Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ನಗರಗಳಿಗೆ ಹೆಚ್ಚುತ್ತಿರುವ ವಲಸೆ ಬಗ್ಗೆ ಕಳವಳ; ಅನಾರೋಗ್ಯದ ನಡುವೆಯೂ ಬಜೆಟ್ ಚರ್ಚೆಯಲ್ಲಿ ಪಾಲ್ಗೊಂಡ ಹೆಚ್‌ಡಿಡಿ

Public TV
Last updated: February 13, 2025 11:40 pm
Public TV
Share
3 Min Read
HD DEVEGOWDA 2
SHARE

– ಗ್ರಾಮೀಣಾಭಿವೃದ್ಧಿ, MSME ಗಳಿಗೆ ಬೆಂಬಲ,
– ನೀರಿನ ಭದ್ರತೆಗೆ ತುರ್ತು ಕ್ರಮ ವಹಿಸಲು ಕೇಂದ್ರಕ್ಕೆ ಸಲಹೆ
– ಗೋದಾವರಿ – ಕಾವೇರಿ ನದಿಗಳ ಜೋಡಣೆಗೆ ಮನವಿ

ನವದೆಹಲಿ: ಅನಾರೋಗ್ಯದ ನಡುವೆಯೂ ರಾಜ್ಯಸಭೆಯಲ್ಲಿ ಗುರುವಾರ ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡಿದ್ದ ಮಾಜಿ ಪ್ರಧಾನಿಗಳಾದ ಹೆಚ್.ಡಿ ದೇವೇಗೌಡರು ಇಡೀ ರಾಷ್ಟ್ರದ ಎಲ್ಲಾ ವರ್ಗಗಳ ಜನರಿಗೆ ಶಕ್ತಿ ತುಂಬುವ ಆಯವ್ಯಯ ಮಂಡಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಆ ಸಂದರ್ಭದಲ್ಲಿ ಸದನದಲ್ಲಿಯೇ ಹಾಜರಿದ್ದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಮಾಜಿ ಪ್ರಧಾನಿಗಳು, ಎಲ್ಲರಿಗೂ ಅನುಕೂಲ ಆಗುವಂತಹ, ದೇಶದ ಅಭಿವೃದ್ಧಿಗೆ ದೂರದೃಷ್ಟಿಯ ಕೊಡುಗೆ ನೀಡುವಂತಹ ಬಜೆಟ್ ಮಂಡಿಸಿದ್ದೀರಿ. ಜನರ ಹಿತಾಸಕ್ತಿಯನ್ನು ಕಾಪಾಡಲು ವಿತ್ತ ಸಚಿವರು ತಮ್ಮ ಕೈಲಾದ ಎಲ್ಲವನ್ನೂ ಮಾಡಿದ್ದಾರೆ. ನಾನು ಅವರನ್ನು ಅಭಿನಂದಿಸುತ್ತೇನೆ ಎಂದು ಅವರು ಹೇಳಿದರು.

ನಗರಗಳಿಗೆ ವಲಸೆ ಬಗ್ಗೆ ಕಳವಳ:
ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಭಾಗದಿಂದ ಯುವಜನರು ನಗರಗಳಿಗೆ ವಲಸೆ ಬರುವವರ ಪ್ರಮಾಣ ಹೆಚ್ಚುತ್ತಲೇ ಇದೆ ಎಂದು ದೇವೇಗೌಡರು ಕಳವಳ ವ್ಯಕ್ತಪಡಿಸಿದರು.

ಬೆಂಗಳೂರಿನ ಜನಸಂಖ್ಯೆ ಈಗ 1.4 ಕೋಟಿಗೆ ಮುಟ್ಟಿದೆ. ಎಲ್ಲಾ ಯುವಕರು ತಮ್ಮ ವಿದ್ಯಾಭ್ಯಾಸ ಮುಗಿದ ತಕ್ಷಣ ಹಳ್ಳಿಗಳನ್ನು ತೊರೆದು ನಗರಗಳಿಗೆ ಬಂದು ಸೇರುತ್ತಿದ್ದಾರೆ. ಇದು ಜೀವನೋಪಾಯದ ಸಮತೋಲನವನ್ನು ತಪ್ಪಿಸುತ್ತಿದೆ. ಯುವಕರಿಗೆ ತಮ್ಮ ಪ್ರದೇಶಗಳಿಗಳಲ್ಲಿಯೇ ಹೆಚ್ಚೆಚ್ಚು ಉದ್ಯೋಗವಕಾಶ ಕಲ್ಪಿಸುವ ಅಗತ್ಯವಿದೆ ಎಂದು ಮಾಜಿ ಪ್ರಧಾನಿಗಳು ಸಲಹೆ ನೀಡಿದರು.

