Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಏನಿದು ಮಿಷನ್ ಮೌಸಮ್? ಇದು ಹೇಗೆ ಕಾರ್ಯನಿವಹಿಸುತ್ತದೆ?

Public TV
Last updated: January 20, 2025 8:35 am
Public TV
Share
2 Min Read
Mission Mausam
SHARE

ಹವಾಮಾನದಿಂದಾಗಿ ಪ್ರಪಂಚದಾದ್ಯಂತ ಅನಿರೀಕ್ಷಿತವಾದ ಹಲವಾರು ಬದಲಾವಣೆಗಳನ್ನು ಉಂಟುಮಾಡುತ್ತದೆ. ಹೀಗಾಗಿ ನಿಖರವಾದ ಹವಾಮಾನ ಮುನ್ಸೂಚನೆಗಾಗಿ ಕೃತಕ ಬುದ್ಧಿಮತ್ತೆಯಂತಹ ಅತ್ಯಾಧುನಿಕ ಸಾಧನಗಳನ್ನು ಬಳಸಿಕೊಂಡು ಕೇಂದ್ರ ಸರ್ಕಾರ `ಮಿಷನ್ ಮೌಸಮ್’ ಎಂಬ ಸಾಧನವನ್ನು ತರಲು ಸಿದ್ಧವಾಗಿದೆ.

ಭಾರತೀಯ ಹವಾಮಾನ ಇಲಾಖೆ 1875 ಜ.15 ರಂದು ಪ್ರಾರಂಭವಾಯಿತು. ಇತ್ತೀಚಿಗೆ ಪ್ರಧಾನಿ ನರೇಂದ್ರ ಮೋದಿಯವರು ಐಎಂಡಿಯ 150ನೇ ಸಂಭ್ರಮಾಚರಣೆಯಲ್ಲಿ `ಮಿಷನ್ ಮೌಸಮ್’ ಅನ್ನು ಉದ್ಘಾಟಿಸಿದರು. ಕೇಂದ್ರ ಸರ್ಕಾರ ಈ ಯೋಜನೆಯನ್ನು ಐದು ವರ್ಷಗಳಲ್ಲಿ 2 ಸಾವಿರ ಕೋಟಿ ರೂ.ಗಳಿಂದ ಅನುಷ್ಠಾನಕ್ಕೆ ತರಲು ಸಿದ್ಧತೆ ನಡೆಸಿದೆ.

Weather

ಹವಾಮಾನ ಪರಿಸ್ಥಿತಿ, ಪ್ರವಾಹ, ಚಂಡಮಾರುತ, ಅತೀವೃಷ್ಠಿ, ಅನಾವೃಷ್ಠಿ, ಗುಡುಗು ಸೇರಿದಂತೆ ಇನ್ನಿತರ ಮುನ್ಸೂಚನೆ ನೀಡಲು ಇದನ್ನು ವಿನ್ಯಾಸಗೊಳಿಸಲಾಗಿದೆ. ಈ ಮೂಲಕ ಕಳೆದ 10 ದಿನಗಳ ಹಾಗೂ ಮುಂದಿನ ಹತ್ತು ದಿನಗಳ ಹವಾಮಾನ ಹೇಗಿರಲಿದೆ ಎಂದು ತಿಳಿಯಬಹುದು. ಜೊತೆಗೆ ಭಾರತವನ್ನು ಕ್ಲೈಮೇಟ್ ಸ್ಮಾರ್ಟ್ ರಾಷ್ಟ್ರವಾಗಿಸಲು ಇದನ್ನು ಜಾರಿಗೆ ತರಲಾಗಿದೆ.

ಮೀನುಗಾರರು, ರೈತರಿಗೆ ಈ ಯೋಜನೆ ಪ್ರಯೋಜನಕಾರಿಯಾಗಲಿದೆ. ಮುಂಚೆ ಶೇ.10 ರಷ್ಟು ರೈತರು ಹಾಗೂ ಮೀನುಗಾರರು ಹವಾಮಾನಕ್ಕೆ ಸಂಬಂಧಿಸಿದಂತೆ ಮಾಹಿತಿಯನ್ನು ಪಡೆಯುತ್ತಿದ್ದರು. ಆದರೆ ಸದ್ಯ ಈ ಸಂಖ್ಯೆಯಲ್ಲಿ ಗಣನೀಯ ಹೆಚ್ಚಳವಾಗಿದ್ದು, ಶೇ.50 ರಷ್ಟು ಜನ ಸ್ಮಾರ್ಟ್ಫೋನ್, ವಾಟ್ಸಪ್‌ ಮೂಲಕ ಮಾಹಿತಿ ಪಡೆಯುತ್ತಿದ್ದಾರೆ.

