Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಗರಗಳಿಗೆ ಹೆಚ್ಚುತ್ತಿರುವ ವಲಸೆ ಬಗ್ಗೆ ಕಳವಳ; ಅನಾರೋಗ್ಯದ ನಡುವೆಯೂ ಬಜೆಟ್ ಚರ್ಚೆಯಲ್ಲಿ ಪಾಲ್ಗೊಂಡ ಹೆಚ್‌ಡಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ನಗರಗಳಿಗೆ ಹೆಚ್ಚುತ್ತಿರುವ ವಲಸೆ ಬಗ್ಗೆ ಕಳವಳ; ಅನಾರೋಗ್ಯದ ನಡುವೆಯೂ ಬಜೆಟ್ ಚರ್ಚೆಯಲ್ಲಿ ಪಾಲ್ಗೊಂಡ ಹೆಚ್‌ಡಿಡಿ

Latest

ನಗರಗಳಿಗೆ ಹೆಚ್ಚುತ್ತಿರುವ ವಲಸೆ ಬಗ್ಗೆ ಕಳವಳ; ಅನಾರೋಗ್ಯದ ನಡುವೆಯೂ ಬಜೆಟ್ ಚರ್ಚೆಯಲ್ಲಿ ಪಾಲ್ಗೊಂಡ ಹೆಚ್‌ಡಿಡಿ

Public TV
Last updated: February 13, 2025 11:40 pm
Public TV
Share
3 Min Read
HD DEVEGOWDA 2
SHARE

– ಗ್ರಾಮೀಣಾಭಿವೃದ್ಧಿ, MSME ಗಳಿಗೆ ಬೆಂಬಲ,
– ನೀರಿನ ಭದ್ರತೆಗೆ ತುರ್ತು ಕ್ರಮ ವಹಿಸಲು ಕೇಂದ್ರಕ್ಕೆ ಸಲಹೆ
– ಗೋದಾವರಿ – ಕಾವೇರಿ ನದಿಗಳ ಜೋಡಣೆಗೆ ಮನವಿ

ನವದೆಹಲಿ: ಅನಾರೋಗ್ಯದ ನಡುವೆಯೂ ರಾಜ್ಯಸಭೆಯಲ್ಲಿ ಗುರುವಾರ ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡಿದ್ದ ಮಾಜಿ ಪ್ರಧಾನಿಗಳಾದ ಹೆಚ್.ಡಿ ದೇವೇಗೌಡರು ಇಡೀ ರಾಷ್ಟ್ರದ ಎಲ್ಲಾ ವರ್ಗಗಳ ಜನರಿಗೆ ಶಕ್ತಿ ತುಂಬುವ ಆಯವ್ಯಯ ಮಂಡಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಆ ಸಂದರ್ಭದಲ್ಲಿ ಸದನದಲ್ಲಿಯೇ ಹಾಜರಿದ್ದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಮಾಜಿ ಪ್ರಧಾನಿಗಳು, ಎಲ್ಲರಿಗೂ ಅನುಕೂಲ ಆಗುವಂತಹ, ದೇಶದ ಅಭಿವೃದ್ಧಿಗೆ ದೂರದೃಷ್ಟಿಯ ಕೊಡುಗೆ ನೀಡುವಂತಹ ಬಜೆಟ್ ಮಂಡಿಸಿದ್ದೀರಿ. ಜನರ ಹಿತಾಸಕ್ತಿಯನ್ನು ಕಾಪಾಡಲು ವಿತ್ತ ಸಚಿವರು ತಮ್ಮ ಕೈಲಾದ ಎಲ್ಲವನ್ನೂ ಮಾಡಿದ್ದಾರೆ. ನಾನು ಅವರನ್ನು ಅಭಿನಂದಿಸುತ್ತೇನೆ ಎಂದು ಅವರು ಹೇಳಿದರು.

ನಗರಗಳಿಗೆ ವಲಸೆ ಬಗ್ಗೆ ಕಳವಳ:
ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಭಾಗದಿಂದ ಯುವಜನರು ನಗರಗಳಿಗೆ ವಲಸೆ ಬರುವವರ ಪ್ರಮಾಣ ಹೆಚ್ಚುತ್ತಲೇ ಇದೆ ಎಂದು ದೇವೇಗೌಡರು ಕಳವಳ ವ್ಯಕ್ತಪಡಿಸಿದರು.

