Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವೈಕುಂಠ ಏಕಾದಶಿ ಪುರಾಣ ಕಥೆ ಏನು? ಯಾಕೆ ಆಚರಣೆ ಮಾಡುತ್ತಾರೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ವೈಕುಂಠ ಏಕಾದಶಿ ಪುರಾಣ ಕಥೆ ಏನು? ಯಾಕೆ ಆಚರಣೆ ಮಾಡುತ್ತಾರೆ?

Latest

ವೈಕುಂಠ ಏಕಾದಶಿ ಪುರಾಣ ಕಥೆ ಏನು? ಯಾಕೆ ಆಚರಣೆ ಮಾಡುತ್ತಾರೆ?

Public TV
Last updated: January 10, 2025 7:29 am
Public TV
Share
3 Min Read
Vaikuntha Ekadashi 1
SHARE

ಕಲ್ಪಾಂತ್ಯದಲ್ಲಿ ಮಹಾವಿಷ್ಣು (Maha Vishnu) ವಟಪತ್ರಶಾಯಿಯಾಗಿ ಯೋಗನಿದ್ರೆಯಲ್ಲಿದ್ದಾಗ ಆತನ ಕಿವಿಯ ಗುಗ್ಗೆಯಿಂದ (ಕರ್ಣಮಲ) ಇಬ್ಬರು ರಾಕ್ಷಸರು ಜನಿಸುತ್ತಾರೆ. ಬ್ರಹ್ಮನ ಪ್ರೇರಣೆಯಿಂದ ಅವರಲ್ಲಿ ವಾಯುಸಂಚಾರವಾಗುತ್ತದೆ.  ರಕ್ಷಸರಾಗಿ ಬಲಶಾಲಿಗಳಾದ ಅವರು ಮಹಾಬಲರಾಗಿ ದೇವಲೋಕವನ್ನೇ ವಶಪಡಿಸುತ್ತಾರೆ. ಬ್ರಹ್ಮ ಅವರನ್ನು ಸ್ಪರ್ಶಿಸಿ ನೋಡಲು ಒಬ್ಬ ಮೃದುವಾಗಿ ಕಂಡ. ಅವನೇ ಮಧು. ಮತ್ತೊಬ್ಬ ಕಲ್ಲಿನಂತೆ ಕರ್ಕಶವಾಗಿ ಕಂಡ. ಅವನೇ ಕೈಟಭ.

ಪರಾಕ್ರಮಿಗಳಾದ ಮಧು ಕೈಟಭ (Madhu Kaitabha) ಇವರನ್ನು ವಿಷ್ಣು ಸಂಹರಿಸಿದ. ವೈಕುಂಠ ಲೋಕದ ಉತ್ತರ ದ್ವಾರದ ಮೂಲಕ ಅವರನ್ನು ಪ್ರವೇಶಿಸುವಂತೆ ಮಾಡಿ ಸದ್ಗತಿಯನ್ನು ಕರುಣಿಸುತ್ತಾನೆ. ಸದ್ಗತಿಯಲ್ಲಿ ಕರುಣಿಸಿದ್ದು  ಏಕಾದಶಿಯಂದು. ಈ ಕಾರಣಕ್ಕೆ ವೈಕುಂಠ ಏಕಾದಶಿಯಂದು (Vaikuntha Ekadashi) ವಿಶೇಷ ದ್ವಾರವನ್ನು ನಿರ್ಮಿಸಿ, ಅದರ ಮೂಲಕ ಪ್ರವೇಶಿಸಿ ದೇವರ ದರ್ಶನ ಪಡೆಯುವ ಆಚರಣೆ ಇಂದು ಪ್ರಚಲಿತಕ್ಕೆ ಬಂದಿದೆ. ಭಕ್ತಿಪೂರ್ವಕವಾಗಿ ದೇವರಿಗೆ ಶರಣಾದರೆ ಸದ್ಗತಿ ಸಿಗುತ್ತದೆ ಎಂಬ ನಂಬಿಕೆಯಿದೆ.

