Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆರಿಹೋಯ್ತು 46 ವರ್ಷದಿಂದ ಎಣ್ಣೆ, ಬತ್ತಿ ಇಲ್ಲದೇ ಉರಿಯುತ್ತಿದ್ದ ದೀಪನಾಥೇಶ್ವರದ 3 ದೀಪಗಳು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಆರಿಹೋಯ್ತು 46 ವರ್ಷದಿಂದ ಎಣ್ಣೆ, ಬತ್ತಿ ಇಲ್ಲದೇ ಉರಿಯುತ್ತಿದ್ದ ದೀಪನಾಥೇಶ್ವರದ 3 ದೀಪಗಳು

Latest

ಆರಿಹೋಯ್ತು 46 ವರ್ಷದಿಂದ ಎಣ್ಣೆ, ಬತ್ತಿ ಇಲ್ಲದೇ ಉರಿಯುತ್ತಿದ್ದ ದೀಪನಾಥೇಶ್ವರದ 3 ದೀಪಗಳು

Public TV
Last updated: February 7, 2025 3:58 pm
Public TV
Share
2 Min Read
Deepanatheshwara Temple Lamps
SHARE

ಕಾರವಾರ: ಯಾವುದೇ ಎಣ್ಣೆ, ಬತ್ತಿ ಇಲ್ಲದೇ ಸತತ 46 ವರ್ಷಗಳಿಂದ ಉರಿಯುತ್ತಿದ್ದ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ತಾಲೂಕಿನ ಚಿಗಳ್ಳಿಯ ಪ್ರತಿಷ್ಠಿತ ದೀಪನಾಥೇಶ್ವರ ದೇವಾಲಯದ (Deepanatheshwara Temple) ಮೂರು ದೀಪಗಳು ನಂದಿ ಹೋಗಿವೆ.

1979 ರಲ್ಲಿ ದೈವಜ್ಞ ಶಾರದಮ್ಮ ಎಂಬವರು ಸೀಮೆಎಣ್ಣೆ ಹಾಕಿ ಈ ದೀಪವನ್ನು ಬೆಳಗಿಸಿದ್ದರು. ಅಲ್ಲಿಂದ ಈವರೆಗೂ ಈ ದೀಪ ಎಣ್ಣೆ, ಬತ್ತಿಯಿಲ್ಲದೇ ಬೆಳಗುತ್ತಿತ್ತು. ಈ ಹಿನ್ನೆಲೆಯಲ್ಲಿ ಇಲ್ಲಿಗೆ ನೂರಾರು ಜನರು ಭೇಟಿ ನೀಡಿ ಈ ವಿಸ್ಮಯವನ್ನು ಕಣ್ತುಂಬಿಕೊಳ್ಳುತ್ತಿದ್ದು, ದೀಪನಾಥೇಶ್ವರ ಎಂಬ ಹೆಸರಿನಲ್ಲಿ ಆಸ್ತಿಕರು ಪೂಜೆಗಳನ್ನು ನಡೆಸುತ್ತಿದ್ದರು ಎಂಬುದು ಸ್ಥಳೀಯರ ಅಭಿಪ್ರಾಯ. ಕಳೆದ 14 ದಿನದ ಹಿಂದೆ ದೀಪದ ಉಸ್ತುವಾರಿ ನೋಡಿಕೊಳ್ಳುತಿದ್ದ ವೆಂಕಟೇಶ್ ಎಂಬವರು ಮೃತರಾಗಿದ್ದು, ಸೂತಕದ ಹಿನ್ನಲೆಯಲ್ಲಿ ದೇವಸ್ಥಾನದ ಗರ್ಭಗುಡಿ ಮುಚ್ಚಲಾಗಿತ್ತು. ಆದರೆ, ಬುಧವಾರ ದೇವಸ್ಥಾನದ ಗರ್ಭಗುಡಿಯನ್ನು ಸ್ವಚ್ಛ ಮಾಡಲು ಕುಟುಂಬಸ್ಥರು ತೆರಳಿದಾಗ ದೀಪ ಆರಿರುವುದು ಬೆಳಕಿಗೆ ಬಂದಿದೆ. ಇದನ್ನೂ ಓದಿ: ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ತಿರಸ್ಕರಿಸಿದ ರಾಜ್ಯಪಾಲರು – ಸರ್ಕಾರಕ್ಕೆ ಬಹುದೊಡ್ಡ ಹಿನ್ನಡೆ

Deepanatheshwara Temple Karwar

ದೀಪ ಆರಿದರೆ ರಾಜ್ಯ ಆಳುವವರಿಗೆ ಕೆಡುಕಾಗಲಿದೆ ಎಂದು ಜನ ನಂಬಿದ್ದು, ಗ್ರಾಮಕ್ಕೂ ತೊಂದರೆಯಾಗಲಿದೆ ಎಂಬುದು ಇಲ್ಲಿನ ಭಕ್ತರ ಅನಿಸಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ದೇವಸ್ಥಾನದ ಗರ್ಭಗುಡಿಯನ್ನು ದೇವಸ್ಥಾನದ ಆಡಳಿತ ಮಂಡಳಿ ಮುಚ್ಚಿದ್ದು, ಸಾರ್ವಜನಿಕ ದರ್ಶನಕ್ಕೆ ನಿರ್ಬಂಧ ಹೇರಿದೆ.