ಬೆಂಗಳೂರಿನ ಜನಸಂಖ್ಯೆ ಈಗ 1.4 ಕೋಟಿಗೆ ಮುಟ್ಟಿದೆ. ಎಲ್ಲಾ ಯುವಕರು ತಮ್ಮ ವಿದ್ಯಾಭ್ಯಾಸ ಮುಗಿದ ತಕ್ಷಣ ಹಳ್ಳಿಗಳನ್ನು ತೊರೆದು ನಗರಗಳಿಗೆ ಬಂದು ಸೇರುತ್ತಿದ್ದಾರೆ. ಇದು ಜೀವನೋಪಾಯದ ಸಮತೋಲನವನ್ನು ತಪ್ಪಿಸುತ್ತಿದೆ. ಯುವಕರಿಗೆ ತಮ್ಮ ಪ್ರದೇಶಗಳಿಗಳಲ್ಲಿಯೇ ಹೆಚ್ಚೆಚ್ಚು ಉದ್ಯೋಗವಕಾಶ ಕಲ್ಪಿಸುವ ಅಗತ್ಯವಿದೆ ಎಂದು ಮಾಜಿ ಪ್ರಧಾನಿಗಳು ಸಲಹೆ ನೀಡಿದರು.

ಸಮತೋಲಿತ ಜೀವನೋಪಾಯ ಸೃಷ್ಟಿ ಮಾಡುವ ನಿಟ್ಟಿನಲ್ಲಿ ಅತಿ ಸಣ್ಣ, ಸಣ್ಣ ಮತ್ತು ಮಧ್ಯಮ ಗಾತ್ರದ ಉದ್ಯಮಗಳನ್ನು (MSME) ಬೆಂಬಲಿಸಲು ಹೆಚ್ಚು ಸೂಕ್ತವಾದ ಉಪಕ್ರಮಗಳನ್ನು ಕೈಗೊಳ್ಳಬೇಕಾದ ಅಗತ್ಯವನ್ನು ಮಾಜಿ ಪ್ರಧಾನಿಗಳು ಒತ್ತಿ ಹೇಳಿದರು. `ಹಣಕಾಸು ಬೆಂಬಲ ಪಡೆಯುವಲ್ಲಿ ಅತಿಸಣ್ಣ, ಸಣ್ಣ ಕೈಗಾರಿಕೆಗಳು ಮಧ್ಯಮ ಗಾತ್ರದ ಕೈಗಾರಿಕೆಗಳೊಂದಿಗೆ ಸ್ಪರ್ಧಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಈ ಉದ್ದೇಶಕ್ಕಾಗಿ ಪ್ರತ್ಯೇಕ ನೀತಿ, ಕಾರ್ಯಕ್ರಮಗಳನ್ನು ರೂಪಿಸುವ ಅಗತ್ಯ ತುಂಬಾ ಇದೆ ಎಂದು ಮಾಜಿ ಪ್ರಧಾನಿಗಳು ಹೇಳಿದರು.

ಅತಿ ಸಣ್ಣ, ಸಣ್ಣ ಕೈಗಾರಿಕೆಗಳಿಗೆ ಸಾಲದ ಅನುಮೋದನೆ ನೀಡುವಾಗ ಸಿಬಿಲ್ (CIBIL) ಸ್ಕೋರ್‌ ಮಾನದಂಡವನ್ನು ಪರಿಗಣಿಸಬಾರದು. ಬಡ್ಡಿದರಗಳನ್ನು ಶೇ.7ರಿಂದ 8ಕ್ಕೆ ಇಳಿಸಬೇಕು ಮತ್ತು ಆರಂಭಿಕ ಸಾಲ ಮರುಪಾವತಿಗಾಗಿ ಸ್ವತ್ತುಗಳ ಮರುಸ್ವಾಧೀನ ದಂಡ ಪ್ರಯೋಗವನ್ನು ಕೈಬಿಡಬೇಕು ಎಂದು ದೇವೇಗೌಡರು ಸರಕಾರವನ್ನು ಒತ್ತಾಯಿಸಿದರು.