Vaikunta Ekadasi

 

ಅಮೃತ ಸಿಕ್ಕಿದ ದಿನ:
ಒಂದು ದಿನ ಋಷಿ ದೂರ್ವಾಸ ಇಂದ್ರನ ಆಸ್ಥಾನಕ್ಕೆ ಬಂದು ಬಹಳ ಗೌರವದಿಂದ ಇಂದ್ರನಿಗೆ ಹೂವಿನ ಹಾರವನ್ನು ಅರ್ಪಿಸುತ್ತಾನೆ. ಇಂದ್ರನು ಆ ಹಾರವನ್ನು ತೆಗೆದುಕೊಂಡು ತನ್ನ ಆನೆಯ ಐರಾವತದ ಹಣೆಯ ಮೇಲೆ ಇಡುತ್ತಾನೆ. ಆನೆಯು ಹಾರವನ್ನು ಸೊಂಡಿಲಿನಿಂದ ತೆಗೆದುಕೊಂಡು ಭೂಮಿಯ ಮೇಲೆ ಎಸೆಯುತ್ತದೆ.

ನಾನು ನೀಡಿದ ಹಾರಕ್ಕೆ ಅಗೌರವ ತೋರಿದ್ದಕ್ಕೆ ಸಿಟ್ಟಾದ ದೂರ್ವಾಸ ಮುನಿ ಕೋಪಗೊಂಡು, ನಿನಗೆ ಅಹಂಕಾರ ಬಂದಿದೆ. ಹೇಗೆ ನನ್ನ ಹಾರವನ್ನು ನೆಲಕ್ಕೆ ಎಸೆದು ಹಾಳು ಮಾಡಿದೆಯೋ ಅದೇ ರೀತಿ ನಿನ್ನ ರಾಜ್ಯವು ಹಾಳಾಗಲಿ ಎಂದು ಇಂದ್ರನಿಗೆ ಶಾಪವನ್ನು ಕೊಡುತ್ತಾನೆ. ದೂರ್ವಾಸನ ಶಾಪದ ಪರಿಣಾಮ ದೇವತೆಗಳು ತಮ್ಮ ಶಕ್ತಿಯನ್ನು ಕಳೆದುಕೊಳ್ಳುತ್ತಾರೆ. ಎಲ್ಲಾ ತರಕಾರಿ ಉತ್ಪನ್ನಗಳು ಮತ್ತು ಸಸ್ಯಗಳು ಸಾಯಲು ಪ್ರಾರಂಭಿಸುತ್ತವೆ, ಪುರುಷರು ದಾನ ಮಾಡುವುದನ್ನು ನಿಲ್ಲಿಸುತ್ತಾರೆ, ಮನಸ್ಸುಗಳು ಭ್ರಷ್ಟವಾಗುತ್ತವೆ, ಜನರು ಅಂತಿಮ ಇಂದ್ರಿಯ ಸುಖಗಳಲ್ಲಿ ತೊಡಗಲು ಪ್ರಾರಂಭಿಸುತ್ತಾರೆ. ಅಮರಾವತಿಯಲ್ಲಿ ದೇವರುಗಳು ದುರ್ಬಲವಾಗುತ್ತಿದ್ದಂತೆ, ರಾಕ್ಷಸರು ದೇವತೆಗಳ ಮೇಲೆ ದಾಳಿ ಮಾಡಿ ಅವರನ್ನು ಸೋಲಿಸುತ್ತಾರೆ.

Vaikunta Ekadasi 3

 

