Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Karnataka

ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಿಗೆ ಅನುಮತಿ, ಅನುದಾನ ನೀಡಿ: ಕೇಂದ್ರಕ್ಕೆ ಡಿಕೆಶಿ ಮನವಿ

Public TV
Last updated: February 25, 2025 6:03 pm
Public TV
Share
4 Min Read
DCM DK Shivakumar
SHARE

ನವದೆಹಲಿ: ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಾದ ತುಂಗಭದ್ರಾ ಎಡದಂಡೆ ಕಾಲುವೆ, ಘಟಪ್ರಭಾ ಬಲದಂಡೆ ಪ್ರಮುಖ ಕಾಲುವೆ, ಕೃಷ್ಣಾ ಮೇಲ್ದಂಡೆ ಯೋಜನೆಯ ಇಂಡಿ ಕಾಲುವೆ, ಮಲಪ್ರಭಾ ಕಾಲುವೆಗಳ ವಿಸ್ತರಣೆ, ನವೀಕರಣ, ಆಧುನೀಕರಣಗೊಳಿಸಲು ಹಾಗೂ ಸೋಂತಿ ಏತ ನೀರಾವರಿ ಯೋಜನೆಗಳಿಗೆ ಅಗತ್ಯವಿರುವ ಅನುಮತಿ ಹಾಗೂ ಅನುದಾನ ನೀಡುವಂತೆ ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಅವರಿಗೆ ರಾಜ್ಯ ಜಲಸಂಪನ್ಮೂಲ ಸಚಿವ, ಡಿಸಿಎಂ ಡಿ.ಕೆ.ಶಿವಕುಮಾರ್ (DCM DK Shivakumar) ಮನವಿ ಮಾಡಿದರು.

DCM DK Shivakumar 1

ನವದೆಹಲಿಯಲ್ಲಿ (Newdelhi) ಕೇಂದ್ರ ಸಚಿವರನ್ನು ಭೇಟಿ ಮಾಡಿದ ಡಿಕೆಶಿ ಅವರು, ನೆನೆಗುದಿಗೆ ಬಿದ್ದಿರುವ ರಾಜ್ಯದ ಯೋಜನೆಗಳಿಗೆ ಅನುದಾನ ಹಾಗೂ ಅನುಮತಿ ನೀಡಲು ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ, ರಾಜ್ಯ ಸಣ್ಣ ನೀರಾವರಿ ಸಚಿವ ಬೋಸರಾಜು, ದೆಹಲಿಯಲ್ಲಿ ರಾಜ್ಯ ಸರ್ಕಾರದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ, ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ಗೌರವ್ ಗುಪ್ತಾ, ಮತ್ತಿತರರು ಉಪಸ್ಥಿತರಿದ್ದರು.ಇದನ್ನೂ ಓದಿ: ಕೋರ್ಟ್ ಹಾಲ್‌ನಲ್ಲಿ ಪವಿತ್ರಾ, ದರ್ಶನ್ ದೂರ ದೂರಾ – ಕಣ್ಣೀರಿಡುತ್ತ ತೆರಳಿದ ಗೆಳತಿ!

ಭದ್ರಾ ಎಡದಂಡೆ ಕಾಲುವೆಯ ವಿಸ್ತರಣೆ, ನವೀಕರಣ, ಆಧುನೀಕರಣಗೊಳಿಸುವ ಯೋಜನೆಗೆ ಕರ್ನಾಟಕ ಸರ್ಕಾರವು ಈಗಾಗಲೇ ಕೇಂದ್ರ ಜಲ ಆಯೋಗಕ್ಕೆ ವಿಸ್ತೃತ ಯೋಜನಾ ವರದಿಯನ್ನು ಸಲ್ಲಿಸಿದೆ. ತುಂಗಭದ್ರಾ ಎಡದಂಡೆ ಕಾಲುವೆಯು 226 ಕಿ.ಮೀ ಉದ್ದ ಹರಿಯಲಿದ್ದು, ಉತ್ತರ ಕರ್ನಾಟಕದ 2,44,103 ಹೆಕ್ಟೇರ್ ಕೃಷಿ ಭೂಮಿಗೆ ನೀರಾವರಿ ಒದಗಿಸಲಿದೆ. ಈ ಯೋಜನೆಯಿಂದಾಗಿ ಕಾಲುವೆಯ ಕೊನೆ ಭಾಗದ ರೈತರಿಗೂ ನೀರು ಸಮನಾಂತರವಾಗಿ ಹಂಚಿಕೆಯಾಗಲಿದೆ. ಜೊತೆಗೆ 96,400 ಹೆಕ್ಟೇರ್ ಪ್ರದೇಶದ ರೈತರಿಗೆ ನೆರವಾಗಲಿದೆ. ಈ ಯೋಜನೆಗೆ 1,444.42 ಕೋಟಿ ರೂ.ಗಳ ಅನುದಾನ ಅಗತ್ಯವಿದೆ. ಪ್ರಧಾನಮಂತ್ರಿ ಕೃಷಿ ಸಿಂಚಯೀ ಯೋಜನೆ- ವೇಗವರ್ಧಿತ ನೀರಾವರಿ ಪ್ರಯೋಜನಗಳ ಕಾರ್ಯಕ್ರಮ ಅಡಿಯಲ್ಲಿ ಈ ಯೋಜನೆಗಳಿಗೆ ಅನುದಾನ ನೀಡಬೇಕು ಎಂದು ಪ್ರಸ್ತಾವನೆ ಸಲ್ಲಿಸಲಾಗಿದೆ.

