Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Bengaluru City

ಡಿನ್ನರ್ ಸಭೆ ರದ್ದಾಗಿಲ್ಲ, ಪ್ರಧಾನ ಕಾರ್ಯದರ್ಶಿ ಕರೆ ಮೇರೆಗೆ ಮುಂದೂಡಿಕೆಯಷ್ಟೇ – ಯಾರ ವಿರೋಧವೂ ಇಲ್ಲ: ಪರಮೇಶ್ವರ್

Public TV
Last updated: January 8, 2025 3:19 pm
Public TV
Share
3 Min Read
G parameshwar
SHARE

ಬೆಂಗಳೂರು: ಡಿನ್ನರ್ ಸಭೆ ರದ್ದಾಗಿಲ್ಲ, ಪ್ರಧಾನ ಕಾರ್ಯದರ್ಶಿ ಸುರ್ಜೇವಾಲಾ ಕರೆ ಮೇರೆಗೆ ಮುಂದೂಡಿಕೆಯಾಗಿದೆ ಅಷ್ಟೇ, ಸಭೆಗೆ ಯಾರ ವಿರೋಧವೂ ಇಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ (G.Parameshwar) ಎಂದು ಹೇಳಿದರು.

ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್‌ಸಿ, ಎಸ್‌ಟಿ ಸಮಾವೇಶದ ಕುರಿತು ಚರ್ಚೆ ಮಾಡುವುದನ್ನು ಸಹಿಸುವುದಿಲ್ಲ ಎಂಬುದಾಗಿ ನನಗೆ ಯಾರು ಹೇಳಿಲ್ಲ. ಆ ರೀತಿಯಾಗಿ ಯಾರಾದರೂ ಹೇಳಿದರೆ, ನಾವು ತಲೆ ಕೆಡಿಸಿಕೊಳ್ಳುವುದಿಲ್ಲ. ಒಂದು ವೇಳೆ ಸಭೆ ಮಾಡಿದರೆ ಸಹಿಸುವುದಿಲ್ಲ ಎಂದು ಯಾರಾದರೂ ಹೇಳಿದರೆ ಅದಕ್ಕೆ ಸರಿಯಾಗಿ ಉತ್ತರ ಕೊಡುತ್ತೇವೆ. ಆ ಶಕ್ತಿ ನಮಗಿದೆ. ವಿಧಾನಸಭೆ ಚುನಾವಣೆಗೂ ಮೊದಲು ಚಿತ್ರದುರ್ಗದಲ್ಲಿ ಎಸ್‌ಸಿ, ಎಸ್‌ಟಿ ಸಮಾವೇಶ ಮಾಡಲಾಗಿತ್ತು. ಸರ್ಕಾರ ಅಧಿಕಾರಕ್ಕೆ ಬಂದರೆ ಅನೇಕ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಹೇಳಿಕೊಂಡಿದ್ದೆವು. ಚಿತ್ರದುರ್ಗ ರೆಸ್ಯುಲ್ಯೂಷನ್ ಅಂತ ಹೆಸರು ಕೊಟ್ಟು ಬೇಡಿಕೆಗಳನ್ನು ಇಟ್ಟಿದ್ದರು. ಅದರಂತೆಯೇ ಸರ್ಕಾರ ಅಧಿಕಾರಕ್ಕೆ ಬಂತು. ಅನೇಕ ಭರವಸೆಗಳನ್ನು ಈಡೇರಿಸುವ ಕೆಲಸಗಳನ್ನು ಸರ್ಕಾರ ಮಾಡಿದೆ ಎಂದು ಹೇಳಿದರು.ಇದನ್ನೂ ಓದಿ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ಕುಂಭಮೇಳದ ಆಹ್ವಾನ

