Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯ ಸರ್ಕಾರ ಪತ್ರ ಬರೆದರೆ ಮಾತ್ರ ಮೆಟ್ರೋ ದರ ಇಳಿಕೆ: ತೇಜಸ್ವಿ ಸೂರ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯ ಸರ್ಕಾರ ಪತ್ರ ಬರೆದರೆ ಮಾತ್ರ ಮೆಟ್ರೋ ದರ ಇಳಿಕೆ: ತೇಜಸ್ವಿ ಸೂರ್ಯ

Bengaluru City

ರಾಜ್ಯ ಸರ್ಕಾರ ಪತ್ರ ಬರೆದರೆ ಮಾತ್ರ ಮೆಟ್ರೋ ದರ ಇಳಿಕೆ: ತೇಜಸ್ವಿ ಸೂರ್ಯ

Public TV
Last updated: February 12, 2025 3:55 pm
Public TV
Share
2 Min Read
Tejasvi Surya
SHARE

– ಇದು ಆರೋಪದ ಸಮಯವಲ್ಲ, ಸಮಸ್ಯೆ ಬಗೆಹರಿಸಬೇಕು

ನವದೆಹಲಿ: ಮೆಟ್ರೋ (Namma Metro) ದರ ಏರಿಕೆ ಸಂಬಂಧ ಸಿಎಂ ಸಿದ್ದರಾಮಯ್ಯ (CM Siddaramaiah) ಪತ್ರ ಬರೆದರೆ ನಾಳೆಯೇ ಸಮಿತಿ ರಚನೆಯಾಗಲಿದೆ ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಸದಸ್ಯ ತೇಜಸ್ವಿ ಸೂರ್ಯ (Tejaswi Surya) ಹೇಳಿದ್ದಾರೆ.

ದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಈಗಾಗಿರುವ ದರ ಪರಿಷ್ಕರಣೆಯನ್ನುಮೆಟ್ರೋ ನಿಯಮಗಳಲ್ಲಿ ತಡೆ ಹಿಡಿಯಲು ಸಾಧ್ಯವಿಲ್ಲ. ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಬಹುದು. ಆದರೆ ಕೋರ್ಟ್ ಮಧ್ಯಪ್ರವೇಶ ಮಾಡುತ್ತಾ ಗೊತ್ತಿಲ್ಲ ಎಂದು ಹೇಳಿದರು.

ನಾನು ನಗರಾಭಿವೃದ್ಧಿ ಸಚಿವರನ್ನು ಭೇಟಿ ಮಾಡಿ ಮಾತನಾಡಿದ್ದೇವೆ. ಪ್ರಯಾಣಿಕರ ಸಂಖ್ಯೆ ಕುಸಿತದ ಬಗ್ಗೆಯೂ ಗಮನಕ್ಕೆ ತರಲಾಗಿದೆ. ಅವರು ರಾಜ್ಯ ಸರ್ಕಾರ ಮತ್ತೊಮ್ಮೆ ಪತ್ರ ಬರೆದು ದರ ಪರಿಷ್ಕರಣೆ ಮಾಡಲು ಮನವಿ ಮಾಡಿದರೆ ಮತ್ತೊಮ್ಮೆ ಸಮಿತಿ ರಚಿಸುವ ಭರವಸೆ ನೀಡಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರದಿಂದ ಸಿಎಂ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಬೇಕು. ಇದರಿಂದ ಮಾತ್ರ ದರ ಇಳಿಕೆ ಮಾತ್ರ ಸಾಧ್ಯ. ಈ ನಿಟ್ಟಿನಲ್ಲಿ ನಾವು ಒಟ್ಟಾಗಿ ಕೆಲಸ ಮಾಡಬೇಕಿದೆ ಎಂದು ಹೇಳಿದರು.