ಸಮತೋಲಿತ ಜೀವನೋಪಾಯ ಸೃಷ್ಟಿ ಮಾಡುವ ನಿಟ್ಟಿನಲ್ಲಿ ಅತಿ ಸಣ್ಣ, ಸಣ್ಣ ಮತ್ತು ಮಧ್ಯಮ ಗಾತ್ರದ ಉದ್ಯಮಗಳನ್ನು (MSME) ಬೆಂಬಲಿಸಲು ಹೆಚ್ಚು ಸೂಕ್ತವಾದ ಉಪಕ್ರಮಗಳನ್ನು ಕೈಗೊಳ್ಳಬೇಕಾದ ಅಗತ್ಯವನ್ನು ಮಾಜಿ ಪ್ರಧಾನಿಗಳು ಒತ್ತಿ ಹೇಳಿದರು. `ಹಣಕಾಸು ಬೆಂಬಲ ಪಡೆಯುವಲ್ಲಿ ಅತಿಸಣ್ಣ, ಸಣ್ಣ ಕೈಗಾರಿಕೆಗಳು ಮಧ್ಯಮ ಗಾತ್ರದ ಕೈಗಾರಿಕೆಗಳೊಂದಿಗೆ ಸ್ಪರ್ಧಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಈ ಉದ್ದೇಶಕ್ಕಾಗಿ ಪ್ರತ್ಯೇಕ ನೀತಿ, ಕಾರ್ಯಕ್ರಮಗಳನ್ನು ರೂಪಿಸುವ ಅಗತ್ಯ ತುಂಬಾ ಇದೆ ಎಂದು ಮಾಜಿ ಪ್ರಧಾನಿಗಳು ಹೇಳಿದರು.

ಅತಿ ಸಣ್ಣ, ಸಣ್ಣ ಕೈಗಾರಿಕೆಗಳಿಗೆ ಸಾಲದ ಅನುಮೋದನೆ ನೀಡುವಾಗ ಸಿಬಿಲ್ (CIBIL) ಸ್ಕೋರ್‌ ಮಾನದಂಡವನ್ನು ಪರಿಗಣಿಸಬಾರದು. ಬಡ್ಡಿದರಗಳನ್ನು ಶೇ.7ರಿಂದ 8ಕ್ಕೆ ಇಳಿಸಬೇಕು ಮತ್ತು ಆರಂಭಿಕ ಸಾಲ ಮರುಪಾವತಿಗಾಗಿ ಸ್ವತ್ತುಗಳ ಮರುಸ್ವಾಧೀನ ದಂಡ ಪ್ರಯೋಗವನ್ನು ಕೈಬಿಡಬೇಕು ಎಂದು ದೇವೇಗೌಡರು ಸರಕಾರವನ್ನು ಒತ್ತಾಯಿಸಿದರು.

ಹಲಸಿನ ಹಣ್ಣು, ನೇರಳೆ, ಹುಣಸೆಹಣ್ಣು ಮಂಡಳಿ ರಚಿಸಿ:
ಕೃಷಿ ಉತ್ಪನ್ನಗಳಿಗೆ ನಾವು ಹೆಚ್ಚು ಬೆಂಬಲ ನೀಡುವುದನ್ನು ನಾವು ಮುಂದುವರಿಸಬೇಕು. ಬಿಹಾರದಲ್ಲಿ ಮಖಾನಾ ಮಂಡಳಿ ರಚನೆ ಮಾಡಿರುವುದನ್ನು ನಾನು ಸ್ವಾಗತ ಮಾಡುತ್ತೇನೆ ಎಂದ ದೇವೇಗೌಡರು, ಅದೇ ರೀತಿ ಹಲಸಿನ ಹಣ್ಣು, ನೇರಳೆ, ಹುಣಸೆಹಣ್ಣು ಮಂಡಳಿ ರಚಿಸಬೇಕು ಎಂದು ಒತ್ತಾಯ ಮಾಡಿದರು.

