Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಬೇರೆ ಬೇರೆ ರಾಜ್ಯಗಳಲ್ಲಿ ಸಂಕ್ರಾಂತಿ ಆಚರಣೆ ಹೇಗೆ?

Public TV
Last updated: January 13, 2025 6:32 pm
Public TV
Share
3 Min Read
Sankranti 2 1
SHARE

ಹೊಸ ವರ್ಷದ ಮೊದಲ ಹಬ್ಬ ಸಂಕ್ರಾಂತಿ. ಈ ಹಬ್ಬವನ್ನು ದೇಶಾದ್ಯಂತ ಉತ್ಸಹಭರಿತವಾಗಿ ಆಚರಿಸಲಾಗುತ್ತದೆ. ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಸೂರ್ಯನು ಪ್ರವೇಶಿಸುವ ಕಾಲಕ್ಕೆ ಸಂಕ್ರಾಂತಿ ಅಥವಾ ಸಂಕ್ರಮಣ ಎಂದು ಕರೆಯಲಾಗುತ್ತದೆ. ಮಕರ ಸಂಕ್ರಾಂತಿ, ದಕ್ಷಿಣಾಯನ, ಉತ್ತರಾಯಣಗಳ ದಿನಗಳು ಸಂಕ್ರಾಂತಿಯಂದು ಆರಂಭವಾಗುವುದರಿಂದ ಈ ದಿನ ವಿಶೇಷ ಮಹತ್ವವನ್ನು ಹೊಂದಿದೆ. ಮಕರ ಸಂಕ್ರಾಂತಿಯನ್ನು `ಉತ್ತರಾಯಣ ಪುಣ್ಯಕಾಲ’ ಎಂದು ಕರೆಯುತ್ತಾರೆ. ಈ ಪುಣ್ಯಮುಹೂರ್ತದಲ್ಲಿ ಪುಣ್ಯ ಸ್ಥಳಗಳಲ್ಲಿ ಹಾಗೂ ತುಂಗಾ, ಗಂಗಾ, ಕೃಷ್ಣಾ, ಕಾವೇರಿ ಮುಂತಾದ ಪುಣ್ಯ ನದಿಗಳಲ್ಲಿ ಲಕ್ಷಾಂತರ ದೈವಭಕ್ತರು ತೀರ್ಥಸ್ನಾನ ಮಾಡುತ್ತಾರೆ.

ಪುರಾಣ ಮತ್ತು ಜ್ಯೋತಿಷ್ಯದ ಪ್ರಕಾರ, ಉತ್ತರಾಯಣದಲ್ಲಿ ಸ್ವರ್ಗದ ಬಾಗಿಲು ತೆರೆದಿರುತ್ತದೆ ಎಂದು ನಂಬಿಕೆಯಿದೆ. ಈ ಸಮಯದಲ್ಲಿ ಸತ್ತವರು ನೇರವಾಗಿ ಸ್ವರ್ಗಕ್ಕೆ ಹೋಗುತ್ತಾರೆ ಎಂಬ ನಂಬಿಕೆಯೂ ಇದೆ.

ಸಂಕ್ರಾಂತಿ ಹಬ್ಬವನ್ನು ದಕ್ಷಿಣ ಭಾರತ ಸೇರಿದಂತೆ ಉತ್ತರ ಭಾರತದಲ್ಲಿ ಕೂಡಾ ಈ ಹಬ್ಬವನ್ನು ಆಚರಿಸಲಾಗುತ್ತದೆ. ಒಂದೊಂದು ರಾಜ್ಯದಲ್ಲೂ ಒಂದೊಂದು ಹೆಸರಿನಿಂದ ಉದಾಹರಣೆಗೆ ಪಂಜಾಬ್‌ನಲ್ಲಿ ಲೋಹ್ರಿ, ದಕ್ಷಿಣ ಭಾರತದಲ್ಲಿ ಪೊಂಗಲ್ ಎಂದು ಆಚರಿಸಲಾಗುತ್ತದೆ.

