Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಟ್ರಾಸಿಟಿ ಕೇಸ್‌ನಲ್ಲಿ ದೌರ್ಜನ್ಯಕ್ಕೀಡಾದವರಿಗೆ ನ್ಯಾಯ ಒದಗಿಸಿ – ಸಿಎಂ ಖಡಕ್‌ ಸೂಚನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಅಟ್ರಾಸಿಟಿ ಕೇಸ್‌ನಲ್ಲಿ ದೌರ್ಜನ್ಯಕ್ಕೀಡಾದವರಿಗೆ ನ್ಯಾಯ ಒದಗಿಸಿ – ಸಿಎಂ ಖಡಕ್‌ ಸೂಚನೆ

Bengaluru City

ಅಟ್ರಾಸಿಟಿ ಕೇಸ್‌ನಲ್ಲಿ ದೌರ್ಜನ್ಯಕ್ಕೀಡಾದವರಿಗೆ ನ್ಯಾಯ ಒದಗಿಸಿ – ಸಿಎಂ ಖಡಕ್‌ ಸೂಚನೆ

Public TV
Last updated: January 28, 2025 4:13 pm
Public TV
Share
2 Min Read
Siddaramaiah 3
SHARE

ಬೆಂಗಳೂರು: ಅಟ್ರಾಸಿಟಿ ಪ್ರಕರಣಗಳಲ್ಲಿ ಸರ್ಕಾರಿ ಪ್ರಾಸಿಕ್ಯೂಟರ್‌ಗಳು (Public Prosecutor) ಸರಿಯಾಗಿ ವಾದಿಸಿ ದೌರ್ಜನ್ಯಕ್ಕೀಡಾದವರಿಗೆ ನ್ಯಾಯ ಒದಗಿಸಬೇಕು ಅಂತ ಸಿಎಂ ಸಿದ್ದರಾಮಯ್ಯ (Siddaramaiah) ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಿಧಾನಸೌಧದಲ್ಲಿ (Vidhana Soudha) ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟುಗಳು ಜಾಗೃತ ಮತ್ತು ಉಸ್ತುವಾರಿ ಮೇಲ್ವಿಚಾರಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಸಿಎಂ, ಡಿಸಿಗಳು, ಎಸ್ಪಿಗಳು, ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ರು.

ಅಟ್ರಾಸಿಟಿ ಪ್ರಕರಣಗಳಲ್ಲಿ (Atrocity Case) ಸರ್ಕಾರಿ ಪ್ರಾಸಿಕ್ಯೂಟರ್‌ಗಳು ಸರಿಯಾಗಿ ವಾದಿಸಿ ದೌರ್ಜನ್ಯಕ್ಕೀಡಾದವರಿಗೆ ನ್ಯಾಯ ಒದಗಿಸಬೇಕು. ದೌರ್ಜನ್ಯ ಮಾಡಿದವರು ಸುಲಭವಾಗಿ ಜಾಮೀನು ಪಡೆಯದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಒದಗಿಸುವುದು ಎಲ್ಲರ ಜವಾಬ್ದಾರಿ. ದೌರ್ಜನ್ಯ ಪ್ರಕರಣಗಳಲ್ಲಿ ದೋಷಾರೋಪಣೆ ಪಟ್ಟಿಯನ್ನು ನಿಗದಿತ ಅವಧಿಯ ಒಳಗಾಗಿ ಸಲ್ಲಿಸಬೇಕು ಅಂತ ಸೂಚನೆ ನೀಡಿದ್ರು.