ಏನಿದರ ಇತಿಹಾಸ?
ಚಿಗಳ್ಳಿ ಗ್ರಾಮದ ದೈವಜ್ಞ ಶಾರದಮ್ಮ ಎನ್ನುವವರು 1979ರಲ್ಲಿ ಸೀಮೆಎಣ್ಣೆ ಹಾಕಿ ಒಂದು ಲಾಟೀನು ದೀಪವನ್ನು ಹಚ್ಚಿದ್ದರು. ಆದರೆ, ಅದು ಒಂದು ದಿನ ಕಳೆದರೂ ಆರಲಿಲ್ಲ. ನಿರಂತರವಾಗಿ ಉರಿಯತೊಡಗಿತು. ಇದರಿಂದ ಕುತೂಹಲಗೊಂಡ ಶಾರದಮ್ಮ, ಒಂದು ವರ್ಷದವರೆಗೆ ಕಾಯ್ದು ಮತ್ತೊಂದು ದೀಪವನ್ನು 1980ರಲ್ಲಿ ಹಚ್ಚಿದರು. 2ನೇ ದೀಪ ಕೂಡ ಆರದೇ ನಿರಂತರವಾಗಿ ಉರಿಯ ತೊಡಗಿತು. 2ನೇ ದೀಪ ಹಚ್ಚಿದ 10-15 ದಿನಗಳ ನಂತರ ಮತ್ತೊಂದು 3ನೇ ದೀಪ ಬೆಳಗಿಸಿದರು. ಪವಾಡ ಎಂಬಂತೆ 3ನೇ ದೀಪ ಸೇರಿ ಮೂರು ದೀಪಗಳು ನಿರಂತರವಾಗಿ ಉರಿಯ ತೊಡಗಿದವು ಎಂಬುದು ಸ್ಥಳೀಯರ ಮಾತು. 1979ರಿಂದ 2025ರ ಫೆಬ್ರವರಿ ವರೆಗೆ ನಿರಂತರವಾಗಿ ಉರಿದುಕೊಂಡು ಬಂದಿದ್ದ ದೀಪಗಳು ಈಗ ಏಕಾಏಕಿ ಆರಿ ಹೋಗಿದೆ. ಇದನ್ನೂ ಓದಿ: Aeroindia 2025 | ಏರ್ ಶೋ ಹಿನ್ನೆಲೆ ಬೆಂಗಳೂರಿನ 21 ಕೆರೆಗಳಲ್ಲಿ ಮೀನುಗಾರಿಕೆಗೆ ನಿಷೇಧ

Deepanatheshwara Temple

ದೇವರು ಮುನಿದನಾ?
ದೀಪ ಹಚ್ಚಿದ್ದ ಶಾರದಮ್ಮ ಅವರು ಕೆಲವು ವರ್ಷಗಳ ನಂತರ ನಿಧನರಾದರು. ಆದರೂ ದೀಪಗಳು ಇಲ್ಲಿವರೆಗೆ ಉರಿದುಕೊಂಡು ಬರುತ್ತಿದ್ದು ನಂದಾದೀಪ ಎನಿಸಿತ್ತು. 14 ದಿನದ ಹಿಂದೆ ಈ ದೀಪದ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ಅರ್ಚಕ ವೆಂಕಟೇಶ್ ನಿಧನರಾದರು. ಈ ಹಿನ್ನೆಲೆಯಲ್ಲಿ ಸೂತಕವಿದ್ದ ಕಾರಣ ದೇವಸ್ಥಾನದ ಗರ್ಭಗುಡಿ ಮುಚ್ಚಲಾಗಿತ್ತು. ಫೆ.5ರಂದು ಪೂಜೆಗಾಗಿ ಗರ್ಭಗುಡಿ ತೆರೆದಾಗ ದೀಪ ಆರಿರುವುದು ಗಮನಕ್ಕೆ ಬಂದಿದೆ.

