Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜನ ಸಾಮಾನ್ಯರಿಂದಲೇ ಬಿಡುಗಡೆಯಾಯ್ತು `ಅಪಾಯವಿದೆ ಎಚ್ಚರಿಕೆ’ ಟ್ರೈಲರ್!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಜನ ಸಾಮಾನ್ಯರಿಂದಲೇ ಬಿಡುಗಡೆಯಾಯ್ತು `ಅಪಾಯವಿದೆ ಎಚ್ಚರಿಕೆ’ ಟ್ರೈಲರ್!

Bengaluru City

ಜನ ಸಾಮಾನ್ಯರಿಂದಲೇ ಬಿಡುಗಡೆಯಾಯ್ತು `ಅಪಾಯವಿದೆ ಎಚ್ಚರಿಕೆ’ ಟ್ರೈಲರ್!

Public TV
Last updated: February 20, 2025 11:11 am
Public TV
Share
3 Min Read
Apaayavide Eccharike
SHARE

ಅಭಿಜಿತ್ ತೀರ್ಥಹಳ್ಳಿ ನಿರ್ದೇಶನದ `ಅಪಾಯವಿದೆ ಎಚ್ಚರಿಕೆ’ ಚಿತ್ರ (Apaayavide Eccharike film) ಆರಂಭದಿಂದ ಇಲ್ಲೀವರೆಗೂ ಹಂತ ಹಂತವಾಗಿ ಪ್ರೇಕ್ಷಕರನ್ನು ಸೆಳೆಯುತ್ತಾ ಸಾಗಿ ಬಂದಿತ್ತು. ಇದೇ ಫೆಬ್ರವರಿ 28ರಂದು ಬಿಡುಗಡೆಗೊಳ್ಳಲಿರುವ ಈ ಚಿತ್ರದ ಟ್ರೈಲರ್ ಇದೀಗ ಬಿಡುಗಡೆಗೊಂಡಿದೆ.

Apaayavide Eccharike 145 scaled

ಈಗಾಗಲೇ ಇದೊಂದು ಬೇರೆಯದ್ದೇ ತೆರನಾದ ಕಥೆಯನ್ನೊಳಗೊಂಡಿರೋ ಸಿನಿಮಾ ಎಂಬ ಸುಳಿವು ಪ್ರೇಕ್ಷಕರಿಗೆ ಸಿಕ್ಕಿತ್ತು. ಈಗ ಅದಕ್ಕೆ ತಕ್ಕುದಾಗಿ, ಅತ್ಯಂತ ವಿಶೇಷವಾಗಿ ಈ ಟ್ರೈಲರ್ ಅನ್ನು ಲಾಂಚ್ ಮಾಡಲಾಗಿದೆ. ಈಟಿ ಮಾಲ್ ನಲ್ಲಿ ನಡೆದ ಅಚ್ಚಕಟ್ಟಾದ ಕಾರ್ಯಕ್ರಮದಲ್ಲಿ ಜನಸಾಮಾನ್ಯರ ಕೈಯಿಂದಲೇ ಟ್ರೈಲರ್ (Apaayavide Eccharike trailer) ಬಿಡುಗಡೆಗೊಳಿಸುವ ಮೂಲಕ ಚಿತ್ರತಂಡ ಮೆಚ್ಚುಗೆಗೆ ಪಾತ್ರವಾಗಿದೆ. ಇದನ್ನೂ ಓದಿ: ನಿಮ್ಮ ಹಾರೈಕೆಗಳು ನನ್ನ ಮುಂದಿನ ಹೆಜ್ಜೆಗೆ ದಾರಿ ತೋರುವ ಬೆಳಕು, ಶೀಘ್ರವೇ ಭೇಟಿಯಾಗುತ್ತೇನೆ: ಅಭಿಮಾನಿಗಳಿಗೆ ದರ್ಶನ್‌ ಪತ್ರ