Sankranti 1

ಸಂಕ್ರಾಂತಿ ಹಬ್ಬದಲ್ಲಿ ಮಾಡಲಾಗುವ ಇನ್ನಿತರ ಆಚರಣೆಗಳು:
ಪಾಪ ಶುದ್ಧಿಗಾಗಿ ಗಂಗಾ ಅಥವಾ ಇತರ ಪವಿತ್ರ ನದಿಗಳಲ್ಲಿ ಸ್ನಾನ ಮಾಡಲಾಗುತ್ತದೆ. ಪಂಜಾಬ್‌ನಲ್ಲಿ ಸಂಕ್ರಾಂತಿಯಂದು ದೀಪೋತ್ಸವ ಆಚರಣೆ ಮಾಡುತ್ತಾರೆ. ಇನ್ನೂ ಗುಜರಾತ್‌ನಲ್ಲಿ ಗಾಳಿಪಟ ಹಾರಿಸುವುದೇ ಒಂದು ಸಂಭ್ರಮ. ತಮಿಳುನಾಡು ಹಾಗೂ ದಕ್ಷಿಣ ಭಾರತದಲ್ಲಿ ಸುಗ್ಗಿಯ ಸಂಭ್ರಮದೊಂದಿಗೆ ಗ್ರಾಮದ ದೇವರನ್ನು ಪೂಜಿಸುತ್ತಾರೆ. ಪಶ್ಚಿಮ ಬಂಗಾಳದಲ್ಲಿ ಸೂರ್ಯ ದೇವರಿಗೆ ಪೂಜೆ ಹಾಗೂ ನದಿಯಲ್ಲಿ ಸ್ನಾನ ಮಾಡುವುದು ರೂಢಿಯಲ್ಲಿದೆ.

ಕರ್ನಾಟಕ, ಆಂಧ್ರ, ತೆಲಂಗಾಣಗಳಲ್ಲಿ ಸಂಕ್ರಾಂತಿ ಎಂಬ ಹೆಸರಿನಿಂದ ಹಬ್ಬ ಆಚರಿಸಲಾಗುತ್ತದೆ. ಕರ್ನಾಟಕದಲ್ಲಿ ಒಂದು ದಿನ ಈ ಹಬ್ಬ ಆಚರಿಸಿದರೆ ಆಂಧ್ರ ಹಾಗೂ ತೆಲಂಗಾಣಗಳಲ್ಲಿ 3 ದಿನಗಳ ಕಾಲ ಆಚರಿಸಲಾಗುತ್ತದೆ. ಈ ಸಮಯದಲ್ಲಿ ಎಳ್ಳು ಬೆಲ್ಲವನ್ನು ಆತ್ಮೀಯರೊಂದಿಗೆ ಹಂಚಿಕೊಂಡು ಸಂಭ್ರಮಿಸುತ್ತಾರೆ.

ಮಹಾರಾಷ್ಟ್ರದಲ್ಲಿ ಹಡಗ
ಸಂಕ್ರಾಂತಿಯನ್ನು ಮಹಾರಾಷ್ಟ್ರದಲ್ಲಿ ಹಡಗ ಎಂದು ಆಚರಿಸುತ್ತಾರೆ. ಇದನ್ನು ತಿಲ್ಗುಲ್ ಹಬ್ಬ ಎಂದೂ ಕರೆಯುತ್ತಾರೆ. ಉತ್ತಮ ಮುಂಗಾರು ಮತ್ತು ಫಸಲು ಬರಲಿ ಎಂದು ಜನರು ದೇವರನ್ನು ಪ್ರಾರ್ಥಿಸುತ್ತಾರೆ. ಇಂದ್ರನು ಮಳೆಯ ದೇವರು ಆಗಿರುವುದರಿಂದ ಜನರು ಇಂದ್ರನಿಗೆ ಹಾಡುಗಳನ್ನು ಹಾಡುವ ಮೂಲಕ ಪೂಜಿಸುವುದು ಇಲ್ಲಿನ ವಿಶೇಷವಾಗಿದೆ

Sankranti 4

ಭೋಗಿ
ಆಂಧ್ರ ಪ್ರದೇಶ ಹಾಗೂ ತೆಲಂಗಾಣದಲ್ಲಿ ಸಂಕ್ರಾಂತಿ ಹೆಸರಿನಿಂದಲೇ ಈ ಹಬ್ಬವನ್ನು ಆಚರಿಸಿದರೂ, ಅದರ ಹಿಂದಿನ ದಿನ ಭೋಗಿ ಹೆಸರಿನ ಆಚರಣೆ ಮಾಡಲಾಗುತ್ತದೆ. ಈ ದಿನ ಮಳೆಯ ದೇವತೆ ದೇವೇಂದ್ರನನ್ನು ಪೂಜಿಸಲಾಗುತ್ತದೆ. ಇದು ಧನುರ್ಮಾಸದ ಕಡೆಯ ದಿನವಾಗಿದೆ. ಭೂಮಿ ಸುಭಿಕ್ಷವಾಗಲಿ ಎಂದು ಪ್ರಾರ್ಥಿಸಿ ಈ ಹಬ್ಬವನ್ನು ಆಚರಿಸಲಾಗುತ್ತದೆ. ಎಣ್ಣೆ ಸ್ನಾನ ಮಾಡಿ ಮನೆಯಲ್ಲಿ ದೀಪ ಬೆಳಗಿಸಲಾಗುತ್ತದೆ. ಮೂರನೇ ದಿನ ಕನುಮ ಎಂಬ ಆಚರಣೆ ಇದೆ.