ಕೇಂದ್ರ ಸರ್ಕಾರದಿಂದ ಪೋಸ್ಟ್ ಮ್ಯಾಟ್ರಿಕ್ ಸ್ಕಾಲರ್‌ಶಿಪ್ ಬರುತ್ತಿಲ್ಲ. ಕೇಂದ್ರದಿಂದ ಎಸ್‌ಸಿಪಿ ಮತ್ತು ಟಿಎಸ್‌ಪಿ ಅನುದಾನದ ಪಾಲು ಸಹ ರಾಜ್ಯಕ್ಕೆ ಬರುತ್ತಿಲ್ಲ. ಎಲ್ಲವನ್ನು ಚರ್ಚೆ ಮಾಡಬೇಕಿದೆ. ಒಗ್ಗಟ್ಟಾಗಿ ಸಮಸ್ಯೆಗಳನ್ನು ಬಗೆಹರಿಸಬೇಕು. ಈ ನಿಟ್ಟಿನಲ್ಲಿ ಸಭೆ ಸೇರಲು ತೀರ್ಮಾನಿಸಲಾಗಿತ್ತು. ಈ ವಿಚಾರವನ್ನು ದೆಹಲಿ ನಾಯಕರ ಗಮನಕ್ಕೆ ತಂದಿರಲಿಲ್ಲ. ನಮ್ಮದೆ ಆಂತರಿಕ ವಿಚಾರ ಆಗಿರುವುದರಿಂದ ಹೇಳುವ ಅವಶ್ಯಕತೆ ಇಲ್ಲ ಎಂಬ ಕಾರಣದಿಂದ ಹೇಳಿರಲಿಲ್ಲ. ಪಕ್ಷದ ವಿಚಾರಗಳು ಹಾಗೂ ಸರ್ಕಾರದ ತೀರ್ಮಾನಗಳು ನಡೆದಾಗ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ ಅವರ ಗಮನಕ್ಕೆ ಹೋಗುತ್ತದೆ. ಅವರು ನನಗೆ ಕರೆ ಮಾಡಿ ಸಮಾವೇಶದಲ್ಲಿ ನಾನು ಭಾಗವಹಿಸಬೇಕು ಎಂದು ತಿಳಿಸಿದರು. ರಾಜಕೀಯ ಪ್ರೇರಿತ ಅಥವಾ ರಾಜಕೀಯಕ್ಕಾಗಿ ಮಾಡುತ್ತಿರುವ ಸಮಾವೇಶ ಅಲ್ಲ. ನೀವು ಭಾಗವಹಿಸುವಂತೆ ಆಹ್ವಾನಿಸಿದೆ. ಈಗ ಆಗುವುದಿಲ್ಲ. ಮುಂದೆ ಸಮಯ ನೀಡುತ್ತೇನೆ. ಆಗ ಸಮಾವೇಶ ಮಾಡಿ ಭಾಗವಹಿಸುತ್ತೇನೆ ಎಂದು ತಿಳಿಸಿದರು. ಪ್ರಧಾನ ಕಾರ್ಯದರ್ಶಿಗಳು ಹೇಳಿದ್ದರಿಂದ ಮುಂದೂಡಿದ್ದೇವೆ. ಸಮಾವೇಶ ಏರ್ಪಡಿಸುತ್ತಿರುವುದರನ್ನು ರದ್ದು ಮಾಡಿಲ್ಲ. ಅವರ ಸಮಯ ತೆಗೆದುಕೊಂಡು ಚರ್ಚೆ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.

ಡಿನ್ನರ್ ಬಗ್ಗೆ ಏನೇನೋ ವ್ಯಾಖ್ಯಾನ ಮಾಡಲಾಗುತ್ತಿದೆ. ಡಿನ್ನರ್ ಅಂದರೆ ಊಟ. 7 ಗಂಟೆಗೆ ಸಭೆಗೆ ಕರೆಯಲಾಗಿತ್ತು. ಎರಡು ಅಥವಾ ಮೂರು ತಾಸು ಚರ್ಚೆ ಆಗಬಹುದು. ಊಟದ ಸಮಯ ಆಗುವುದರಿಂದ, ನಿಮ್ಮ ಮನೆಗೆ ಹೋಗಿ ಊಟ ಮಾಡಿಕೊಂಡು ಬಿಡಿ ಅಂತ ಹೇಳುವುದರ ಬದಲು, ಊಟಕ್ಕೆ ಏರ್ಪಾಟು ಮಾಡಲಾಗಿತ್ತು ಎಂದರು.