Apaayavide Eccharike 2

ಸಾಮಾನ್ಯವಾಗಿ ಯಾವುದೇ ಟ್ರೈಲರ್ ಬಿಡುಗಡೆ ಸಮಾರಂಭದಲ್ಲಿಯೂ ಸಾಮ್ಯತೆಗಳಿರುತ್ತವೆ. ಸಿನಿಮಾ, ರಾಜಕೀಯ ಸೇರಿದಂತೆ ನಾನಾ ಕ್ಷೇತ್ರಗಳ ಗಣ್ಯರಿಂದ ಟ್ರೈಲರ್ ಲಾಂಚ್ ಮಾಡಿಸಲಾಗುತ್ತದೆ. ಆದರೆ, ನಿರ್ದೇಶಕ ಅಭಿಜಿತ್ ತೀರ್ಥಹಳ್ಳಿ (Abhijith Thirthahalli) ಬೇರೆಯದ್ದೇ ದಾರಿಯನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಶಿವಕಾರ್ತಿಕೇಯನ್ ಹೊಸ ಸಿನಿಮಾಗೆ ‘ಮದರಾಸಿ’ ಟೈಟಲ್ ಫಿಕ್ಸ್

Apaayavide Eccharike 125 scaled

ಆಟೋ ಚಾಲಕರು, ಕ್ಯಾಬ್ ಚಾಲಕರು ಸೇರಿದಂತೆ ನಾನಾ ಕೆಲಸ ಮಾಡುವ ಒಂದಷ್ಟು ಜನರಿಂದ ಅಪಾಯವಿದೆ ಎಚ್ಚರಿಕೆ ಚಿತ್ರದ ಟ್ರೈಲರ್ ಬಿಡುಗಡೆಗೊಳಿಸಿದ್ದಾರೆ. ಈ ಮೂಲಕ ನಿಜವಾದ ಸಿನಿಮಾ ಪ್ರೇಮಿಗಳ ಕಡೆಯಿಂದಲೇ ಟ್ರೈಲರ್ ಬಿಡುಗಡೆಗೊಳಿಸುವ ಮೂಲಕ ಎಲ್ಲರ ಗಮನ ಸೆಳೆದುಕೊಂಡಿದ್ದಾರೆ. ಇದನ್ನೂ ಓದಿ: ಹೆಡ್ ಬುಷ್ ಡೈರೆಕ್ಟರ್ ಇದೀಗ ಹೀರೋ

WhatsApp Image 2025 02 20 at 10.42.24 scaled

ತಮ್ಮ ಕಷ್ಟ ಕಾರ್ಪಣ್ಯಗಳಾಚೆಗೂ ಬಿಡುಗಡೆಗೊಂಡ ಸಿನಿಮಾಗಳನ್ನೆಲ್ಲ ನೋಡುವ ನಿಜವಾದ ಸಿನಿಮಾ ಪ್ರೇಮಿಗಳು ಇವರೇ. ಅಂಥವರಿಂದಲೇ ಟ್ರೈಲರ್ ಲಾಂಚ್ ಮಾಡಿಸೋದು ನಿಜಕ್ಕೂ ಥ್ರಿಲ್ಲಿಂಗ್ ಸಂಗತಿ ಎಂಬಂಥಾ ಶಹಬ್ಬಾಸ್ ಗಿರಿ ಸಾಮಾಜಿಕ ಜಾಲತಾಣಗಳ ಮೂಲಕ ಹೊಮ್ಮಿಕೊಳ್ಳುತ್ತಿದೆ. ಇದನ್ನೂ ಓದಿ: ದರ್ಶನ್ ಬರ್ತ್‌‌ಡೇ ಸಂಭ್ರಮ; ಆಪ್ತರಿಗಷ್ಟೇ ಆಹ್ವಾನ ನೀಡಿದ್ದ ದರ್ಶನ್ ಪತ್ನಿ ವಿಜಯಲಕ್ಷ್ಮಿ

Apaayavide Eccharike 131 scaled

ಅಪಾಯವಿದೆ ಎಚ್ಚರಿಕೆ ಸಸ್ಪೆನ್ಸ್ ಹಾರರ್ ಥ್ರಿಲ್ಲರ್ ಜಾನರಿನ ಸಿನಿಮಾ. ಮಲೆನಾಡಿನ ದಟ್ಟ ಕಾಡೊಳಗೆ ಘಟಿಸುವ ಮೈ ನವಿರೇಳಿಸುವ ಕಥನ ಇದರ ಜೀವಾಳ. ಅದರ ಒಟ್ಟಾರೆ ಸ್ವರೂಪ ಹೇಗಿದೆ ಅನ್ನೋದರ ಸುಳಿವೊಂದು ಈ ಟ್ರೈಲರ್ ಮೂಲಕ ದಾಟಿಕೊಂಡಿದೆ. ಎದೆ ಅದುರಿಸೋ ದೃಷ್ಯಗಳ ಮೂಲಕ ಭಿನ್ನ ಕಥೆಯ ಸೂಚನೆ ಕೂಡಾ ಸದರಿ ಟ್ರೈಲರ್ ನಲ್ಲಿ ದಟ್ಟವಾಗಿದೆ. ಇದನ್ನೂ ಓದಿ: ದರ್ಶನ್ ಬರ್ತ್‌ಡೇ ಸಂಭ್ರಮ – ಪತಿ ಜೊತೆಗಿನ ಫೋಟೊ ಹಂಚಿಕೊಂಡು ವಿಜಯಲಕ್ಷ್ಮೀ ವಿಶ್

