Uttar Pradesh | ಖಾಲಿಸ್ತಾನ್‌ ಕಮಾಂಡೋ ಫೋರ್ಸ್‌ನ ಮೂವರು ಭಯೋತ್ಪಾದಕರು ಎನ್‌ಕೌಂಟರ್‌

Public TV
1 Min Read
Khalistan

ಲಕ್ನೋ: ನಿಷೇಧಿತ ಸಂಘಟನೆ ಖಲಿಸ್ತಾನ್‌ ಕಮಾಂಡೋ ಫೋರ್ಸ್‌ನ (ಖಲಿಸ್ತಾನ್‌ ಜಿಂದಾಬಾದ್‌ ಫೋರ್ಸ್‌) ಮೂವರು ಭಯೋತ್ಪಾದಕರನ್ನು ಉತ್ತರ ಪ್ರದೇಶದ ಪಿಲಿಭಿತ್ ಜಿಲ್ಲೆಯಲ್ಲಿ ಪೊಲೀಸರು ಎನ್‌ಕೌಂಟರ್‌ (Encounter) ಮಾಡಿದ್ದಾರೆ. ಸೋಮವಾರ ಮುಂಜಾನೆ ಈ ಘಟನೆ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.

ಎನ್‌ಕೌಂಟರ್‌‌ನಲ್ಲಿ ಹತರಾದ ಖಲಿಸ್ತಾನಿ ಭಯೋತ್ಪಾದಕರನ್ನು (Khalistani Terrorist) ಗುರ್ವಿಂದರ್ ಸಿಂಗ್ (25), ವೀರೇಂದ್ರ ಸಿಂಗ್ ಅಲಿಯಾಸ್ ರವಿ (23), ಮತ್ತು ಜಸ್ಪ್ರೀತ್ ಸಿಂಗ್ ಅಲಿಯಾಸ್ ಪ್ರತಾಪ್ ಸಿಂಗ್ (18) ಎಂದು ಗುರುತಿಸಿದೆ. ಹತರು ಪಂಜಾಬ್‌ನ ಗುರುದಾಸ್‌ಪುರ ಜಿಲ್ಲೆಯ ಪೊಲೀಸ್ ಪೋಸ್ಟ್ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದರು ಎಂಬ ಸ್ಫೋಟಕ ವಿಚಾರ ಬೆಳಕಿಗೆ ಬಂದಿದೆ.

Khalistani

ಎನ್‌ಕೌಂಟರ್ ನಂತರ ಪೊಲೀಸರು ಎರಡು ಎಕೆ -47 ರೈಫಲ್‌ಗಳು, ಎರಡು ಗ್ಲಾಕ್ ಪಿಸ್ತೂಲ್‌ಗಳು ಮತ್ತು ಹಲವು ಮ್ಯಾಕ್ಸಿನ್ ಜೀವಂತ ಗುಂಡುಗಳನ್ನು ಮೃತರಿಂದ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಪಿಲಿಭಿತ್ ಜಿಲ್ಲೆಯ ಪುರನ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಪ್ರದೇಶದಲ್ಲಿ ಮೂವರು ಆರೋಪಿಗಳ ಉಪಸ್ಥಿತಿಯ ಬಗ್ಗೆ ಪಂಜಾಬ್ ಪೊಲೀಸರ ತಂಡವು ಪಿಲಿಭಿತ್ ಪೊಲೀಸರಿಗೆ ಮಾಹಿತಿ ನೀಡಿದ್ದು, ನಂತರ ಕಾರ್ಯಾಚರಣೆ ಪ್ರಾರಂಭಿಸಲಾಗಿದೆ. ಮೂವರು ವ್ಯಕ್ತಿಗಳು ಪುರನ್‌ಪುರದಲ್ಲಿ ಅನುಮಾನಾಸ್ಪದ ವಸ್ತುಗಳೊಂದಿಂಗೆ ಸಂಚರಿಸುವ ಬಗ್ಗೆ ಪೊಲೀಸರಿಗೆ ಸುಳಿವು ಸಿಕ್ಕಿತ್ತು.

ಮಾಹಿತಿಯ ಆಧಾರದ ಮೇಲೆ, ಪೊಲೀಸರು ಕಾರ್ಯಚರಣೆಗೆ ತೆರಳಿದಾಗ ಮೂವರು ಶಂಕಿತರು ಪೊಲೀಸ್ ತಂಡದ ಮೇಲೆ ಗುಂಡು ಹಾರಿಸಿದರು. ಬಳಿಕ ಪೊಲೀಸರ ಪ್ರತಿ ದಾಳಿಯಲ್ಲಿ ಅವರು ಕೊಲ್ಲಲ್ಪಟ್ಟರು. ಪಂಜಾಬ್ ಪೊಲೀಸ್ ಮತ್ತು ಉತ್ತರ ಪ್ರದೇಶ ಪೊಲೀಸರ ತಂಡಗಳು ಜಂಟಿ ಕಾರ್ಯಾಚರಣೆ ನಡೆಸಿವೆ. ಪಂಜಾಬ್ ಪೊಲೀಸ್ ತಂಡವು ಅವರ ವಿದೇಶಿ ಸಂಪರ್ಕಗಳ ಬಗ್ಗೆಯೂ ತಿಳಿಸಿದೆ.

ತನಿಖೆ ಇಡೀ ಘಟನೆಯ ಬಗ್ಗೆ ತನಿಖೆ ನಡೆಸಲಾಗಿದೆ ಎಂದು ಪಿಲಿಬಿಹಿತ್ ಪೊಲೀಸ್ ಹಿರಿಯ ಅಧಿಕಾರಿಯೊಬ್ಬರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಕಳೆದ ಶನಿವಾರ ಡಿಸೆಂಬರ್ 21 ರಂದು ಗುರುದಾಸ್‌ಪುರ ಜಿಲ್ಲೆಯ ಕಲಾನೌರ್ ಉಪವಿಭಾಗದಲ್ಲಿರುವ ಕೈಬಿಡಲಾದ ಪೊಲೀಸ್ ಪೋಸ್ಟ್‌ನಲ್ಲಿ ಸ್ಫೋಟ ಸಂಭವಿಸಿತ್ತು. ಪೊಲೀಸ್ ಬಿಗಿ ಬಂದೋಬಸ್ತ್ ನಡುವೆ ನಡೆದ ದಾಳಿಯಲ್ಲಿ ಯಾವುದೇ ಪ್ರಾಣ ಅಥವಾ ಆಸ್ತಿ ಹಾನಿಯಾಗಿರಲಿಲ್ಲ.

Share This Article