ಈ ಹಿಂದೆ ನಡೆದ ಚಿತ್ರದುರ್ಗ ಸಭೆಯಲ್ಲಿ ಹೈಕಮಾಂಡ್ ಭಾಗವಹಿಸಿತ್ತು. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಪ್ರಧಾನ ಕಾರ್ದರ್ಶಿಗಳು ಭಾಗವಹಿಸಿದ್ದರು. ಸಮಾವೇಶ ನಡೆಸಲು ಹೈಕಮಾಂಡ್ ವಿರೋಧ ವ್ಯಕ್ತಪಡಿಸಿಲ್ಲ. ವಿರೋಧ ಮಾಡಿದ್ದರೆ ನಿಲ್ಲಿಸಿ ಎಂದು ಹೇಳುತ್ತಿದ್ದರು. ಆ ರೀತಿ ಬೆಳವಣಿಗೆ ಏನೂ ಆಗಿಲ್ಲ. ಸಭೆ ಬೇರೆ ರೀತಿಯ ಆಯಾಮ ಪಡೆದುಕೊಳ್ಳುತ್ತದೆ ಎಂದು ಹೈಕಮಾಂಡ್‌ಗೆ ದೂರು ನೀಡಿರುವ ಬಗ್ಗೆ ನನಗೆ ಗೊತ್ತಿಲ್ಲ. ಸುರ್ಜೇವಾಲಾ ಅವರು ಕರೆ ಮಾಡಿ ಕೇಳಿದಾಗ ರಾಜಕೀಯ ಲೇಪನ ಇಲ್ಲ ಎಂಬುದನ್ನು ಹೇಳಿದ್ದೇನೆ ಎಂದರು.

ಪೂರ್ವಭಾವಿ ಸಭೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಆಹ್ವಾನಿಸಬೇಕು ಎನ್ನುವುದರ ಬಗ್ಗೆಯೂ ಚರ್ಚಿಸಲಾಗಿತ್ತು. ಇದರಲ್ಲಿ ಮುಚ್ಚಿಡುವಂತದ್ದು ಏನು ಇಲ್ಲ. ಮುಚ್ಚಿಟ್ಟುಕೊಂಡು ರಾಜಕಾರಣ ಮಾಡುವಂತದ್ದು ಏನಿದೆ. ಯಾವ ವಿಷಯದ ಬಗ್ಗೆ ಚರ್ಚೆ ಮಾಡಬೇಕು, ಬಹಿರಂಗವಾಗಿ ಚರ್ಚೆ ಮಾಡುತ್ತೇವೆ. ಅದನ್ನು ಯಾರಿಗೂ ಗೊತ್ತಾಗದಂತೆ ನಾಲ್ಕು ಗೋಡೆ ಮಧ್ಯೆ ಚರ್ಚಿಸುವಂತ ಅನಿವಾರ್ಯತೆ ಇಲ್ಲ. ಅನೇಕ ಜ್ವಲಂತ ಸಮಸ್ಯೆಗಳಿವೆ. ದಲಿತ ಸಮುದಾಯಕ್ಕೆ ಆಗುತ್ತಿರುವ ತೊಂದರೆಗಳ ಬಗ್ಗೆ ಚರ್ಚೆ ಮಾಡಬೇಕಲ್ಲವೇ? ಅಟ್ರಾಸಿಟಿ ಕೇಸ್ ದಾಖಲಾಗುತ್ತಿವೆ. ಸಮಾವೇಶದಲ್ಲಿ ಹೈಕಮಾಂಡ್‌ನವರು ಭಾಗವಹಿಸುತ್ತೇವೆ ಎಂದಾಗ ಒಳ್ಳೆಯದಲ್ಲವೇ. ಹೈಕಮಾಂಡ್ ಪ್ರತಿನಿಧಿಗಳು ಸಮಾವೇಶದಲ್ಲಿದ್ದಾಗ ಅನೇಕ ತೀರ್ಮಾನಗಳು ಅಲ್ಲೇ ಆಗುತ್ತವೆ ಎಂದರು.

