Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cricket

4 ವರ್ಷಗಳ ದಾಂಪತ್ಯ ಜೀವನಕ್ಕೆ ಗುಡ್‌ಬೈ ಹೇಳಿದ ಚಹಲ್‌, ಧನಶ್ರೀ – ಮುಂಬೈ ಕೋರ್ಟ್‌ನಲ್ಲಿ ಏನಾಯ್ತು?

Public TV
Last updated: February 21, 2025 7:59 am
Public TV
Share
3 Min Read
Yuzvendra Chahal Dhanashree Verma 2
SHARE

ಮುಂಬೈ: ಟೀಂ ಇಂಡಿಯಾದ (Team India) ಸ್ಪಿನ್ನರ್ ಯಜುವೇಂದ್ರ ಚಹಲ್ (Yuzvendra Chahal) ಮತ್ತು ನಟಿ ಧನಶ್ರೀ (Dhanashree Verma) ಅಧಿಕೃತವಾಗಿ ಬೇರೆ ಬೇರೆಯಾಗಿದ್ದಾರೆ.

ಫೆ.20 ರಂದು ಬಾಂದ್ರಾ ಕುಟುಂಬ ನ್ಯಾಯಾಲಯದಲ್ಲಿ ದಂಪತಿಯ ಅಂತಿಮ ವಿಚ್ಛೇದನ (Divorce) ವಿಚಾರಣೆ ನಡೆಯಿತು. ಚಹಲ್ ಮತ್ತು ಧನಶ್ರೀ ಇಬ್ಬರೂ ಬೆಳಿಗ್ಗೆ 11 ಗಂಟೆಯಿಂದ ವಿಚಾರಣೆಗೆ ಹಾಜರಾಗಿದ್ದರು. ನ್ಯಾಯಾಲಯವು ಸುಮಾರು 45 ನಿಮಿಷಗಳ ಕಾಲ ನಡೆದ ಕೌನ್ಸಿಲಿಂಗ್‌ಗೆ ಹಾಜರಾಗುವಂತೆ ಅವರಿಗೆ ಸೂಚಿಸಿತು. ಅಲ್ಲಿ ಅವರು ಪರಸ್ಪರ ಒಪ್ಪಿಗೆಯ ಮೂಲಕ ಡಿವೋರ್ಸ್‌ ಪಡೆಯುತ್ತೇವೆ ಎಂದು ತಿಳಿಸಿದ್ದಾರೆ.

ತಮ್ಮ ವಿಚ್ಛೇದನದ ಹಿಂದಿನ ಕಾರಣದ ಬಗ್ಗೆ ಪ್ರಶ್ನಿಸಿದಾಗ, ಚಹಲ್ ಮತ್ತು ಧನಶ್ರೀ ‘ಹೊಂದಾಣಿಕೆಯ ಸಮಸ್ಯೆ’ ಕಾರಣವನ್ನು ನೀಡಿದ್ದಾರೆ. ಪ್ರಕರಣವನ್ನು ಪರಿಶೀಲಿಸಿದ ನಂತರ ಮತ್ತು ಎಲ್ಲಾ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆಯೇ ಎಂದು ಖಚಿತಪಡಿಸಿಕೊಂಡ ನಂತರ ನ್ಯಾಯಾಧೀಶರು ಸಂಜೆ 4:30ಕ್ಕೆ ಅಧಿಕೃತವಾಗಿ ಅವರ ವಿಚ್ಛೇದನ ತೀರ್ಪು ಪ್ರಕಟಿಸಿದರು.

Yuzvendra Chahal Dhanashree Verma 1

ಕೆಲ ದಿನಗಳಿಂದ ಇಬ್ಬರೂ ಡಿವೋರ್ಸ್ ಪಡೆಯಲಿದ್ದಾರೆ ಎಂದ ಸುದ್ದಿಯಾಗುತ್ತಿತ್ತು. ಆದರೆ ಅಧಿಕೃತವಾಗಿ ಇಬ್ಬರೂ ತಿಳಿಸಿರಲಿಲ್ಲ. ಡಿವೋರ್ಸ್‌ ಪಡೆದ ನಂತರ ಚಹಲ್‌ ಕೈಮಗಿಯುತ್ತಿರುವ ಹನುಮಂತನ ಚಿತ್ರ ಪ್ರಕಟಿಸಿದ್ದರೆ ಧನಶ್ರೀ ಇನ್‌ಸ್ಟಾದಲ್ಲಿ ಭಾವನಾತ್ಮಕ ಪೋಸ್ಟ್‌ ಪ್ರಕಟಿಸಿದ್ದಾರೆ. ಇದನ್ನೂ ಓದಿ: ಚಹಲ್‌, ಧನಶ್ರೀ ಸಂಪತ್ತು ಎಷ್ಟಿದೆ? ಆದಾಯದ ಮೂಲ ಯಾವುದು?

