Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎಲ್ಲೋ ಜೋಗಪ್ಪ ನಿನ್ನರಮನೆ – ಅಲೆಮಾರಿಯಾದರೇ ಅಂಜನ್ ನಾಗೇಂದ್ರ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಎಲ್ಲೋ ಜೋಗಪ್ಪ ನಿನ್ನರಮನೆ – ಅಲೆಮಾರಿಯಾದರೇ ಅಂಜನ್ ನಾಗೇಂದ್ರ?

Cinema

ಎಲ್ಲೋ ಜೋಗಪ್ಪ ನಿನ್ನರಮನೆ – ಅಲೆಮಾರಿಯಾದರೇ ಅಂಜನ್ ನಾಗೇಂದ್ರ?

Public TV
Last updated: February 20, 2025 2:54 pm
Public TV
Share
2 Min Read
Yello Jogappa Nin Aramane 2
SHARE

ಕಿರುತೆರೆಯಲ್ಲಿ ಸ್ಟಾರ್ ನಿರ್ದೇಶಕರೆನ್ನಿಸಿಕೊಂಡಿರುವ ಹಯವದನ ನಿರ್ದೇಶನದ ಚೊಚ್ಚಲ ಸಿನಿಮಾ `ಎಲ್ಲೋ ಜೋಗಪ್ಪ ನಿನ್ನರಮನೆ’ (Yello Jogappa Nin Aramane). ಈ ವಾರ ಅಂದರೆ, ಫೆಬ್ರವರಿ 21ರಂದು ಬಿಡುಗಡೆಗೊಳ್ಳುತ್ತಿರುವ ಈ ಸಿನಿಮಾ ಈಗಾಗಲೇ ಟ್ರೈಲರ್ ಮೂಲಕ ಸಿನಿಮಾ ಪ್ರೇಮಿಗಳನ್ನೆಲ್ಲ ಆವರಿಸಿಕೊಂಡಿದೆ.

628A2172 scaled

ಪ್ರೇಮವೂ ಸೇರಿದಂತೆ ಬದುಕಿಗೆ ಹತ್ತಿರಾಗಿರುವ ಎಲ್ಲವನ್ನೂ ಒಳಗೊಂಡಂತೆ ಕಾಣಿಸುವ ಈ ಕಥಾನಕ ಸಿನಿಮಾ ಪ್ರೇಮಿಗಳ (Cinema Lovers) ವಲಯದಲ್ಲೊಂದು ಸಕಾರಾತ್ಮಕ ಚರ್ಚೆಯನ್ನೂ ಹುಟ್ಟುಹಾಕಿದೆ. ಈ ಚಿತ್ರ ನಾಯಕನಾಗಿ, ಭಿನ್ನ ಚಹರೆಗಗಳಿರುವ ವಿಶೇಷ ಪಾತ್ರದಲ್ಲಿ ನಟಿಸಿರುವವರು ಅಂಜನ್ ನಾಗೇಂದ್ರ. ಈ ಹಿಂದೆ ಕಂಬ್ಳಿಹುಳ ಎಂಬ ಚಿತ್ರದಲ್ಲಿ ನಾಯಕನಾಗಿ ನಟಿಸಿ ಮನ ಗೆದ್ದಿದ್ದ ಅಂಜನ್ ಎಲ್ಲೋ ಜೋಗಪ್ಪ ನಿನ್ನರಮನೆ ಚಿತ್ರದಲ್ಲಿ ಸಂಕೀರ್ಣವಾದ ಪಾತ್ರವನ್ನು ಆವಾಹಿಸಿಕೊಂಡಿರೋದು ಟ್ರೈಲರ್ ಮೂಲಕವೇ ಋಜುವಾತಾಗಿದೆ.

