Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಂಗಳೂರಿನಲ್ಲಿ ಜಲಸಿರಿ ಕಾಮಗಾರಿ ಕಿರಿಕಿರಿ – ನಗರದಲ್ಲಿ ಕೊಳವೆ ಅಳವಡಿಸಲು ಅಲ್ಲಲ್ಲಿ ರಸ್ತೆ ಅಗೆತ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ಮಂಗಳೂರಿನಲ್ಲಿ ಜಲಸಿರಿ ಕಾಮಗಾರಿ ಕಿರಿಕಿರಿ – ನಗರದಲ್ಲಿ ಕೊಳವೆ ಅಳವಡಿಸಲು ಅಲ್ಲಲ್ಲಿ ರಸ್ತೆ ಅಗೆತ

Dakshina Kannada

ಮಂಗಳೂರಿನಲ್ಲಿ ಜಲಸಿರಿ ಕಾಮಗಾರಿ ಕಿರಿಕಿರಿ – ನಗರದಲ್ಲಿ ಕೊಳವೆ ಅಳವಡಿಸಲು ಅಲ್ಲಲ್ಲಿ ರಸ್ತೆ ಅಗೆತ

Public TV
Last updated: January 5, 2025 8:05 am
Public TV
Share
2 Min Read
mangaluru water problem
SHARE

ಮಂಗಳೂರು: ಕಡಲನಗರಿ ಮಂಗಳೂರಿನಲ್ಲಿ (Mangaluru) ದಿನದ 24 ಗಂಟೆ ಕುಡಿಯುವ ನೀರು ಒದಗಿಸುವುದಕ್ಕಾಗಿ ಜಲಸಿರಿ ಯೋಜನೆ ಜಾರಿಗೊಳಿಸಲಾಗಿದೆ. ಆದರೆ, ಯೋಜನೆಯ ಅವ್ಯವಸ್ಥೆಯಿಂದಾಗಿ ಮಂಗಳೂರು ನಗರಕ್ಕೆ ಜಲಸಿರಿ ಶಾಪವಾಗಿ ಪರಿಣಮಿಸಿದೆ. ಕಾಮಗಾರಿ ಆರಂಭವಾಗಿ ಐದು ವರ್ಷವಾದರೂ ಒಂದೇ ಒಂದು ವಾರ್ಡ್ಗೂ ನೀರು ಪೂರೈಕೆ ಮಾಡದ ಗುತ್ತಿಗೆದಾರ ಸಂಸ್ಥೆ ರಸ್ತೆ ಅಗೆಯುವುದರಲ್ಲೇ ಬ್ಯುಸಿಯಾಗಿದ್ದು, ಆಡಳಿತ ವ್ಯವಸ್ಥೆಗೆ ಜನ ಹಿಡಿಶಾಪ ಹಾಕುತ್ತಿದ್ದಾರೆ.

ದಿನದ ಇಪ್ಪತ್ತನಾಲ್ಕು ಗಂಟೆ ಕುಡಿಯುವ ನೀರು ಒದಗಿಸಬೇಕೆಂಬ ಉದ್ದೇಶಕ್ಕೆ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ ವ್ಯಾಪ್ತಿಯಲ್ಲಿ ಜಲಸಿರಿ ಯೋಜನೆಯನ್ನು ಕೇಂದ್ರ, ರಾಜ್ಯ ಸರ್ಕಾರ ಜಾರಿಗೊಳಿಸಿದೆ. ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲೂ 2019ರಲ್ಲಿ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಆದರೆ, ಯೋಜನೆ ಜಾರಿಯಾಗಿ ಐದು ವರ್ಷವಾದರೂ ಇನ್ನು ಸಹ ಕಾಮಗಾರಿ ಪೂರ್ತಿಯಾಗಿಲ್ಲ. ಇದರ ಜೊತೆ ನಗರದ ಅಲ್ಲಲ್ಲಿ ರಸ್ತೆ ಅಗೆದು, ಸರಿಯಾಗಿ ಮುಚ್ಚದೇ ಅರ್ಧಕ್ಕೆ ಹೋಗುತ್ತಿರುವುದರಿಂದ ವಾಹನ ಸವಾರರು ನಿತ್ಯ ಪರದಾಡುವಂತಾಗಿದೆ. ಇದನ್ನೂ ಓದಿ: ಪಾರ್ಕ್‌ನಲ್ಲಿ ದುಪಟ್ಟಾದಿಂದ ನೇಣು ಬಿಗಿದು ಎಂಜಿನಿಯರ್‌ ಆತ್ಮಹತ್ಯೆ

