Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತೆಲಂಗಾಣದಲ್ಲಿ ಇನ್ನು ಮುಂದೆ ಕಿಂಗ್‌ಫಿಷರ್, ಹೈನೆಕೆನ್ ಬಿಯರ್‌ ಸಿಗೋದು ಡೌಟ್‌ – ಕಾರಣವೇನು ಗೊತ್ತಾ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ತೆಲಂಗಾಣದಲ್ಲಿ ಇನ್ನು ಮುಂದೆ ಕಿಂಗ್‌ಫಿಷರ್, ಹೈನೆಕೆನ್ ಬಿಯರ್‌ ಸಿಗೋದು ಡೌಟ್‌ – ಕಾರಣವೇನು ಗೊತ್ತಾ?

Karnataka

ತೆಲಂಗಾಣದಲ್ಲಿ ಇನ್ನು ಮುಂದೆ ಕಿಂಗ್‌ಫಿಷರ್, ಹೈನೆಕೆನ್ ಬಿಯರ್‌ ಸಿಗೋದು ಡೌಟ್‌ – ಕಾರಣವೇನು ಗೊತ್ತಾ?

Public TV
Last updated: January 29, 2025 12:12 pm
Public TV
Share
3 Min Read
BEER
ಮದ್ಯಪಾನ ಆರೋಗ್ಯಕ್ಕೆ ಹಾನಿಕರ
SHARE

– ಪ್ರತಿ ಕೇಸ್‌ ಮೇಲೆ 100 ರೂ. ನಷ್ಟ!

ಕಿಂಗ್‌ಫಿಶರ್ ಮತ್ತು ಹೈನೆಕೆನ್ ಬಿಯರ್‌ಗಳ (Beer) ತಯಾರಕರಾದ ಯುನೈಟೆಡ್ ಬ್ರೂವರೀಸ್ ಲಿಮಿಟೆಡ್ (UB), ತೆಲಂಗಾಣ (Telangana) ಬೆವರೇಜಸ್ ಕಾರ್ಪೊರೇಷನ್ ಲಿಮಿಟೆಡ್‌ಗೆ (TGBCL) ತನ್ನ ಬಿಯರ್ ಪೂರೈಕೆಯನ್ನು ಸ್ಥಗಿತಗೊಳಿಸಲು ನಿರ್ಧರಿಸಿದೆ.

ಈ ಬಿಯರ್‌ಗಳು ತನ್ನದೇ ಆದ ಮದ್ಯ ಪ್ರಿಯ ಗ್ರಾಹಕರನ್ನು ಹೊಂದಿದೆ. ಈಗ ಯುವ ಜನತೆ ಹಾಟ್‌ ಡ್ರಿಂಕ್ಸ್‌ಗಿಂತ ಬಿಯರ್‌ಗಳನ್ನು ಹೆಚ್ಚು ಇಷ್ಟಪಡುತ್ತಾರೆ. ಆದರಲ್ಲಿಯೂ ಕಿಂಗ್ ಫಿಶರ್ ಬಿಯರ್ ಕ್ರೇಜ್ ಬೇರೆಯದೇ ಇದೇ! ಇದೀಗ ಸ್ಥಗಿತಗೊಳಿಸಲು ನಿರ್ಧರಿಸಿರುವುದು ಬಿಯರ್‌ ಪ್ರಿಯರಿಗೆ ಶಾಕ್‌ ಆಗಿದೆ.

ಪೂರೈಕೆ ನಿಲ್ಲಿಸಲು ಕಾರಣವೇನು?
2 ವರ್ಷದಿಂದಲೂ ತೆಲಂಗಾಣದಲ್ಲಿ ಬಿಯರ್‌ ಮೂಲ ದರ ಹೆಚ್ಚಳ ಮಾಡುವಂತೆ ಸರ್ಕಾರಕ್ಕೆ ಕಂಪನಿ ಮನವಿ ಮಾಡಿತ್ತು. ಆದರೆ ತೆಲಂಗಾಣ ಸರ್ಕಾರ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ. ಇದರಿಂದಾಗಿ ಭಾರೀ ಪ್ರಮಾಣದ ನಷ್ಟವಾಗಿದೆ ಎಂದು ಕಂಪನಿ ಹೇಳಿಕೊಂಡಿದೆ. ಅಂದರೆ 2019-20ನೇ ಹಣಕಾಸು ವರ್ಷದಿಂದ ಯುನೈಟೆಡ್ ಬ್ರೇವರಿಸ್‌ ಬಿಯರ್‌ನ ಮೂಲ ಬೆಲೆಯನ್ನು TGBCL ಪರಿಷ್ಕರಿಸಿಲ್ಲ, ಇದು ರಾಜ್ಯದಲ್ಲಿ ಕಂಪನಿಗೆ ಆರ್ಥಿಕ ನಷ್ಟಕ್ಕೆ ಕಾರಣ ಎಂದು ಕಂಪನಿ ದೂರಿದೆ.

