Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ದಲಿತ ಸಚಿವರ ಯೂಟರ್ನ್ – ಶೋಷಿತರ ಸಮಾವೇಶ ನಡೆಸಲು ಚಿಂತನೆ: ರಾಜಣ್ಣ ಸುಳಿವು

Public TV
Last updated: February 14, 2025 6:35 pm
Public TV
Share
4 Min Read
KN RAJANNA
SHARE

ನವದೆಹಲಿ: ರಾಜ್ಯದಲ್ಲಿ ಕಾಂಗ್ರೆಸ್ ವತಿಯಿಂದ ದಲಿತ ಸಮಾವೇಶ ನಡೆಸಲು ದಲಿತ ಸಚಿವರು ಚಿಂತನೆ ನಡೆಸಿದ್ದು, ಇದಕ್ಕೆ ಪಕ್ಷದೊಳಗೆ ಆಕ್ಷೇಪ ವ್ಯಕ್ತವಾಗಿರುವ ಹಿನ್ನೆಲೆ ಇದನ್ನು ಶೋಷಿತರ ಸಮಾವೇಶ ಎಂದು ಹೆಸರು ಪರಿಷ್ಕರಿಸಿ ಸಮಾವೇಶ ನಡೆಸಲು ಚಿಂತಿಸಿರುವುದಾಗಿ ಸಹಕಾರ ಸಚಿವ ಕೆ.ಎನ್ ರಾಜಣ್ಣ (KN Rajanna) ಸುಳಿವು ನೀಡಿದ್ದಾರೆ.

ದೆಹಲಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಏಪ್ರಿಲ್ ಅಥವಾ ಮೇನಲ್ಲಿ ಹುಬ್ಬಳಿ, ದಾವಣಗೆರೆ ಅಥವಾ ಚಿತ್ರದುರ್ಗದಲ್ಲಿ ಶೋಷಿತರ ಸಮಾವೇಶ ಹೆಸರಿನಲ್ಲಿ ಹಿಂದುಳಿದ ವರ್ಗಗಳ ಸಮಾವೇಶ ನಡೆಸಲು ಚಿಂತಿಸಲಾಗಿದೆ ಎಂದು ಹೇಳಿದರು.ಇದನ್ನೂ ಓದಿ:ನಾನು ಹೈದರಾಬಾದ್‌ನವಳು : ರಶ್ಮಿಕಾ ಮಾತಿಗೆ ಕನ್ನಡಿಗರು ಕೆಂಡ

ಸಮಾವೇಶ ನಡೆಸುವ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಜೊತೆಗೆ ಚರ್ಚೆ ನಡೆಸಿಲ್ಲ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಜೊತೆಗೆ ಮಾತನಾಡಿದ್ದು, ಅವರ ಜೊತೆಗೆ ಮಾತನಾಡಿರುವ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷರ ಜೊತೆಗೆ ಮಾತನಾಡುವ ಪ್ರಮೇಯ ಬರಲ್ಲ. ನಾವು ಒಂದು ಸಮುದಾಯದಿಂದ ಚುನಾವಣೆ ಗೆಲ್ಲಲು ಸಾಧ್ಯವಿಲ್ಲ, ಸರ್ಕಾರ ಇರುವ ಹಿನ್ನೆಲೆ ಆಡಳಿತ ವಿರೋಧಿ ಅಲೆ ಸಹಜ. ಹೀಗಾಗಿ ಕಾಂಗ್ರೆಸ್‌ಗೆ ಯಾವ ಸಮಾವೇಶ ಮಾಡಿದರೆ ಶಕ್ತಿ ಬರುತ್ತೆ ಆ ಸಮಾವೇಶ ಮಾಡುವುದು ಸಾಮಾನ್ಯ ಪ್ರಕ್ರಿಯೆ. 2028ಕ್ಕೆ ಮತ್ತೊಮ್ಮೆ ಅಧಿಕಾರಕ್ಕೆ ಬರಲು ಜಾಗೃತಿ ಮೂಡಿಸಬೇಕಿದೆ. ನಾವು ಗ್ಯಾರಂಟಿ ನೀಡಿದ್ದೇವೆ, ಅದರ ಬಗ್ಗೆ ವಿಶ್ವಾಸ ಮೂಡಿಸುವ ಅಗತ್ಯವಿದೆ ಎಂದರು.