628A1451 scaled

ಮೂಲತಃ ಹಾಸನದವರಾದ (Hassan) ಅಂಜನ್ ನಾಗೇಂದ್ರ ಎಳವೆಯಿಂದಲೇ ರಂಗಭೂಮಿಯಲ್ಲಿ ಪಳಗಿಕೊಂಡಿರುವ ನಟ. ಇವರ ತಂದೆ ನಾರಾಯಣ್ ಕೂಡಾ ರಂಗಭೂಮಿಯಲ್ಲಿ ಹೆಸರಾಗಿರುವವರು. ಪ್ರೈಮರಿ ಶಾಲಾ ದಿನಗಳಲ್ಲಿಯೇ ಬಣ್ಣ ಹಚ್ಚಿದ ಅಂಜನ್ ಪಾಲಿಗೆ ನಟನೆ ಎಂಬುದು ಕರತಲಾಮಲಕವಾಗಿತ್ತು. ವಿಶೇಷವೆಂದರೆ, ಶಾಲಾ ಕಾಲೇಜು ಹಂತದವರೆಗೂ ಸಿನಿಮಾ ನಟನಾಗಬೇಕೆಂಬ ಕನಸೇನೂ ಅವರಲ್ಲಿರಲಿಲ್ಲ. ಎಂಜಿನಿಯರಿಂಗ್ ಪದವೀಧರರಾದ ಅಂಜನ್ ಕಾಲೇಜು ವ್ಯಾಸಂಗ ನಡೆಸುತ್ತಿರುವಾಗ ಒತ್ತಾಯ ಮಾಡಿ ಸಿನಿಮಾ ಒಂದರ ಆಡಿಷನ್ನಿಗೆ ತೆರಳುವಂತತೆ ಮಾಡಿದ್ದರಂತೆ. ಆ ಕ್ಷಣದಲ್ಲಿಯೇ ಎಲ್ಲರೂ ತನ್ನೊಳಗಿನ ನಟನನ್ನು ಗುರುತಿಸುತ್ತಿದ್ದಾರೆಂಬ ಮನವರಿಕೆಯಾಗಿ, ಆ ಮೇಲಿಂದ ನಟನೆಯತ್ತ ಆಕರ್ಷಿತರಾಗಿದ್ದವರು ಅಂಜನ್.

628A5246 scaled

ಎಂಜಿನಿಯರಿಂಗ್ ಪದವಿ ಮುಗಿಸಿಕೊಂಡು ಸಿನಿಮಾ ರಂಗದತ್ತ ಹೊರಳಿಕೊಂಡಿದ್ದ ಅಂಜನ್ ಎರಡು ವರ್ಷದ ಗಡುವು ವಿಧಿಸಿಕೊಂಡಿದ್ದರಂತೆ. ಪ್ರಯತ್ನಗಳಾಚೆಗೂ ಆ ಎರಡು ವರ್ಷಗಳಲ್ಲಿ ಏನೂ ಸಾಧ್ಯವಾಗಿರಲಿಲ್ಲ. ಕಡೆಗೂ ಲಾಕ್ ಡೌನ್ ಕಾಲದಲ್ಲಿ ಕಂಬ್ಳಿಹುಳ ಚಿತ್ರದ ನಾಯಕನಾಗೋ ಅವಕಾಶ ಬಂದೊದಗಿತ್ತು. ಅದೇ ಚಿತ್ರದ ಪ್ರೀಮಿಯರ್ ಶೋಗೆ ಬಂದಿದ್ದ ಹಯವದನ ಅದಾಗಲೇ ರೆಡಿಯಾಗಿದ್ದ ಕಥೆಗೆ ಅಂಜನ್ ನಾಯಕನಾಗೋದು ಪಕ್ಕಾ ಎಂಬಂಥಾ ನಿರ್ಧಾರ ಮಾಡಿದಂತಿದ್ದರು. ಕಂಬ್ಳಿಹುಳ ಚಿತ್ರ ನೋಡಿದ ನಂತರ ಅವರೊಳಗೆ ಅಂಜನ್ ನಟನೆಯ ಕಸುವಿನ ಬಗೆಗೊಂದು ನಂಬಿಕೆ ಮೂಡಿಕೊಂಡಿತ್ತು. ಆ ನಂತರ ಕಥಾ ಎಳೆ ಹೇಳಿದ್ದ ಹಯವದನ ಅವರು ರಿಹರ್ಸಲ್ಲಿಗೂ ಅಂಜನ್‌ರನ್ನು ತಯಾರುಗೊಳಿಸಿದ್ದರು.