???????????????? pic.twitter.com/eaNcEJqv3l

— Yuzvendra Chahal (@yuzi_chahal) February 20, 2025

ಇನ್‌ಸ್ಟಾದಲ್ಲಿ ಚಹಲ್‌ ದೇವರು ನನ್ನನ್ನು ಎಷ್ಟೋ ಬಾರಿ ಕಾಪಾಡಿದ್ದಾನೆ. ನಾನು ಅವುಗಳನ್ನು ಸಂಖ್ಯೆಯಲ್ಲಿ ಎಣಿಸಲು ಸಹ ಸಾಧ್ಯವಿಲ್ಲ. ಕೆಲವೊಮ್ಮೆ ದೇವರು ನನ್ನ ಅರಿವಿಗೆ ಬಾರದೆಯೋ ನನ್ನ ಜೊತೆ ನಿಂತಿದ್ದಾನೆ. ನನಗೆ ತಿಳಿಯದೇ ನನ್ನನ್ನು ಬೆಂಬಲಿಸಿದ್ದಕ್ಕಾಗಿ ದೇವರಿಗೆ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.

Yuzi Chahal’s Instagram story. pic.twitter.com/mlEGpPOLLO

— Mufaddal Vohra (@mufaddal_vohra) February 20, 2025

ಧನಶ್ರೀ ಅವರು ಒತ್ತಡದಿಂದ ಅದೃಷ್ಟಶಾಲಿಯಾಗುವವರೆಗೆ. ದೇವರು ನಮ್ಮ ಒತ್ತಡವನ್ನು ಸಂತೋಷವಾಗಿ ಪರಿವರ್ತಿಸುವ ರೀತಿ ಎಷ್ಟು ಅದ್ಭುತವಾಗಿದೆ? ಇಂದು ನೀವು ಯಾವುದಾದರೂ ವಿಷಯದ ಬಗ್ಗೆ ಒತ್ತಡಕ್ಕೆ ಒಳಗಾದರೆ ಹೆಚ್ಚು ಯೋಚಿಸುತ್ತಿದ್ದರೆ, ನಿಮಗೆ ಒಂದು ಆಯ್ಕೆ ಇದೆ ಎಂಬುದನ್ನು ನೆನಪಿಡಿ. ನೀವು ಆ ಉದ್ವೇಗವನ್ನು ತೆಗೆದುಕೊಳ್ಳಬಹುದು ಅಥವಾ ನಿಮ್ಮ ಎಲ್ಲಾ ಚಿಂತೆಗಳನ್ನು ದೇವರಿಗೆ ಅರ್ಪಿಸಿ ಎಲ್ಲದಕ್ಕೂ ಪ್ರಾರ್ಥಿಸಬಹುದು.ದೇವರು ನಿಮ್ಮ ಒಳಿತಿಗಾಗಿ ಎಲ್ಲವನ್ನೂ ಮಾಡಬಹುದು ಎಂದು ನಂಬುವುದರಲ್ಲಿ ಬೇರೆಯದೇ ರೀತಿಯ ಶಕ್ತಿಯಿದೆ ಎಂಬುದಾಗಿ ಬರೆದುಕೊಂಡಿದ್ದಾರೆ.

Dhanashree Verma inst post

ಕೆಲ ತಿಂಗಳ ಹಿಂದೆ ಇಬ್ಬರೂ ಇನ್‌ಸ್ಟಾದಲ್ಲಿ ಪರಸ್ಪರ ಅನ್‌ಫಾಲೋ ಆಗಿದ್ದರು. ಆಗಲೇ ಇಬ್ಬರ ಮಧ್ಯೆ ಬಿರುಕು ಮೂಡಿದೆ ಎಂದು ವರದಿಯಾಗಿತ್ತು. ಇನ್‌ಸ್ಟಾದಲ್ಲಿ ಚಹಲ್‌ ಅವರು ಧನಶ್ರೀ ಜೊತೆಗಿನ ಫೋಟೋ ಡಿಲೀಟ್‌ ಮಾಡಿದ್ದರೆ ಧನಶ್ರೀ ಚಹಲ್‌ ಅವರೊಂದಿಗೆ ಫೋಟೋ ಡಿಲೀಟ್‌ ಮಾಡಿಲ್ಲ.