ಸಿಎಂ ಸಭೆ ಹೈಲೈಟ್ಸ್…

  • ಬ್ಯಾಕ್‌ಲಾಗ್‌, ನೇಮಕಾತಿ ಮತ್ತು ಮುಂಬಡ್ತಿ ಪ್ರಕರಣಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳಿಗೆ ಅನ್ಯಾಯವಾಗದಂತೆ ಎಚ್ಚರಿಕೆ ವಹಿಸಬೇಕು. ಈ ಕುರಿತು ಇಲಾಖೆವಾರು ಸಭೆ ನಡೆಸಲು ಮುಖ್ಯಕಾರ‍್ಯದರ್ಶಿಯವರಿಗೆ ಸೂಚನೆ.
  • ದೇವದಾಸಿ ಪದ್ದತಿ ಯಾವುದೇ ಜಿಲ್ಲೆಗಳಲ್ಲಿ ನಡೆದರೆ ಅದಕ್ಕೆ ಜಿಲ್ಲಾಧಿಕಾರಿ ಮತ್ತು ಪೊಲೀಸ್‌ ವರಿಷ್ಠಾಧಿಕಾರಿ ಅವರೇ ನೇರ ಹೊಣೆ. ದೇವದಾಸಿಯರಿಗೆ ಪುನರ್ವಸತಿ ಕಲ್ಪಿಸುವುದು ಜಿಲ್ಲಾಡಳಿತದ ಜವಾಬ್ದಾರಿ. ಈ ಕುರಿತು ಯಾವುದೇ ದೂರಿಗೆ ಅವಕಾಶವಿಲ್ಲದಂತೆ ಕಾರ್ಯ ನಿರ್ವಹಿಸಬೇಕು.
  • ಅರಣ್ಯ ಹಕ್ಕು ಸಮಿತಿ ನಿಗದಿತವಾಗಿ ಸಭೆಗಳನ್ನು ನಡೆಸಿ, ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರಗಳನ್ನು ನೀಡುವ ಪ್ರಕ್ರಿಯೆ ತ್ವರಿತಗೊಳಿಸಬೇಕು. 3,430 ಪ್ರಕರಣಗಳಲ್ಲಿ ಹಕ್ಕುಪತ್ರ ನೀಡಲು ಇನ್ನೂ ಬಾಕಿಯಿದ್ದು, ಇದನ್ನು ಒಂದು ತಿಂಗಳ ಒಳಗಾಗಿ ಪೂರ್ಣಗೊಳಿಸಬೇಕು.
  • ಹಕ್ಕುಪತ್ರ ನೀಡಿದ ಬಳಿಕ ಪಹಣಿಯಲ್ಲಿ‌ ಅವರ ಹೆಸರು ನಮೂದಿಸುವ ಕಾರ್ಯ ತ್ವರಿತಗೊಳಿಸಬೇಕು. ಕಂದಾಯ ಇಲಾಖೆ ಅಧಿಕಾರಿಗಳು ಇದನ್ನು ಆದ್ಯತೆ ಮೇಲೆ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ಅರಣ್ಯವಾಸಿಗಳನ್ನು ಒಕ್ಕಲೆಬ್ಬಿಸಬಾರದು.
  • ಎಸ್ಸಿ/ಎಸ್ಟಿ ಕಾಯ್ದೆಯಡಿ ದಾಖಲಾಗಿರುವ ಪ್ರಕರಣಗಳಲ್ಲಿ ನ್ಯಾಯಾಲಯಗಳು ನೀಡಿರುವ ತಡೆಯಾಜ್ಞೆ ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು. 60 ದಿನಗಳ ಒಳಗಾಗಿ ಆರೋಪಪಟ್ಟಿ ದಾಖಲಿಸಬೇಕು. ಇನ್ನೂ 665 ಪ್ರಕರಣಗಳು ತನಿಖೆಗೆ ಬಾಕಿಯಿದ್ದು, ಇದನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ನ್ಯಾಯಾಲಯಗಳಲ್ಲಿ ಶಿಕ್ಷೆ ಪ್ರಮಾಣ ಕಡಿಮೆಯಾಗುವುದನ್ನು ಒಪ್ಪಲು ಸಾಧ್ಯವಿಲ್ಲ.
  • ಪ್ರತಿ ಜಿಲ್ಲೆಯಲ್ಲಿ ಡಿಸಿಆರ್‌ಇ ಕೋಶವನ್ನು‌ ಸ್ಥಾಪಿಸುವ ಕುರಿತು ಈಗಾಗಲೇ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
  • ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ಪ್ರತಿ ಮೂರು ತಿಂಗಳಿಗೊಮ್ಮೆ ಕಡ್ಡಾಯವಾಗಿ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆ ನಡೆಸಬೇಕು. ಪ್ರಾಸಿಕ್ಯೂಶನ್ ಸಹ ಪರಿಶೀಲನೆ ನಡೆಸಬೇಕು. ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರು ಈ ಸಭೆಯಲ್ಲಿ ಭಾಗವಹಿಸಬೇಕು.
  • ಮೃತಪಟ್ಟ ಪ್ರಕರಣಗಳಲ್ಲಿ ಅನುಕಂಪ ಆಧಾರದ ಉದ್ಯೋಗಕ್ಕಾಗಿ ಮೃತಪಟ್ಟ ದಿನಾಂಕದಿಂದ 3 ವರ್ಷದ ಒಳಗೆ, ಅಪ್ರಾಪ್ತ ವಯಸ್ಸಿನ ಮಕ್ಕಳು 18 ವರ್ಷಗಳನ್ನು ಪೂರೈಸತಕ್ಕದ್ದು, ಎಂಬ ಮಿತಿಯನ್ನು ತೆಗೆದು ಹಾಕುವ ಬಗ್ಗೆ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.
  • ಸುಳ್ಳು ಜಾತಿ ಪ್ರಮಾಣ ಪತ್ರ ಪ್ರಕರಣಗಳಲ್ಲಿ ಅಂತಹ ಪ್ರಮಾಣ ಪತ್ರ ನೀಡುವ ಅಧಿಕಾರಿಯನ್ನು ಸಹ ಆರೋಪಿಯನ್ನಾಗಿ ಮಾಡಲಾಗುತ್ತದೆ. ಜಾತಿ ಪ್ರಮಾಣ ಪತ್ರ ನೀಡುವ ಸಂದರ್ಭದಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು ಕಟ್ಟೆಚ್ಚರ ವಹಿಸಬೇಕು ಎಂದು ಸಿಎಂ ತಾಕೀತು ಮಾಡಿದರು.

