ಸಿಎಂ ಆಪ್ತ ಸಚಿವರಿಗೆ ಡಿಕೆಶಿ ಗುನ್ನಾ – ಬಹಿರಂಗ ಹೇಳಿಕೆ ಕೊಟ್ಟ ಸಚಿವರ ಬಗ್ಗೆ ವರದಿ ಕೇಳಿದ ಹೈಕಮಾಂಡ್‌

Public TV
2 Min Read
manjunath bhandary

ಬೆಂಗಳೂರು: ಹೈಕಮಾಂಡ್‌ ಎಚ್ಚರಿಕೆ ನಡುವೆಯೂ ಕಾಂಗ್ರೆಸ್ ಪಕ್ಷದ ಶಿಸ್ತು ಉಲ್ಲಂಘಿಸಿ ಮಾಧ್ಯಮಗಳಿಗೆ ಹೇಳಿಕೆ ನೀಡುತ್ತಿರುವ ಸಚಿವರ ವರದಿ ಕೇಳಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ (Manjunath Bhandary) ತಿಳಿಸಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರ ನಾಯಕತ್ವವು ನಮ್ಮ ಪಕ್ಷದಲ್ಲಿ ಬಲಿಷ್ಠವಾಗಿದೆ. ಕೆಪಿಸಿಸಿ ಅಧ್ಯಕ್ಷರು, ಮುಖ್ಯಮಂತ್ರಿಗಳು ಹಾಗೂ ಸಚಿವರನ್ನು ಯಾವಾಗ ಬದಲಾವಣೆ ಮಾಡಬೇಕು? ಮುಂದುವರಿಸಬೇಕು ಅಥವಾ ಯಾರಾಗಬೇಕು? ಎಂಬಿತ್ಯಾದಿ ಎಲ್ಲ ವಿಷಯಗಳನ್ನು ಪಕ್ಷದ ಹೈಕಮಾಂಡ್ ನಾಯಕರು ನಿರ್ಧಾರ ಮಾಡಲಿದ್ದಾರೆ. ಆದರೆ, ಈ ಸಂಬಂಧ ಯಾವುದೇ ಸಚಿವರು ಹೇಳಿಕೆಯನ್ನು ಕೊಡಬಾರದು. ನಾಯಕತ್ವ ಬದಲಾವಣೆಯ ತೀರ್ಮಾನವನ್ನು ತೆಗೆದುಕೊಳ್ಳುವುದು ಮಾಧ್ಯಮಗಳಲ್ಲ. ನಮ್ಮ ಪಕ್ಷದ ಹೈಕಮಾಂಡ್ ಆಗಿದೆ. ಹೀಗಾಗಿ ಪಕ್ಷದ ನಾಯಕರು ಯಾವುದೇ ವಿಷಯಗಳು ಇದ್ದರೂ ಮೊದಲಿಗೆ ಹೈಕಮಾಂಡ್ ನಾಯಕರ ಗಮನಕ್ಕೆ ತರಬೇಕೇ ವಿನಃ ಮಾಧ್ಯಮಗಳ ಮುಂದಲ್ಲ. ಇಂಥ ಹೇಳಿಕೆ ನೀಡಿರುವವರ ವರದಿಯನ್ನು ಹೈಕಮಾಂಡ್‌ ನಾಯಕರು ಕೇಳಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹೈಕಮಾಂಡ್ ಒಪ್ಪಿದ್ರೆ ನಾನೂ ಸಿಎಂ ಆಗ್ತೀನಿ – ಸಚಿವ ಆರ್.ಬಿ ತಿಮ್ಮಾಪುರ

DK Shivakumar 5

ಕಳೆದ ಒಂದೂವರೆ ವರ್ಷದಿಂದ ಸಚಿವರು ತಮ್ಮ ಇಲಾಖೆಯಲ್ಲಿ ಯಾವ ರೀತಿ ಕಾರ್ಯನಿರ್ವಹಣೆ ಮಾಡಿದ್ದಾರೆ ಎಂಬುದು ಪ್ರಶ್ನೆಯಾಗಿದೆ. ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಯಾವುದೇ ತೀರ್ಮಾನವನ್ನು ಪಕ್ಷದ ವರಿಷ್ಠರು ಕೈಗೊಳ್ಳುವ ನಿರ್ಧಾರಕ್ಕೆ ಬದ್ಧ ಎಂದು ಹೇಳಿದ್ದರು. ಅನೇಕ ಸಚಿವರು ಅನಗತ್ಯ ಗೊಂದಲ ಉಂಟು ಮಾಡುವ ಹೇಳಿಕೆ ನೀಡುವವರ ಸಂಪೂರ್ಣ ವರದಿ ಕೇಳಿದೆ.‌