ಅತಿ ಕಡಿಮೆ ಬಂಡವಾಳದಿಂದ ಮಖಾನಾ ಬೆಳೆಯಲಾಗುತ್ತಿದೆ. ಇದರಿಂದ ರೈತರಿಗೆ ಹೆಚ್ಚು ಅನುಕೂಲ ಆಗುತ್ತಿದೆ. ಮಂಡಳಿ ರಚನೆಯಿಂದ ಮತ್ತಷ್ಟು ಅನುಕೂಲ ಆಗುತ್ತದೆ. ಹೀಗಿದ್ದ ಮೇಲೆ ಕನಿಷ್ಠ ಬಂಡವಾಳದಿಂದ ನೈಸರ್ಗಿಕವಾಗಿ ಬೆಳೆಯಲಾಗುವ ಹಲಸಿನ ಹಣ್ಣು, ನೇರಳೆ ಹಾಗೂ ಹುಣಸೆಹಣ್ಣು ಮಂಡಳಿಯನ್ನು ರಚಿಸಬಾರದೇಕೆ ಎಂದು ಮಾಜಿ ಪ್ರಧಾನಿಗಳು ಸಲಹೆ ನೀಡಿದರು.

ಬೆಂಗಳೂರು ನೀರಿನ ಸಮಸ್ಯೆ – ಪುನಾ ಪ್ರಸ್ತಾಪಿಸಿದ ದೇವೇಗೌಡರು:
ರಾಜ್ಯಸಭೆಯಲ್ಲಿ ಮತ್ತೊಮ್ಮೆ ಬೆಂಗಳೂರಿನ ಕುಡಿಯುವ ನೀರಿನ ಬವಣೆಯ ಬಗ್ಗೆ ಗಮನ ಸೆಳೆದರು ಮಾಜಿ ಪ್ರಧಾನಿಗಳು. ಬೆಂಗಳೂರಿನಲ್ಲಿ ನೀರಿನ ಟ್ಯಾಂಕರ್‌ಗಳು ಬಡ ನಿವಾಸಿಗಳನ್ನು ಶೋಷಿಸುತ್ತಿವೆ ಎಂಬ ಅಂಶವನ್ನು ಸದನದ ಗಮನಕ್ಕೆ ತಂದ ಅವರು; ಹಣಕಾಸು ಸಚಿವರು ಕುಡಿಯುವ ನೀರಿನ ಯೋಜನೆಗಳಿಗೆ 1,400 ಕೋಟಿ ರೂ. ಮಂಜೂರು ಮಾಡಿದ್ದಾರೆ. ಆದರೆ ದೀರ್ಘಾವಧಿಯ ನೀರಿನ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಗೋದಾವರಿ-ಕಾವೇರಿ ಜೋಡಣೆಗೆ ಆದ್ಯತೆ ನೀಡಬೇಕು ಎಂದು ಅವರು ಒತ್ತಿ ಹೇಳಿದರು.

ನದಿ ಜಲ ಸಂಪನ್ಮೂಲ ಸದ್ವಿಯೋಗಕ್ಕೆ ಎಲ್ಲಾ ಪರಿಣಾಮಕಾರಿ ಕ್ರಮಗಳ ಅಗತ್ಯವಿದೆ. ಅದಕ್ಕೆ ದೀರ್ಘಾವಧಿ ಕಾರ್ಯಕ್ರಮಗಳ ಅನುಷ್ಠಾನ ಅಗತ್ಯವಿದೆ. ಈ ನಿಟ್ಟಿನಲ್ಲಿ ಗೋದಾವರಿ-ಕಾವೇರಿ ನದಿ ಜೋಡಣೆ ಯೋಜನೆಗೆ ಆದ್ಯತೆ ನೀಡಬೇಕು ಎಂದು ಅವರು ಹೇಳಿದರು. ತಮ್ಮ ಭಾಷಣದ ಕೊನೆಯಲ್ಲಿ ದೀರ್ಘಾವಧಿಯ ಆರ್ಥಿಕ ಸ್ಥಿರತೆಯತ್ತ ಗಮನ ಹರಿಸುವಂತೆ ಸರಕಾರಕ್ಕೆ ಸಲಹೆ ನೀಡಿದರಲ್ಲದೆ, ನಾವು ಅಲ್ಪಾವಧಿಯ ಜನಪರ ಕ್ರಮಗಳನ್ನು ಮೀರಿ ಮುನ್ನಡೆಯಬೇಕು ಮತ್ತು ಭವಿಷ್ಯದ ಪೀಳಿಗೆಗೆ ಆಸ್ತಿಗಳನ್ನು ನಿರ್ಮಿಸಬೇಕು ಎಂದರು.

ಗ್ರಾಮೀಣ ಪ್ರದೇಶಗಳ ಅಭಿವೃದ್ಧಿ, ಸಣ್ಣ ಅತಿ ಸಣ್ಣ ಕೈಗಾರಿಕೆಗಳಿಗೆ ಬೆಂಬಲ ಹಾಗೂ ಅತ್ಯಂತ ಪ್ರಮುಖವಾದ ನೀರಿನ ಭದ್ರತೆಗೆ ಸರಕಾರದ ಕಡೆಯಿಂದ ತಕ್ಷಣದ ಕ್ರಮಗಳು ಆಗಬೇಕಿದೆ ಎಂದು ಅವರು ಪ್ರತಿಪಾದಿಸಿದರು.

