Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಮುಸ್ಲಿಂ ಮತಾಂಧರ ವಿರುದ್ಧದ ಪ್ರಕರಣ ವಾಪಸ್‌ನಿಂದ ಪೊಲೀಸರ ಮೇಲೆ ಹಲ್ಲೆ ಮಾಡುವ ಧೈರ್ಯ: ಆರ್‌.ಅಶೋಕ್‌ ಕಿಡಿ

Public TV
Last updated: February 11, 2025 4:43 pm
Public TV
Share
2 Min Read
R Ashok 2
SHARE

-ಮೈಸೂರಿನಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲ, ಪೊಲೀಸರು ಕೈ ಚೆಲ್ಲಿ ಕುಳಿತಿದ್ದಾರೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ (Siddaramaiah) ಮುಸ್ಲಿಂ ಮತಾಂಧರ ವಿರುದ್ಧದ ಪ್ರಕರಣಗಳನ್ನು ವಾಪಸ್‌ ಪಡೆಯುವುದರಿಂದ ಪೊಲೀಸರ ಮೇಲೂ ಹಲ್ಲೆ ಮಾಡುವಷ್ಟು ಧೈರ್ಯ ಮತಾಂಧರಿಗೆ ಬಂದಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಕ್ರೋಶ (R.Ashok) ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಕಾಂಗ್ರೆಸ್‌ (Congress) ಸರ್ಕಾರದಿಂದ ಕಾನೂನು ಸುವ್ಯವಸ್ಥೆ ಹದಗೆಟ್ಟು ಹಳ್ಳ ಹಿಡಿದಿದೆ. ಹುಬ್ಬಳ್ಳಿಯಲ್ಲಿ ಆದಂತೆಯೇ ಮೈಸೂರಿನಲ್ಲಿ (Mysuru) ಪೊಲೀಸರ ಮೇಲೆ ಹಲ್ಲೆ ನಡೆದಿದೆ. ರಾಹುಲ್‌ ಗಾಂಧಿ, ಕೇಜ್ರಿವಾಲ್‌ ಬಗ್ಗೆ ಪೋಸ್ಟ್‌ ಮಾಡಿದ್ದಾರೆಂಬ ಕಾರಣಕ್ಕೆ ಮತಾಂಧ ಮುಸ್ಲಿಮರು ಫೆ.10ರ ಸಂಜೆ 6-7 ಗಂಟೆ ಸಮಯದಲ್ಲಿ ಚೀಲಗಳಲ್ಲಿ ಕಲ್ಲು ತುಂಬಿಕೊಂಡು ಬಂದು ಪೊಲೀಸರ ಮೇಲೆ ದಾಳಿ ಮಾಡಿದ್ದಾರೆ. ಹಿಂದೂ ಸಮುದಾಯದ ಜನರಿಗೆ ಬೆದರಿಕೆ ಹಾಕಿದ್ದು, ಇಡೀ ಮೈಸೂರಿನಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ ಎಂದಿದ್ದಾರೆ.