ಮೆಟ್ರೋ ದರಗಳು ಏರಿಕೆಯಾಗಿ ಜನರಿಗೆ ಸಮಸ್ಯೆಯಾಗಿದೆ. ಮಧ್ಯಮ ವರ್ಗದ ಜನರಿಗೆ ಇನ್ನು ತೊಂದರೆಯಾಗಿದೆ. ಏಕಾಏಕಿ ಮೆಟ್ರೋ ದರವನ್ನು 50%, 100% ಏರಿಕೆಯಾಗಿದೆ. ಸಂಬಳದ ದೊಡ್ಡ ಭಾಗ ಈಗ ಮೆಟ್ರೋಗೆ ಕೊಡಬೇಕಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

Namma Metro Purple Line

ರಾಜ್ಯ ಸರ್ಕಾರದ ನಿರ್ದೇಶನ ಮೇರೆಗೆ ಅಧಿಕಾರಿಗಳು ದರ ನಿಗದಿ ಮಾಡಲು ಸಮಿತಿ ರಚಿಸುವ ಪ್ರಕ್ರಿಯೆ ಶುರು ಮಾಡಿದರು. ಮೆಟ್ರೋ ಕಂಪನಿ ಮತ್ತು ರಾಜ್ಯ ಸರ್ಕಾರ ದರ ಏರಿಕೆಗೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಬೇಕು. ಅದರ ಆಧಾರದ ಮೇಲೆ ಕೇಂದ್ರ ಸರ್ಕಾರ ಸಮಿತಿ ರಚನೆ ಮಾಡುತ್ತದೆ. ಸಮಿತಿ ರಾಜ್ಯ ಸರ್ಕಾರ ಹಾಗೂ ಬಿಎಂಆರ್‌ಸಿಎಲ್‌ನಿಂದ ಮಾಹಿತಿ ಪಡೆದು ಪರಿಷ್ಕೃತ ದರ ಪಟ್ಟಿ ನಿಗದಿ ಮಾಡುತ್ತದೆ. ಸಮಿತಿ ನಿಗದಿ ಮಾಡಿದ ದರ ಪರಿಷ್ಕರಣೆಯನ್ನು ಅನುಷ್ಠಾನ ಮಾಡಬೇಕು ಎಂದು ಕಾನೂನು ಹೇಳುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ಮೆಟ್ರೋ ದರ ಏರಿಕೆ| ಬಿಜೆಪಿಯಿಂದ ತಿರುಚಿದ ಮಾಹಿತಿ – ಸಿದ್ದರಾಮಯ್ಯ ಕೆಂಡಾಮಂಡಲ

ಮಂಗಳವಾರ ಲೋಕಸಭೆಯಲ್ಲಿ ಈ ವಿಚಾರದ ಬಗ್ಗೆ ಮಾತನಾಡಿದ್ದೇನೆ. ಟ್ರಾಫಿಕ್ ಸಮಸ್ಯೆಗೆ ಜನರು ಮೆಟ್ರೋ ಬಳಸುತ್ತಾರೆ. ಆದರೆ ಈ ಪ್ರಮಾಣದಲ್ಲಿ ದರ ಏರಿಸಿದರೆ ಜನರು ಬೈಕಿನಲ್ಲಿ ಹೋಗುತ್ತಾರೆ. ಸಾರ್ವಜನಿಕ ಸಾರಿಗೆ ಪ್ರೊತ್ಸಾಹ ಮಾಡಬೇಕಿತ್ತು ಇದು ಸರ್ಕಾರದ ಕರ್ತವ್ಯ. ಆದರೆ ಇದು ಕೇಂದ್ರ ಸರ್ಕಾರದ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ ಎಂದು ದೂರಿದರು.

ದರ ಪರಿಷ್ಕರಣೆಗೆ ಪತ್ರ ಬರೆದಿದ್ದೆ ರಾಜ್ಯ ಸರ್ಕಾರ. ಈ ವಿಚಾರವನ್ನು ಅವರು ಹೇಳುತ್ತಿಲ್ಲ. ಬರೀ ಮೆಟ್ರೋ ಅಲ್ಲ ನೋಂದಣಿ ಶುಲ್ಕ, ವಾಹನ ನೋಂದಣಿ, ಆಸ್ಪತ್ರೆ ಸೇವಾ ಶುಲ್ಕ, ಕಾಲೇಜು ಫಿ, ಎಲೆಕ್ಟ್ರೀಕ್ ವಾಹನಗಳ ಮೇಲೂ ತೆರಿಗೆ ಹಾಕಿದೆ. ಈಗ ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡಲಾಗುತ್ತಿದೆ. ಇದು ಆರೋಪದ ಸಮಯ ಅಲ್ಲ, ಸಮಸ್ಯೆ ಬಗೆಹರಿಸಬೇಕು ಎಂದರು.