Met Union Jal Shakti Minister Shri. @CRPaatil and Union Minister of State for the Ministry of Jal Shakti Shri. @VSOMANNA_BJP in Delhi, urging them to approve and allocate funds for the pending water projects- Mekedatu & Upper Bhadra and other major projects in Karnataka.… pic.twitter.com/laRxwjETPy

— DK Shivakumar (@DKShivakumar) February 25, 2025

ಘಟಪ್ರಭಾ ಬಲದಂಡೆ ಪ್ರಮುಖ ಕಾಲುವೆಯ 199.09 ಕಿ.ಮೀವರೆಗೆ ಹಾಗೂ ಚಿಕ್ಕೋಡಿ ಭಾಗದ ಕಾಲುವೆ 30 ಕಿ.ಮೀ.ನಿಂದ 88.25 ಕಿ.ಮೀ.ವರೆಗೆ ಕಾಲುವೆಗಳ ವಿಸ್ತರಣೆ, ನವೀಕರಣ, ಆಧುನೀಕರಣಗೊಳಿಸಲು ಕರ್ನಾಟಕ ಸರ್ಕಾರ ಫೆ.10,2025 ರಂದುವಿಸ್ತೃತ ಯೋಜನಾ ವರದಿಯನ್ನು ಸಲ್ಲಿಕೆ ಮಾಡಿದೆ. ಇದರಿಂದ ಈ ಭಾಗದ ರೈತರಿಗೆ ನೀರನ್ನು ಸಮರ್ಪಕವಾಗಿ ಪೂರೈಸಲು ನೆರವಾಗಲಿದ್ದು, ಈ ಯೋಜನೆಗೆ ಪಿಎಂಕೆಎಸ್ ವೈ-ಎಐಬಿಪಿ ಯೋಜನೆ ಅಡಿಯಲ್ಲಿ 1,596.98 ಕೋಟಿ ರೂ.ಗಳ ಅನುದಾನ ಒದಗಿಸಬೇಕು ಎಂದು ಮನವಿ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಭಾರತ ಸರ್ಕಾರದ ಪ್ರವಾಹ ನಿರ್ವಹಣೆ ಮತ್ತು ಗಡಿ ಪ್ರದೇಶ ಕಾರ್ಯಕ್ರಮ ಯೋಜನೆ ಅಡಿಯಲ್ಲಿ ಬೆಣ್ಣಿಹಳ್ಳದಿಂದ ಮಲಪ್ರಭಾದ ಸಂಗಮದವರೆಗೂ ಪ್ರವಾಹ ನಿಯಂತ್ರಣ ಹಾಗೂ ಪ್ರವಾಹ ನಿರ್ವಹಣೆಯ ಕಾಮಗಾರಿಯನ್ನು ನಡೆಸಲು ಅಗತ್ಯವಿರುವ 1,610.00 ಕೋಟಿ ರೂ. ಅನುದಾನವನ್ನು ನೀಡಬೇಕು. ಈ ವಿಚಾರವಾಗಿ ರಾಜ್ಯ ಸರ್ಕಾರವು ದಿನಾಂಕ ಫೆ.10,2025ರಂದು ವಿಸ್ತೃತ ಯೋಜನಾ ವರದಿಯನ್ನು ಸಲ್ಲಿಕೆ ಮಾಡಿದೆ. ಈ ಭಾಗದಲ್ಲಿ ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ಅಕಾಲಿಕ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಉಂಟಾಗಲಿದ್ದು, ನೀರಿನ ಮಟ್ಟ ಹೆಚ್ಚಾಗಿ ನದಿಯ ಹರಿವು ಬೇರೆಡೆಗೆ ತಿರುಗುತ್ತದೆ. ಇದರಿಂದ ಪ್ರವಾಹ ಉಂಟಾಗಿ ಜನಜೀವನ ಅಸ್ಥವ್ಯಸ್ಥವಾಗುತ್ತಿದೆ. ಹೀಗಾಗಿ ಜಲಶಕ್ತಿ ಸಚಿವಾಲಯದ ಕೇಂದ್ರ ಜಲ ಆಯೋಗದ ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಬೇಕು ಹಾಗೂ ಕೇಂದ್ರ ಸರ್ಕಾರದ ಕಾರ್ಯಕ್ರಮದಡಿಯಲ್ಲಿ ಅನುದಾನ ನೀಡಬೇಕು ಎಂದು ಪತ್ರದಲ್ಲಿ ತಿಳಿಸಲಾಗಿದೆ.ಇದನ್ನೂ ಓದಿ: ಪಂಜಾಬ್‌ನ ಆಪ್‌ ಸರ್ಕಾರದಿಂದ ಬುಲ್ಡೋಜರ್ ಅಸ್ತ್ರ – ಡ್ರಗ್ ಮಾಫಿಯಾ ಕಿಂಗ್‌ಗಳ ಮನೆ ನೆಲಸಮ