TAGGED:Atrocity CasebengaluruBengaluru city policelawyersiddaramaiahಅಟ್ರಾಸಿಟಿ ಕೇಸ್‌ಬೆಂಗಳೂರುವಕೀಲರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Hardik Pandya
Cricket

IPL 2026 | DC vs MI ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಆಡ್ತಿಲ್ಲ ಯಾಕೆ?

Public TV
By Public TV
6 minutes ago
Vatal Nagaraj Tamate Protest
Districts

ಗ್ಯಾಸ್ ಸಮಸ್ಯೆ ಬಗೆಹರಿಸದ ಸರ್ಕಾರದ ವಿರುದ್ಧ ವಾಟಾಳ್ ತಮಟೆ ಚಳುವಳಿ

Public TV
By Public TV
17 minutes ago
US Israeli strikes on Irans Bushehr nuclear plant
Latest

ಇರಾನ್‌ನ ಬುಶೆಹರ್‌ ಪರಮಾಣು ಸ್ಥಾವರದ ಮೇಲೆ ಯುಎಸ್‌-ಇಸ್ರೇಲ್‌ ದಾಳಿ; ಓರ್ವ ಸಾವು

Public TV
By Public TV
40 minutes ago
Auto Gas Problem
Bengaluru City

ರಾಜ್ಯದಲ್ಲಿ ತಪ್ಪದ ಗ್ಯಾಸ್ ಪ್ರಾಬ್ಲಂ – ಬಂಕ್‌ಗಳ ಎದುರು ಆಟೋಗಳ ಸರತಿಸಾಲು

Public TV
By Public TV
45 minutes ago
PSI Mangalamma
Districts

ತುಮಕೂರಲ್ಲಿ ಮಹಿಳಾ ಪಿಎಸ್‌ಐ ನಾಪತ್ತೆ – ಮಗಳಿಂದ ದೂರು ದಾಖಲು

Public TV
By Public TV
1 hour ago
Shreyas Iyer 2
Cricket

ಶ್ರೇಯಸ್‌ ಅಯ್ಯರ್‌ಗೆ 24 ಲಕ್ಷ ದಂಡ – ಪಂಜಾಬ್‌ ಕ್ಯಾಪ್ಟನ್‌ಗೆ ಕಾಡ್ತಿದೆ ಬ್ಯಾನ್‌ ಭೀತಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?