BEER 1

ಹೆಚ್ಚುತ್ತಿರುವ ಬಿಯರ್‌ ತಯಾರಿಕೆಗೆ ಕಚ್ಚಾ ವಸ್ತುಗಳ ಬೆಲೆಗಳಿಂದ ಉತ್ಪಾದನಾ ವೆಚ್ಚದಲ್ಲಿ 40% ಹೆಚ್ಚಳವನ್ನು ಸರಿದೂಗಿಸಲು 2024ರ ನವೆಂಬರ್‌ನಲ್ಲಿ ತೆಲಂಗಾಣ ಸರ್ಕಾರವನ್ನು ಕಂಪನಿ ಒತ್ತಾಯಿಸಿತ್ತು. ಅಂದರೆ ಪ್ರತಿ ಬಾಟಲಿಗೆ ಕನಿಷ್ಠ 10 ರೂ.ಗಳಷ್ಟು ಬಿಯರ್ ಬೆಲೆಯನ್ನು ಹೆಚ್ಚಿಸಬೇಕು ಎಂದು ಮನವಿ ಮಾಡಲಾಗಿತ್ತು. ಇನ್ನೂ ಡಿಸೆಂಬರ್‌ನಲ್ಲಿ, ಮುಖ್ಯಮಂತ್ರಿ ರೇವಂತ್ ರೆಡ್ಡಿ ಬಿಯರ್ ಕಂಪನಿಗಳ ಬೇಡಿಕೆಗಳನ್ನು ತಿರಸ್ಕರಿಸಿದ್ದರು.

2019 ರಿಂದ ಉತ್ಪಾದನಾ ವೆಚ್ಚವನ್ನು ಆಧರಿಸಿದ ದರವೇ ಇಂದಿಗೂ ಇದೆ. ಇದು ಪ್ರತಿ ಬಿಯರ್ ಕೇಸ್‌ ಮೇಲೆ ಅಂದಾಜು 100 ರೂ. ನಷ್ಟಕ್ಕೆ ಕಾರಣವಾಗುತ್ತಿದೆ ಎಂದು ಕಂಪನಿ ಅಳಲು ತೋಡಿಕೊಂಡಿದೆ.

TGBCL ಉಳಿಸಿಕೊಂಡ ಹಳೆಯ ಬಾಕಿ 3,900 ಕೋಟಿ!
TGBCL ಕಂಪನಿಗೆ 3,900 ಕೋಟಿ ರೂ. ಪಾವತಿಸಿಲ್ಲ. ಇದು ಕಂಪನಿಯ ನಷ್ಟಕ್ಕೆ ಕಾರಣವಾಗಿದೆ. ಬ್ರೇವರಿಸ್‌ ಅಸೋಸಿಯೇಷನ್ ಆಫ್ ಇಂಡಿಯಾ (ಬಿಎಐ) ಕೂಡ ಮದ್ಯ ತಯಾರಿಕಾ ವಲಯ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನಕ್ಕೆ ತಂದಿದೆ. ಇಲ್ಲಿಯವರೆಗೂ ಸಮಸ್ಯೆಗೆ ಪರಿಹಾರ ಸಿಕ್ಕಿಲ್ಲ. ಆದರೂ ಆರ್ಥಿಕ ಒತ್ತಡ ಪರಿಸ್ಥಿತಿಯ ನಡುವೆಯೂ ಗ್ರಾಹಕರಿಗೆ ಯಾವುದೇ ತೊಂದರೆಯಾಗದಂತೆ ಮದ್ಯ ಪೂರೈಸಲಾಗಿದೆ ಎಂದು ಕಂಪನಿ ಹೇಳಿಕೊಂಡಿದೆ.