ಮಂಗಳೂರಿನಲ್ಲಿ ಹೊಸದಾದ ಕಾಂಕ್ರಿಟ್ ರಸ್ತೆಯನ್ನು ಮರುದಿನ ಅಗೆದರೂ ಸಹ ಯಾವುದೇ ಆಶ್ಚರ್ಯ ಪಡಬೇಕಾಗಿಲ್ಲ ಎಂಬಂತಾಗಿದೆ. ಎರಡೆರಡು ಸಾರಿ ಕಾಮಗಾರಿಯ ಗಡುವನ್ನು ವಿಸ್ತರಣೆ ಮಾಡಿದರೂ ಸಹ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿದೆ. ಈವರೆಗೂ ಒಂದೇ ಒಂದು ವಾರ್ಡ್ಗೂ ಸಮರ್ಪಕವಾಗಿ ನೀರು ಪೂರೈಕೆ ಮಾಡೋದಕ್ಕೆ ಗುತ್ತಿಗೆದಾರ ಸಂಸ್ಥೆಗೆ ಸಾಧ್ಯವಾಗಿಲ್ಲ. ಹೀಗಾಗಿ ಜನ ಆಡಳಿತ ವ್ಯವಸ್ಥೆಗೆ, ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ.

ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 792.4 ಕೋಟಿ ವೆಚ್ಚದಲ್ಲಿ ಈ ಯೋಜನೆ ನಡೆಯುತ್ತಿದೆ. ಕಾಮಗಾರಿಯ ಗುತ್ತಿಗೆಯನ್ನು ಸೂಯೆಜ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆ ವಹಿಸಿಕೊಂಡಿದ್ದು, ಯೋಜನೆ ಅನುಷ್ಠಾನದ ಜವಾಬ್ದಾರಿಯನ್ನು ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ಸಂಸ್ಥೆ ವಹಿಸಿದೆ. ಆದರೆ, ಇಲ್ಲಿ ಕಾಮಗಾರಿ ವಹಿಸಿಕೊಂಡಿರುವ ಸಂಸ್ಥೆಯೇ ಬ್ಲ್ಯಾಕ್ ಲಿಸ್ಟ್ನಲ್ಲಿದೆ. ಇನ್ನು ಯೋಜನೆ ಹಳ್ಳ ಹಿಡಿದಿರುವುದಕ್ಕೆ ನಗರದ ಮೇರಿಹಿಲ್‌ನಲ್ಲಿ ರಸ್ತೆ ಬದಿ ಇಟ್ಟಿರುವ ಬೃಹತ್ತಾದ ಕೊಳವೆಗಳೆ ಸಾಕ್ಷಿಯಂತಿದೆ. ಪೈಪ್‌ಗಳ ಡಂಪ್ ಮಾಡಿರುವ ಜಾಗದಲ್ಲಿ ಗಿಡಗಂಟಿಗಳು ಬೆಳೆದಿದೆ. ಇದನ್ನೂ ಓದಿ: Tumkur | `ಬೆಳಕು’ ಪ್ರಸಾರವಾದ 26 ದಿನದಲ್ಲೇ ಇಂಪ್ಯಾಕ್ಟ್ – ಸರ್ಕಾರಿ ಶಾಲೆಯ 2 ಕೊಠಡಿ ನಿರ್ಮಾಣಕ್ಕೆ ಶಂಕುಸ್ಥಾಪನೆ!

ಮುಖ್ಯ ಕೊಳವೆ ಅಳವಡಿಕೆ 54.16 ಕಿಲೋಮೀಟರ್‌ನಲ್ಲಿ ಆಗಬೇಕಾಗಿದ್ದು, ಇಲ್ಲಿ 12.26 ಕಿ.ಮೀ ಮಾತ್ರ ಪೂರ್ಣಗೊಳಿಸಲಾಗಿದೆ. ಇದರ ಜೊತೆ ಮನೆ ಮನೆಗೆ ನೀರು ವಿತರಣಾ ಜಾಲದ ಕೊಳವೆ ಅಳವಡಿಕೆ 1,288 ಕಿಲೋಮೀಟರ್‌ನಲ್ಲಿ ಆಗಬೇಕಾಗಿದ್ದು, ಕೇವಲ 740 ಕಿ.ಮೀ. ಮಾತ್ರ ಅಳವಡಿಕೆಯಾಗಿದೆ. ಇದರ ಜೊತೆ ಮೇಲ್ಮಟ್ಟದ ಜಲಸಂಗ್ರಹಗಾರ, ನೆಲಮಟ್ಟದ ಜಲಸಂಗ್ರಹಗಾರ, ಪಂಪ್ ಹೌಸ್, ನೀರು ಶುದ್ಧೀಕರಣ ಘಟಕಗಳ ಕಾಮಗಾರಿಯು ಪೆಂಡಿಂಗ್ ಇದೆ.