ಆರದ ನಂದಾದೀಪ ಆರಿಹೋದಾಗ ಭಕ್ತರಲ್ಲಿ ನೋವು ತರಿಸಿದೆ. ಇಷ್ಟು ದಿನ ಆರದ್ದು ಈಗ ಆರಿರುವುದು ಕೆಡುಕಿನ ಸಂಕೇತ. ರಾಜ್ಯ ಆಳುವವರಿಗೂ ಕೆಡುಕಾಗಲಿದೆ. ಗ್ರಾಮಕ್ಕೂ ಕೆಡುಕು ಎಂಬ ಮಾತುಗಳು ಕೇಳಿಬರುತ್ತಿವೆ. ದೀಪವನ್ನು ನೋಡಲು ಜನ ಮಿಗಿಬಿದ್ದಿದ್ದಾರೆ. ನಂತರ ಈ ದೇವಸ್ಥಾನದ ಗರ್ಭಗುಡಿಯನ್ನು ಸಂಪೂರ್ಣ ಬಂದ್ ಮಾಡಲಾಗಿದೆ.

TAGGED:Deepanatheshwara TemplekarwarLampsಕಾರವಾರದೀಪಗಳು
Share This Article
Facebook Whatsapp Whatsapp Telegram

Cinema news

Bigg Boss runner up Rakshita Shetty gets a grand welcome in Padubidri
ತೆರೆದ ವಾಹನದಲ್ಲಿ ಮೆರವಣಿಗೆ – ಬಂಗುಡೆ ಮೀನು ಹಿಡಿದು ಸಂಭ್ರಮಿಸಿದ ರಕ್ಷಿತಾ
Cinema Districts Karnataka Latest Main Post TV Shows Udupi
kantara chapter 1
ಜೀ ಕನ್ನಡ ವಾಹಿನಿಯಲ್ಲಿ ಬರಲಿದೆ ಕಾಂತಾರ ಚಾಪ್ಟರ್ 1
Cinema Latest Sandalwood Top Stories
Udaya Kannadiga 2025
ವರ್ಣರಂಜಿತ ಉದಯ ಕನ್ನಡಿಗ-2025 ಪುರಸ್ಕಾರದಲ್ಲಿ ತಾರಾಮೇಳ
Cinema Latest Sandalwood Top Stories TV Shows
Gilli Kavya 1
BBK 12 | ಗಿಲ್ಲಿಯನ್ನ ಮದ್ವೆ ಆಗ್ತೀರಾ ಅಂದಿದ್ದಕ್ಕೆ ಕಾವ್ಯ ಕೊಟ್ಟ ಉತ್ತರವೇನು?
Cinema Latest Top Stories TV Shows

You Might Also Like

Shivraj Singh Chouhan
Districts

ವಿಬಿಜಿರಾಮ್‌ಜಿ ಪರ ಬ್ಯಾಟ್ ಬೀಸಲು ದೋಸ್ತಿ ತಯಾರಿ – ಶಿವರಾಜ್ ಸಿಂಗ್ ಚೌಹಾಣ್‌ರಿಂದ ಉಪನ್ಯಾಸ

Public TV
By Public TV
11 minutes ago
Eknath Shinde Raj Thackeray
Latest

ಉದ್ದವ್‌ಗೆ ಕೈಕೊಟ್ಟು ಶಿಂಧೆ ಸೇನಾಗೆ ಎಂಎನ್‌ಎಸ್‌ ಬಂಬಲ

Public TV
By Public TV
24 minutes ago
R Ashok 1
Bengaluru City

ಕಾಂಗ್ರೆಸ್ ಸರ್ಕಾರದಿಂದ ವಿಶೇಷ ಅಧಿವೇಶನ ಕರೆದು ಕೇಂದ್ರದ ಯೋಜನೆಗೆ ಅಡ್ಡಗಾಲು: ಆರ್.ಅಶೋಕ್‌

Public TV
By Public TV
47 minutes ago
Governor Thawar Chand Gehlot
Bengaluru City

ಅಧಿವೇಶನಕ್ಕೂ ಮುನ್ನವೇ ಸರ್ಕಾರಕ್ಕೆ ಶಾಕ್‌ – ಭಾಷಣ ನಾನು ಓದಲ್ಲ ಎಂದ ಗೆಹ್ಲೋಟ್‌

Public TV
By Public TV
2 hours ago
CRIME
Chikkamagaluru

ಮದುವೆಗೆ ಮುಂಚೆಯೇ ಹೆರಿಗೆ – ಮಗು ಜನಿಸುತ್ತಿದ್ದಂತೆ ಹತ್ಯೆ?

Public TV
By Public TV
2 hours ago
Sriramulu 1 1
Bellary

ಪೋಕ್ಸೋ ಸಂತ್ರಸ್ತೆಯ ಹೆಸರು ಉಲ್ಲೇಖಿಸಿದ್ದಕ್ಕೆ ಕ್ಷಮೆ ಕೇಳಿದ ಶ್ರೀರಾಮುಲು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?