ಪಕ್ಷದ ಆಶಯದಲ್ಲಿ ಸಮಾವೇಶ ಮಾಡಬೇಕು, ರಾಹುಲ್ ಗಾಂಧಿ, ಮಲ್ಲಿಕಾರ್ಜುನ್ ಖರ್ಗೆ, ಕೆ.ಸಿ ವೇಣುಗೋಪಾಲ್, ರಣದೀಪ್ ಸುರ್ಜೇವಾಲ ನಾಯಕರನ್ನು ಸಮಾವೇಶಕ್ಕೆ ಕರೆಸುತ್ತೇವೆ. ಅವರೇ ಬಂದು ಭಾಗವಹಿಸುತ್ತೇವೆ ಎಂದು ಹೇಳಿದ್ದಾರೆ ಎಂದು ಹೇಳಿ, ಸಮಾವೇಶಕ್ಕೆ ಹೈಕಮಾಂಡ್ ಅನುಮತಿ ನೀಡುವ ನಿರೀಕ್ಷೆ ವ್ಯಕ್ತಪಡಿಸಿದರು.

ದೆಹಲಿ ಪ್ರವಾಸದ ಅವಧಿಯಲ್ಲಿ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಭೇಟಿಯಾಗಿ, ಸರ್ಕಾರ ಮತ್ತು ಪಕ್ಷದ ಬೆಳವಣಿಗೆ ಗಮನಕ್ಕೆ ತಂದಿದೆ. ಯಾವ ವಿಚಾರ ಚರ್ಚೆ ಮಾಡಿದೆ ಎಂದು ಹೇಳಲು ಸಾಧ್ಯವಿಲ್ಲ. ಕೆ.ಸಿ ವೇಣುಗೋಪಾಲ್, ಸುರ್ಜೇವಾಲ ಅವರನ್ನು ಭೇಟಿ ಮಾಡಿದ್ದೇನೆ. ಅವರ ಜೊತೆಗೂ ರಾಜ್ಯದ ವಿಷಯಗಳ ಚರ್ಚೆ ಮಾಡಿದೆ. ಸುರ್ಜೇವಾಲ ಹೆಚ್ಚು ಹೊತ್ತು ಸಿಗಲಿಲ್ಲ. ಅವರಿಗೆ ನಾನು ಹೇಳಬೇಕಿದ್ದ ವಿಷಯ ಲಿಖಿತವಾಗಿ ತಿಳಿಸಿದೆ.

ಪಕ್ಷ ಸಂಘಟನೆ ಮಾಡಿ 2028ಕ್ಕೆ ಸರ್ಕಾರ ತರಬೇಕು, ಆ ದಿಶೆಯಲ್ಲಿ ಏನು ತೀರ್ಮಾನ ಮಾಡಬೇಕಿದೆ ಅದರ ಬಗ್ಗೆ ಮನವರಿಕೆ ಮಾಡಿದೆ. ನಾನು ಗಮನಕ್ಕೆ ತಂದ ಅಂಶಗಳ ಬಗ್ಗೆ ಸಕಾರಾತ್ಮಕವಾಗಿ ಸ್ಪಂಧಿಸಿದ್ದಾರೆ. ಪಕ್ಷ ಸಂಘಟನೆಗೆ ಎರಡು ಅಂಶಗಳು ಹೇಳಿದ್ದೇನೆ. ವಿಧಾನ ಪರಿಷತ್ ನೇಮಕ ಇದೆ. ಪರಿಷತ್ ನಿರಾಶ್ರಿತರ ಕೂಟ ಆಗಬಾರದು, ವಿದ್ವತ್ ಇರುವ ಜನರಿಗೆ ಅವಕಾಶ ಮಾಡಿಕೊಡಬೇಕು. ಈ ಪರಂಪರೆಗೆ ತಿಲಾಂಜಲಿ ಇಡುವ ಕೆಲಸ ಆಗಿದೆ ಚುನಾವಣೆಯಲ್ಲಿ ಗೆಲ್ಲುಲು ಸಾಧ್ಯವಾಗದ ಕೆಳಸಮುದಾಯದ ನಾಯಕರಿಗೆ ಅವಕಾಶ ನೀಡಬೇಕು. ಇದರಿಂದ ಪಕ್ಷಕ್ಕೆ ಕೆಳ ಸಮುದಾಯದ ಬೆಂಬಲ ಸಿಗುತ್ತದೆ ಎಂದರು.