* ಜಿಲ್ಲಾ ಪ್ರವಾಸ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್‌ ಕಚೇರಿಗೆ ಭೇಟಿ ನೀಡಿದ್ದಾರಾ? ಇಲ್ಲವಾ?
* ಪಕ್ಷದ ಸಂಘಟನೆಗೆ ಒತ್ತು ಕೊಡಲಾಗುತ್ತದೆಯೋ ಇಲ್ಲವೋ?
* ಪ್ರಣಾಳಿಕೆಯಲ್ಲಿ ಕೊಟ್ಟಿರುವ ಯೋಜನೆಗಳನ್ನು ಜಾರಿ ಮಾಡಲು ಇವರು ಪಕ್ಷ ಮತ್ತು ಸರ್ಕಾರಕ್ಕೆ ಸಹಕಾರ ಕೊಡುತ್ತಿದ್ದಾರೋ ಇಲ್ಲವೋ?
* ಇದಲ್ಲದೆ ತಮ್ಮ ಇಲಾಖೆಯಲ್ಲಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿ ಮಾಡಿದ್ದಾರಾ ಇಲ್ಲವಾ? ಎಂಬಿತ್ಯಾದಿ ಸಂಪೂರ್ಣ ಮಾಹಿತಿಯನ್ನು ಹೈಕಮಾಂಡ್‌ ಈ ಸಂದರ್ಭದಲ್ಲಿ ಕೇಳಿದೆ. ಅಲ್ಲದೇ, ಪಕ್ಷದ ಶಿಸ್ತನ್ನು ಉಲ್ಲಂಘಿಸಿ ಪದೇ ಪದೇ ಮಾಧ್ಯಮಗಳಿಗೆ ಹೇಳಿಕೆ ಕೊಡುವ ಸಚಿವರ ಸಂಪೂರ್ಣ ವಿವರಗಳನ್ನು ಕೊಡುವಂತೆ ಹೈಕಮಾಂಡ್‌ ಸೂಚಿಸಿದೆ.

SATISH JARKIHOLI 1

ಈಗಾಗಲೇ ಎಐಸಿಸಿ ಕರ್ನಾಟಕ ಉಸ್ತುವಾರಿ ಆಗಿರುವ ರಣದೀಪ್ ಸುರ್ಜೇವಾಲ ಅವರು ಪಕ್ಷದ ತಾಯಿ ಇದ್ದಂತೆ, ಸರ್ಕಾರ ಮಗು ಇದ್ದಂತೆ. ಯಾರೂ ಸಹ ಪಕ್ಷದ ಘನತೆಗೆ ಚ್ಯುತಿ ತರಬಾರದು ಎಂಬ ಸಂದೇಶವನ್ನು ನೀಡಿದ್ದಾರೆ. ಇದರ ಮಧ್ಯೆಯೂ ಕೆಲವು ನಾಯಕರು ಹೇಳಿಕೆ ನೀಡುತ್ತಿರುವುದು ಸರಿಯಲ್ಲ. ಕೆಲವು ಸಚಿವರು ಪದೇ ಪದೇ ಮಾತನಾಡುತ್ತಿದ್ದಾರೆ. ಇದು ಸರಿ ಅಲ್ಲವೇ ಅಲ್ಲ. ಆದರೆ, ಸಚಿವರಾದ ತಿಮ್ಮಾಪುರ, ಸತೀಶ್ ಜಾರಕಿಹೊಳಿ ಹಾಗೂ ಹೆಚ್‌.ಸಿ. ಮಹದೇವಪ್ಪ ಅವರು ಪದೇ ಪದೇ ಮಾತನಾಡುತ್ತಿದ್ದು, ಹೈಕಮಾಂಡ್ ಗಂಭೀರವಾಗಿ ಎಲ್ಲವನ್ನೂ ಗಮನಿಸುತ್ತಿದೆ. ಎಲ್ಲ ಸಚಿವರ ರಿಪೋರ್ಟ್ ಕಾರ್ಡ್‌ಗಳನ್ನು ಸಹ ಹೈಕಮಾಂಡ್ ಸೂಕ್ಷ್ಮವಾಗಿ ಗಮನಿಸುತ್ತಿದೆ. ಇದನ್ನೂ ಓದಿ: ಬೆಂಗಳೂರಲ್ಲಿ ಡೆಡ್‌ಲೈನ್ ಮೀರಿದ ಕಾಮಗಾರಿಗಳ ಕಾಟ; ಕಾಮಗಾರಿ ಹೆಸರಿನಲ್ಲಿ ಫುಟ್‌ಪಾತ್ ಅಗೆತ

ಪಕ್ಷದ ನಾಯಕತ್ವದ ಬಗ್ಗೆ ಮಾತನಾಡಬಾರದು ಎಂದು ಹೈಕಮಾಂಡ್ ಸೂಚನೆ ನೀಡಿದ ಮೇಲೆಯೂ ಪದೇ ಪದೆ ಪಕ್ಷದ ಆದೇಶವನ್ನು ಉಲ್ಲಂಘನೆ ಮಾಡುವವರಿಗೆ ಮುಂದಿನ ದಿನಗಳಲ್ಲಿ ಅವರಿಗೆ ಪರಿಣಾಮ ಬೀರಲಿದೆ ಪಕ್ಷದ ವರಿಷ್ಠರು ಸೂಚಿಸಿದ್ದಾರೆ ಎಂದು ಮಂಜುನಾಥ ಭಂಡಾರಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article