Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ – ಪ್ಲಾಟ್‌ಫಾರ್ಮ್ ಟಿಕೆಟ್ ಬಂದ್, ಹೈ ಸೆಕ್ಯುರಿಟಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ – ಪ್ಲಾಟ್‌ಫಾರ್ಮ್ ಟಿಕೆಟ್ ಬಂದ್, ಹೈ ಸೆಕ್ಯುರಿಟಿ

Latest

ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ – ಪ್ಲಾಟ್‌ಫಾರ್ಮ್ ಟಿಕೆಟ್ ಬಂದ್, ಹೈ ಸೆಕ್ಯುರಿಟಿ

Public TV
Last updated: February 17, 2025 1:42 pm
Public TV
Share
2 Min Read
Delhi Railway Station Stampede
SHARE

ನವದೆಹಲಿ: ಇಲ್ಲಿನ ರೈಲು ನಿಲ್ದಾಣದಲ್ಲಿ ಕಾಲ್ತುಳಿತ (Delhi Railway Station Stampede) ಸಂಭವಿಸಿದ ಬಳಿಕ ರೈಲ್ವೇ ಆಡಳಿತವು ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಕೌಂಟರ್‌ನಿಂದ ಪ್ಲಾಟ್‌ಫಾರ್ಮ್ ಟಿಕೆಟ್‌ಗಳ ಮಾರಾಟವನ್ನು ನಿಲ್ಲಿಸಲಾಗಿದ್ದು, ಭದ್ರತೆಯನ್ನು ಹೆಚ್ಚಿಸಿದೆ.

ಎರಡು ದಿನಗಳ ಹಿಂದೆ ದೆಹಲಿ ರೈಲು ನಿಲ್ದಾಣದಲ್ಲಿ ಜನಸಂದಣಿಯಿಂದಾಗಿ ಉಂಟಾದ ಕಾಲ್ತುಳಿತದಲ್ಲಿ 18 ಜನರು ಸಾವನ್ನಪ್ಪಿದ್ದರು. ಘಟನೆಯ ನಂತರ ರೈಲು ನಿಲ್ದಾಣದಲ್ಲಿ ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ. ನಿಲ್ದಾಣದ ಆವರಣದಲ್ಲಿ ಭದ್ರತಾ ಪಡೆಗಳ ಒಂದು ಕಂಪನಿಯನ್ನು ನಿಯೋಜಿಸಲಾಗಿದೆ. ಮೆಟ್ರೋ ಭದ್ರತೆಯಲ್ಲಿ ತೊಡಗಿರುವ ಸಿಐಎಸ್‌ಎಫ್ ಕಂಪನಿಯನ್ನು ರೈಲ್ವೇ ಭದ್ರತೆಗಾಗಿ ನಿಯೋಜಿಸಲಾಗಿದೆ.ಇದನ್ನೂ ಓದಿ: ಅನ್ನಭಾಗ್ಯ ದುಡ್ಡು ಇಲ್ಲ, ಗೃಹಲಕ್ಷ್ಮಿಯೂ ಇಲ್ಲ – ಗ್ಯಾರಂಟಿಗೆ ʼಗ್ಯಾರಂಟಿʼ ಇಲ್ಲ!

ಈ ಬಗ್ಗೆ ಜಂಟಿ ಪೊಲೀಸ್ ಆಯುಕ್ತ ವಿಜಯ್ ಸಿಂಗ್ ಮಾತನಾಡಿ, ದೆಹಲಿ ರೈಲು ನಿಲ್ದಾಣದ ಭದ್ರತೆಗಾಗಿ ಎಂಟು ಕಂಪನಿಗಳ ಅರೆಸೈನಿಕ ಪಡೆಗಳನ್ನು ನಿಯೋಜಿಸಲಾಗಿದೆ. ಜೊತೆಗೆ 80 ಸಿಬ್ಬಂದಿಯನ್ನು ಒಳಗೊಂಡ ಮೆಟ್ರೋ ಪೊಲೀಸ್ ಕಂಪನಿಯನ್ನು ನಿಯೋಜಿಸಲಾಗಿದೆ. ಇದಲ್ಲದೆ, ಮೆಟ್ರೋದಿಂದ ಮೂವರು ಇನ್ಸ್ಪೆಕ್ಟರ್‌ಗಳು ಮತ್ತು ಒಬ್ಬ ಎಸಿಪಿಯನ್ನು ನಿಯೋಜಿಸಲಾಗಿದೆ. ರೈಲ್ವೇ ಪೊಲೀಸ್ ಮತ್ತು ಜಿಆರ್‌ಪಿಯ ಪ್ರತ್ಯೇಕ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಎಂಟರಿಂದ ಹತ್ತು ರೈಲ್ವೇ ಪೊಲೀಸ್ ಠಾಣೆಗಳ ಮುಖ್ಯಸ್ಥರನ್ನು ನಿಯೋಜಿಸಲಾಗಿದೆ. ದೆಹಲಿ ಪೊಲೀಸ್ ಠಾಣೆ ಮುಖ್ಯಸ್ಥರನ್ನು ಸಹ ಹತ್ತಿರದಲ್ಲೇ ನಿಯೋಜಿಸಲಾಗಿದೆ ಎಂದರು.