224 ವಿಧಾನಸಭೆ ಕ್ಷೇತ್ರಗಳಲ್ಲಿ ಅಭ್ಯರ್ಥಿ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಬೇರೆ ಸಮುದಾಯಗಳಿಗೆ ಅವಕಾಶ ನೀಡಬೇಕು. ಎಲ್ಲ ಸ್ಥಾನಗಳನ್ನು ಒಂದೇ ಸಮುದಾಯಕ್ಕೆ ನೀಡಬಾರದು, ಮುಂಚೂಣಿ ಘಟಕಗಳಲ್ಲೂ ವಿವಿಧ ಸಮುದಾಯಗಳಿಗೆ ಅವಕಾಶ ನೀಡಬೇಕು. ಇದರಿಂದ ಸಂಘಟನೆಗೆ ಶಕ್ತಿ ಸಿಗಲಿದೆ, ಇದನ್ನು ನಾನು ನನ್ನ ಕ್ಷೇತ್ರದಲ್ಲಿ ಪ್ರಯೋಗ ಮಾಡಿದ್ದೇನೆ. ಸಾಮಾನ್ಯ ಕ್ಷೇತ್ರದಲ್ಲಿ ಎಸ್ಟಿಯಾಗಿದ್ದರು ಗೆದ್ದು ಬರ್ತಿದ್ದೇನೆ. ಇದೇ ಸಲಹೆಯನ್ನು ಹೈಕಮಾಂಡ್‌ಗೆ ನೀಡಿದ್ದೇನೆ ಎಂದರು.ಇದನ್ನೂ ಓದಿ: ಜಿಯೋ ಹಾಟ್‌ಸ್ಟಾರ್‌ ವಿಲೀನ | ಇನ್ಮುಂದೆ ಐಪಿಎಲ್‌ ಉಚಿತ ವೀಕ್ಷಣೆ ಇಲ್ಲ- ಎರಡನ್ನೂ ಸಬ್‌ಸ್ಕ್ರೈಬ್‌ ಮಾಡಿದವರ ಕಥೆ ಏನು?

ಡಿಕೆಶಿ ಬದಲಾವಣೆಗೆ ನಾವು ಒತ್ತಾಯಿಸಿಲ್ಲ:
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ಹೈಕಮಾಂಡ್ ಗಮನದಲ್ಲಿದೆ. ಸಿದ್ದರಾಮಯ್ಯ ಅವರನ್ನು ಸಿಎಂ ಮಾಡುವಾಗ ಹಾಲಿ ಅಧ್ಯಕ್ಷರು ಲೋಕಸಭೆ ಚುನಾವಣೆವರೆಗೂ ಇರ್ತಾರೆ ಎಂದು ನಮ್ಮ ಹೈಕಮಾಂಡ್ ನಾಯಕರು ಹೇಳಿದ್ದರು. ಈಗ ಲೋಕಸಭೆ ಚುನಾವಣೆ ಅಂತ್ಯವಾಗಿರುವ ಹಿನ್ನೆಲೆ ಕಾರ್ಯಕರ್ತರಲ್ಲಿ ಪ್ರಶ್ನೆ ಇದೆ. ಅಧ್ಯಕ್ಷರನ್ನು ಬದಲಾವಣೆ ಮಾಡಿ ಎಂದು ನಾವು ಒತ್ತಾಯ ಮಾಡಿಲ್ಲ. ಆದರೆ ಕಾರ್ಯಕರ್ತರ ಗೊಂದಲ ಬಗೆಹರಿಸಬೇಕು. ಡಿ.ಕೆ ಶಿವಕುಮಾರ್ ಅವರು ಮುಂದುವರಿಯುವುದರಲ್ಲಿ ಅಭ್ಯಂತರ ಇಲ್ಲ. ಎಐಸಿಸಿ ನಾಯಕರು ಕೆಪಿಸಿಸಿ ಅಧ್ಯಕ್ಷ ಆಗು ಎಂದರೆ ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಅಧ್ಯಕ್ಷ ಆಗುತ್ತೇನೆ. ಪಕ್ಷದ ನಿಯಮಗಳ ಪ್ರಕಾರ ಒಬ್ಬರು ಎರಡು ಹುದ್ದೆ ನಿಭಾಯಿಸಬಾರದು ಎಂದರು.

