ಚಿಕ್ಕೋಡಿ: ಮಹಾರಾಷ್ಟ್ರದಲ್ಲಿ ಶಿವಸೇನೆ (Shiv Sena) ಹಾಗೂ ಮಹಾರಾಷ್ಟ್ರ ನವನಿರ್ಮಾಣ ಸೇನೆ ಕಾರ್ಯಕರ್ತರ ಪುಂಡಾಟ ಮುಂದುವರೆದಿದೆ.
ಮಹಾರಾಷ್ಟ್ರದ ಪುಣೆಯ ಸ್ವಾರಗೇಟ್ ನಲ್ಲಿ KSRTC ಅಂಬಾರಿ ಬಸ್ ಮೇಲೆ ಕಪ್ಪು ಮಸಿ ಬಳಿದು ಪುಂಡಾಟಿಕೆ ಪ್ರದರ್ಶಿಸಿದ್ದಾರೆ. ಜಯ ಮಹಾರಾಷ್ಟ್ರ ಮರಾಠ ಮಾನುಸ ಎಂದು ಬರಹ ಬರೆದು ಪುಂಡಾಟ ಮೆರೆದಿದ್ದಾರೆ.
- Advertisement
ನಿನ್ನೆ ಪುಣೆಗೆ ತೆರಳಿದ್ದ ಬಸ್, ವಾಪಸ್ ಬರುವಾಗ ಮಸಿ ಬಳೆದು ಪುಂಡಾಟ ಮೆರೆದಿದ್ದಾರೆ. ಇನ್ನೂ ಮಹಾರಾಷ್ಟ್ರದಿಂದ ರಾಜ್ಯಕ್ಕೆ ಮಹಾರಾಷ್ಟ್ರ ಸಾರಿಗೆ ಬಸ್ ಸಂಚಾರ ಸಂಪೂರ್ಣ ಸ್ಥಗಿತಗೊಳಿಸುವಂತೆ ಮಹಾರಾಷ್ಟ್ರ ಸಾರಿಗೆ ಸಚಿವ ಪ್ರತಾಪ ಸರನಾಯಿ ಆದೇಶಿಸಿದ್ದಾರೆ. ಇದನ್ನೂ ಓದಿ: ಕನ್ನಡದಲ್ಲಿ ಮಾತನಾಡು ಎಂದಿದ್ದಕ್ಕೆ ಹಲ್ಲೆ – ಈಗ ನಿರ್ವಾಹಕನ ಮೇಲೆಯೇ ಪೋಕ್ಸೋ ಕೇಸ್ ದಾಖಲು
- Advertisement
ಎರಡು ಕಡೆ ಪರಿಸ್ಥಿತಿ ಸರಿ ಆಗುವವರೆಗೆ ಬಸ್ ಸಂಚಾರ ಸ್ಥಗಿತ ಮಾಡುವಂತೆ ಆದೇಶ ಮಾಡಿದ್ದಾರೆ. ಇದನ್ನೂ ಓದಿ: ಬೆಳಗಾವಿ: ಮರಾಠಿ ಬರಲ್ಲ.. ಕನ್ನಡದಲ್ಲಿ ಹೇಳಿ ಎಂದಿದ್ದಕ್ಕೆ ಬಸ್ ಕಂಡಕ್ಟರ್ ಮೇಲೆ ಹಲ್ಲೆ