 

TAGGED:bengalurukarnatakanamma metroTejasvi Suryaಕರ್ನಾಟಕತೇಜಸ್ವಿ ಸೂರ್ಯನಮ್ಮ ಮೆಟ್ರೋಬೆಂಗಳೂರು
Share This Article
Facebook Whatsapp Whatsapp Telegram

Cinema news

karanya ram samruddhi
`ಬೆಟ್ಟಿಂಗ್‌ನಿಂದ ನನ್ನ ಫ್ಯಾಮಿಲಿ ಕಥೆ ಹೀಗಾಯ್ತು’: ಕೊನೆಗೂ ಸತ್ಯ ಬಾಯ್ಬಿಟ್ಟ ಕಾರುಣ್ಯ ರಾಮ್?
Cinema Latest Main Post Sandalwood
Pushpa2
ಜಪಾನ್‌ನಲ್ಲೂ ಪುಷ್ಪಾ ಹವಾ – ಪ್ರೀಮಿಯರ್‌ಗೆ ಭರ್ಜರಿ ರೆಸ್ಪಾನ್ಸ್..!
Cinema Latest South cinema Top Stories
Gill and Ashwini Gowda
ಕಿತ್ತಾಟದಿಂದ ಕ್ಷಮೆಯತ್ತ – ಒಬ್ಬರಿಗೊಬ್ಬರು Sorry ಕೇಳಿ, ನಗುವಿನ ಅಪ್ಪುಗೆ ನೀಡಿದ ಗಿಲ್ಲಿ, ಅಶ್ವಿನಿ
Cinema Latest Main Post Sandalwood TV Shows
Karunya Ram Samrudhi Ram
25 ಲಕ್ಷ ವಂಚನೆ – ತಂಗಿ ವಿರುದ್ಧವೇ ನಟಿ ಕಾರುಣ್ಯಾ ರಾಮ್‌ ದೂರು
Cinema Crime Latest Main Post Sandalwood

You Might Also Like

Raichuru Siddaramanand Swamiji
Districts

ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಸಿದ್ದರಾಮನಂದ ಶ್ರೀಗಳ ಅಂತ್ಯಕ್ರಿಯೆ

Public TV
By Public TV
12 minutes ago
Kodagu Tourist Place
Districts

Kodagu | ಕಳೆದ ವರ್ಷ ಕೊಡಗಿಗೆ 43 ಲಕ್ಷ ಪ್ರವಾಸಿಗರ ಭೇಟಿ

Public TV
By Public TV
31 minutes ago
shidlaghatta City Municipal Council Commissioner Amrutha Gowda receives death threat from Congress Leader Rajeev Gowda 1
Bengaluru City

ಫ್ಲೆಕ್ಸ್‌ ತೆರವು ವಿಚಾರಕ್ಕೆ ಪೌರಾಯುಕ್ತೆಗೆ ಧಮ್ಕಿ; ರಾಜೀವ್‌ ಗೌಡಗೆ ಕೆಪಿಸಿಸಿ ನೋಟಿಸ್‌ ಜಾರಿ

Public TV
By Public TV
55 minutes ago
iran protest 1
Latest

ಇರಾನ್‌ನಲ್ಲಿರೋ ಭಾರತೀಯರ ಸ್ಥಳಾಂತರಕ್ಕೆ ಕೇಂದ್ರ ಸಿದ್ಧತೆ; ನಾಳೆ ಮೊದಲ ಬ್ಯಾಚ್‌ ಆಗಮನದ ನಿರೀಕ್ಷೆ

Public TV
By Public TV
57 minutes ago
Army Day Thawar Chand Gehlot
Bengaluru City

ಭಾರತೀಯ ಸೇನೆಯು ಯುವ ಪೀಳಿಗೆಗೆ ಮಾದರಿ: ರಾಜ್ಯಪಾಲ

Public TV
By Public TV
58 minutes ago
Crime 1
Crime

ಸಂಬಂಧಿ ಮೇಲೆ ನಿರಂತರ ಅತ್ಯಾಚಾರ – ವೀಡಿಯೊ ಮಾಡಿ ಪೋಸ್ಟ್‌ ಮಾಡ್ತಿದ್ದ ಕಾಮುಕ ಅರೆಸ್ಟ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?