ಸಿಎಂ, ಸಿದ್ದರಾಮಯ್ಯ ಪೂರ್ಣಾವಧಿ ಬಗ್ಗೆ ಸಚಿವರ ಹೇಳಿಕೆ ವಿಚಾರಕ್ಕೆ ಮಾತನಾಡಿ, ಯಾರು ಎಷ್ಟು ವರ್ಷ ಇರ್ತಾರೆ, ಅಂತಿಮ ನಿರ್ಧಾರ ಹೈಕಮಾಂಡ್‌ನದ್ದು, ದೇವರಾಜು ಅರಸು ಸಿಎಂ ಆದಾಗ ವಿಧಾನಸಭೆ ಸದಸ್ಯರು ಅಲ್ಲ, ಸಾಕಷ್ಟು ಜನರು ಸಿಎಂ ಹುದ್ದೆಯ ಸ್ಪರ್ಧೆಯಲ್ಲಿದ್ದರು, ಅದಾಗ್ಯೂ ಅರಸು ಅವರನ್ನು ಸಿಎಂ ಮಾಡಲಾಯಿತು. ಶಾಸಕರ ಅಭಿಪ್ರಾಯ ಕಡೆಗಣಿಸಿ ಹೈಕಮಾಂಡ್ ತೀರ್ಮಾನ ಮಾಡಲ್ಲ ಎನ್ನುವುದು ನನ್ನ ಅಭಿಪ್ರಾಯ ಎಂದರು.

ಉಸ್ತುವಾರಿ ಜವಬ್ದಾರಿಯಿಂದ ಬಿಡುಗಡೆ:
ಹಾಸನ ಉಸ್ತುವಾರಿಯಿಂದ ನನ್ನ ಬಿಡುಗಡೆ ಮಾಡಿ ಎಂದು ಸಿಎಂಗೆ ಮನವಿ ಮಾಡಿದ್ದೇನೆ. ನನ್ನ ಜಿಲ್ಲೆ ತುಮಕೂರಿನಲ್ಲಿ ಪಕ್ಷ ಸಂಘಟನೆ ಮಾಡುವ ದೃಷ್ಟಿಯಿಂದ ಬಿಡುಗಡೆ ಕೋರಿದ್ದೇನೆ. ಅವಕಾಶ ನೀಡಿದ್ದಕ್ಕೆ ನನ್ನ ಕೃತ್ಯಜ್ಞತೆ ಇದೆ. ಬೆಳಗಾವಿ ಬಳಿಕ ತುಮಕೂರು ದೊಡ್ಡ ಜಿಲ್ಲೆ ಹೀಗಾಗಿ ಜಿಲ್ಲೆಯಲ್ಲಿ ಸಂಘಟನೆ ಮಾಡಬೇಕಿದೆ. ಇದರ ಬದಲಿಗೆ ನಾನು ತುಮಕೂರು ಅಲ್ಲ, ಯಾವ ಜಿಲ್ಲೆಯ ಉಸ್ತುವಾರಿ ಕೊಡಿ ಎಂದು ಕೇಳಿಲ್ಲ, ಹಾಸನದಲ್ಲಿ ಲೋಕಸಭೆಯಲ್ಲಿ ಕಾಂಗ್ರೆಸ್ ಗೆಲ್ಲಿಸಬೇಕಿತ್ತು ಅದನ್ನು ಮಾಡಿದೆ. ಹೀಗಾಗಿ ಬಿಡುಗಡೆ ಕೋರಿ ಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷರಿಗೆ ಮನವಿ ಮಾಡಿದ್ದೇನೆ ಎಂದರು.