WEATHER

ಇದರ ಸ್ಥಾಪನೆ ಹೇಗೆ?
ಮೊದಲ ಹಂತದ ಭಾಗವಾಗಿ ಸುಮಾರು 70 ಡಾಪ್ಲರ್ ರಾಡಾರ್‌ಗಳು, ಸೂಪರ್ ಕಂಪ್ಯೂಟರ್‌ಗಳು, 10 ವಿಂಡ್ ಪ್ರೊಫೈಲರ್‌ಗಳು ಮತ್ತು 10 ರೇಡಿಯೊಮೀಟರ್‌ಗಳನ್ನು ಮಾರ್ಚ್ 2026ರವರೆಗೆ ಅಳವಡಿಸಲಾಗುವುದು. ಇಲ್ಲಿಯವರೆಗೆ ಭಾರತೀಯ ಹವಾಮಾನ ಇಲಾಖೆಯು 39 ಡಾಪ್ಲರ್ ರಾಡಾರ್‌ಗಳನ್ನು ಸ್ಥಾಪಿಸಿದೆ. ಡಾಪ್ಲರ್ ರಾಡಾರ್‌ಗಳು ಎಂದರೆ ದೂರದಲ್ಲಿನ ಹವಾಮಾನ ಕುರಿತು ದತ್ತಾಂಶ ನೀಡುತ್ತದೆ. ಇದು ಹವಾಮಾನದ ಚಲನೆಯ ಮಾಹಿತಿಯನ್ನು ಒದಗಿಸುತ್ತದೆ.

ಇನ್ನೂ ಎರಡನೇ ಹಂತದಲ್ಲಿ, ವೀಕ್ಷಣಾಲಯಗಳನ್ನು ಮತ್ತಷ್ಟು ಬಲಪಡಿಸಲು ಉಪಗ್ರಹಗಳು ಮತ್ತು ವಿಮಾನಗಳನ್ನು ಬಳಸಲಾಗುತ್ತದೆ. ತಾಪಮಾನ ಹೆಚ್ಚಾದಂತೆ ಮೋಡಗಳಲ್ಲಿ ನಡೆಯುವ ಪ್ರಕ್ರಿಯೆಗಳನ್ನು ಅಧ್ಯಯನ ಮಾಡಲು ಪುಣೆಯ ಭಾರತೀಯ ಹವಾಮಾನ ಸಂಸ್ಥೆಯಲ್ಲಿ ಕ್ಲೌಡ್ ಚೇಂಬರ್ ಸ್ಥಾಪಿಸಲಾಗುವುದು. ಇದು ಮುಂದಿನ ಒಂದೂವರೆ ವರ್ಷದಲ್ಲಿ ಪೂರ್ಣಗೊಳ್ಳಲಿದೆ. ಮುಂದಿನ ಐದು ವರ್ಷಗಳಲ್ಲಿ ಎರಡು ಹಂತಗಳಲ್ಲಿ ಈ ಕಾರ್ಯಾಚರಣೆಯನ್ನು ಕೈಗೊಳ್ಳಲಾಗುವುದು ಎಂದು ಕೇಂದ್ರ ಸರ್ಕಾರ ಘೋಷಿಸಿದೆ.

WEATHER 1

ಒಟ್ಟಾರೆಯಾಗಿ ಮಧ್ಯಮ ವ್ಯಾಪ್ತಿಯ ಹವಾಮಾನ ಮುನ್ಸೂಚನೆಗಳ ನಿಖರತೆಯನ್ನು ಶೇ.5 ರಿಂದ 10ಕ್ಕೆ ಹೆಚ್ಚಿಸುವ ಗುರಿಯನ್ನು ಈ ಯೋಜನೆ ಹೊಂದಿದೆ. ಜೊತೆಗೆ ಇದು ಗ್ರಾಮೀಣ ಪ್ರದೇಶಗಳಿಗೆ ಹವಾಮಾನ ಮುನ್ಸೂಚನೆಯನ್ನು ನೀಡುತ್ತದೆ. ಕೃಷಿಗೆ ಅಗತ್ಯವಾದ, ನಿಖರವಾದ ಮುನ್ಸೂಚನೆಗಳನ್ನು ಒದಗಿಸುವ ನಿರೀಕ್ಷೆಯಿದೆ.

ಇನ್‌ಸ್ಟಂಟ್ ಎಸ್ಟಿಮೇಟ್ಸ್ ಪ್ರಕಾರ ಸದ್ಯ ಮೂರು ಗಂಟೆಗಳ ಮೊದಲಿನ ಹವಾಮಾನ ಪರಿಸ್ಥಿತಿಯನ್ನು ತಿಳಿಸುತ್ತದೆ. ಈ ಯೋಜನೆಯ ಮೂಲಕ ಒಂದು ಗಂಟೆಗೆ ಇಳಿಸುವ ನಿರೀಕ್ಷೆಯನ್ನು ಹೊಂದಿದೆ. ಭಾರತೀಯ ಹವಾಮಾನ ಇಲಾಖೆ, ಉಷ್ಣವಲಯದ ಹವಾಮಾನ ಶಾಸ್ತ್ರದ ಕೇಂದ್ರ ಮತ್ತು ಮಧ್ಯಮ ಶ್ರೇಣಿಯ ಹವಾಮಾನ ಮುನ್ಸೂಚನೆಯ ಕೇಂದ್ರ ಜಂಟಿಯಾಗಿ ಈ ಯೋಜನೆಯನ್ನು ಕಾರ್ಯಗತಗೊಳಿಸುತ್ತವೆ.