ಪ್ರತಿ ವಾರ್ಡ್ನಲ್ಲಿಯೂ ಯೋಜನೆಯಿಂದಾಗಿ ಸಮಸ್ಯೆ ಉದ್ಭವಿಸಿದ್ದು, ಆಡಳಿತ ಪಕ್ಷ ಬಿಜೆಪಿಯ ಸದಸ್ಯರು ಸಹ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜನ ದಿನದಲ್ಲಿ 24 ಗಂಟೆ ಬೇಡ ಕನಿಷ್ಟ 3 ಗಂಟೆ ಆದರೂ ವ್ಯವಸ್ಥಿತವಾಗಿ ನೀರು ಸರಬರಾಜು ಮಾಡಿ ಎಂದು ಹೇಳುತ್ತಿದ್ದಾರೆ. ಒಟ್ಟಿನಲ್ಲಿ ಜಲಸಿರಿ ಯೋಜನೆಯ ಸಾಕಷ್ಟು ಅಧ್ವಾನಗಳಿಂದ ಜನರು, ಜನಪ್ರತಿನಿಧಿಗಳು ರೋಸಿ ಹೋಗಿರೊದಂತು ಸುಳ್ಳಲ್ಲ.

TAGGED:Mangaluruwater problemಮಂಗಳೂರು
Share This Article
Facebook Whatsapp Whatsapp Telegram

Cinema news

KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood
darshan vijayalakshmi
ಕೋರ್ಟ್ ಆದೇಶವಿದ್ರೂ ದರ್ಶನ್‌ಗೆ ಒಳ ಸಂದರ್ಶನಕ್ಕಿಲ್ಲ ಅವಕಾಶ – ಹೆಂಡ್ತಿ, ಮಗನ ಭೇಟಿ ಇಲ್ಲ
Cinema Latest Sandalwood Top Stories
Sarse Ninna Seraga Sarse song jogi prem
ಜೋಗಿ ಪ್ರೇಮ್‌ಗೆ ಬಿಗ್‌ ಶಾಕ್‌ – ‘ಸರ್ಸೆ ಸೆರಗ ಸರ್ಸೆ’ ವಿವಾದಿತ ಹಾಡು ಬ್ಯಾನ್
Cinema Latest Main Post Sandalwood
Mahesh Babus AMB Cinemas
ಯುಗಾದಿಗೆ ಬಂಪರ್ ಆಫರ್ ಕೊಟ್ಟ ಮಹೇಶ್ ಬಾಬು ‘ಎಎಂಬಿ ಸಿನಿಮಾಸ್’
Cinema Latest South cinema Top Stories

You Might Also Like

krishna byre gowda
Bengaluru City

KPSC Row| ಒಂದೇ ಕೊಠಡಿಯಲ್ಲಿದ್ದ 10ಕ್ಕೂ ಹೆಚ್ಚು ಮಂದಿ ಪಾಸ್‌ – ವಿವಾದಕ್ಕೆ ಉತ್ತರ ಕೊಟ್ಟ ಕೃಷ್ಣಬೈರೇಗೌಡ

Public TV
By Public TV
48 minutes ago
Krishna Byregowda
Bengaluru City

ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆಯಾಗುತ್ತಿವೆ – ಮಧ್ಯವರ್ತಿಗಳಿಲ್ಲದೆ ಆಟೋ ಮ್ಯುಟೇಶನ್: ಕೃಷ್ಣಭೈರೇಗೌಡ

Public TV
By Public TV
2 hours ago
Oil tanker heading to China makes U turn Russian oil is coming to Mangaluru
Dakshina Kannada

ಚೀನಾಗೆ ತೆರಳುತ್ತಿದ್ದ ಟ್ಯಾಂಕರ್‌ ದಿಢೀರ್‌ ಯೂಟರ್ನ್‌ – ಮಂಗಳೂರಿಗೆ ಬರುತ್ತಿದೆ ರಷ್ಯಾ ತೈಲ

Public TV
By Public TV
2 hours ago
Raichuru crime 1
Crime

ಪತ್ನಿ ಜೊತೆ ಅನೈತಿಕ ಸಂಬಂಧ – ಕೊಡಲಿಯಿಂದ ಕೊಚ್ಚಿ ಪ್ರಿಯಕರನ ಹತ್ಯೆಗೈದಿದ್ದ ಇಬ್ಬರು ಅರೆಸ್ಟ್

Public TV
By Public TV
2 hours ago
Ugadi
Latest

ಬೇರೆ ರಾಜ್ಯಗಳಲ್ಲಿ ಯುಗಾದಿ ಆಚರಣೆ ಹೇಗೆ?

Public TV
By Public TV
3 hours ago
Indore Fire Accident
Latest

ಶಾರ್ಟ್ ಸರ್ಕ್ಯೂಟ್‌ನಿಂದ ಇವಿ ಚಾರ್ಜಿಂಗ್ ಪಾಯಿಂಟ್‌ನಲ್ಲಿ ಬೆಂಕಿ – 7 ಮಂದಿ ಸಜೀವ ದಹನ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?