ಹಲಸಿನ ಹಣ್ಣು, ನೇರಳೆ, ಹುಣಸೆಹಣ್ಣು ಮಂಡಳಿ ರಚಿಸಿ:
ಕೃಷಿ ಉತ್ಪನ್ನಗಳಿಗೆ ನಾವು ಹೆಚ್ಚು ಬೆಂಬಲ ನೀಡುವುದನ್ನು ನಾವು ಮುಂದುವರಿಸಬೇಕು. ಬಿಹಾರದಲ್ಲಿ ಮಖಾನಾ ಮಂಡಳಿ ರಚನೆ ಮಾಡಿರುವುದನ್ನು ನಾನು ಸ್ವಾಗತ ಮಾಡುತ್ತೇನೆ ಎಂದ ದೇವೇಗೌಡರು, ಅದೇ ರೀತಿ ಹಲಸಿನ ಹಣ್ಣು, ನೇರಳೆ, ಹುಣಸೆಹಣ್ಣು ಮಂಡಳಿ ರಚಿಸಬೇಕು ಎಂದು ಒತ್ತಾಯ ಮಾಡಿದರು.

ಅತಿ ಕಡಿಮೆ ಬಂಡವಾಳದಿಂದ ಮಖಾನಾ ಬೆಳೆಯಲಾಗುತ್ತಿದೆ. ಇದರಿಂದ ರೈತರಿಗೆ ಹೆಚ್ಚು ಅನುಕೂಲ ಆಗುತ್ತಿದೆ. ಮಂಡಳಿ ರಚನೆಯಿಂದ ಮತ್ತಷ್ಟು ಅನುಕೂಲ ಆಗುತ್ತದೆ. ಹೀಗಿದ್ದ ಮೇಲೆ ಕನಿಷ್ಠ ಬಂಡವಾಳದಿಂದ ನೈಸರ್ಗಿಕವಾಗಿ ಬೆಳೆಯಲಾಗುವ ಹಲಸಿನ ಹಣ್ಣು, ನೇರಳೆ ಹಾಗೂ ಹುಣಸೆಹಣ್ಣು ಮಂಡಳಿಯನ್ನು ರಚಿಸಬಾರದೇಕೆ ಎಂದು ಮಾಜಿ ಪ್ರಧಾನಿಗಳು ಸಲಹೆ ನೀಡಿದರು.

ಬೆಂಗಳೂರು ನೀರಿನ ಸಮಸ್ಯೆ – ಪುನಾ ಪ್ರಸ್ತಾಪಿಸಿದ ದೇವೇಗೌಡರು:
ರಾಜ್ಯಸಭೆಯಲ್ಲಿ ಮತ್ತೊಮ್ಮೆ ಬೆಂಗಳೂರಿನ ಕುಡಿಯುವ ನೀರಿನ ಬವಣೆಯ ಬಗ್ಗೆ ಗಮನ ಸೆಳೆದರು ಮಾಜಿ ಪ್ರಧಾನಿಗಳು. ಬೆಂಗಳೂರಿನಲ್ಲಿ ನೀರಿನ ಟ್ಯಾಂಕರ್‌ಗಳು ಬಡ ನಿವಾಸಿಗಳನ್ನು ಶೋಷಿಸುತ್ತಿವೆ ಎಂಬ ಅಂಶವನ್ನು ಸದನದ ಗಮನಕ್ಕೆ ತಂದ ಅವರು; ಹಣಕಾಸು ಸಚಿವರು ಕುಡಿಯುವ ನೀರಿನ ಯೋಜನೆಗಳಿಗೆ 1,400 ಕೋಟಿ ರೂ. ಮಂಜೂರು ಮಾಡಿದ್ದಾರೆ. ಆದರೆ ದೀರ್ಘಾವಧಿಯ ನೀರಿನ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಗೋದಾವರಿ-ಕಾವೇರಿ ಜೋಡಣೆಗೆ ಆದ್ಯತೆ ನೀಡಬೇಕು ಎಂದು ಅವರು ಒತ್ತಿ ಹೇಳಿದರು.