ಇದಲ್ಲದೆ ಪ್ರತಿ ಪ್ಲಾಟ್‌ಫಾರ್ಮ್, ಪಾದಚಾರಿ ಸೇತುವೆ ಮತ್ತು ಹೊರಗೆ ಒಂದು ಕಂಪನಿಯನ್ನು ನಿಯೋಜಿಸಲಾಗಿದೆ. ಒಂದು ಕಂಪನಿಯಲ್ಲಿ 80 ರಿಂದ 85 ಭದ್ರತಾ ಸಿಬ್ಬಂದಿಗಳಿದ್ದಾರೆ. ಅಲ್ಲದೆ, ರೈಲ್ವೇ ನಿಲ್ದಾಣದ ಹೊರಗೆ ಮತ್ತು ರಸ್ತೆಯಲ್ಲಿ ಹೆಚ್ಚಿನ ಸಂಖ್ಯೆಯ ಪೊಲೀಸರನ್ನು ನಿಯೋಜಿಸಲಾಗಿದೆ. ರೈಲು ನಿಲ್ದಾಣದ ಬಳಿ ವಾಹನಗಳನ್ನು ಅನುಮತಿಸಲಾಗುವುದಿಲ್ಲ. ಕುಂಭಮೇಳಕ್ಕೆ ಹೋಗುವ ರೈಲುಗಳು 12, 13 ಮತ್ತು 14ನೇ ಪ್ಲಾಟ್‌ಫಾರ್ಮ್ಗಳಿಂದ ಹೊರಡುತ್ತಿವೆ. ಇಲ್ಲಿ ಹೆಚ್ಚಿನ ಸಂಖ್ಯೆಯ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ. ಪ್ರಯಾಗ್‌ರಾಜ್‌ಗೆ ಹೋಗುವ ರೈಲುಗಳಿಗೆ ವಿಶೇಷ ಗಮನ ನೀಡಲಾಗುತ್ತಿದೆ ಎಂದು ತಿಳಿಸಿದರು.

ಪ್ರಯಾಗ್‌ರಾಜ್‌ನಲ್ಲಿ ನಿರೀಕ್ಷೆಗಿಂತ ಹೆಚ್ಚಿನ ಜನಸಂದಣಿ ಸೇರುತ್ತಿರುವ ಹಿನ್ನೆಲೆ ಮುಂದಿನ ಸೂಚನೆ ಬರುವವರೆಗೂ ರೈಲ್ವೆ ಎಲ್ಲಾ ವಿಐಪಿ ಶಿಷ್ಟಾಚಾರ ರದ್ದು ಮಾಡಿದೆ. ಪ್ರಯಾಗ್‌ರಾಜ್‌ನಲ್ಲಿರುವ ರೈಲ್ವೆ ವಿಶ್ರಾಂತಿ ಗೃಹದ ಎಲ್ಲಾ ಮುಂಗಡ ಬುಕಿಂಗ್ ಬಂದ್ ಮಾಡಿದ್ದು, ರೈಲ್ವೆ ಅಧಿಕಾರಿಗಳು ಪ್ರಯಾಗ್‌ರಾಜ್‌ಗೆ ಭೇಟಿ ನೀಡುತ್ತಿದ್ದಾರೆ. ವಿಐಪಿಗಳ ಶಿಷ್ಟಾಚಾರದಲ್ಲಿ ಕರ್ತವ್ಯ ನಿರ್ವಹಿಸುವ ರೈಲ್ವೆ ನೌಕರರು ಮತ್ತು ಭದ್ರತಾ ಸಿಬ್ಬಂದಿಯನ್ನು ಜವಬ್ದಾರಿಯಿಂದ ವಿಮುಕ್ತಗೊಳಿಸಲಾಗುತ್ತಿದೆ.

