ಚಲಿಸುತ್ತಿದ್ದ ಓಮಿನಿಯಲ್ಲಿ ಏಕಾಏಕಿ ಬೆಂಕಿ – ಸುಟ್ಟು ಕರಕಲು

Public TV
1 Min Read
Vijayapura fire Accident

ವಿಜಯಪುರ: ಚಲಿಸುತ್ತಿದ್ದ ಓಮಿನಿಯಲ್ಲಿ ಏಕಾಏಕಿ ಬೆಂಕಿ ಹೊತ್ತಿಕೊಂಡಿದ್ದು, ವಾಹನ ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ಜಿಲ್ಲೆಯ ಬಸವನ ಬಾಗೇವಾಡಿ (Basavana Bagewadi) ತಾಲೂಕಿನ ಉಕ್ಕಲಿ ಗ್ರಾಮದ ಬಳಿ ನಡೆದಿದೆ.

ವಿಜಯಪುರ (Vijayapura) ಮೂಲದ ಬಸಯ್ಯ ಹಿರೇಮಠ ಎಂಬವರಿಗೆ ಸೇರಿದ ಓಮಿನಿ ವಾಹನ ಸುಟ್ಟು ಭಸ್ಮವಾಗಿದೆ.ಇದನ್ನೂ ಓದಿ: ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ ಹಾಡಹಗಲೇ ಚಾಕು ಇರಿದ ಸ್ನೇಹಿತ – ಆರೋಪಿ ಅರೆಸ್ಟ್

ಉಕ್ಕಲಿ ಗ್ರಾಮದಿಂದ ಸಂಬಂಧಿಕರನ್ನು ಕರೆದುಕೊಂಡು ಎಡೆಯೂರುಗೆ ಹೊರಟ್ಟಿದ್ದ ವೇಳೆ ಈ ಘಟನೆ ಸಂಭವಿಸಿದೆ. ಚಲಿಸುತ್ತಿದ್ದ ವಾಹನದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ವಾಹನದಲ್ಲಿದ್ದವರು ಕೆಳಗಿಳಿದಿದ್ದಾರೆ.

ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ದೌಡಾಯಿಸಿದ್ದು, ಬರುವ ಮೊದಲೆ ವಾಹನ ಸುಟ್ಟು ಕರಕಲಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ. ಮನಗೂಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.ಇದನ್ನೂ ಓದಿ: ದೆಹಲಿ ಚುನಾವಣೆಗೆ ಆಪ್‌ಗೆ ಟಿಎಂಸಿ ಬೆಂಬಲ – ಧನ್ಯವಾದ ಎಂದ ಕೇಜ್ರಿವಾಲ್

Share This Article