ಕುಂಭಮೇಳ ಕಾಲ್ತುಳಿತ ದುರಂತ – ಕನ್ನಡಿಗರ ನೆರವಿಗೆ ರಾಜ್ಯ ಸರ್ಕಾರದಿಂದ ಸಹಾಯವಾಣಿ ಆರಂಭ

Public TV
1 Min Read
maha kumbha mela

ಬೆಂಗಳೂರು: ಪ್ರಯಾಗ್‌ರಾಜ್‌ನ (Prayagraj) ಮಹಾ ಕುಂಭಮೇಳದಲ್ಲಿ (Mahakumbhamela) ಬುಧವಾರ ಸಂಭವಿಸಿದ ಕಾಲ್ತುಳಿತ (Prayagraj Stampade) ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಸರ್ಕಾರ (Karnataka State Government) ಕನ್ನಡಿಗರ ನೆರವಿಗೆ ಸಹಾಯವಾಣಿಯನ್ನು ಆರಂಭಿಸಿದೆ.

karnataka Helpline no

ಮಹಾ ಕುಂಭಮೇಳಕ್ಕೆ ತೆರಳಿರುವ ನಿಮ್ಮ ಕುಟುಂಬಸ್ಥರು ಸಂಪರ್ಕಕ್ಕೆ ಸಿಗುತ್ತಿಲ್ಲವಾದರೆ, 080-22340676 ಈ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಬಹುದು ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದ್ದು, ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ.ಇದನ್ನೂ ಓದಿ: ಸಂತರ ಹಿಂದೂ ರಾಷ್ಟ್ರ ಘೋಷಣೆಗೆ ಸಾಣೆಹಳ್ಳಿ ಶ್ರೀ ಆತಂಕ

ಮೌನಿ ಅಮಾವಾಸ್ಯೆ ಹಿನ್ನೆಲೆ ಬುಧವಾರ ಬೆಳಿಗ್ಗೆ ಕೋಟ್ಯಂತರ ಭಕ್ತರು ಪವಿತ್ರ ಸ್ನಾನ ಮಾಡಲು ಪ್ರಯಾಗ್‌ರಾಜ್‌ಗೆ ಬರುತ್ತಿದ್ದರು. ಈ ವೇಳೆ ನೂಕು ನುಗ್ಗಲು ಸಂಭವಿಸಿ ಕಾಲ್ತುಳಿತ ಉಂಟಾದ ಪರಿಣಾಮ 30ಕ್ಕೂ ಅಧಿಕ ಭಕ್ತರು ಸಾವನ್ನಪ್ಪಿದ್ದಾರೆ. ಈ ಪೈಕಿ ಕರ್ನಾಟಕದವರು ನಾಲ್ವರು ಸಾವನ್ನಪ್ಪಿದ್ದಾರೆ.

ಘಟನೆಯಲ್ಲಿ ಹಲವು ಮಂದಿ ಗಾಯಗೊಂಡಿದ್ದು, ಗಾಯಗೊಂಡವರನ್ನು ಸೆಕ್ಟರ್ 2ರಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಹಲವಾರು ಜನರು ಕುಟುಂಬಸ್ಥರಿಂದ ಬೇರ್ಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.ಇದನ್ನೂ ಓದಿ:ಮಹಾ ಕುಂಭಮೇಳದಲ್ಲಿ ಕಾಲ್ತುಳಿತ – ಮೃತರ ಕುಟುಂಬಕ್ಕೆ ತಲಾ 25 ಲಕ್ಷ ಪರಿಹಾರ ಘೋಷಿಸಿದ ಸಿಎಂ ಯೋಗಿ

 

Share This Article