ನದಿ ಜಲ ಸಂಪನ್ಮೂಲ ಸದ್ವಿಯೋಗಕ್ಕೆ ಎಲ್ಲಾ ಪರಿಣಾಮಕಾರಿ ಕ್ರಮಗಳ ಅಗತ್ಯವಿದೆ. ಅದಕ್ಕೆ ದೀರ್ಘಾವಧಿ ಕಾರ್ಯಕ್ರಮಗಳ ಅನುಷ್ಠಾನ ಅಗತ್ಯವಿದೆ. ಈ ನಿಟ್ಟಿನಲ್ಲಿ ಗೋದಾವರಿ-ಕಾವೇರಿ ನದಿ ಜೋಡಣೆ ಯೋಜನೆಗೆ ಆದ್ಯತೆ ನೀಡಬೇಕು ಎಂದು ಅವರು ಹೇಳಿದರು. ತಮ್ಮ ಭಾಷಣದ ಕೊನೆಯಲ್ಲಿ ದೀರ್ಘಾವಧಿಯ ಆರ್ಥಿಕ ಸ್ಥಿರತೆಯತ್ತ ಗಮನ ಹರಿಸುವಂತೆ ಸರಕಾರಕ್ಕೆ ಸಲಹೆ ನೀಡಿದರಲ್ಲದೆ, ನಾವು ಅಲ್ಪಾವಧಿಯ ಜನಪರ ಕ್ರಮಗಳನ್ನು ಮೀರಿ ಮುನ್ನಡೆಯಬೇಕು ಮತ್ತು ಭವಿಷ್ಯದ ಪೀಳಿಗೆಗೆ ಆಸ್ತಿಗಳನ್ನು ನಿರ್ಮಿಸಬೇಕು ಎಂದರು.

ಗ್ರಾಮೀಣ ಪ್ರದೇಶಗಳ ಅಭಿವೃದ್ಧಿ, ಸಣ್ಣ ಅತಿ ಸಣ್ಣ ಕೈಗಾರಿಕೆಗಳಿಗೆ ಬೆಂಬಲ ಹಾಗೂ ಅತ್ಯಂತ ಪ್ರಮುಖವಾದ ನೀರಿನ ಭದ್ರತೆಗೆ ಸರಕಾರದ ಕಡೆಯಿಂದ ತಕ್ಷಣದ ಕ್ರಮಗಳು ಆಗಬೇಕಿದೆ ಎಂದು ಅವರು ಪ್ರತಿಪಾದಿಸಿದರು.

TAGGED:Budget SessionHD DevegowdaNirmala Sitharamanನಿರ್ಮಲಾ ಸೀತಾರಾಮನ್ಬಜೆಟ್ ಅಧಿವೇಶನಹೆಚ್‍ಡಿ ದೇವೇಗೌಡ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Yadagiri Bus Fire
Bengaluru City

ಮುಖಾಮುಖಿ ಡಿಕ್ಕಿಯಾಗಿ ಧಗಧಗನೆ ಹೊತ್ತಿಯುರಿದ ಖಾಸಗಿ ಬಸ್‌, ಕಾರು – 7 ಮಂದಿ ಸಜೀವ ದಹನ

Public TV
By Public TV
46 seconds ago
Dharmasthala Temple
Dakshina Kannada

ಧರ್ಮಸ್ಥಳ ದೇವರ ದರ್ಶನ ಸಮಯದಲ್ಲಿ ಬದಲಾವಣೆ

Public TV
By Public TV
4 minutes ago
Bengaluru Sarjapura Murder
Bengaluru City

ಕುಡಿದ ಮತ್ತಲ್ಲಿ ಕಿರಿಕ್ – ತಲೆ ಮೇಲೆ ಕಲ್ಲು ಎತ್ತಿಹಾಕಿ ಸ್ನೇಹಿತನ ಕೊಲೆ

Public TV
By Public TV
4 minutes ago
karnataka trekking SOP
Bengaluru City

ರಾಜ್ಯದಲ್ಲಿ ಟ್ರೆಕ್ಕಿಂಗ್‌ಗೆ ಹೊಸ ಗೈಡ್‌ಲೈನ್ಸ್ – ಚಾರಣಿಗರ ಮೊಬೈಲ್‌ಗೆ ಟ್ರ್ಯಾಕಿಂಗ್ ಆ್ಯಪ್ ಕಡ್ಡಾಯ: ಈಶ್ವರ್ ಖಂಡ್ರೆ

Public TV
By Public TV
17 minutes ago
Weather 1
Bengaluru City

ಉರಿಬಿಸಿಲಿನ ಮಧ್ಯೆಯೂ ಏ.21ರವರೆಗೆ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ

Public TV
By Public TV
31 minutes ago
Channapatna Wild Elephant Attack
Districts

ರಾತ್ರಿವೇಳೆ ಮನೆ ಬಾಗಿಲಿಗೆ ಬಂದ ಕಾಡಾನೆಗಳು – ಬೆಚ್ಚಿಬಿದ್ದ ಮನೆ ಮಾಲೀಕ

Public TV
By Public TV
41 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?