Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪತ್ನಿ ನೀಡಿದ ಅರ್ಜಿಯಲ್ಲಿ ವೈಟ್ನರ್‌ ಬಳಕೆ ಮಾಡಿದ್ದು ತಿಳಿದಿಲ್ಲ: ಲೋಕಾ ಪೊಲೀಸರಿಗೆ ಸಿಎಂ ನೀಡಿದ ಉತ್ತರದಲ್ಲಿ ಏನಿದೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪತ್ನಿ ನೀಡಿದ ಅರ್ಜಿಯಲ್ಲಿ ವೈಟ್ನರ್‌ ಬಳಕೆ ಮಾಡಿದ್ದು ತಿಳಿದಿಲ್ಲ: ಲೋಕಾ ಪೊಲೀಸರಿಗೆ ಸಿಎಂ ನೀಡಿದ ಉತ್ತರದಲ್ಲಿ ಏನಿದೆ?

Bengaluru City

ಪತ್ನಿ ನೀಡಿದ ಅರ್ಜಿಯಲ್ಲಿ ವೈಟ್ನರ್‌ ಬಳಕೆ ಮಾಡಿದ್ದು ತಿಳಿದಿಲ್ಲ: ಲೋಕಾ ಪೊಲೀಸರಿಗೆ ಸಿಎಂ ನೀಡಿದ ಉತ್ತರದಲ್ಲಿ ಏನಿದೆ?

Public TV
Last updated: February 24, 2025 7:08 pm
Public TV
Share
2 Min Read
Siddaramaiah 3
SHARE

ಬೆಂಗಳೂರು: ನನ್ನ ಪತ್ನಿ ಪಾರ್ವತಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ(MUDA) ನೀಡಿರುವ ಅರ್ಜಿಯಲ್ಲಿ ವೈಟ್ನರ್‌ ಬಳಕೆ ಮಾಡಿದ ಬಗ್ಗೆ ನನಗೆ ತಿಳಿದಿಲ್ಲ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಲೋಕಾಯುಕ್ತಕ್ಕೆ ತಿಳಿಸಿದ್ದಾರೆ.

ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬಕ್ಕೆ ಲೋಕಾಯುಕ್ತ ಪೊಲೀಸರು (Lokayukta Police) ಕ್ಲೀನ್‌ಚಿಟ್‌ ನೀಡಿದ್ದಾರೆ. ಈಗ ಲೋಕಾಯುಕ್ತ ಪೊಲೀಸರ (Lokayukta Police) ವಿಚಾರಣೆಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿ, ಇತರರು ನೀಡಿದ್ದ ಉತ್ತರಗಳ ಪ್ರತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

ಈ ಮಧ್ಯೆ ತನಿಖೆಯ ಅಂತಿಮ ವರದಿಯ ಪ್ರತಿಯನ್ನು ದೂರುದಾರನಿಗೆ ಕೊಡಲು ಕೋರ್ಟ್ ಸೂಚಿಸಿದೆ. ಮುಂದಿನ ವಿಚಾರಣೆಯನ್ನು ಮಾರ್ಚ್ ಏಳಕ್ಕೆ ಮುಂದೂಡಿದೆ.

MUDA 1

ಸಿಎಂ ಹೇಳಿದ್ದೇನು?
1977 ರಲ್ಲಿ ವಿವಾಹಕ್ಕೂ ಮುನ್ನ ಮಲ್ಲಿಕಾರ್ಜುನಸ್ವಾಮಿ ಮತ್ತು ಅವರ ಕುಟಂಬದ ಪರಿಚಯವಿದೆ . ಮದುವೆ ನಂತರ ಮಲ್ಲಿಕಾರ್ಜುನ ಸ್ವಾಮಿ ಜೊತೆ ಯಾವುದೇ ಹಣಕಾಸಿನ ವ್ಯವಹಾರವಿಲ್ಲ, ಕೇವಲ ನನ್ನ ಬಾಮೈದ. ಕೆಸರೆ ಗ್ರಾಮದ 3 ಎಕರೆ 16 ಗುಂಟೆ ಜಮೀನು ಖರೀದಿ ವಿಚಾರ ನನಗೆ ಗೊತ್ತಿಲ್ಲ. 2013 ರಲ್ಲಿ ನನ್ನ ಪತ್ನಿ, ನನಗೆ ಹಾಗೂ ನನ್ನ ಮಗನಿಗೆ ತಿಳಿಸಿದ್ದಾರೆ.