ಸೋಂತಿ ಏತ ನೀರಾವರಿ ಯೋಜನೆಯು ಸೋಂತಿ ಬ್ಯಾರೇಜ್‌ನಿಂದ ನೀರನ್ನು ಎತ್ತಿ ಕಾಲುವೆಗಳ ಮೂಲಕ ಬರಪೀಡಿತ ಚಿತ್ತಾಪುರ, ಯಾದಗಿರಿ ತಾಲೂಕಿನಲ್ಲಿ 16,000 ಹೆಕ್ಟೇರ್ ಕೃಷಿ ಭೂಮಿಗೆ 4 ಟಿಎಂಸಿ ನೀರನ್ನು ಒದಗಿಸುವ ಯೋಜನೆಯಾಗಿದೆ. ರಾಜ್ಯ ಸರ್ಕಾರವು ಈಗಾಗಲೇ ಈ ಯೋಜನೆಯ ವಿಸ್ತೃತ ಯೋಜನಾ ವರದಿಯನ್ನು ಸಲ್ಲಿಕೆ ಮಾಡಿದ್ದು, ಮೇ.25,2015ರಂದು ಕೇಂದ್ರ ಜಲಸಂಪನ್ಮೂಲ ಸಚಿವಾಲಯದ ತಾಂತ್ರಿಕ ಸಲಹಾ ಸಮಿತಿಯ 125ನೇ ಸಭೆಯಲ್ಲಿ 673.90 ಕೋಟಿ ರೂ. ಮೊತ್ತದ ಡಿಪಿಆರ್‌ಗೆ ಅನುಮೋದನೆ ನೀಡಲಾಗಿತ್ತು. ನಂತರ 2017ರಲ್ಲಿ ಈ ಯೋಜನೆಗೆ ಅರಣ್ಯ ಇಲಾಖೆ ಅನುಮತಿಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಈಗ ಈ ಯೋಜನೆಯ ಮೊತ್ತ 804.66 ರೂ.ಗೆ ಏರಿಕೆಯಾಗಿದ್ದು, ಪಿಎಂಕೆಎಸ್ ವೈ-ಎಐಬಿಪಿ ಯೋಜನೆ ಅಡಿಯಲ್ಲಿ ಈ ಅನುದಾನ ನೀಡಬೇಕು. ಜೊತೆಗೆ ಅಗತ್ಯವಿರುವ ಅನುಮತಿಯನ್ನು ನೀಡಲು ಕೇಂದ್ರ ಜಲ ಆಯೋಗದ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಲಾಗಿದೆ.