 

View this post on Instagram

 

A post shared by Dhanashree Verma (@dhanashree9)

ಭಾರತದ ಖ್ಯಾತ ಜೋಡಿಗಳಲ್ಲಿ ಒಬ್ಬರಾಗಿದ್ದ ಚಹಲ್ ಮತ್ತು ಧನಶ್ರೀ 2020ರ ಡಿಸೆಂಬರ್‌ನಲ್ಲಿ ಮದುವೆಯಾಗಿದ್ದರು. ಆ ಬಳಿಕ ಜೊತೆಯಾಗಿ ಕಾಣಿಸಿಕೊಳ್ಳುತ್ತಿದ್ದ ಈ ಜೋಡಿ ಬ್ರೇಕ್ ಅಪ್‍ಗೆ ಮುಂದಾಗಿದ್ದಾರೆ ಎಂದು ಎರಡು ವರ್ಷದ ಹಿಂದೆ ಸುದ್ದಿ ಪ್ರಕಟವಾಗಿತ್ತು. ನಂತರ ಇಬ್ಬರು ಜೊತೆಯಾಗಿ ಕಾಣಿಸಿಕೊಳ್ಳುವ ಮೂಲಕ ವದಂತಿಗೆ ತೆರೆ ಎಳೆದಿದ್ದರು. ಕೊರೋನಾ ಕಾಲದ ಲಾಕ್‌ಡೌನ್ ಸಂದರ್ಭದಲ್ಲಿ ಇಬ್ಬರ ನಡುವೆ ಪ್ರೀತಿ ಬೆಳೆದಿತ್ತು ಧನಶ್ರೀ ಎಂದು ಹೇಳಿದ್ದರು.

Yuzvendra Chahal and Dhanashree 1

ಹಿಂದೆ ಚಹಲ್ ಹೊಸ ಜೀವನ ಆರಂಭ ಎಂದು ಪೋಸ್ಟ್ ಹಾಕಿಕೊಂಡಿದ್ದರು. ಅದೇ ಸಮಯಕ್ಕೆ ಧನಶ್ರೀ ತಮ್ಮ ಇನ್‍ಸ್ಟಾಗ್ರಾಮ್ ಖಾತೆಯಲ್ಲಿದ್ದ ಸರ್ ನೇಮ್ ಚಹಲ್ ಪದವನ್ನು ಕಿತ್ತುಹಾಕಿ ಧನಶ್ರೀ ವರ್ಮಾ ಎಂದು ಬದಲಾವಣೆ ಮಾಡಿಕೊಂಡಿದ್ದರು.

ಸದ್ಯ ಟೀಂ ಇಂಡಿಯಾ ತಂಡದಲ್ಲಿ ಸ್ಥಾನ ಪಡೆಯಲು ಚಹಲ್‌ ವಿಫಲರಾಗಿದ್ದು 2023ರ ಜನವರಿಯಲ್ಲಿ ಕೊನೆಯ ಏಕದಿನ ಪಂದ್ಯವಾಡಿದ್ದರೆ, 2023ರ ಆಗಸ್ಟ್‌ನಲ್ಲಿ ಕೊನೆಯ ಟಿ20 ಪಂದ್ಯ ಆಡಿದ್ದರು.

ಐಪಿಎಲ್ 2025 ರ ಮೆಗಾ ಹರಾಜಿಗೆ ಮೊದಲು ಚಹಲ್ ಅವರನ್ನು ರಾಜಸ್ಥಾನ್ ರಾಯಲ್ಸ್ ತಂಡದಿಂದ ಕೈಬಿಟ್ಟಿತ್ತು. ನಂತರ ನಡೆದ ಹರಾಜು ಪ್ರಕ್ರಿಯೆಯಲ್ಲಿ ಪಂಜಾಬ್‌ ಕಿಂಗ್ಸ್‌ 18 ಕೋಟಿ ರೂ. ನೀಡಿ ಚಹಲ್‌ ಅವರನ್ನು ಖರೀದಿಸಿತ್ತು. ಚಹಲ್‌ 160 ಐಪಿಎಲ್‌ ಪಂದ್ಯವಾಡಿ 22.44 ರ ಸರಾಸರಿಯಲ್ಲಿ 205 ವಿಕೆಟ್ ಪಡೆದಿದ್ದಾರೆ.