628A5162 scaled

ಬೇರೆಯದ್ದೇ ತೆರನಾದ ಕಥೆ ಸಿಕ್ಕಿ, ಭಿನ್ನ ಬಗೆಯ ಪಾತ್ರ ಮಾಡಬೇಕೆಂಬ ತುಡಿತ ಹೊಂದಿದ್ದ ಅಂಜನ್ ಪಾಲಿಗೆ ಎಲ್ಲೋ ಜೋಗಪ್ಪ ನಿನ್ನರಮನೆ ಚಿತ್ರದ ಮೂಲಕ ಅದು ಸಾಧ್ಯವಾಗಿದೆ. ಕುಟುಂಬ ಸಮೇತರಾಗಿ ಕೂತು ನೋಡುವಂಥಾ, ಎಲ್ಲ ವರ್ಗದ ಪ್ರೇಕ್ಷಕರಿಗೂ ಹಿಡಿಸುವಂಥಾ ಈ ಸಿನಿಮಾ ಭಾಗವಾಗಿಒರುವ ಬಗ್ಗೆ ಅಂಜನ್ ಅವರೊಳಗೊಂದು ಹೆಮ್ಮೆ ಇದೆ. ಈ ಸಿನಿಮಾ ಮೂಲಕ ನಾಯಕ ನಟನಾಗಿ ತನ್ನ ಬದುಕಿನ ದಿಕ್ಕು ಬದಲಾದೀತೆಂಬ ತುಂಬು ನಂಬಿಕೆಯೂ ಅವರಲ್ಲಿದ್ದಂತಿದೆ. ಈ ಚಿತ್ರದ ಚಿತ್ರೀಕರಣದುದ್ದಕ್ಕೂ ಭಾರತವನ್ನಿಡೀ ಸುತ್ತುವ ಅವಕಾಶ ಅವರ ಪಾಲಿಗೆ ಒದಗಿ ಬಂದಿದೆ. ಸಾಕಷ್ಟು ರಿಸ್ಕು ತೆಗೆದುಕೊಂಡು, ಅತ್ಯಂತ ನೈಜವಾಗಿ ಪಾತ್ರಕ್ಕೆ ಜೀವ ತುಂಬಿರುವ ಖುಷಿಯೂ ಅವರಲ್ಲಿದೆ.

Yello Jogappa Nin Aramane

ಇಡೀ ಭಾರತದ ಅತ್ಯಂತ ಅಪರೂಪದ, ಸುಂದರ ಲೊಕೇಷನ್ನುಗಳಲ್ಲಿ ಈ ಸಿನಿಮಾ ಚಿತ್ರೀಕರಣಗೊಂಡಿದೆ. ಟ್ರೈಲರಿನಲ್ಲಿ ಕಂಡಂಥಾ ತಾಜಾ ತಾಜಾ ದೃಶ್ಯಗಳು ಚಿತ್ರದುದ್ದಕ್ಕೂ ಪ್ರೇಕ್ಷಕರನ್ನು ಚಕಿತಗೊಳಿಸಲಿವೆ ಎಂಬ ಭರವಸೆಯೂ ಅಂಜನ್ ನಾಗೇಂದ್ರ ಅವರಲ್ಲಿದೆ. ಪವನ್ ಶಿಮಿಕೇರಿ ಮತ್ತು ಸಿಂಧು ಹಯವದನ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಸೃಜನ್ ರಾಘವೇಂದ್ರ, ಚೇತನ್, ಹಯವದನ ಚಿತ್ರಕಥೆ, ವೇಣು ಹಸ್ರಾಳಿ ಸಂಭಾಷಣೆ, ನಟರಾಜು ಮದ್ದಾಲ ಛಾಯಾಗ್ರಹಣ, ಹೊಸ್ಮನೆ ಮೂರ್ತಿ ಕಲಾ ನಿರ್ದೇಶನ, ಶಿವಪ್ರಸಾದ್ ಸಂಗೀತ ನಿರ್ದೇಶನದೊಂದಿಗೆ ಮೂಡಿ ಬಂದಿರುವ ಈ ಚಿತ್ರ ಈ ವಾರ ಅಂದರೆ, ಫೆಬ್ರವರಿ 21ರಂದು ತೆರೆಗಾಣಲಿದೆ.