ಸಮಾವೇಶ ನಡೆಯದಿರಲು ಹೈಕಮಾಂಡ್ ಸಮಾಜಾಯಿಷಿ ನೀಡುತ್ತಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅದನ್ನು ಮುಂದಿನ ದಿನಗಳಲ್ಲಿ ನೋಡೋಣ. ಸ್ವಲ್ಪ ದಿನ ಮುಂದಕ್ಕೆ ಹಾಕುವುದಾಗಿ ತಿಳಿಸಿದ್ದೇವೆ. ಮತ್ತೆ ಏರ್ಪಡಿಸುತ್ತೇವೆ ಆಗ ಗೊತ್ತಾಗುತ್ತದೆ ಎಂದರು.

ನಕ್ಸಲರ ಶರಣಾಗತಿಯ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಕ್ಸಲರು ಶರಣಾಗುತ್ತಿದ್ದಾರೆ ಎಂಬುದನ್ನು ಮಾತ್ರ ಹೇಳಬಲ್ಲೆ. ವಿಕ್ರಂಗೌಡ ಸಾವು ಆದಾಗ, ಶರಣಾಗುವಂತೆ ನಕ್ಸಲರಿಗೆ ಕರೆ ಕೊಡಲಾಗಿತ್ತು. ಜೀವನದಲ್ಲಿ ಯಾಕೆ ಈ ದಾರಿ ಹಿಡಿದಿದ್ದೀರಿ. ಸಮಾಜದ ಮುನ್ನೆಲೆಗೆ ಬನ್ನಿ ಎಂದು ಆಹ್ವಾನ ನೀಡಿದ್ದೆ. ಅದೇ ರೀತಿಯಾಗಿ ಎಎನ್‌ಎಫ್ ಹಿರಿಯ ಅಧಿಕಾರಿಗಳು ಸಮಾಜದ ಮುಖ್ಯವಾಹಿನಿಗೆ ಬರುವಂತೆ ಕರೆ ಕೊಟ್ಟಿದ್ದರು. ಅನೇಕ ಪ್ರಕರಣಗಳಿರುವುದು ನಿಜ. ಶರಣಾದ ನಂತರ ಯಾವ ರೀತಿ ಚರ್ಚೆ ಮಾಡಬೇಕು, ಕಾನೂನಿನಲ್ಲಿ ಏನು ಅವಕಾಶವಿದೆ ಎಂಬುದನ್ನು ನೋಡುತ್ತೇವೆ ಎಂದು ಹೇಳಿದರು.ಇದನ್ನೂ ಓದಿ: ಸರೆಂಡರ್ ಆಗುವವರಿಗೆ ಕೊಡೋ ಪರಿಹಾರ ನಮಗೂ ಕೊಡಿ – ನಕ್ಸಲ್‌ ವಿಕ್ರಂ ಗೌಡ ಸಹೋದರಿ ಮನವಿ

TAGGED:congressDinner MeetingDK ShivakumarG ParameshwarkarnatakaRandeep Singh Sarjewalaಕರ್ನಾಟಕಕಾಂಗ್ರೆಸ್ಜಿ.ಪರಮೇಶ್ವರ್ಡಿಕೆ ಶಿವಕುಮಾರ್ಡಿನ್ನರ್‌ ಸಭೆರಣದೀಪ್‌ ಸಿಂಗ್‌ ಸುರ್ಜೇವಾಲ
Share This Article
Facebook Whatsapp Whatsapp Telegram