DCM DK Shivakumar 2

ಕೃಷ್ಣಾ ಮೇಲ್ದಂಡೆ ಯೋಜನೆಯಲ್ಲಿ ಪ್ರಮುಖ ಭಾಗವಾಗಿರುವ 172 ಕಿ.ಮೀ ಉದ್ದದ ಇಂಡಿ ಕಾಲುವೆ ಯೋಜನೆಯು ಕಲಬುರಗಿ, ಯಾದಗಿರಿ ಮತ್ತು ವಿಜಯಪುರ ಜಿಲ್ಲೆಯ 1.31 ಲಕ್ಷ ಹೆಕ್ಟೇರ್ ಕೃಷಿ ಪ್ರದೇಶಕ್ಕೆ ನೀರಾವರಿ ಒದಗಿಸಲಿದೆ. ಹೀಗಾಗಿ ಕರ್ನಾಟಕ ಸರ್ಕಾರ ಇಂಡಿ ಕಾಲುವೆಯ 64.00 ಕಿ.ಮೀ.ನಿಂದ 172.00ವರೆಗೂ ವಿಸ್ತರಣೆ, ನವೀಕರಣ, ಆಧುನೀಕರಣಗೊಳಿಸಲು ತೀರ್ಮಾನಿಸಿದ್ದು, ಈ ಯೋಜನೆಗಾಗಿ 2666.70 ಕೋಟಿ ರೂ. ಮೊತ್ತದ ಪೂರ್ವ ಕಾರ್ಯಸಾಧ್ಯತಾ ವರದಿಯನ್ನು ದಿನಾಂಕ ಫೆ,20,2025ರಂದು ಸಲ್ಲಿಸಲಾಗಿದೆ. ಈ ಪೂರ್ವ ಕಾರ್ಯಸಾಧ್ಯತಾ ವರದಿಯನ್ನು ಪರಿಗಣಿಸಿ, ಪಿಎಂಕೆಎಸ್ ವೈ-ಎಐಬಿಪಿ ಯೋಜನೆ ಅಡಿಯಲ್ಲಿ ಈ ಯೋಜನೆಗೆ ಅನುದಾನ ಒದಗಿಸಬೇಕು ಎಂದು ಮನವಿ ಮಾಡಲಾಗಿದೆ.

ಇನ್ನೂ ಮಲಪ್ರಭಾ ಕಾಲುವೆ ಯೋಜನೆಯ ಮೂರನೇ ಹಂತದಲ್ಲಿ ಕಾಲುವೆಗಳ ವಿಸ್ತರಣೆ, ನವೀಕರಣ, ಆಧುನೀಕರಣಗೊಳಿಸಲು ತೀರ್ಮಾನಿಸಿದ್ದು, ಇದಕ್ಕಾಗಿ 3,000.00 ಕೋಟಿ ರೂ.ಗಳು ಅಗತ್ಯವಿದೆ. ಇದರ ವಿಸ್ತೃತ ಯೋಜನಾ ವರದಿಯನ್ನು ಸಲ್ಲಿಸಲಾಗಿದೆ. ಈ ಯೋಜನೆಯಿಂದ ಬರಪೀಡಿತ ಪ್ರದೇಶಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸಲಾಗುವುದು. ಹೀಗಾಗಿ ಸಚಿವಾಲಯವು ಡಿಪಿಆರ್‌ಗೆ ಅನುಮತಿ ನೀಡಿ ಈ ಯೋಜನೆಗೆ ಅಗತ್ಯವಿರುವ ಅನುಮತಿಯನ್ನು ಕೊಡಿಸುವಂತೆ ಕೇಂದ್ರ ಜಲ ಆಯೋಗದ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು. ಜತೆಗೆ ಈ ಯೋಜನೆಗೆ ಅಗತ್ಯವಾಗಿರುವ ಅನುದಾನವನ್ನು ಪಿಎಂಕೆಎಸ್ ವೈ-ಎಐಬಿಪಿ ಯೋಜನೆ ಅಡಿಯಲ್ಲಿ ಒದಗಿಸಬೇಕು ಎಂದು ಮನವಿ ಮಾಡಲಾಗಿದೆ.ಇದನ್ನೂ ಓದಿ: ಮಹಾ ಶಿವರಾತ್ರಿಯಂದು ಭೇಟಿ ನೀಡಬಹುದಾದ ದಕ್ಷಿಣ ಕರ್ನಾಟಕದ ಪುರಾಣ ಪ್ರಸಿದ್ಧ ದೇವಾಲಯಗಳು