Apaayavide Eccharike 139 scaled

ಬಿಡುಗಡೆಗೊಂಡು ಅತ್ಯಂತ ಕಡಿಮೆ ಅವಧಿಯಲ್ಲಿಯೇ ಪ್ರೇಕ್ಷಕರ ಕಡೆಯಿಂದ ಸಿಗುತ್ತಿರುವ ಭರಪೂರ ಪ್ರತಿಕ್ರಿಯೆ ಕಂಡು ನಿರ್ದೇಶಕ ಅಭಿಜಿತ್ ತೀರ್ಥಹಳ್ಳಿ ಸೇರಿದಂತೆ ಒಂದಿಡೀ ಚಿತ್ರತಂಡ ಖುಷಿಗೊಂಡಿದೆ. ಒಟ್ಟಾರೆಯಾಗಿ ಈ ಟ್ರೈಲರ್ ಪ್ರಾಮಿಸಿಂಗ್ ಆಗಿದೆ ಎಂಬಂಥಾ ಅಭಿಪ್ರಾಯ ಎಲ್ಲೆಡೆ ಮೂಡಿಕೊಳ್ಳುತ್ತಿದೆ.

Apaayavide Eccharike 102 scaled

ಪಂಚಭೂತಗಳ ಆಧಾರದಲ್ಲಿ ಇಲ್ಲಿನ ಪ್ರಧಾನ ಪಾತ್ರಗಳನ್ನು ನಿರ್ದೇಶಕರು ಸೃಷ್ಟಿಸಿದ್ದಾರಂತೆ. ವಿಕಾಸ್ ಉತ್ತಯ್ಯ, ರಾಘವ್ ಕೊಡಚಾದ್ರಿ, ಮಿಥುನ್ ತೀರ್ಥಹಳ್ಳಿ ಮುಖ್ಯ ಪಾತ್ರಗಳಿಗೆ ಜೀವ ತುಂಬಿದ್ದಾರೆ. ರಾಧಾ ಭಗವತಿ ನಾಯಕಿಯಾಗಿ ಸಾಥ್ ಕೊಟ್ಟಿದ್ದಾರೆ. ಹಾರರ್ ಸಿನಿಮಾ ಅಂದರೆ ಭೂತ ಬಂಗಲೆ ಸೇರಿದಂತೆ ಒಂದಷ್ಟು ಸಿದ್ಧ ಸೂತ್ರಗಳಿವೆ. ಅದೆಲ್ಲವನ್ನೂ ಮೀರಿಕೊಂಡು, ದಟ್ಟ ಕಾಡಿನಲ್ಲಿ ರಾತ್ರಿ ಘಟಿಸುವ ಕಥಾನಕವನ್ನಿಲ್ಲಿ ನಿರ್ದೇಶಕರು ಪ್ರೇಕ್ಷಕರ ಮುಂದಿಡಲಿದ್ದಾರೆ.

Apaayavide Eccharike 3

ಮಲೆನಾಡು ಭಾಗದ ದಟ್ಟ ಕಾಡಿನಲ್ಲಿ ಇದರ ಬಹುಪಾಲು ಚಿತ್ರೀಕರಣ ನಡೆದಿದೆ. ಅದರ ಅಸಲೀ ಸ್ವಾದವನ್ನು ಈ ಟ್ರೈಲರ್ ಹಿಡಿದಿಟ್ಟುಕೊಂಡಿದೆ. ಹರಿಣಿ ಶ್ರೀಕಾಂತ್, ಅಶ್ವಿನ್ ಹಾಸನ್ ಮುಂತಾದವರ ತಾರಾಗಣವಿದೆ. ವಿ.ಜಿ ಮಂಜುನಾಥ್ ಮತ್ತು ಪೂರ್ಣಿಮಾ ಗೌಡ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಅಪಾಯವಿದೆ ಎಚ್ಚರಿಕೆ ಪ್ರೇಕ್ಷಕರ ಮುಂದೆ ಬರಲು ಒಂದು ವಾರವಷ್ಟೇ ಬಾಕಿ ಉಳಿದುಕೊಂಡಿದೆ.