TAGGED:Dhanashree VermaTeam indiaYuzvendra Chahalಟೀಂ ಇಂಡಿಯಾಧನಶ್ರೀಯಜುವೇಂದ್ರ ಚಹಲ್
Share This Article
Facebook Whatsapp Whatsapp Telegram

Cinema Updates

Kamal Haasan
ಕರ್ನಾಟಕದಲ್ಲಿ ಥಗ್‌ ಲೈಫ್‌ ರಿಲೀಸ್‌ಗಾಗಿ ಸುಪ್ರೀಂಗೆ PIL
18 hours ago
rakshitha prem
ಇಷ್ಟು ಜನ ಸೇರ್ತಾರೆ ಅಂತಾ ಗೊತ್ತಿರ್ಲಿಲ್ಲ ಅನ್ನೋದು ಎಷ್ಟು ಸರಿ? – ಕಾಲ್ತುಳಿತ ದುರಂತಕ್ಕೆ ರಕ್ಷಿತಾ ಬೇಸರ
21 hours ago
Khushi Mukherjee
ನಾನು ಚಡ್ಡಿ ಹಾಕಿದ್ನಾ.. ಇಲ್ವಾ ಅಂತ ಬಂದು ನೋಡಿದ್ರಾ? – ನೆಟ್ಟಿಗರ ಕಾಮೆಂಟ್‌ಗೆ ಖುಷಿ ಮುಖರ್ಜಿ ಬೋಲ್ಡ್‌ ಉತ್ತರ
22 hours ago
jayam ravi
ವದಂತಿ ಗೆಳತಿ ಜೊತೆ ಹಾರ ಹಾಕಿಸಿಕೊಂಡ ಜಯಂ ರವಿ
22 hours ago

You Might Also Like

D K Shivakumar
Bengaluru City

Chinnaswamy Stampede | ನಾನೇನ್ ಕ್ರೈಂ ಮಾಡಿದ್ದೀನಿ?: ಡಿ.ಕೆ ಶಿವಕುಮಾರ್‌

Public TV
By Public TV
15 minutes ago
Govindaraj NikhilSosale
Bengaluru City

ನಿಖಿಲ್‌ ಸೋಸಲೆನಾ ಬಿಟ್ಬಿಡಿ – ಪೊಲೀಸ್ರಿಗೆ ಒತ್ತಡ ಹಾಕಿದ್ದಕ್ಕೆ ಗೋವಿಂದರಾಜ್‌ ತಲೆದಂಡ

Public TV
By Public TV
54 minutes ago
chinnaswamy stadium
Bengaluru City

KSCA ವಿರುದ್ಧ ಬಲವಂತದ ಕ್ರಮ ಬೇಡ: ಹೈಕೋರ್ಟ್‌ ಮಧ್ಯಂತರ ಆದೇಶ

Public TV
By Public TV
1 hour ago
Nikhil Kumaraswamy
Bengaluru City

ಡಿ.ಕೆ ಶಿವಕುಮಾರ್ ಡಿಸಿಎಂ ಅಲ್ಲ, ರೀಲ್ಸ್ ಮಿನಿಸ್ಟರ್: ನಿಖಿಲ್ ಕುಮಾರಸ್ವಾಮಿ ಕಿಡಿ

Public TV
By Public TV
2 hours ago
R.ASHOK
Bengaluru City

ಕಾಲ್ತುಳಿತ ಪ್ರಕರಣ ನ್ಯಾಯಾಂಗ ತನಿಖೆಗೆ ಒಪ್ಪಿಸಿ, ಇದರಲ್ಲಿ ಸರ್ಕಾರವೇ ಅಪರಾಧಿ: ಆರ್.ಅಶೋಕ್

Public TV
By Public TV
2 hours ago
BY Vijayendra
Bengaluru City

ದುರ್ಘಟನೆಯಲ್ಲಿ ಪೊಲೀಸರನ್ನ ಹರಕೆಯ ಕುರಿ ಮಾಡಿದ್ದಾರೆ, ಸಿಎಂ, ಡಿಸಿಎಂ, ಪರಂ ರಾಜೀನಾಮೆ ಕೊಡ್ಬೇಕು: ವಿಜಯೇಂದ್ರ ಆಗ್ರಹ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?