ALCOHOL

ಯುನೈಟೆಡ್ ಬ್ರೇವರಿಸ್‌ ಕಂಪನಿ ಹೇಳೋದೇನು?
ನಷ್ಟದಿಂದಾಗಿ ಬಿಯರ್‌ನ್ನು ಟಿಜಿಬಿಸಿಎಲ್‌ಗೆ ನಿರಂತರವಾಗಿ ಪೂರೈಸಲು ಸಾಧ್ಯವಿಲ್ಲ. ಇದಲ್ಲದೇ ತೆಲಂಗಾಣ ಸರ್ಕಾರಕ್ಕೆ ಸೇರಿದ ಸಾರ್ವಜನಿಕ ವಲಯದ ಕಂಪನಿಯಾದ TGBCL ರಾಜ್ಯದಲ್ಲಿ ಮದ್ಯದ ಸಗಟು ಮತ್ತು ಚಿಲ್ಲರೆ ಮಾರಾಟದ ಮೇಲೆ ಹಿಡಿತವಿದೆ. ಆದರೂ ನಮ್ಮ ಮನವಿಗೆ ಸ್ಪಂದಿಸಿ ಬೆಲೆ ಏರಿಸಿಲ್ಲ ಎಂದು ಕಂಪನಿ ಹೇಳಿದೆ. ಈ ಬಗ್ಗೆ TGBCL ಇನ್ನೂ ಯಾವುದೇ ಹೇಳಿಕೆಯನ್ನೂ ನೀಡಿಲ್ಲ.

ರಾಜ್ಯಕ್ಕೆ ಭಾರೀ ಆದಾಯ!
ಯುನೈಟೆಡ್ ಬ್ರೇವರಿಸ್‌ ಕಂಪನಿಯು ಮದ್ಯ ಪೂರೈಕೆ ಮತ್ತು ಮಾರಾಟದಿಂದ ರಾಜ್ಯ ಸರ್ಕಾರಕ್ಕೆ ವಾರ್ಷಿಕವಾಗಿ 24,500 ಕೋಟಿ ರೂ. ಆದಾಯ ಬರುತ್ತಿದೆ. ಆದರೆ, ಕಂಪನಿಗಳಿಗೆ ಲಾಭವಾಗುತ್ತಿಲ್ಲ. ಸರ್ಕಾರವು ಕೂಡಲೇ ಮದ್ಯದ ಬೆಲೆ ಏರಿಕೆಗೆ ಕ್ರಮಕೈಗೊಳ್ಳಬೇಕು ಎಂದು ಮದ್ಯ ತಯಾರಕರು ಒತ್ತಾಯಿಸಿದ್ದಾರೆ. ಇದಕ್ಕೆ ಸರ್ಕಾರ ಒಪ್ಪದಿದ್ದರೆ ಇನ್ಮುಂದೆ ತೆಲಂಗಾಣದಲ್ಲಿ ಕಿಂಗ್‌ ಫಿಶರ್‌ ಬಿಯರ್‌ ಪೂರೈಕೆ ಸಂಪೂರ್ಣವಾಗಿ ನಿಲ್ಲಲಿದೆ ಎಂದು ಎಚ್ಚರಿಕೆ ನೀಡಿದೆ.

302 ಲಕ್ಷಕ್ಕೂ ಹೆಚ್ಚು ಬಿಯರ್‌ಗಳ ಮಾರಾಟ
ತೆಲಂಗಾಣವು ಬಿಯರ್‌ಗೆ ಪ್ರಮುಖ ಮಾರುಕಟ್ಟೆಯಾಗಿ ಬೆಳದಿದೆ. ರಾಷ್ಟ್ರೀಯ ಸಾರ್ವಜನಿಕ ಹಣಕಾಸು ಮತ್ತು ನೀತಿ ಸಂಸ್ಥೆ (NIPFP) ಇತ್ತೀಚಿನ ಸಮೀಕ್ಷೆಯು ಬಿಯರ್ ಮಾರಾಟದಲ್ಲಿ ದಕ್ಷಿಣ ಭಾರತದಲ್ಲಿಯೇ ಮುಂಚೂಣಿಯಲ್ಲಿದೆ ಎಂದು ಉಲ್ಲೇಖಿಸಲಾಗಿದೆ. ಏಪ್ರಿಲ್ ಮತ್ತು ಅಕ್ಟೋಬರ್ 2024 ರ ನಡುವೆ, ತೆಲಂಗಾಣದಲ್ಲಿ 302 ಲಕ್ಷಕ್ಕೂ ಹೆಚ್ಚು ಬಿಯರ್‌ಗಳು ಮಾರಾಟವಾಗಿದೆ.