TAGGED:Abhijith ThirthahalliApaayavide EccharikeAshwin HassanRadha Bhagavatiಅಪಾಯವಿದೆ ಎಚ್ಚರಿಕೆಅಪಾಯವಿದೆ ಎಚ್ಚರಿಕೆ ಟ್ರೈಲರ್ಕನ್ನಡ ಸಿನಿಮಾ
Share This Article
Facebook Whatsapp Whatsapp Telegram

Cinema news

Prakash Raj
ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನ್ ಸಿನಿಮಾ ಪ್ರದರ್ಶನಕ್ಕೆ ನಟ ಪ್ರಕಾಶ್‍ ರಾಜ್‌ ಒತ್ತಾಯ – ಪರ ವಿರೋಧ ಚರ್ಚೆ
Bengaluru City Cinema Karnataka Latest Sandalwood States Top Stories
CJ Roy 3
ಸಿನಿ ರಂಗದೊಂದಿಗೆ ಸಿಜೆ ರಾಯ್‌ ನಂಟು ಅಪಾರ – ಕನ್ನಡ, ಮಲಯಾಳಂ ನಲ್ಲಿ 11 ಸಿನಿಮಾ ನಿರ್ಮಾಣ
Bengaluru City Cinema Districts Karnataka Latest Sandalwood Top Stories
Varanasi movie
ರಾಜಮೌಳಿ ನಿರ್ದೇಶನದ ‘ವಾರಣಾಸಿ’ ರಿಲೀಸ್‌ ಡೇಟ್‌ ಔಟ್‌
Cinema Latest South cinema Top Stories
Bengaluru 17th Film Festival
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಸಿಎಂ ಚಾಲನೆ
Bengaluru City Cinema Districts Karnataka Latest Sandalwood Top Stories

You Might Also Like

seemanth kumar singh
Bengaluru City

ಎದೆಗೆ ಗುಂಡು ಹಾರಿಸಿಕೊಂಡು ಸಿ.ಜೆ ರಾಯ್‌ ಆತ್ಮಹತ್ಯೆ – ಪೊಲೀಸ್‌ ಆಯುಕ್ತರ ಫಸ್ಟ್‌ ರಿಯಾಕ್ಷನ್‌!

Public TV
By Public TV
24 minutes ago
NALAPAD
Bengaluru City

ರಾಯ್ ತಂದೆ ಸ್ಥಾನದಲ್ಲಿದ್ರು – ಭಾವುಕರಾದ ನಲಪಾಡ್‌

Public TV
By Public TV
29 minutes ago
CID Baramati Plane Crash Ajit Pawar
Latest

ಅಜಿತ್ ಪವಾರ್ ಬಲಿ ಪಡೆದ ವಿಮಾನ ಅಪಘಾತದ ತನಿಖೆ ಆರಂಭಿಸಿದ ಸಿಐಡಿ

Public TV
By Public TV
2 hours ago
CJ Roy 2
Bengaluru City

ದೇಶದ ಶ್ರೀಮಂತ ಉದ್ಯಮಿಗಳಲ್ಲಿ ಒಬ್ಬರಾಗಿದ್ದ ರಾಯ್‌ – 1 ಗಂಟೆ ಐಟಿ ವಿಚಾರಣೆ ಬಳಿಕ ಆತ್ಮಹತ್ಯೆ; ಆಗಿದ್ದೇನು?

Public TV
By Public TV
2 hours ago
Young man kills father mother and sister buries them in house in Vijayanagar Kotturu
Bellary

ಅಪ್ಪ, ಅಮ್ಮ, ಸಹೋದರಿಯನ್ನು ಕೊಂದು ಮನೆಯಲ್ಲಿ ಹೂತು ಹಾಕಿದ ಕಟುಕ – ಮಿಸ್ಸಿಂಗ್‌ ಕಂಪ್ಲೇಂಟ್ ಕೊಡಲು ಹೋಗಿ ಸಿಕ್ಕಿಬಿದ್ದ

Public TV
By Public TV
2 hours ago
CJ Roy
Bengaluru City

ಐಟಿ ದಾಳಿಗೆ ಹೆದರಿ ಶೂಟ್ ಮಾಡಿಕೊಂಡು ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?