ವಾಲ್ಮೀಕಿ ಹಗರಣ | ಸಿಬಿಐ ತನಿಖೆ ಚುರುಕು ಮೂವರು ಆರೋಪಿಗಳಿಗೆ ನೋಟಿಸ್

Public TV
1 Min Read
CBI

– ಮಾಜಿ ಸಚಿವ ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾಗುತ್ತಾ?

ಬೆಂಗಳೂರು: ವಾಲ್ಮೀಕಿ ಬಹುಕೋಟಿ ಹಗರಣ (Valmiki Scam) ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (CBI)  ತನಿಖೆಯನ್ನು ಚುರುಕುಗೊಳಿಸಿದೆ. ಪ್ರಕರಣದ ಮೂವರು ಆರೋಪಿಗಳಿಗೆ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಈ ಬೆನ್ನಲ್ಲೇ ಮಾಜಿ ಸಚಿವ ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾಗುವ ಸಾಧ್ಯತೆಯಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಪ್ರಕರಣದ ಪ್ರಮುಖ ಆರೋಪಿ ಚಂದ್ರಮೋಹನ್ ಮತ್ತು ಕುಟುಂಬಸ್ಥರಿಗೆ ಸಿಬಿಐ ನೋಟಿಸ್ ನೀಡಿದ್ದು, ಈ ಹಿಂದೆ ಚಂದ್ರಮೋಹನ್ ವಾಲ್ಮೀಕಿ ಪ್ರಕರಣದಲ್ಲಿ 89 ಕೋಟಿ ರೂ. ವರ್ಗಾವಣೆ ಮಾಡಿದ್ದ ಆರೋಪ ಹೊಂದಿದ್ದರು.ಇದನ್ನೂ ಓದಿ: ಕರ್ನಾಟಕದಲ್ಲಿ ದ್ವೇಷ ಭಾಷಣಕ್ಕೆ 3 ವರ್ಷ ಜೈಲು – ಹೊಸ ಬಿಲ್ ತರಲು ರಾಜ್ಯ ಸರ್ಕಾರ ಸಿದ್ಧತೆ?

ಕೋಟಿ ಕೋಟಿ ಹಣವನ್ನು ಶೇಕಡಾವಾರು ಲೆಕ್ಕದಲ್ಲಿ ವಹಿವಾಟು ಮಾಡಿದ್ದ ಚಂದ್ರಮೋಹನ್ 100ಕ್ಕೂ ಹೆಚ್ಚು ನಕಲಿ ಅಕೌಂಟ್‌ಗಳ ಸೃಷ್ಟಿ ಮಾಡಿ ಚಂದ್ರಮೋಹನ್ ಹಾಗೂ ಕುಟುಂಬಸ್ಥರು ಸೇರಿ ಹಣ ಗಳಿಸಿದ್ದರು.

ಈಗಾಗಲೇ ಪರಶುರಾಮ್, ಸತ್ಯನಾರಾಯಣ ಇಟಕಾರಿಗೆ ನೋಟಿಸ್ ನೀಡಿದ್ದ ಸಿಬಿಐ ಇದೀಗ ವಿಚಾರಣೆ ನಡೆಸುತ್ತಿದೆ.ಇದನ್ನೂ ಓದಿ: ರಘು ಪಾಂಡೇಶ್ವರ ಈಗ ಅಧಿಪತ್ರದ ಪಟ್ಟಾಭಿರಾಮ!

Share This Article