ಹುಬ್ಬಳ್ಳಿ ಗಲಭೆಯಲ್ಲಿ ಭಾಗಿಯಾದವರ ವಿರುದ್ಧ ಇದ್ದ ಪ್ರಕರಣಗಳನ್ನು ಸಿದ್ದರಾಮಯ್ಯ ವಾಪಸ್‌ ಪಡೆದಿರುವುದರಿಂದ ಮುಸ್ಲಿಂ ಮತಾಂಧರಿಗೆ ಧೈರ್ಯ ಬಂದಿದೆ. ಜೊತೆಗೆ ಡಿ.ಕೆ.ಶಿವಕುಮಾರ್‌ ಸೇರಿದಂತೆ ಕಾಂಗ್ರೆಸ್‌ ನಾಯಕರು, ಇದು ಮುಸ್ಲಿಮರ ಸರ್ಕಾರ ಎಂದು ಹೇಳಿರುವುದರಿಂದ ಪೊಲೀಸ್‌ ಠಾಣೆಯನ್ನು ಧ್ವಂಸ ಮಾಡಬಹುದು ಎಂಬ ವಿಶ್ವಾಸ ಅವರಿಗೆ ಬಂದಿದೆ. ಒಂದೆಡೆ ಆರ್ಥಿಕ ದುಸ್ಥಿತಿ ಇದ್ದರೆ, ಮತ್ತೊಂದೆಡೆ ಕಾನೂನು ಹದಗೆಟ್ಟಿದೆ. ಈಗ ಮುಸ್ಲಿಮರ ವಿರುದ್ಧ ಪ್ರಕರಣ ದಾಖಲಿಸಿದರೂ, ಅದು ವ್ಯರ್ಥ ಎಂಬುದು ಪೊಲೀಸರಿಗೆ ಗೊತ್ತಾಗಿದೆ. ಪೊಲೀಸರ ಬಗ್ಗೆ ಭಯವೇ ಇಲ್ಲವೆಂದರೆ ಕಾನೂನು ಸತ್ತಿದೆ ಎಂದರ್ಥ. ಮತಬ್ಯಾಂಕ್‌ಗಾಗಿ ಇಡೀ ವ್ಯವಸ್ಥೆಯನ್ನು ಹಾಳು ಮಾಡಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

stone pelting in mysuru 1

ಮೈಸೂರಿನ ಹಿಂದೂಗಳ ರಕ್ಷಣೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿ. ಮೈಸೂರಿನ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರ ಜೊತೆಗೆ ಈಗಾಗಲೇ ಮಾತಾಡಿದ್ದೇನೆ. ಪೊಲೀಸರು ಕೈ ಚೆಲ್ಲಿ ಕುಳಿತಿರುವುದರಿಂದ ನಾವೇ ಶಾಂತಿ ಕಾಪಾಡಬೇಕಾಗಿದೆ. ನಾನು ಕೂಡ ಮೈಸೂರಿಗೆ ಭೇಟಿ ನೀಡುತ್ತೇನೆ. ಕೆಎಫ್‌ಡಿ, ಪಾಪ್ಯುಲರ್‌ ಫ್ರಂಟ್‌ ಮೊದಲಾದ ಸಂಘಟನೆಗಳು ಮೈಸೂರಿನಲ್ಲಿ ಸಕ್ರಿಯವಾಗಿವೆ. ಕೇರಳದಿಂದ ಬಂದು ಕೊಲೆ, ಅಪಹರಣ ಮಾಡಿ ಹೋಗಿರುವ ಘಟನೆಗಳು ನಡೆದಿವೆ ಎಂದಿದ್ದಾರೆ.

ಕಾಂಗ್ರೆಸ್‌ ಶಾಸಕರಿಗೆ ಆದಾಯವಿಲ್ಲ: ಕಾಂಗ್ರೆಸ್‌ ಶಾಸಕರಿಗೆ ಬೇರೆ ಆದಾಯವಿಲ್ಲ. ಆದ್ದರಿಂದ ವರ್ಗಾವಣೆ, ಮರಳು ಮಾಫಿಯಾ ಮೂಲಕ ಹಣ ಸಂಪಾದಿಸುತ್ತಿದ್ದಾರೆ. ಭದ್ರಾವತಿಯಲ್ಲೂ ಇಂಥದ್ದೇ ಘಟನೆ ನಡೆದಿದೆ. ಬೇರೆ ಜಿಲ್ಲೆಗಳಲ್ಲೂ ಅಧಿಕಾರಿಗಳಿಗೆ ಕಾಂಗ್ರೆಸ್‌ ಶಾಸಕರಿಂದ ಬೆದರಿಕೆ ಇದೆ. ಮಂಡ್ಯ, ಬೀದರ್‌, ಯಾದಗಿರಿ ಮೊದಲಾದ ಕಡೆ ಮರಳು ಮಾಫಿಯಾ ನಡೆಯುತ್ತಿದೆ. ಭದ್ರಾವತಿಯ ಮಹಿಳಾ ಅಧಿಕಾರಿ ರೆಕಾರ್ಡ್‌ ಮಾಡಿಕೊಂಡು ಧೈರ್ಯವಾಗಿ ಹೇಳಿದ್ದಾರೆ. ಉಳಿದ ಜಿಲ್ಲೆಗಳ ಅಧಿಕಾರಿಗಳು ವರ್ಗಾವಣೆ ಭಯದಿಂದ ಸುಮ್ಮನಾಗಿದ್ದಾರೆ ಎಂದು ಆರೋಪಿಸಿದ್ದಾರೆ.

ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತನ್ನು ಉಲ್ಲಂಘಿಸಿ ಕುಂಭಮೇಳಕ್ಕೆ ಭೇಟಿ ನೀಡಿದ್ದಾರೆ. ಜೊತೆಗೆ ಅಲ್ಲಿನ ವ್ಯವಸ್ಥೆಗೆ ಉತ್ತರ ಪ್ರದೇಶ ಸರ್ಕಾರವನ್ನು ಶ್ಲಾಘಿಸಿದ್ದಾರೆ. ಖರ್ಗೆಯವರದ್ದು ನಿಜವಾದ ಕಾಂಗ್ರೆಸ್ಸಾ? ಅಥವಾ ಡಿ.ಕೆ.ಶಿವಕುಮಾರ್‌ ಅವರದ್ದು ನಿಜವಾದ ಕಾಂಗ್ರೆಸ್ಸಾ? ಎಂದು ಅವರೇ ಹೇಳಬೇಕು. ಇಲ್ಲಿ ಯಾರನ್ನೂ ನಂಬಬೇಕು ಹಾಗೂ ಅನುಸರಿಸಬೇಕೆಂದು ಕಾಂಗ್ರೆಸ್‌ ಕಾರ್ಯಕರ್ತರಲ್ಲಿ ಗೊಂದಲ ಕಾಡುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ.

TAGGED:bjpcongressmysurusiddaramaiahUdayagiri Police Station
Share This Article
Facebook Whatsapp Whatsapp Telegram

You Might Also Like

05 1
Chamarajanagar

5 ಹುಲಿಗಳ ನಿಗೂಢ ಸಾವು ಬೆನ್ನಲ್ಲೇ ಬಂಡೀಪುರದಲ್ಲಿ ಮತ್ತೊಂದು ಹುಲಿ ಸಾವು

Public TV
By Public TV
2 hours ago
Puri Jagannath
Latest

ಪುರಿ ಜಗನ್ನಾಥ ರಥೋತ್ಸವ ವೇಳೆ ಕಾಲ್ತುಳಿತ – 600ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ, 40ಕ್ಕೂ ಹೆಚ್ಚು ಜನರ ಸ್ಥಿತಿ ಚಿಂತಾಜನಕ

Public TV
By Public TV
2 hours ago
Davanagere Congress
Crime

ದಾವಣಗೆರೆ | ಯೂತ್ ಕಾಂಗ್ರೆಸ್ ಕಾರ್ಯಕ್ರಮದಲ್ಲಿ `ಕೈ’ ಕಾರ್ಯಕರ್ತರ ಕಾಳಗ!

Public TV
By Public TV
3 hours ago
kolkata gangrape
Crime

ಕೋಲ್ಕತ್ತಾ ಗ್ಯಾಂಗ್‌ ರೇಪ್‌ | ಕಾಲಿಗೆ ಬಿದ್ದರೂ ನನ್ನನ್ನು ಬಿಡಲಿಲ್ಲ – ಸಂತ್ರಸ್ತೆ ದೂರಿನಲ್ಲಿ ಉಲ್ಲೇಖ

Public TV
By Public TV
3 hours ago
almatti dam
Districts

ಆಲಮಟ್ಟಿ ಡ್ಯಾಂಗೆ 1.15 ಲಕ್ಷ ಕ್ಯೂಸೆಕ್ ಒಳಹರಿವು

Public TV
By Public TV
3 hours ago
Siddaramaiah 9
Bengaluru City

ದ್ವೇಷ ಭಾಷಣ ಮಾಡುವವರ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಲು ಸಿಎಂ ಸೂಚನೆ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?