ಸೋತ ನಂತರ ಇಂದ್ರಾದಿ ದೇವತೆಗಳು ವಿಷ್ಣುವಿನ ಬಳಿ ಹೋಗಿ ಮೊರೆ ಇಡುತ್ತಾರೆ. ಆಗ ಆಮೃತ ಪಡೆಯಬೇಕೆಂದು ಹೇಳಿದ ವಿಷ್ಣು ನೀವು ಮತ್ತು ರಾಕ್ಷಸರು ಸಮುದ್ರ ಮಂಥನ (Samudra Manthan) ಮಾಡಬೇಕು ಎಂದು ಸೂಚಿಸುತ್ತಾನೆ. ವೈಕುಂಠ ಏಕಾದಶಿಯ ಪವಿತ್ರ ದಿನದಂದು ಸಾಗರ ಮಂಥನವನ್ನು ನಡೆಯಿತು. ದೇವರು ಮತ್ತು ರಾಕ್ಷಸರು ಅಮೃತಕ್ಕಾಗಿ ಕ್ಷೀರ ಸಮುದ್ರವನ್ನು ಮಥನ ಮಾಡಿದಾಗ ಮೊದಲು ಕಠೋರವಾದ ವಿಷ ಜನಿಸಿತು. ನಂತರ ಜೇಷ್ಠಾದೇವಿ ಜನಿಸಿದಳು. ಬಳಿಕ ಲಕ್ಷ್ಮೀ ಪಾಲ್ಗಡಲಿಂದ ಹೊರಬಂದಳು.ಕೊನೆಯದಾಗಿ ಸಿಕ್ಕಿದ್ದು ಅಮೃತ. ಕ್ಷೀರ ಸಾಗರದಲ್ಲಿ ಸಿಕ್ಕಿದ ಅಮೃತವನ್ನು ಮೋಹಿನಿ ರೂಪದಲ್ಲಿದ್ದ ವಿಷ್ಣು ದೇವತೆಗಳಿಗೆ ನೀಡಿದಳು. ಇದನ್ನೂ ಓದಿ: Tirupati Stampede | ವೈಕುಂಠ ಏಕಾದಶಿಯಂದು ತಿರುಪತಿಗೆ ಯಾಕೆ ಭಾರೀ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ?

Vaikunta Ekadasi 2

ಅಮೃತ ಸಿಕ್ಕಿದ ಈ ಮಂಗಳರ ದಿನದಂದು ಮೃತಪಡುವ ಜನರು ಜನನ ಮತ್ತು ಮರಣ ಚಕ್ರದಿಂದ ಮುಕ್ತರಾಗುತ್ತಾರೆ ಮತ್ತು ಭಗವಾನ್ ವಿಷ್ಣುವಿನ ನಿವಾಸ ಅಥವಾ ವೈಕುಂಠ ಧಾಮವನ್ನು ತಲುಪುತ್ತಾರೆ ಎಂಬುದು ನಂಬಿಕೆ.

ಹಿಂದೂ ಧರ್ಮದಲ್ಲಿ ಏಕಾದಶಿಗೆ ವಿಶೇಷ ಮಹತ್ವವಿದೆ. ಈ ದಿನ ಕಠಿಣ ಉಪವಾಸ ವ್ರತ ಆಚರಿಸುವ ಮೂಲಕ ದೇವರ ಕೃಪೆಗೆ ಪಾತ್ರರಾಗುತ್ತಾರೆ. ಅಲ್ಲದೆ ಆ ದಿನದಂದು ಭಗವಾನ್‌ ವಿಷ್ಣುವಿಗೆ ಭಕ್ತಿ ಹಾಗೂ ಸಮರ್ಪಣಾ ಭಾವದಿಂದ ಪೂಜೆ ಸಲ್ಲಿಸಲಾಗುತ್ತದೆ.

ಏಕಾದಶಿ ವ್ರತವನ್ನು ಯಾರು ಭಕ್ತಿಯಿಂದ ಆಚರಿಸುತ್ತಾರೋ ಅವರ ಎಲ್ಲಾ ಕಷ್ಟಗಳು ಹಾಗೂ ಸಮಸ್ಯೆಗಳನ್ನು ವಿಷ್ಣು ಪರಿಹಾರ ಮಾಡುತ್ತಾನೆ. ಅದರಲ್ಲೂ ವೈಕುಂಠ ಏಕಾದಶಿ ಸಮಯದಲ್ಲಿ ವಿಷ್ಣುವಿನ ನೆಲೆಯಾದ ವೈಕುಂಠದ ದ್ವಾರಗಳು ತೆರೆಯುತ್ತದೆ. ಈ ವಿಶೇಷ ದಿನದಂದು ವಿಷ್ಣು ದೇವಸ್ಥಾನಕ್ಕೆ ಹೋಗಿ ಪ್ರಾರ್ಥಿಸಿದರೆ ಮೋಕ್ಷ ಸಿಗುತ್ತದೆ ಎಂಬ ನಂಬಿಕೆಯಿದೆ.