Cinema Updates

narendra modi with sudeep
‘ಆಪರೇಷನ್ ಸಿಂಧೂರ’ ಮೆಚ್ಚಿ ಪ್ರಧಾನಿ ಮೋದಿಗೆ ಕಿಚ್ಚ ಸುದೀಪ್ ಪತ್ರ
2 hours ago
ravi mohan kenishaa
ಡಿವೋರ್ಸ್ ಘೋಷಿಸಿದ ಬೆನ್ನಲ್ಲೇ ಗಾಯಕಿ ಜೊತೆ ಕಾಣಿಸಿಕೊಂಡ ರವಿ ಮೋಹನ್
22 hours ago
rajamouli
ಆರ್ಮಿಗೆ ಸಂಬಂಧಿಸಿದ ವಿಡಿಯೋಗಳನ್ನು ಶೇರ್ ಮಾಡಬೇಡಿ: ರಾಜಮೌಳಿ ಮನವಿ
23 hours ago
Kamal Haasan
ಭಾರತ-ಪಾಕ್ ನಡುವೆ ಉದ್ವಿಗ್ನ ಹೊತ್ತಲ್ಲೇ ದಿಟ್ಟ ನಿರ್ಧಾರ ಕೈಗೊಂಡ ಕಮಲ್ ಹಾಸನ್
1 day ago

You Might Also Like

War Equipments
Latest

ಭಾರತ್ ಫೋರ್ಜ್, ಮಹೀಂದ್ರಾ ಕಂಪನಿಗಳಿಗೆ ಯುದ್ಧ ಸಾಮಗ್ರಿ ಉತ್ಪಾದನೆ ಹೆಚ್ಚಳಕ್ಕೆ ಕೇಂದ್ರ ಸೂಚನೆ

Public TV
By Public TV
8 minutes ago
donald trump
Latest

ಭಾರತ-ಪಾಕಿಸ್ತಾನದಿಂದ ತಕ್ಷಣದ ಕದನ ವಿರಾಮಕ್ಕೆ ಒಪ್ಪಿಗೆ: ಟ್ರಂಪ್‌ ಘೋಷಣೆ

Public TV
By Public TV
14 minutes ago
Indian Travel Firms Suspend Packages To Turkey Azerbaijan
Latest

ಪಾಕ್‌ಗೆ ಬೆಂಬಲ ನೀಡಿದ ಟರ್ಕಿ, ಅಜೆರ್ಬೈಜಾನ್‌ಗೆ ಭಾರತ ಪೆಟ್ಟು – 2 ದೇಶಗಳಿಗೆ ಟೂರ್‌ ಪ್ಯಾಕೇಜ್‌ ಸ್ಥಗಿತ

Public TV
By Public TV
52 minutes ago
White and Yellow India Travel Vlog YouTube Thumbnail
Latest

ದಾಳಿ ವೇಳೆ ಕುತಂತ್ರ ಮಾಡಿದ್ರೂ ಭಾರತದ ಉತ್ತರಕ್ಕೆ ಪಾಕ್‌ ತತ್ತರ!

Public TV
By Public TV
55 minutes ago
murali naik
Bengaluru City

ಪಾಕ್ ಅಪ್ರಚೋದಿತ ಗುಂಡಿನ ದಾಳಿಗೆ ಬಾಗೇಪಲ್ಲಿ ಗಡಿಯ ಯೋಧ ಹುತಾತ್ಮ- ಕಂಬನಿ ಮಿಡಿದ ಕರುನಾಡು

Public TV
By Public TV
1 hour ago
CRPF Soldier
Latest

ದೇಶದ ಕರೆಗೆ ಹನಿಮೂನ್‌ ಮೊಟಕುಗೊಳಿಸಿ ಸೇವೆಗೆ ತೆರಳಿದ ಯೋಧ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Welcome Back!

Sign in to your account

Username or Email Address
Password

Lost your password?