ಒಬಿಸಿ ವಿದ್ಯಾರ್ಥಿಗಳ ಸ್ಕಾಲರ್‌ಶಿಪ್‌ಗೆ ಕೊಕ್ಕೆ?- ವಿದ್ಯಾರ್ಥಿವೇತನ ಬಾರದೇ ವಿದ್ಯಾರ್ಥಿಗಳು ಪರದಾಟ

Public TV
1 Min Read
students scholarship

– ಯುವನಿಧಿ ಬೇಡ.. ಸ್ಕಾಲರ್‌ಶಿಪ್ ಕೊಡಿ ಸ್ವಾಮಿ ಎನ್ನುತ್ತಿದ್ದಾರೆ ವಿದ್ಯಾರ್ಥಿಗಳು

ಬೆಂಗಳೂರು: ರಾಜ್ಯದಲ್ಲಿ ವಿದ್ಯಾರ್ಥಿಗಳ ಸ್ಕಾಲರ್‌ಶಿಪ್‌ಗೆ ಕೊಕ್ಕೆ ಬಿದ್ದಿದೆ ಎನ್ನಲಾಗಿದೆ. ವಿದ್ಯಾರ್ಥಿ ವೇತನ ಸಿಗದೇ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ. ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದರೆ.

ರಾಜ್ಯದಲ್ಲಿ ಈಗ ವಿದ್ಯಾರ್ಥಿಗಳು ಸ್ಕಾಲರ್‌ಶಿಪ್‌ಗಾಗಿ ಅಲೆದಾಡುವ ಪರಿಸ್ಥಿತಿ ಉದ್ಭವವಾಗಿದೆ. ಎಂಬಿಎ, ಎಂಬಿಬಿಎಸ್ ಹೀಗೆ ಬಹುತೇಕ ಕೋರ್ಸ್ ಓದುತ್ತಿರುವ ಒಬಿಸಿ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ಸಿಕ್ಕಿಲ್ಲ ಎನ್ನುವುದು ವಿದ್ಯಾರ್ಥಿಗಳ ಅಳಲು. ನಿರುದ್ಯೋಗ ಭತ್ಯೆ ಕೊಡುವ ಬದಲು ನಮಗೆ ಓದಲು ಪ್ರೋತ್ಸಾಹಕ್ಕೆ ಸ್ಕಾಲರ್‌ಶಿಪ್ ಕೊಡಿ ಎಂದು ವಿದ್ಯಾರ್ಥಿಗಳು ಮನವಿ ಮಾಡಿದ್ದಾರೆ.

ಎಸ್ಸಿಎಸ್ಟಿ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ಸಿಗುತ್ತಿದೆ. ಆದರೆ, ಒಬಿಸಿ ವಿದ್ಯಾರ್ಥಿಗಳಿಗೆ ಈ ಅನ್ಯಾಯವಾಗುತ್ತಿದೆ ಅಂತಾ ವಿದಾರ್ಥಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ಎಐಡಿಎಸ್‌ಓ ವಿದ್ಯಾರ್ಥಿ ಸಂಘಟನೆ ಕೂಡ ಸ್ಕಾಲರ್‌ಶಿಪ್ ಬಗ್ಗೆ ಸಮೀಕ್ಷೆ ಮಾಡಿದ್ದು, 97% ನಷ್ಟು ವಿದ್ಯಾರ್ಥಿಗಳು ಸ್ಕಾಲರ್‌ಶಿಪ್ ಪಡೆದಿಲ್ಲ ಎಂದು ಹೇಳಿದ್ದಾರೆ.

Share This Article