ಜಮೀನು ಖರೀದಿ ವೇಳೆ ಯಾವುದೇ ಹಣಕಾಸಿನ ಸಹಾಯ ಮಾಡಿರುವುದಿಲ್ಲ, ಅವರೂ ಸಹ ಕೇಳಿಲ್ಲ. ಜಮೀನಿನ ಮಾಲೀಕತ್ವ ಯಾರಿಗೆ ಯಾರ ಹೆಸರಿಗೆ ಬದಲಾಯಿತು ಎಂಬ ವಿಚಾರ ಸಹ ನನಗೆ ತಿಳಿದಿಲ್ಲ. ಮೂಲ ಜಮೀನು ಮಾಲೀಕರಾದ ದೇವರಾಜು ಪರಿಚಯವೂ ನನಗಿಲ್ಲ. ಇದನ್ನೂ ಓದಿ: ಮತ್ತೆ ಒಂದಾಗ್ತಾರಾ ಉದ್ಧವ್, ರಾಜ್ ಠಾಕ್ರೆ? – ಆ ಫೋಟೋ ಮೂಡಿಸಿತು ಕುತೂಹಲ

1998ರಲ್ಲಿ ತಮ್ಮ ಜಮೀನನ್ನು ಭೂಸ್ವಾಧೀನದಿಂದ ಕೈಬಿಡುವಂತೆ ಕೋರಿದ ಬಗ್ಗೆಯೂ ತಿಳಿದಿಲ್ಲ, ಸಹಾಯವನ್ನೂ ನಾನು ಮಾಡಿರುವುದಿಲ್ಲ. ಮಲ್ಲಿಕಾರ್ಜುನ ಸ್ವಾಮಿ ಜಮೀನು ಭೂ ಪರಿವರ್ತನೆ ಮಾಡುವ ಸಮಯದಲ್ಲಿ ನನ್ನನ್ನು ಭೇಟಿಯಾಗಿಲ್ಲ, ಯಾವುದೇ ಸಹಾಯವನ್ನೂ ಕೇಳಿಲ್ಲ. ಆ ಸಮಯದಲ್ಲಿ ಕುಮಾರ್‌ ನಾಯಕ್ ಜಿಲ್ಲಾಧಿಕಾರಿಯಾಗಿದ್ದರು. ನಾನು ಯಾವುದೇ ಅಧಿಕಾರಿಗಳಿಗೂ ಶಿಫಾರಸು ಮಾಡಿಲ್ಲ.

 

ನನ್ನ ಪತ್ನಿಗೆ ಜಮೀನು ದಾನವಾಗಿ ಬಂದ ವಿಚಾರವನ್ನು 2013 ರ ಮಧ್ಯಭಾಗದಲ್ಲಿ ತಿಳಿಸಿರುತ್ತಾರೆ. 2013 ರಲ್ಲಿ ನಾನು ಸಿಎಂ ಆಗಿದ್ದ ಸಮಯದಲ್ಲಿ ಯಾವುದೇ ಕ್ರಮಗಳನ್ನು ತೆಗೆದುಕೊಂಡಿರುವುದಿಲ್ಲ. 50:50 ಅನುಪಾತದಲ್ಲಿ ಪರಿಹಾರ ನೀಡುವ ವಿಚಾರ ನನಗೆ ತಿಳಿದಿಲ್ಲ. ಆ ಸಮಯದಲ್ಲಿ ಶಾಸಕರಾಗಿದ್ದವರು ಮುಡಾ ಸದಸ್ಯರಾಗಿರುತ್ತಾರೆ. ನನ್ನ ಮಗ ಯತೀಂದ್ರ ಸಹ ಮುಡಾ ಸದಸ್ಯರಾಗಿದ್ದರು, ಆಗ ನಾನು ವಿಪಕ್ಷ ನಾಯಕನಾಗಿದ್ದೆ. 14 ನಿವೇಶನಗಳು ನೋಂದಣಿ ಬಳಿಕ ನನ್ನ ಪತ್ನಿ ತಿಳಿಸಿದರು.

ಯಾವ ಬಡಾವಣೆಯಲ್ಲಿ ನೀಡಿದ್ದಾರೆಂಬ ವಿಷಯ ನನಗೆ ತಿಳಿದಿರಲಿಲ್ಲ. 14 ನಿವೇಶನಗಳಿಗೆ ಎಂದೂ ಭೇಟಿ ನೀಡಿರುವುದಿಲ್ಲ. ಈ ಬಗ್ಗೆ ಮುಡಾ ಯಾವ ಅಧಿಕಾರಿಗಳೂ ನನ್ನನ್ನು ಸಂಪರ್ಕಿಸಿಲ್ಲ. ನಾನು ಯಾವುದೇ ನಿರ್ದೇಶನ ನೀಡಿಲ್ಲ, ನಾನು ಆಗ ಅಧಿಕಾರದಲ್ಲೂ ಇರಲಿಲ್ಲ . 2023ರ ಚುನಾವಣಾ ಘೋಷಣಾ ಪ್ರಮಾಣ ಪತ್ರದಲ್ಲಿ 14 ನಿವೇಶನಗಳ ಬಗ್ಗೆ ನಮೂದಿಸಿರುವ ವಿಚಾರ ನೆನಪಿಲ್ಲ. ನನ್ನ ಹೆಸರನ್ನು ಅನಗತ್ಯವಾಗಿ ಎಳೆದು ತಂದಿದ್ದರಿಂದ 14 ನಿವೇಶನಗಳನ್ನು ವಾಪಸ್ ಕೊಡುವ ನಿರ್ಧಾರ ನನ್ನ ಪತ್ನಿಯದ್ದೇ ಆಗಿದೆ.