TAGGED:congressDK ShivakumarKN Rajannanewdehli
Share This Article
Facebook Whatsapp Whatsapp Telegram

Cinema Updates

Harshika Poonacha Bhuvan Ponnanna toured 3 countries with Tridevi 1
ತ್ರೀದೇವಿ ಜೊತೆ 3 ದೇಶ ಸುತ್ತಿದ ಹರ್ಷಿಕಾ, ಭುವನ್
Cinema Latest Sandalwood
Darshan Thailand
ಥಾಯ್ಲೆಂಡ್‌ನಿಂದ ದರ್ಶನ್ ವಾಪಸ್ ಬರೋ ದಿನಾಂಕ ಫಿಕ್ಸ್
Cinema Latest Sandalwood Top Stories
B Saroja Devi
ಜು.25 ರಂದು 11ನೇ ದಿನದ ಕಾರ್ಯ – ಗಣ್ಯರಿಂದ ಸರೋಜಾದೇವಿ ಸ್ಮರಣೆ
Cinema Latest
Yash mother
ಪ್ರೊಡಕ್ಷನ್‌ಗೆ ನನ್ನ ಮಗನೇ ಸ್ಫೂರ್ತಿ – ಯಶ್‌ ತಾಯಿ ಮಾತು
Cinema Latest Sandalwood Top Stories
Vijay Devarakonda
ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ವಿಜಯ್ ದೇವರಕೊಂಡ
Cinema Latest Top Stories

You Might Also Like

India vs England 4th Test Day 1 India Suffer Huge Rishabh Pant Blow Reach 264 4
Cricket

ಜೈಸ್ವಾಲ್‌, ಸುದರ್ಶನ್‌ ಅರ್ಧಶತಕ – ಗಾಯಗೊಂಡು ಕಣ್ಣೀರು ಹಾಕುತ್ತಾ ಹೊರ ಹೋದ ಪಂತ್‌

Public TV
By Public TV
5 hours ago
Kadugodi andhra murder
Bengaluru City

ಆಂಧ್ರದಲ್ಲಿ ಬೆಂಗಳೂರಿನ ಉದ್ಯಮಿಗಳ ಅಪಹರಿಸಿ ಕೊಲೆ

Public TV
By Public TV
5 hours ago
ಸಾಂದರ್ಭಿಕ ಚಿತ್ರ
Latest

ಟೇಕಾಫ್ ವೇಳೆ ಅಹಮದಾಬಾದ್-ದಿಯು ಇಂಡಿಗೋ ವಿಮಾನದ ಎಂಜಿನ್‌ನಲ್ಲಿ ಬೆಂಕಿ – ಹಾರಾಟ ಸ್ಥಗಿತ

Public TV
By Public TV
5 hours ago
IPS Soumyalatha
Bengaluru City

ಧರ್ಮಸ್ಥಳ ಹೂತಿಟ್ಟ ಶವ ಕೇಸ್‌- ಓರ್ವ ಐಪಿಎಸ್ ಅಧಿಕಾರಿಯನ್ನು ಕೈಬಿಡಲು ಸರ್ಕಾರಕ್ಕೆ ಶಿಫಾರಸು

Public TV
By Public TV
6 hours ago
AI ಚಿತ್ರ
Dakshina Kannada

ಉಡುಪಿ, ಮಂಗಳೂರು ತಾಲೂಕಿನ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ

Public TV
By Public TV
6 hours ago
Narendra Modi and Chinese President Xi Jinping
Latest

5 ವರ್ಷದ ಬಳಿಕ ಚೀನಿಯರಿಗೆ ಭಾರತ ಪ್ರವಾಸಕ್ಕೆ ಅನುಮತಿ

Public TV
By Public TV
6 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?