TAGGED:Central GovernmentDCM DK ShivakumarIrrigation Schemenewdelhiಡಿಸಿಎಂ ಡಿ.ಕೆ.ಶಿವಕುಮಾರ್ನವದೆಹಲಿ
Share This Article
Facebook Whatsapp Whatsapp Telegram

Cinema News

Shoba Karandlaje
ವಿಷ್ಣು ಸಮಾಧಿ ಸ್ಥಳವನ್ನು ಕಲಾಗ್ರಾಮವನ್ನಾಗಿ ಮಾಡಿ – ಸಿಎಂಗೆ ಶೋಭಾ ಕರಂದ್ಲಾಜೆ ಪತ್ರ
Bengaluru City Cinema Karnataka Latest Sandalwood States Top Stories
upendra1
ವಿಷ್ಣು ಸರ್‌ ನನ್ನಂಥ ಅಭಿಮಾನಿಗಳ ಹೃದಯದಲ್ಲಿ ಎಂದೆಂದಿಗೂ ಶಾಶ್ವತ – ನಟ ಉಪೇಂದ್ರ
Cinema Latest Sandalwood Top Stories
the devil first single
‘ಇದ್ರೆ ನೆಮ್ಮದಿಯಾಗ್ ಇರ್ಬೇಕು’ ಎಂದ ದರ್ಶನ್!
Cinema Latest Sandalwood Top Stories
Dhruva Sarja 1
ಧ್ರುವ ಸರ್ಜಾ ಮಕ್ಕಳ ರಕ್ಷಾಬಂಧನ ಆಚರಣೆ
Cinema Latest Sandalwood
Sumalatha
ಕೋರ್ಟ್‌ ಆದೇಶದ ಮುಂದೆ ನಾವೆಲ್ಲ ನಿಸ್ಸಹಾಯಕರು – ವಿಷ್ಣು ಸಮಾಧಿ ತೆರವಿಗೆ ನಟಿ ಸುಮಲತಾ ಬೇಸರ
Bengaluru City Cinema Districts Karnataka Latest Main Post Sandalwood

You Might Also Like

Priyank Kharge 1
Latest

ಪ್ರಿಯಾಂಕ್ ಖರ್ಗೆ V/s ಆರ್‌.ಅಶೋಕ್‌ ಮಧ್ಯೆ ಟ್ವೀಟ್ ವಾರ್‌ – ವೈಯಕ್ತಿಕ ಮಟ್ಟಕ್ಕೆ ತಿರುಗಿದ ಫೈಟ್‌

Public TV
By Public TV
5 hours ago
Basanagouda Patil Yatnal
Districts

ಮುಸ್ಲಿಂ ಯುವತಿಯರನ್ನ ಮದ್ವೆಯಾದ್ರೆ 5 ಲಕ್ಷ: ಯತ್ನಾಳ್‌ ಘೋಷಣೆ

Public TV
By Public TV
6 hours ago
Public TV VidyaMandira
Bengaluru City

ವ್ಹೀಲ್‌ಚೇರ್‌ನಲ್ಲಿ ಪಬ್ಲಿಕ್‌ ಟಿವಿ ʻವಿದ್ಯಾಮಂದಿರʼಕ್ಕೆ ಬಂದು ಮಾಹಿತಿ ಪಡೆದ ವಿದ್ಯಾರ್ಥಿ

Public TV
By Public TV
7 hours ago
Kalaburagi 1
Bagalkot

ಕಾರು-ಬಸ್ ನಡ್ವೆ ಭೀಕರ ಅಪಘಾತ; ತಂದೆ-ಮಗ ಸ್ಥಳದಲ್ಲೇ ಸಾವು

Public TV
By Public TV
8 hours ago
Shivamogga Fire Accident
Crime

ಶಿವಮೊಗ್ಗ | ಆಟೋ ಕಾಂಪ್ಲೆಕ್ಸ್‌ನಲ್ಲಿ ಅಗ್ನಿ ಅವಘಡ – 2 ಕಾರು ಭಸ್ಮ

Public TV
By Public TV
8 hours ago
Rajnath Singh
Latest

ʻಎಲ್ಲರ ಬಾಸ್‌ ನಾವೇʼ ಅನ್ನೋರು ಭಾರತದ ಬೆಳವಣಿಗೆ ಸಹಿಸುತ್ತಿಲ್ಲ – ಟ್ರಂಪ್‌ಗೆ ರಾಜನಾಥ್‌ ಸಿಂಗ್‌ ಗುದ್ದು

Public TV
By Public TV
9 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?