TAGGED:Budget SessionHD DevegowdaNirmala Sitharamanನಿರ್ಮಲಾ ಸೀತಾರಾಮನ್ಬಜೆಟ್ ಅಧಿವೇಶನಹೆಚ್‍ಡಿ ದೇವೇಗೌಡ
Share This Article
Facebook Whatsapp Whatsapp Telegram

Cinema Updates

Ramya 2
ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುತ್ತೆ ಎಂದು ನಂಬಿದ್ದೇನೆ: ರಮ್ಯಾ
Cinema Karnataka Latest Main Post
Darshan Vijayalakshmi
ಥಾಯ್ಲೆಂಡ್‌ನಲ್ಲಿ ಮ್ಯಾಂಗೋ ಸ್ಟಿಕ್ಕಿ ರೈಸ್ ಸವಿದ ದರ್ಶನ್ ವಿಜಯಲಕ್ಷ್ಮಿ
Cinema Latest Sandalwood Top Stories
Darshan Pavithra
ದರ್ಶನ್‌-ಪವಿತ್ರಾ ಲಿವ್‌ ಇನ್‌ ರಿಲೇಷನ್‌ ಶಿಪ್‌ನಲ್ಲಿದ್ದರು: ಸರ್ಕಾರ ಪರ ವಕೀಲ
Bengaluru City Cinema Court Latest Main Post National Sandalwood
Darshan Court
ದರ್ಶನ್‌ ಜಾಮೀನು ಭವಿಷ್ಯ | ನಾವು ಹೈಕೋರ್ಟ್ ಮಾಡಿದ ತಪ್ಪು ಮಾಡಲ್ಲ, ತರಾತುರಿಯಲ್ಲಿ ಆದೇಶ ಕೊಡಲ್ಲ – ಸುಪ್ರೀಂ
Bengaluru City Cinema Court Latest Main Post National Sandalwood
Appu Cup League
ಅಪ್ಪು ಕಪ್ ಸೀಸನ್ 3; ಜರ್ಸಿ ಅನಾವರಣ
Bengaluru City Cinema Karnataka Latest Top Stories

You Might Also Like

Biklu Shiva
Bengaluru City

ಬಿಕ್ಲು ಶಿವ ಕೊಲೆ ಕೇಸ್‌ – ಮತ್ತೊಂದು ರಹಸ್ಯ ಸ್ಫೋಟ, ಕೊಲೆಯಾದ 15 ನಿಮಿಷಕ್ಕೆ ಎ1 ಜಗ್ಗ ಎಸ್ಕೇಪ್‌

Public TV
By Public TV
14 minutes ago
AI ಚಿತ್ರ
Latest

ಉಡುಪಿಯಲ್ಲಿ ಭಾರೀ ಮಳೆ – ಬೈಂದೂರು ತಾಲೂಕಿನ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ

Public TV
By Public TV
33 minutes ago
human bridge punjab
Latest

ರಸ್ತೆ ಕುಸಿದು ಉಕ್ಕಿ ಹರಿದ ನೀರು – ಮಾನವ ಸೇತುವೆ ನಿರ್ಮಿಸಿ 35 ಶಾಲಾ ಮಕ್ಕಳನ್ನು ರಸ್ತೆ ದಾಟಿಸಿದ ಗ್ರಾಮಸ್ಥರು

Public TV
By Public TV
53 minutes ago
Amit Shah 1
Latest

ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ 6 ತಿಂಗಳು ವಿಸ್ತರಣೆ – ಸದನದಲ್ಲಿ ಅನುಮೋದನೆ

Public TV
By Public TV
59 minutes ago
Digital Arrest 2
Crime

Digital Arrest | ಸಿಬಿಐ ಅಧಿಕಾರಿ ಸೋಗಿನಲ್ಲಿ ಕರೆ – ಬ್ಯಾಂಕ್‌ ಅಧಿಕಾರಿಗೆ 56 ಲಕ್ಷಕ್ಕೂ ಅಧಿಕ ಹಣ ವಂಚನೆ

Public TV
By Public TV
2 hours ago
captain brijesh chowta nitin gadkari
Dakshina Kannada

ಸಂಸತ್‌ ಕಚೇರಿಯಲ್ಲಿ ನಿತಿನ್‌ ಗಡ್ಕರಿ ಭೇಟಿಯಾದ ಕ್ಯಾ.ಬ್ರಿಜೇಶ್‌ ಚೌಟ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?