪೂರ್ಣ ಪ್ರಮಾಣದಲ್ಲಿ ಸದಸ್ಯರು ಹಾಜರಾದರೆ ಬಿಜೆಪಿಗೆ ಹೆಚ್ಚುವರಿಯಾಗಿ 64 ಸಂಸದರ ಬೆಂಬಲ ಬೇಕಾಗುತ್ತದೆ.

ಜೆಪಿಸಿ ರಚನೆ
ಒಂದು ದೇಶ, ಒಂದು ಚುನಾವಣೆ ಮಸೂದೆ ಪರಾಮರ್ಶೆಗೆ 39 ಸದಸ್ಯರನ್ನೊಳಗೊಂಡ ಜಂಟಿ ಸಂಸದೀಯ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿಯಲ್ಲಿ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಇದ್ದಾರೆ. ಸಮಿತಿಯಲ್ಲಿ ಲೋಕಸಭೆಯ 27 ಹಾಗೂ ರಾಜ್ಯ ಸಭೆಯ 12 ಸದಸ್ಯರಿದ್ದಾರೆ. ಪ್ರಿಯಾಂಕಾ ಗಾಂಧಿ ಜೊತೆಗೆ ಪ್ರಮುಖರಾದ ಮನೀಶ್ ತೆವಾರಿ, ಧರ್ಮೇಂದ್ರ ಯಾದವ್, ಕಲ್ಯಾಣ್ ಬ್ಯಾನರ್ಜಿ, ಸುಪ್ರಿಯಾ ಸುಳೆ, ಶ್ರೀಕಾಂತ್ ಏಕನಾಥ್ ಶಿಂಧೆ, ಸಂಬಿತ್ ಪತ್ರಾ, ಅನಿಲ್ ಬಲುನಿ, ಅನುರಾಗ್ ಸಿಂಗ್ ಠಾಕೂರ್ ಇದ್ದಾರೆ.

ಏನಿದು ಒಎನ್‌ಒಪಿ ಮಸೂದೆ?
ದೇಶದಲ್ಲಿ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವುದೇ ‘ಒಂದು ದೇಶ, ಒಂದು ಚುನಾವಣೆ’ ಮಸೂದೆ. 2024ರಲ್ಲಿ ಲೋಕಸಭೆಯೊಂದಿಗೆ ನಾಲ್ಕು ರಾಜ್ಯ ವಿಧಾನಸಭೆಗಳಿಗೆ ಚುನಾವಣೆ ನಡೆಯಿತು. ಏಪ್ರಿಲ್-ಜೂನ್ ವರೆಗೆ ಆಂಧ್ರ ಪ್ರದೇಶ, ಅರುಣಾಚಲ ಪ್ರದೇಶ, ಸಿಕ್ಕಿಂ ಮತ್ತು ಒಡಿಶಾ ರಾಜ್ಯಗಳಿಗೆ ಹಾಗೂ ಅಕ್ಟೋಬರ್-ನವೆಂಬರ್ ವರೆಗೆ ಮಹಾರಾಷ್ಟ್ರ, ಹರಿಯಾಣ ಮತ್ತು ಜಮ್ಮು ಮತ್ತು ಕಾಶ್ಮೀರ ರಾಜ್ಯಗಳಿಗೆ ಚುನಾವಣೆ ನಡೆಯಿತು. ಕಳೆದ ವರ್ಷ ಬೇರೆ ಬೇರೆ ತಿಂಗಳಲ್ಲಿ ಕರ್ನಾಟಕ, ಮಧ್ಯಪ್ರದೇಶ, ರಾಜಸ್ಥಾ ಮತ್ತು ತೆಲಂಗಾಣ ರಾಜ್ಯಗಳಲ್ಲಿ ಚುನಾವಣೆ ನಡೆದಿತ್ತು. 2025 ಕ್ಕೆ ದೆಹಲಿ ಮತ್ತು ಬಿಹಾರ ರಾಜ್ಯಗಳು ವಿಧಾನಸಭೆ ಚುನಾವಣೆ ಎದುರಿಸಲು ಸಜ್ಜಾಗಿವೆ.

ಮಸೂದೆ ಬಗ್ಗೆ ಬಿಜೆಪಿ ನಿಲುವೇನು?
ಭಾರತ ಪ್ರತಿ ವರ್ಷ ಚುನಾವಣೆಗಳಿಗೆ ಸಾಕ್ಷಿಯಾಗುತ್ತಲೇ ಇರುತ್ತದೆ. ಇದರಿಂದ ಭಾರೀ ಹಣ ಖರ್ಚಾಗುತ್ತಿದೆ. ಜೊತೆಗೆ ಪ್ರತಿ ವರ್ಷ ಚುನಾವಣೆಗೆ ನೀತಿ ಸಂಹಿತೆ ಘೋಷಣೆಯಾಗುವುದರಿಂದ ಅಭಿವೃದ್ಧಿ ಕಾರ್ಯಗಳಿಗೂ ಹಿನ್ನಡೆಯಾಗಲಿದೆ. ಈ ಕಾರಣಕ್ಕೆ ಒಂದು ದೇಶ, ಒಂದು ಚುನಾವಣೆ ವ್ಯವಸ್ಥೆ ಅಗತ್ಯ ಎಂಬುದನ್ನು ಬಿಜೆಪಿ ಒತ್ತಿ ಹೇಳಿದೆ.