TAGGED:IMDindiaIndian Meteorological DepartmentMission Mausampm narendra modiWeather Instant EstimateWeather Updateಪ್ರಧಾನಿ ನರೇಂದ್ರ ಮೋದಿಭಾರತೀಯ ಹವಾಮಾನ ಇಲಾಖೆಮಿಷನ್ ಮೌಸಮ್ಹವಾಮಾನಹವಾಮಾನ ಮುನ್ಸೂಚನೆ
Share This Article
Facebook Whatsapp Whatsapp Telegram

Cinema Updates

Benglauru Stampede Ramya Tweet
ಆರ್‌ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ – ಇದು ಹೃದಯ ವಿದ್ರಾವಕ ಘಟನೆ; ರಮ್ಯಾ ಬೇಸರ
22 hours ago
Kamal Haasan
ಅಹಂಕಾರಿ ಕಮಲ್‌ಗೆ ಬಿಗ್‌ ಶಾಕ್‌ – ಕರ್ನಾಟಕದಲ್ಲಿ ಚಿತ್ರ ಬಿಡುಗಡೆ 1 ವಾರ ಮುಂದೂಡಿಕೆ
2 days ago
Kamal Haasan
ಮೊದಲು ಕ್ಷಮೆ ಕೇಳಿ, ಜನರ ಭಾವನೆಗೆ ಧಕ್ಕೆ ತರಬೇಡಿ: ಕಮಲ್‌ಗೆ ಹೈಕೋರ್ಟ್‌ ಚಾಟಿ
2 days ago
Thug Life 2
ಕಮಲ್ ಹಾಸನ್‌ಗೆ ಇಂದು ನಿರ್ಣಾಯಕ ದಿನ – ಹೈಕೋರ್ಟ್‌ನಲ್ಲಿ ‘ಥಗ್‌ಲೈಫ್’ ಬಿಡುಗಡೆ ನಿರ್ಧಾರ
2 days ago

You Might Also Like

BY Vijayendra
Bengaluru City

ಸಿಎಂ, ಡಿಸಿಎಂ, ಸಚಿವರಿಗೆ ಪ್ರಚಾರದ ಹುಚ್ಚೇ ಜಾಸ್ತಿ: ಹಾಲಿ‌ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ಆಗಬೇಕು: ವಿಜಯೇಂದ್ರ ಆಗ್ರಹ

Public TV
By Public TV
31 minutes ago
Mandya Death 3
Districts

ಮಂಡ್ಯ | ಮದ್ವೆಗೆ ಹುಡುಗಿ ನೋಡಿಕೊಂಡು ಬೆಂಗಳೂರಿಗೆ ಹೋದವನು ಮನೆಗೆ ಹಿಂತಿರುಗಿದ್ದು ಶವವಾಗಿ…

Public TV
By Public TV
46 minutes ago
Pratap Simha
Latest

ಜಮೀರ್ ಮಗ, ರಿಜ್ವಾನ್ ಮಗ, ಸಿಎಂ ಮೊಮ್ಮಗನಿಗಾಗಿ ವಿಧಾನಸೌಧದಲ್ಲಿ ಕಾರ್ಯಕ್ರಮ ಮಾಡಿದ್ರಾ: ಸರ್ಕಾರದ ವಿರುದ್ಧ ಪ್ರತಾಪ್‌ ಸಿಂಹ ಕಿಡಿ

Public TV
By Public TV
1 hour ago
BASAVARAJ BOMMAI
Bengaluru City

ಮಹಾರಾಷ್ಟ್ರ ಸಿಎಂ ಆಲಮಟ್ಟಿ ಡ್ಯಾಂ ಎತ್ತರದ ಬಗ್ಗೆ ತಕರಾರು ಮಾಡಿರೋದು ರಾಜಕೀಯ ಪ್ರೇರಿತ: ಬೊಮ್ಮಾಯಿ

Public TV
By Public TV
1 hour ago
Chalavadi Narayanaswamy
Bengaluru City

ಕಾಲ್ತುಳಿತ ಪ್ರಕರಣಕ್ಕೆ ಸಿಎಂ, ಡಿಸಿಎಂ ನೇರ ಹೊಣೆ: ಚಲವಾದಿ ನಾರಾಯಣಸ್ವಾಮಿ

Public TV
By Public TV
1 hour ago
RCB
Bengaluru City

Stampede Case | ಮೃತಪಟ್ಟ 11 ಸಂತ್ರಸ್ತರ ಕುಟುಂಬಳಿಗೆ RCB ಆಡಳಿತ ಮಂಡಳಿಯಿಂದ ತಲಾ 10 ಲಕ್ಷ ರೂ. ಪರಿಹಾರ ಘೋಷಣೆ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?