TAGGED:'ಎಲ್ಲೋ ಜೋಗಪ್ಪ ನಿನ್ನರಮನೆ'Anjan NagendraHayavadanaSanjana DossVenya raiYello Jogappa Nin Aramaneವೆನ್ಯಾ ರೈಹಯವದನ
Share This Article
Facebook Whatsapp Whatsapp Telegram

Cinema news

Raghavendra Chitravani 1
ರಾಘವೇಂದ್ರ ಚಿತ್ರವಾಣಿಗೆ 50ರ ಸಂಭ್ರಮ – ಸಿನಿ ಗಣ್ಯರಿಂದ ಲೋಗೋ ಲಾಂಚ್
Cinema Latest Sandalwood Top Stories
Gilli Nata 6
ಚನ್ನಪಟ್ಟಣದಲ್ಲಿ ಗಿಲ್ಲಿ ಕ್ರೇಜ್ – ವೇದಿಕೆ ಏರಿದ ಅಭಿಮಾನಿಗಳ ನಿಯಂತ್ರಣಕ್ಕೆ ಪೊಲೀಸರ ಹರಸಾಹಸ
Cinema Districts Karnataka Latest Ramanagara States Top Stories
Anantha Padmanabha
ಹಿಟ್‌ ಡೈಲಾಗ್‌ ರೈಟರ್‌ ಪ್ರಶಾಂತ್‌ ರಾಜಪ್ಪ ನಿರ್ದೇಶನದ ಚೊಚ್ಚಲ ಚಿತ್ರದ ಟೈಟಲ್ ರಿವೀಲ್
Cinema Latest Sandalwood
rashmika vijay devarakonda geetha govindam
ರಶ್ಮಿಕಾ, ವಿಜಯ್‌ ಮದುವೆಗೆ ಬೆಂಗಳೂರಿನಿಂದ ಹೂ ಪೂರೈಕೆ
Bengaluru City Cinema Latest Main Post Sandalwood South cinema Top Stories

You Might Also Like

Richa Ghosh
Cricket

ಕೊನೆಯಲ್ಲಿ ರೊಚ್ಚಿಗೆದ್ದ ರಿಚಾ, ಹೋರಾಡಿ ಸೋತ ಆರ್‌ಸಿಬಿ – ಮುಂಬೈಗೆ 15 ರನ್‌ ಜಯ

Public TV
By Public TV
7 hours ago
Yadagiri Fire Accident
Districts

ಆಕಸ್ಮಿಕ ಬೆಂಕಿಗೆ 10 ಲಕ್ಷ ರೂ. ಮೌಲ್ಯದ ಪೈಪ್‌ಗಳು ಸುಟ್ಟು ಭಸ್ಮ

Public TV
By Public TV
7 hours ago
Narendra Modi breaks protocol goes to airport to welcome UAE President Sheikh Mohamed bin Zayed Al Nahyan
Latest

ಮೋದಿ ಜೊತೆ ಮಾತುಕತೆ ನಡೆದ ಕೆಲ ದಿನಗಳಲ್ಲೇ ಪಾಕ್‌ ವಿಮಾನ ನಿಲ್ದಾಣ ನಿರ್ವಹಣೆಯಿಂದ ಹಿಂದೆ ಸರಿದ ಯುಎಇ

Public TV
By Public TV
8 hours ago
BMTC bus
Bengaluru City

ಟಿಕೆಟ್ ಇಲ್ಲದೇ ಬಸ್ಸಿನಲ್ಲಿ ಪ್ರಯಾಣಿಸಿದವರಿಗೆ ಬಿಸಿ – 6.34 ಲಕ್ಷ ದಂಡ ವಸೂಲಿ

Public TV
By Public TV
8 hours ago
Udupi Tourist Boat
Crime

ಉಡುಪಿಯಲ್ಲಿ ಮಗುಚಿದ ಬೋಟ್ – ಮೈಸೂರಿನ ಇಬ್ಬರು ಸಾವು, ಇನ್ನಿಬ್ಬರು ಗಂಭೀರ

Public TV
By Public TV
9 hours ago
𝗙𝗜𝗥𝗦𝗧 𝗛𝗨𝗡𝗗𝗥𝗘𝗗 𝗜𝗡 𝗧𝗛𝗘 𝗪𝗣𝗟 Nat Sciver Brunt makes history for Mumbai Indians against RCB 1
Cricket

WPL ಮೊದಲ ಶತಕ – ಸ್ಫೋಟಕ ಬ್ಯಾಟಿಂಗ್‌, ಇತಿಹಾಸ ಸೃಷ್ಟಿಸಿದ ಸಿವರ್ ಬ್ರಂಟ್

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?