TAGGED:EkadashihinduVaikuntha EkadashiVishnuತಿರುಪತಿವಿಷ್ಣುವೈಕುಂಠ ಏಕಾದಶಿಸಮುದ್ರ ಮಂಥನ
Share This Article
Facebook Whatsapp Whatsapp Telegram

Cinema news

Sai Pallavi
ಎಂ.ಎಸ್ ಸುಬ್ಬಲಕ್ಷ್ಮಿ ಬಯೋಪಿಕ್‌ನಲ್ಲಿ ಸಾಯಿಪಲ್ಲವಿ ನಟನೆ ಫಿಕ್ಸ್‌
Bollywood Cinema Latest Top Stories
Sohail Khan
ಮಾಡಿದ ತಪ್ಪಿಗೆ ಕ್ಷಮೆ ಕೇಳಿದ ಸಲ್ಮಾನ್ ಖಾನ್ ಸಹೋದರ
Bollywood Cinema Latest
Kichcha Sudeep 2
ಮಸ್ತ್ ಮಲೈಕಾ ಜೊತೆ ಕಿಚ್ಚ ಸಖತ್ ಡಾನ್ಸ್‌
Cinema Latest Sandalwood
Actor Shivamanju
ನಿರ್ದೇಶಕನಾದ ಹಾಸ್ಯ ನಟ ಶಿವಮಂಜು
Cinema Latest Sandalwood Top Stories

You Might Also Like

EGG
Bengaluru City

ಮೊಟ್ಟೆ ಸೇವನೆಯಿಂದ ಕ್ಯಾನ್ಸರ್ ವದಂತಿ – ಎಚ್ಚೆತ್ತ ಆರೋಗ್ಯ ಇಲಾಖೆ, 200ಕ್ಕೂ ಹೆಚ್ಚು ಕಡೆಯಿಂದ ಸ್ಯಾಂಪಲ್ ಸಂಗ್ರಹ

Public TV
By Public TV
42 minutes ago
Apache
Latest

ಭಾರತೀಯ ನೌಕಾಪಡೆಗೆ 3 ಆಕ್ರಮಣಕಾರಿ ಅಪಾಚೆ ಹೆಲಿಕಾಪ್ಟರ್‌; ಪಾಕ್‌ ಗಡಿಯಲ್ಲಿ ನಿಯೋಜಿಸಲು ಪ್ಲ್ಯಾನ್‌

Public TV
By Public TV
1 hour ago
Delhi Air Pollution 1
Latest

ದೆಹಲಿಯಲ್ಲಿ ಹೆಚ್ಚಿದ ಮಾಲಿನ್ಯ – 5ನೇ ತರಗತಿವರೆಗಿನ ಮಕ್ಕಳಿಗೆ ಕಡ್ಡಾಯ ಆನ್‌ಲೈನ್‌ ಕ್ಲಾಸ್

Public TV
By Public TV
1 hour ago
Bengaluru RPF Official Assualt
Bengaluru City

ರೈಲಿನ ಚೈನ್ ಎಳೆದಿದ್ದನ್ನು ಪ್ರಶ್ನಿಸಿದ್ದಕ್ಕೆ RPF ಸಿಬ್ಬಂದಿ ಮೇಲೆ ಹಲ್ಲೆ – ಮೂವರು ಅರೆಸ್ಟ್

Public TV
By Public TV
2 hours ago
HD Devegowda
Latest

ವೋಟ್‌ಚೋರಿ ನೆಪದಲ್ಲಿ ಸುಳ್ಳು ಸಂಕಥನ ಸೃಷ್ಟಿ – ಮೋದಿ ಟೀಕಿಸಿದ ಪ್ರತಿಪಕ್ಷಗಳ ವಿರುದ್ಧ ಹೆಚ್‌ಡಿಡಿ ವಾಗ್ದಾಳಿ

Public TV
By Public TV
2 hours ago
Delhi Airport 3
Bengaluru City

ಇಂಡಿಗೋ ಬಳಿಕ ಏರ್‌ ಇಂಡಿಯಾ ವಿಮಾನದಲ್ಲಿ ಸಮಸ್ಯೆ – ʻಕೈʼ ನಾಯಕರು ದೆಹಲಿ ಏರ್‌ಪೋರ್ಟ್‌ನಲ್ಲೇ ಲಾಕ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?