ಮಡಿಕೇರಿ: ಸಿ.ಟಿ.ರವಿ (C.T.Ravi) ಒಬ್ಬ ಡ್ರಗ್ ಅಡಿಕ್ಟ್, ಇಡೀ ದೇಶದ ರಾಜಕಾರಣಿಗಳಲ್ಲಿ ಎಲ್ಲೂ ನೋಡುವ ಹಾಗೆ ಇಲ್ಲ, ಟಾಪ್ 10 ನಲ್ಲಿ ನಂ.1 ಸುಳ್ಳುಗಾರ ಅವರೇ ಬರುತ್ತಾರೆ ಎಂದು ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ (M.Lakshman) ವಾಗ್ದಾಳಿ ನಡೆಸಿದ್ದಾರೆ.
ಮಡಿಕೇರಿಯಲ್ಲಿ ಮಾತಾನಾಡಿದ ಅವರು, ಸಿಟಿ ರವಿ ಅವರು ಸದನದಲ್ಲಿ ಒಬ್ಬ ಹೆಣ್ಣುಮಗಳಿಗೆ ಆಕ್ಷೇಪಾರ್ಹ ಸಂಭಾಷಣೆ ಮಾಡಿ, ನಾನು ಹಾಗೆ ಅಂದಿಲ್ಲ ಎಂದು ಹೇಳಿಕೊಳ್ಳುತ್ತಾರೆ. ಅಲ್ಲದೇ, ಕಾನೂನಾತ್ಮಕವಾಗಿ ಅರೆಸ್ಟ್ ಮಾಡಿದ್ದರೆ, ಅರೆಸ್ಟ್ ಮಾಡಿರುವುದನ್ನೇ ವಿಚಿತ್ರವಾಗಿ ಬಿಂಬಿಸಿ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಬಿಜೆಪಿ ನಾಯಕರು ಹಾಗೂ ಸಿಟಿ ರವಿ ಅವರಿಗೆ ನಾಚಿಕೆಯಾಗಬೇಕು. ಅದರಲ್ಲೂ ಚಿಕ್ಕಮಗಳೂರಿನಲ್ಲಿ ಬಿಜೆಪಿ ಅವರು ಸಿಟಿ ರವಿ ಅವರನ್ನು ಸ್ವಾತಂತ್ರ್ಯ ಹೋರಾಟಗಾರ ಅನ್ನೋ ರೀತಿಯಲ್ಲಿ ಬಿಂಬಿಸುವ ಕೆಲಸ ಮಾಡುತ್ತಿದ್ದಾರೆ. ಯಾವ ದೇಶಕ್ಕಾಗಿ ಹೋರಾಟ ಮಾಡಿದ್ದಾರೆ ಎಂದು ಬಿಂಬಿಸುತ್ತಿದ್ದೀರಾ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಸಿ.ಟಿ.ರವಿ ಪ್ರಕರಣದಲ್ಲಿ ಸರ್ಕಾರದ ನಡೆ ಖಂಡನೀಯ – ರಾಜ್ಯಪಾಲರ ಮಧ್ಯಪ್ರವೇಶಕ್ಕೆ ಬಿಜೆಪಿ ಮನವಿ
ಸಭಾಪತಿ ಬಸವರಾಜ ಹೊರಟ್ಟಿ ಅವರು ಆರಂಭದಲ್ಲಿ ಚಂದ ಇದ್ರು. ಆಮೇಲೆ ಅವರನ್ನು ಬಿಜೆಪಿ ಅವರೇ ಅವರನ್ನು ಎದುರಿಸಿ ಅವರ ಕೈಯಲ್ಲಿ ಬೇರೆ ರೀತಿಯಲ್ಲಿ ಹೇಳಿಕೆ ಕೊಡಿಸುವ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಘಟನೆ ನಡೆದ ಸ್ಥಳದಲ್ಲಿ ಮಹಜರು ಮಾಡಲು ಅವಕಾಶ ಕೊಡುತ್ತಿಲ್ಲ. ಇದು ಯಾಕೆ ಹೀಗೆ ಮಾಡುತ್ತಿದ್ದಾರೆ. ನಮ್ಮ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಕೇಸ್ ಹಾಕಿ ಅವರನ್ನು ಎದುರಿಸುವ ಕೆಲಸ ಮಾಡಿಸುತ್ತ ಇದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ.
ಈ ಹಿಂದೆ ಸಿಟಿ ರವಿ ಅವರು ಸಿದ್ದರಾಮುಲ್ಲಾ ಖಾನ್, ರಾಹುಲ್ ಗಾಂಧಿ ಅವರನ್ನು ಡ್ರಗ್ ಅಡಿಕ್ಟ್ ಎಂದು ಹೇಳಿಕೊಂಡು ಇರುತ್ತಿದ್ರು. ಅದ್ರೆ ಈಗ ಸಿಟಿ ರವಿ ಅವರೇ ಒಬ್ಬ ಡ್ರಗ್ ಅಡಿಕ್ಟ್ಗೆ ಒಳಗಾಗಿರಬೇಕು. ಇಂತಹ ಮನಸ್ಥಿತಿ ವ್ಯಕ್ತಿಯೇ ಡ್ರಗ್ ಅಡಿಕ್ಟ್ ಒಬ್ಬರಾಗಿದ್ದಾರೆ ಎಂದು ಗುಡುಗಿದ್ದಾರೆ. ಇದನ್ನೂ ಓದಿ: ಆ ರೀತಿ ಹೇಳಿಲ್ಲ ಅನ್ನೋದಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಮಾಡಲಿ – ಸಿ.ಟಿ ರವಿಗೆ ಲಕ್ಷ್ಮಿ ಹೆಬ್ಬಾಳ್ಕರ್ ಸವಾಲ್
ಸದನದಲ್ಲಿ ಹೊರಟ್ಟಿ ಮೇಲೆ ಬಿಜೆಪಿ ನಾಯಕರು ಪ್ರಭಾವ ಬೀರಿ ಪ್ರಕರಣವನ್ನು ತಿರುಚುವ ಕೆಲಸಕ್ಕೆ ಮುಂದಾಗಿದ್ದಾರೆ. ಹೊರಟ್ಟಿ ಅವರು ಮುಗಿದ ಅಧ್ಯಾಯ ಅನ್ನುತ್ತೀರಿ. ಅದರೆ, ಕಾಂಗ್ರೆಸ್ ಈ ಪ್ರಕರಣದಲ್ಲಿ ಕಾನೂನು ರೀತಿಯಲ್ಲಿ ಹೋರಾಟ ಮಾಡಲು ಮುಂದಾಗಿದೆ ಎಂದು ತಿಳಿಸಿದ್ದಾರೆ.