ಕಾಲ್ತುಳಿತ ಸಂಭವಿಸಿದ್ದು ಹೇಗೆ?
ಕುಂಭಮೇಳಕ್ಕೆ ಹೊರಟಿದ್ದ ಭಕ್ತರಿಂದ ನವದೆಹಲಿ ರೈಲು ನಿಲ್ದಾಣ ತುಂಬಿ ತುಳುಕುತ್ತಿತ್ತು. ಅದಕ್ಕಾಗಿ 2 ವಿಶೇಷ ರೈಲುಗಳ ವ್ಯವಸ್ಥೆ ಮಾಡಲಾಗಿತ್ತು. ಆದರೆ ಈ ರೈಲುಗಳಿಗೂ ಮೊದಲು ಭುವನೇಶ್ವರಕ್ಕೆ ತೆರಳಬೇಕಿದ್ದ ರಾಜಧಾನಿ ಮತ್ತು ಸ್ವತಂತ್ರ ಸೇನಾನಿ ಎಕ್ಸ್ಪ್ರೆಸ್ ರೈಲುಗಳು ತಡವಾಗಿ ನಿಲ್ದಾಣವನ್ನು ತಲುಪಿದವು. ಹೀಗಾಗಿ ರೈಲು ನಿಲ್ದಾಣದಲ್ಲಿ ಒಮ್ಮೆಗೆ ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚಳವಾಯಿತು. ಇದೇ ಸಮಯಕ್ಕೆ ಪ್ಲಾಟ್‌ಫಾರ್ಮ್ 14 ಮತ್ತು 15ಕ್ಕೆ ಪ್ರಯಾಗ್ ರಾಜ್‌ಗೆ ಹೊರಟ ವಿಶೇಷ ರೈಲು ನಿಲ್ದಾಣಕ್ಕೆ ಆಗಮಿಸಿದೆ. ಈ ವೇಳೆ ಸಾವಿರಾರು ಜನರು ಏಕಾಏಕಿ ರೈಲಿಗೆ ನುಗ್ಗಿದ್ದಾರೆ. ಹೀಗಾಗಿ ರೈಲಿನ ಒಳಗೆ ಮತ್ತು ಹೊರಗೆ ಕಾಲ್ತುಳಿತ ಸಂಭವಿಸಿದ್ದು, ಈ ಅವಘಡದಲ್ಲಿ 18 ಮಂದಿ ಸಾವಿಗೀಡಾಗಿದ್ದರು.ಇದನ್ನೂ ಓದಿ: ಮೂವರನ್ನು ಕೊಲೆ ಮಾಡಿದ್ದೇನೆ, ನಾನು ಸಾಯ್ತಿನಿ – ಅಮೆರಿಕದಲ್ಲಿರುವ ಅಣ್ಣನಿಗೆ ಫೋನ್‌ ಮಾಡಿ ಹೇಳಿದ್ದ ಚೇತನ್‌

TAGGED:Delhi Railway StationDelhi Railway Station StampedeIndians Railwaysದೆಹಲಿ ರೈಲು ನಿಲ್ದಾಣದೆಹಲಿ ರೈಲು ನಿಲ್ದಾಣ ಕಾಲ್ತುಳಿತ
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

Donald Trump Asim Munir Shehbaz Sharif
Latest

ಅಮೆರಿಕದ ವಿರುದ್ಧ ಮುನೀರ್‌ ಡಬಲ್‌ಗೇಮ್‌ – ಟ್ರಂಪ್‌ಗೆ ಗುಪ್ತಚರ ಸಂಸ್ಥೆಯಿಂದ ಎಚ್ಚರಿಕೆ

Public TV
By Public TV
23 seconds ago
Davanagere Kavya Murder Case
Crime

ಮಹಿಳೆ ಅನುಮಾನಾಸ್ಪದ ಸಾವು – ಪರಸ್ತ್ರೀ ಸಹವಾಸದಿಂದ ಹತ್ಯೆಗೈದ್ನಾ ಪತಿ?

Public TV
By Public TV
13 minutes ago
Pahalgam QR Code IdentificationS
Latest

ಪಹಲ್ಗಾಮ್‌ ನರಮೇಧಕ್ಕೆ 1 ವರ್ಷ – ಪ್ರವಾಸಿಗರ ರಕ್ಷಣೆಗೆ ಸರ್ಕಾರ ಕೈಗೊಂಡಿರುವ ಕ್ರಮಗಳೇನು?

Public TV
By Public TV
55 minutes ago
pm modi meeting
Latest

ದೇಶವನ್ನು ಉದ್ದೇಶಿಸಿ ಭಾಷಣ – ಮೋದಿ ವಿರುದ್ಧ ಕಾಂಗ್ರೆಸ್‌, ಸಿಪಿಎಂನಿಂದ ದೂರು

Public TV
By Public TV
59 minutes ago
UP Man Kills Twin Daughters In kanpur
Crime

ಅವಳಿ ಹೆಣ್ಣುಮಕ್ಕಳನ್ನು ಕತ್ತು ಸೀಳಿ ಕೊಂದ ಪಾಪಿ ತಂದೆ

Public TV
By Public TV
1 hour ago
Modi 1
Latest

ಕಾಂಗ್ರೆಸ್‌ ಜೊತೆ ಸೇರಿ ಟಿಎಂಸಿ ಪಿತೂರಿ, ಬಂಗಾಳದ ಮಹಿಳೆಯರಿಗೆ ಮತ್ತೆ ದ್ರೋಹ: ಮೋದಿ ವಾಗ್ದಾಳಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?