ಬೆಂಗಳೂರು: 2025ರ ಪುರುಷರ ಹಾಗೂ ಮಹಿಳಾ ಖೋ ಖೋ ವಿಶ್ವಕಪ್ನಲ್ಲಿ (Kho Kho World Cup) ಅತ್ಯುತ್ತಮ ಪ್ರದರ್ಶನ ನೀಡಿ ಪ್ರಶಸ್ತಿ ಗೆದ್ದ ಭಾರತ ತಂಡಕ್ಕೆ ರಾಜ್ಯ ಸರ್ಕಾರ ಅಭಿನಂದನೆ ಸಲ್ಲಿಸಿದೆ.
- Advertisement -
ಇದೇ ವೇಳೆ ಎರಡೂ ವಿಭಾಗದಲ್ಲಿ ಭಾರತ ವಿಶ್ವ ಚಾಂಪಿಯನ್ ಆಗಲು ಕಾರಣರಾದ ಮಂಡ್ಯ ಜಿಲ್ಲೆಯ ಡಿ.ಮಲ್ಲಿಗೆರೆ ಗ್ರಾಮದ ಎಂ.ಕೆ ಗೌತಮ್ ಹಾಗೂ ಮೈಸೂರಿನ ತಿ.ನರಸೀಪುರದ ಕುರುಬೂರಿನ ಚೈತ್ರಾ (Chaitra) ಅವರನ್ನು ಸರ್ಕಾರ ಗೌರವಿಸಿತು. ಇದನ್ನೂ ಓದಿ: Kho Kho World Cup | ಭಾರತಕ್ಕೆ ಡಬಲ್ ಧಮಾಕ – ಮಹಿಳೆಯರು, ಪುರುಷರ ತಂಡಕ್ಕೆ ಖೋ ಖೋ ವಿಶ್ವಕಪ್ ಕಿರೀಟ
- Advertisement -
ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ವಿಧಾನಸೌಧದ ತಮ್ಮ ಕಚೇರಿಯಲ್ಲಿಂದು ಕ್ರೀಡಾಪಟುಗಳಿಗೆ ಸನ್ಮಾನಿಸಿ ಗೌರವಿಸಿದರು. ಇಬ್ಬರೂ ಕ್ರೀಡಾಪಟುಗಳಿಗೆ ತಲಾ 5 ಲಕ್ಷ ರೂ. ಬಹುಮಾನ ಸಹ ಘೋಷಿಸಿದರು. ಇದನ್ನೂ ಓದಿ: ಖೋ ಖೋ ವಿಶ್ವಕಪ್; ಎಂಕೆ ಗೌತಮ್, ಚೈತ್ರಾರನ್ನು ಗೌರವಿಸಿದ ಹೆಚ್ಡಿಕೆ
- Advertisement -
- Advertisement -
ಈ ಸಂದರ್ಭದಲ್ಲಿ ಸಚಿವ ಚಲುವರಾಯಸ್ವಾಮಿ (Chaluvaraya Swamy) ಮತ್ತು ಒಲಿಂಪಿಕ್ಸ್ ಅಸೋಸಿಯೇಷನ್ ಅಧ್ಯಕ್ಷರೂ ಆದ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರು ಉಪಸ್ಥಿತರಿದ್ದರು. ಇದನ್ನೂ ಓದಿ: IPL 2025 | ಲಕ್ನೋ ಸೂಪರ್ ಜೈಂಟ್ಸ್ಗೆ ರಿಷಬ್ ನೂತನ ಸಾರಥಿ