TAGGED:alcoholbeertelanganaTGBCLತೆಲಂಗಾಣ
Share This Article
Facebook Whatsapp Whatsapp Telegram

Cinema news

Pavithra Gowda 1
ಪವಿತ್ರಗೌಡಗೆ ಮನೆ ಊಟ ನಿರಾಕರಿಸಿದ್ದು ಒಳ್ಳೆಯದು – ಅಲೋಕ್ ಕುಮಾರ್
Cinema Districts Karnataka Latest Sandalwood Shivamogga States Top Stories
CM Siddaramaiah congratulates Gilli Nata on winning Kannada Bigg Boss
ಬಿಗ್‌ಬಾಸ್‌ ಗೆದ್ದ ಗಿಲ್ಲಿಯನ್ನು ಅಭಿನಂದಿಸಿದ ಸಿಎಂ
Bengaluru City Cinema Districts Karnataka Latest Top Stories TV Shows
Payal Changappa
ʻಅಮೃತ ಅಂಜನ್‌ʼ ಸಿನಿಮಾದ ಫೀಲಿಂಗ್‌ ಸಾಂಗ್‌ ರಿಲೀಸ್‌
Cinema Latest Sandalwood
Life Ellind Ellige
`ಲೈಫ್ ಎಲ್ಲಿಂದ ಎಲ್ಲಿಗೆ’ ಅಂತ ಹಾಡಿದ ಟೀಮ್
Cinema Latest Sandalwood Top Stories

You Might Also Like

delhi rain snowfall in kashmir
Latest

ದೆಹಲಿ ಸೇರಿ NCR ಪ್ರದೇಶದಾದ್ಯಂತ ಮಳೆ; ಕಾಶ್ಮೀರದಲ್ಲಿ ಹಿಮಪಾತ

Public TV
By Public TV
2 minutes ago
AIR INDIA
Latest

ಅಹಮದಾಬಾದ್ ವಿಮಾನ ದುರಂತ ಬಳಿಕ ಏರ್ ಇಂಡಿಯಾಗೆ 15,000 ಕೋಟಿ ರೂ. ನಷ್ಟ

Public TV
By Public TV
20 minutes ago
bengaluru auto driver
Bengaluru City

ಮಹಿಳೆ ಬಿಟ್ಟು ಹೋಗಿದ್ದ ಪರ್ಸ್, ಐಫೋನ್ ಮರಳಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ

Public TV
By Public TV
30 minutes ago
Gold Silver
Bengaluru City

ಚಿನ್ನ, ಬೆಳ್ಳಿ ಪ್ರಿಯರಿಗೆ ಗುಡ್‌ನ್ಯೂಸ್ – ಒಂದೇ ದಿನ ದರದಲ್ಲಿ ಭಾರೀ ಇಳಿಕೆ

Public TV
By Public TV
37 minutes ago
Jharkhand Maoist Killed
Latest

ಜಾರ್ಖಂಡ್‌ನಲ್ಲಿ ತಲೆಗೆ 1 ಕೋಟಿ ಬಹುಮಾನ ಹೊಂದಿದ್ದ ಮಾವೋವಾದಿ ಸೇರಿ 15 ನಕ್ಸಲರ ಹತ್ಯೆ

Public TV
By Public TV
55 minutes ago
Belagavi Murder
Belgaum

ಮದುವೆ ಆಗಿ 3 ವರ್ಷಗಳಾದ್ರೂ ಮಕ್ಕಳಾಗಿಲ್ಲವೆಂದು ಹೆಂಡ್ತಿ ಕಾಟ – ಕಿರಿಕಿರಿಗೆ ಬೇಸತ್ತು ಉಸಿರುಗಟ್ಟಿಸಿ ಹತ್ಯೆಗೈದ ಪಾಪಿ ಪತಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?