ದೇಶದ ಕೋಟ್ಯಂತರ ಜನ ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಮಹಾ ಕುಂಭ ಮೇಳದಲ್ಲಿ (Maha Kumbh Mela) ಭಾಗವಹಿಸಿ ಪುನೀತರಾಗುತ್ತಿದ್ದಾರೆ. ಹೀಗಿರುವಾಗ ಕನ್ನಡದ ನಟ ‘ನೆನೆಪಿರಲಿ’ ಪ್ರೇಮ್ (Nenapirali Prem) ಕೂಡ ಪುಣ್ಯ ಸ್ನಾನ ಮಾಡಿದ್ದಾರೆ. ಈ ಕುರಿತು ನಟ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಕೂಡ ಹಂಚಿಕೊಂಡಿದ್ದಾರೆ.
‘ಕುಂಭ ಮೇಳ ಪುಣ್ಯ ಸ್ನಾನ. ಎಲ್ಲರ ಬಾಳು ಅಮೃತಮಯವಾಗಿರಲಿ’ ಎಂದು ಪ್ರೇಮ್ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಇದರೊಂದಿಗೆ ಪುಣ್ಯ ಸ್ನಾನದ ಫೋಟೋ ಕೂಡ ನಟ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ದುನಿಯಾ ವಿಜಯ್ ನಿರ್ದೇಶನದ ‘ಸಿಟಿ ಲೈಟ್ಸ್’ ಚಿತ್ರದ ಪೋಸ್ಟರ್ ಔಟ್
View this post on Instagram
ಇನ್ನೂ ಇತ್ತೀಚೆಗೆ ಕನ್ನಡದ ಕಲಾವಿದರಾದ ರಾಜ್ ಬಿ ಶೆಟ್ಟಿ, ನಿರೂಪಕಿ ಅನುಶ್ರೀ, ಕೆಜಿಎಫ್ ನಟಿ ಶ್ರೀನಿಧಿ ಶೆಟ್ಟಿ, ಬಿಗ್ ಬಾಸ್ ಸಾನ್ಯ ಅಯ್ಯರ್ ಸೇರಿದಂತೆ ಅನೇಕರು ಮಹಾ ಕುಂಭಮೇಳದಲ್ಲಿ ಭಾಗಿಯಾಗಿದ್ದರು.