ಮಂಗಳೂರು: ಶಾಲೆಯಲ್ಲಿ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ (Honey Bee Attack) ನಡೆಸಿದ ಘಟನೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಬೆಳ್ತಂಗಡಿ (Belthangady) ತಾಲೂಕಿನ ಕಕ್ಕಿಂಜೆ ಗ್ರಾಮದಲ್ಲಿ ನಡೆದಿದೆ.
- Advertisement -
ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಪ್ರಾರ್ಥನೆ ಮುಗಿಸಿ ಶಾಲೆ ಒಳಗೆ ಹೋಗುವಾಗ ಹೆಜ್ಜೇನು ದಾಳಿ ನಡೆಸಿದೆ. 15 ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ ಮಾಡಿದೆ. ಮೂವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿವೆ.
- Advertisement -
- Advertisement -
ಹೆಜ್ಜೇನು ದಾಳಿಗೊಳಗಾದ ಮಕ್ಕಳಿಗೆ ಕಕ್ಕಿಂಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸುರಕ್ಷತಾ ದೃಷ್ಠಿಯಿಂದ ಶಿಕ್ಷಕರು ಶಾಲೆಗೆ ರಜೆ ನೀಡಿದ್ದಾರೆ.