14 ನಿವೇಶನಗಳ ಖಾತೆ ಮಾಡಿಕೊಡಲು ನನ್ನ ಪತ್ನಿ ಸಹಿ ಮಾಡುವ ಸ್ಥಳದಲ್ಲಿ ಕುಮಾರ್ ಸಹಿ ಮಾಡಿರುವ ವಿಚಾರ ನನಗೆ ತಿಳಿದು ಬಂತು. ನನ್ನ ಪತ್ನಿ ಅವರಿಗೆ ಸಹಿ ಮಾಡಲು ಅನುಮತಿಸಿರಬಹುದು. ನನ್ನ ಪತ್ನಿ ಮುಡಾಗೆ ನೀಡಿರುವ ಅರ್ಜಿಯಲ್ಲಿ ವೈಟ್ನರ್ ಹಾಕಿರುವ ಬಗ್ಗೆ ನನಗೆ ತಿಳಿದಿಲ್ಲ.

TAGGED:karnatakaLokayukta PoliceMUDAsiddaramaiahಪಾರ್ವತಿಮುಡಾಲೋಕಾಯುಕ್ತ ಪೊಲೀಸ್ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

yash
40ನೇ ವರ್ಷದ ಹುಟ್ಟುಹಬ್ಬ ಸಂಭ್ರಮದಲ್ಲಿ ʻಮಾಸ್ಟರ್‌ಪೀಸ್‌ʼ ರಾಕಿಭಾಯ್‌
Cinema Latest Main Post Sandalwood
Thalapathy Vijay Jana Nayagan
ವಿಜಯ್‌ ಫ್ಯಾನ್ಸ್‌ಗೆ ಶಾಕ್‌; ಜ.9 ಕ್ಕೆ ‘ಜನನಾಯಗನ್‌’ ರಿಲೀಸ್‌ ಆಗಲ್ಲ
Cinema Latest Main Post South cinema
Supreme Court and Ramya
ಪುರುಷರ ಮನಸ್ಸನ್ನು ಅರ್ಥ ಮಾಡ್ಕೊಳ್ಳಕ್ಕೆ ಆಗಲ್ಲ, ಹಾಗಾದ್ರೆ ಎಲ್ಲರನ್ನೂ ಜೈಲಿಗೆ ಹಾಕ್ಬೇಕಾ? – ರಮ್ಯಾ ವಿವಾದಾತ್ಮಕ ಪೋಸ್ಟ್
Latest Sandalwood Top Stories
yash 4
ನಿಮ್ಮನ್ನ ನೋಡೋಕೆ ನಾನೂ ಕಾಯ್ತಿದ್ದೀನಿ ಎಂದ ಯಶ್
Cinema Latest Sandalwood Top Stories

You Might Also Like

Tiger Accused
Chamarajanagar

ಮಲೆ ಮಹದೇಶ್ವರ ವನ್ಯಧಾಮದಲ್ಲಿ ದೈತ್ಯ ಹುಲಿ ಹತ್ಯೆ ಕೇಸ್‌ – ʻಶಿಕಾರಿʼ ರಾಜ ಗೋವಿಂದ ಅರೆಸ್ಟ್‌

Public TV
By Public TV
20 minutes ago
Donald Trump
Latest

ಅಮೆರಿಕದ ಉತ್ಪನ್ನಗಳನ್ನು ಮಾತ್ರ ವೆನೆಜುವೆಲಾ ಖರೀದಿಸಬೇಕು: ಟ್ರಂಪ್‌ ಕಟ್ಟಪ್ಪಣೆ

Public TV
By Public TV
47 minutes ago
Chikkaballapura 1
Chikkaballapur

ಚಿಕ್ಕಬಳ್ಳಾಪುರ | ಅಣ್ಣ-ತಂಗಿಯ ಅಕ್ರಮ ಸಂಬಂಧ – ತಂಗಿ ಸಾವಿನಲ್ಲಿ ಅಂತ್ಯ

Public TV
By Public TV
56 minutes ago
udp monkey fever 3
Latest

ಉತ್ತರ ಕನ್ನಡ ಜಿಲ್ಲೆಯಲ್ಲಿ ವರ್ಷದ ಮೊದಲ ಮಂಗನಕಾಯಿಲೆ ಪತ್ತೆ

Public TV
By Public TV
9 hours ago
Bike Wheeling Mysuru
Crime

Video Viral | ಪೊಲೀಸರ ಕಣ್ಣೆದುರೇ ಯುವಕರು ಡೆಡ್ಲಿ ಬೈಕ್ ವ್ಹೀಲಿಂಗ್

Public TV
By Public TV
9 hours ago
Kogilu Layout Demolition 20 officials of Rajiv Gandhi Housing Scheme visited site
Bengaluru City

ಕೋಗಿಲು ಲೇಔಟ್‌ ಒತ್ತುವರಿ ತೆರವು ಕೇಸ್;‌ ಭೂಕಬಳಿಕೆಯಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳ ಬಂಧನ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?