ಪಂಜಾಬ್‌ನಲ್ಲಿ ಲೋಹ್ರಿ
ಪಂಜಾಬ್‌ನಲ್ಲಿ ಸಂಕ್ರಾಂತಿಯನ್ನು ಲೋಹ್ರಿ ಎಂದು ಕರೆಯುತ್ತಾರೆ. ಇಲ್ಲಿನ ಜನರು ಲೋಹ್ರಿಯನ್ನು ವರ್ಷದ ಅತ್ಯಂತ ಶೀತ ದಿನವೆಂದು ನಂಬುತ್ತಾರೆ. ತಣ್ಣನೆಯ ಗಾಳಿಯಲ್ಲಿ ಬೆಂಕಿಯ ಸುತ್ತಲೂ ಭಾಂಗ್ರಾ ನೃತ್ಯ ಮಾಡುವ ಮೂಲಕ ಆಚರಿಸುತ್ತಾರೆ. ಎಳ್ಳು ಉಂಡೆ ಜೊತೆ ಇತರ ಸಿಹಿಗಳನ್ನು ಮಾಡಿ ಆತ್ಮೀಯರೊಂದಿಗೆ ಒಟ್ಟಿಗೆ ಊಟ ಮಾಡುತ್ತಾರೆ.

ಆಸ್ಸಾಂ ನಲ್ಲಿ ಬಿಹು
ಆಸ್ಸಾಂನಲ್ಲಿ ಸಂಕ್ರಾಂತಿಯನ್ನು ಬಿಹು ಹೆಸರಿನಿಂದ ಆಚರಿಸುತ್ತಾರೆ. ಅಸ್ಸಾಮಿ ಜನರಿಗೆ ಇದು ಬಹಳ ಪ್ರಮುಖವಾದ ಹಬ್ಬವಾಗಿದೆ. ವರ್ಷದಲ್ಲಿ 3 ಬಾರಿ ಬಿಹು ಆಚರಿಸಲಾಗುತ್ತದೆ. ಜನವರಿಯಲ್ಲಿ ಮಾಗ್ ಬಿಹು, ಏಪ್ರಿಲ್ ತಿಂಗಳಲ್ಲಿ ರೊಂಗಾಲಿ ಬಿಹು ಹಾಗೂ ಅಕ್ಟೋಬರ್‌ನಲ್ಲಿ ಕೊಂಗಲಿ ಬಿಹು ಎಂದು ಆಚರಿಸಲಾಗುತ್ತದೆ.

Sankranti 3

ಬಿಹಾರ ಸಖ್ರತ್/ಕಿಚಡಿ
ಬಿಹಾರ ಹಾಗೂ ಜಾರ್ಖಂಡ್‌ನಲ್ಲಿ ಈ ಹಬ್ಬವನ್ನು ಸಖ್ರತ್, ಕಿಚಡಿ ಎಂಬ ಹೆಸರಿನಿಂದ ಆಚರಿಸುತ್ತಾರೆ. ಈ ದಿನ ಜನರು ಮುಂಜಾನೆ ನದಿ ಸ್ನಾನ ಮಾಡಿ ದೀಪೋತ್ಸವ ಮಾಡುತ್ತಾರೆ. ದೀಪಕ್ಕೆ ಎಳ್ಳು ಅರ್ಪಿಸುತ್ತಾರೆ. ಎಳ್ಳು ಬೆಲ್ಲ ಬಳಸಿ ತಿಂಡಿಗಳನ್ನು ತಯಾರಿಸುತ್ತಾರೆ. ಗ್ರಾಮಗಳಲ್ಲಿ ಜನರೆಲ್ಲಾ ಒಟ್ಟಿಗೆ ಸೇರಿ ಈ ಹಬ್ಬವನ್ನು ಆಚರಿಸುತ್ತಾರೆ. ದೆಹಲಿ ಹಾಗೂ ಹರಿಯಾಣಗಳಲ್ಲಿ ಕೂಡಾ ಸಖ್ರತ್ ಹೆಸರಿನಿಂದ ಹಬ್ಬ ಆಚರಿಸಲಾಗುತ್ತದೆ.