ವಿಪಕ್ಷಗಳ ವಿರೋಧ ಯಾಕೆ?
ಈ ಮಸೂದೆಯು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿದೆ. ಅಲ್ಲದೇ ಸರ್ವಾಧಿಕಾರಕ್ಕೆ ಅನುವು ಮಾಡಿಕೊಡುತ್ತದೆ. ಪ್ರಸ್ತಾವಿತ ಮಸೂದೆಯು ರಾಜ್ಯಗಳ ಅಧಿಕಾರವನ್ನು ಮೊಟಕುಗೊಳಿಸುತ್ತದೆ. ಹೊಸ ಸರ್ಕಾರಗಳ ಅವಧಿ ಕೂಡ ಇದರಿಂದ ಮೊಟಾಗುತ್ತದೆ ಎಂಬುದು ವಿಪಕ್ಷಗಳ ನಿಲುವು.

ಒಎನ್‌ಒಪಿ ಹೊಸ ಪದ್ಧತಿಯೇ?
ಭಾರತದಲ್ಲಿ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವುದೇನು ಹೊಸಪದ್ಧತಿಯಲ್ಲ. ಸ್ವಾತಂತ್ರ್ಯ ಬಂದು ಸಂವಿಧಾನ ಅಂಗೀಕಾರ ಆದ ಬಳಿಕ ಲೋಕಸಭೆ ಮತ್ತು ವಿಧಾನಸಭೆಗಳಿಗೆ ಏಕಕಾಲದಲ್ಲೇ ಚುನಾವಣೆಗಳು ನಡೆದಿದ್ದವು. 1951 ರಿಂದ 1967ರ ಅವಧಿ ವರೆಗೂ ನಾಲ್ಕು ಸಾರ್ವತ್ರಿಕ ಚುನಾವಣೆಗಳು ಏಕಕಾಲದಲ್ಲೇ ನಡೆದಿವೆ. ಆ ಬಳಿಕ ರಾಜ್ಯ ವಿಧಾನಸಭೆಗಳ ವಿಸರ್ಜನೆ, ಲೋಕಸಭೆ ವಿಸರ್ಜನೆ, ತುರ್ತು ಪರಿಸ್ಥಿತಿ ಮೊದಲಾದ ಬೆಳವಣಿಗೆಗಳಿಂದಾಗಿ ಏಕಕಾಲದಲ್ಲಿ ಚುನಾವಣೆಗಳು ನಡೆಯಲು ಸಾಧ್ಯವಾಗಲಿಲ್ಲ. ಈಗ ಮತ್ತೆ ಅದೇ ಪದ್ಧತಿಯನ್ನು ಜಾರಿಗೆ ತರಲು ಬಿಜೆಪಿ ಮುಂದಾಗಿದೆ.

TAGGED:bjpcongressINDIA BlocJPClok sabhandaone nation one electionparliamentಒಂದು ಚುನಾವಣೆಒಂದು ದೇಶ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Iranian Crude Oil
Latest

ಭಾರತದತ್ತ ಹೊರಟಿದ್ದ ಇರಾನ್ ಕಚ್ಚಾ ತೈಲ ಹೊತ್ತ ಹಡಗು ಚೀನಾದತ್ತ ಪ್ರಯಾಣ

Public TV
By Public TV
42 minutes ago
Raw Bitumen Karwar
Latest

ಕಾರವಾರ| ಮಧ್ಯಪ್ರಾಚ್ಯದಿಂದ ಬರುತ್ತಿದ್ದ ಕಚ್ಚಾ ಡಾಂಬರ್ ಸಂಪೂರ್ಣ ಬಂದ್

Public TV
By Public TV
1 hour ago
Induction Stove
Bengaluru City

ಇಂಡಕ್ಷನ್‌ ಸ್ಟವ್‌ ಖರೀದಿ ಮುನ್ನ ಈ ಅಂಶಗಳನ್ನು ತಿಳಿದುಕೊಳ್ಳಿ

Public TV
By Public TV
1 hour ago
Hubli Love Jihad
Dharwad

ಜ್ಯೂಸ್‌ನಲ್ಲಿ ಮತ್ತಿನ ಔಷಧ ಬೆರಸಿಕೊಟ್ಟು ಸಮೀರ್‌ ಅತ್ಯಾಚಾರ ಮಾಡಿದ್ದಾನೆ – ಸಂತ್ರಸ್ತೆ ಸ್ಫೋಟಕ ಹೇಳಿಕೆ

Public TV
By Public TV
1 hour ago
Sameer
Latest

ಹುಬ್ಬಳ್ಳಿ ಲವ್ ಜಿಹಾದ್ ಕೇಸ್‌ | ಸಮೀರ್ ನನ್ನ ಮಗಳ ತಲೆ ಕೆಡಿಸಿದ್ದಾನೆ: ಯುವತಿ ತಾಯಿ ಆಕ್ರೋಶ

Public TV
By Public TV
1 hour ago
pralhad joshi
Latest

ಎಲೆಕ್ಟ್ರಿಕ್ ವಾಹನಗಳ ಮೇಲಿನ ತೆರಿಗೆ ವಿನಾಯಿತಿ ಹಿಂಪಡೆದಿದ್ದು ರಾಜ್ಯ ಸರ್ಕಾರದ ಆರ್ಥಿಕ ದಿವಾಳಿತನದ ಸೂಚಕ: ಜೋಶಿ ಟೀಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?