ಹಿಮಾಚಲಪ್ರದೇಶಲ್ಲಿ ಮಾಘ ಸಾಜಿ
ಹಿಮಾಚಲಪ್ರದೇಶದಲ್ಲಿ ಈ ಹಬ್ಬವನು ಮಾಘ ಸಾಜಿ ಎಂದು ಕರೆಯುತ್ತಾರೆ. ಮಾಘ ಎಂಬುದು ತಿಂಗಳ ಹೆಸರು. ಈ ದಿನವು ಋತುಗಳ ಬದಲಾವಣೆಯನ್ನು ಸೂಚಿಸುತ್ತದೆ. ಜನರು ನದಿಗಳಲ್ಲಿ ಸ್ನಾನ ಮಾಡುವ ಮೂಲಕ ವಸಂತವನ್ನು ಸ್ವಾಗತಿಸುತ್ತಾರೆ. ಬೆಲ್ಲ, ಎಳ್ಳಿನಿಂದ ಮಾಡಿದ ಸಿಹಿ ತಿಂಡಿಗಳನ್ನು ನೆರೆಹೊರೆಯವರೊಂದಿಗೆ ಹಂಚಿಕೊಳ್ಳುತ್ತಾರೆ. ದೇವಾಲಯಗಳಿಗೆ ಭೇಟಿ ಮಾಡಿ, ದಾನ-ಧರ್ಮಗಳಲ್ಲಿ ತೊಡಗಿಸಿಕೊಳ್ಳುತ್ತಾರೆ. ಸಂಜೆ ಜಾನಪದ ಹಾಡುಗಳು ಮತ್ತು ನೃತ್ಯಗಳೊಂದಿಗೆ ಹಬ್ಬವನ್ನು ಆಚರಿಸಲಾಗುತ್ತದೆ.

TAGGED:Happy Sankranti 2025Makar Sankranti Festivalmakara sankranti 2025Sankranti Celebrationಮಕರ ಸಂಕ್ರಾಂತಿ ಹಬ್ಬಸಂಕ್ರಾಂತಿ ಆಚರಣೆಸಂಕ್ರಾಂತಿ ಹಬ್ಬ
Share This Article
Facebook Whatsapp Whatsapp Telegram

Cinema Updates

Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
9 hours ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
9 hours ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
10 hours ago
India House Movie
`ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ
11 hours ago

You Might Also Like

rabindranath tagore
Crime

ಸೇಡಿಗಾಗಿ ಠಾಗೂರ್ ಮನೆ ಮೇಲೆ ದಾಳಿ – 50ಕ್ಕೂ ಹೆಚ್ಚು ಜನರ ಮೇಲೆ ಕೇಸ್ 

Public TV
By Public TV
7 minutes ago
Nganthoi Sharma
Latest

ವಿಮಾನ ಪತನ – ಗಗನ ಸಖಿಯ ಫೋಟೋ ಹಿಡಿದು ಕಣ್ಣೀರಿಟ್ಟ ಕುಟುಂಬಸ್ಥರು

Public TV
By Public TV
33 minutes ago
Air India crash in Ahmedabad Former Gujarat CM Vijay Rupanis first vehicle number was 1206. He always used to pick the same number plate for his vehicles Today is 12 06
Latest

ತಮ್ಮ ಫೇವರೇಟ್‌ ನಂಬರ್‌ ದಿನವೇ ಮೃತಪಟ್ಟ ಗುಜರಾತ್‌ ಮಾಜಿ ಸಿಎಂ ರೂಪಾನಿ

Public TV
By Public TV
1 hour ago
Rajasthan Married girl died plane crash
Latest

Ahmedabad Plane Crash | ಮೊದಲ ಬಾರಿಗೆ ಪತಿ ನೋಡಲು ಹೊರಟಿದ್ದ ನವವಿವಾಹಿತೆ ಸಾವು

Public TV
By Public TV
1 hour ago
Air India Flight Crash
Latest

ಪತನಗೊಂಡ ವಿಮಾನದಲ್ಲಿ ಮಗಳು, ಮೊಮ್ಮಗ ಇದ್ರು; ಬೆಳಿಗ್ಗೆಯಷ್ಟೇ ಅವಳ ಜೊತೆ ಮಾತಾಡಿದ್ದೆ – ಕಣ್ಣೀರಿಟ್ಟ ತಂದೆ

Public TV
By Public TV
2 hours ago
Tata Group Air India
Latest

ಮೃತ ಪ್ರಯಾಣಿಕರ ಕುಟುಂಬಕ್ಕೆ 1 ಕೋಟಿ ಪರಿಹಾರ: ಟಾಟಾ ಗ್ರೂಪ್‌ ಘೋಷಣೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?