Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾರತದ ಅತಿದೊಡ್ಡ ಗ್ರೀನ್‌ಫೀಲ್ಡ್ ‘ದೇಶೀಯ ಕಾರ್ಗೋ ಟರ್ಮಿನಲ್’ ಪ್ರಾರಂಭ

Public TV
Last updated: February 27, 2025 6:23 pm
Public TV
Share
4 Min Read
green field cargo terminal bengaluru airport
SHARE

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ವಿನ್ಯಾಸ ಸಾಮರ್ಥ್ಯದಲ್ಲಿ ಭಾರತದಲ್ಲೇ ಅತಿದೊಡ್ಡ ಗ್ರೀನ್‌ಫೀಲ್ಡ್ ದೇಶೀಯ ಕಾರ್ಗೋ ಟರ್ಮಿನಲ್‌ (ಡಿಸಿಟಿ) ಪ್ರಾರಂಭವಾಗಿದೆ.

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತ ಮತ್ತು ವಾಯುಯಾನ ಸರಕು ಸಾಗಣೆ ಕ್ಷೇತ್ರದ ಮೆನ್ಜೀಸ್ ಏವಿಯೇಷನ್ ಸಂಸ್ಥೆಗಳ ಸಹಯೋಗದಲ್ಲಿ ನಿರ್ಮಾಣವಾದ 245,000 ಚದರ ಅಡಿ ವ್ಯಾಪ್ತಿಯ ಈ ಕಾರ್ಗೋ ಟರ್ಮಿನಲ್‌ನ್ನು, ದೇಶೀಯವಾಗಿ ಹೆಚ್ಚುತ್ತಿರುವ ವಾಯುಮಾರ್ಗ ಸರಕು ಸಾಗಣೆಯ ಬೇಡಿಕೆಯನ್ನು ಪೂರೈಸುವ ನಿಟ್ಟಿನಲ್ಲಿ ಅತ್ಯಾಧುನಿಕ ಮೂಲಸೌಕರ್ಯದೊಂದಿಗೆ ವಿಶಾಲವಾಗಿ ವಿನ್ಯಾಸಗೊಳಿಸಲಾಗಿದೆ.

green field cargo terminal bengaluru airport 1

ಕೈಗಾರಿಕೆಗಳ ಸಂಪರ್ಕ ಮತ್ತು ಪೂರೈಕೆ ಸರಪಳಿಗಳ ಬಲಪಡಿಸುವಿಕೆಯಲ್ಲಿ ಹೊಸ ಕಾರ್ಗೋ ಟರ್ಮಿನಲ್‌ ಮಹತ್ವದ ಪಾತ್ರ ವಹಿಸಲಿದ್ದು, ದೇಶದಲ್ಲಿ ಸರಕು ಸಾಗಣೆ ಮತ್ತು ಪ್ರಾದೇಶಿಕ ವ್ಯಾಪಾರದ ಭವಿಷ್ಯವನ್ನು ಸುಸ್ಥಿರಗೊಳಿಸಲಿದೆ. ಜೊತೆಗೆ, ದೇಶೀಯ ವಾಯುಮಾರ್ಗ ಸರಕು ಸಾಗಣೆಯ ನಿರ್ವಹಣೆಯಲ್ಲಿ ಬೆಂಗಳೂರು ವಿಮಾನ ನಿಲ್ದಾಣವನ್ನು ಮುಂಚೂಣಿಯಲ್ಲಿರಿಸಲಿದೆ.

ಅತಿದೊಡ್ಡ, ಉತ್ತಮ ಮತ್ತು ಸುಧಾರಿತ ಸೌಕರ್ಯ:
ಬರೋಬ್ಬರಿ 7 ಎಕರೆಯಲ್ಲಿ ವ್ಯಾಪಿಸಿರುವ ಬೃಹತ್‌ ದೇಶೀಯ ಕಾರ್ಗೋ ಟರ್ಮಿನಲ್‌, ಸುಮಾರು 360,000 ಮೆಟ್ರಿಕ್ ಟನ್‌ಗಳ ಗರಿಷ್ಠ ನಿರ್ವಹಣಾ ಸಾಮರ್ಥ್ಯ ಮತ್ತು 400,000 ಮೆಟ್ರಿಕ್ ಟನ್‌ಗಳವರೆಗೆ ವಿಸ್ತರಿಸಬಹುದಾದ ಅವಕಾಶವನ್ನು ಸಹ ಹೊಂದಿದೆ. ಜೊತೆಗೆ, ಸುಮಾರು 42 ಬೃಹತ್‌ ಟ್ರಕ್‌ಗಳು, 400 ಕ್ಕೂ ಹೆಚ್ಚು ವಿಶೇಷವಾಗಿ ವಿನ್ಯಾಸಗೊಳಿಸಲಾದ ಕಾರ್ಗೋ ಬೋಗಿಗಳು ಸಂಚರಿಸುವ ಸಾಮರ್ಥ್ಯವನ್ನು ಹೊಸ ಕಾರ್ಗೋ ಟರ್ಮಿನಲ್‌ ಹೊಂದಿದೆ.

ಸರಕುಗಳನ್ನು ಪರೀಕ್ಷಿಸುವ ಎಕ್ಸ್‌-ರೇ ಯಂತ್ರದ ಜೊತೆ ಸಂಯೋಜಿಸಲ್ಪಟ್ಟ ಸಾಧನಗಳು, ವಿಮಾನಕ್ಕೆ ಸರಕುಗಳನ್ನು ಸಾಗಿಸುವ ಮುನ್ನ ನಿರ್ವಹಣೆ ಮಾಡುವ ಸರಿಸುಮಾರು 30 ಕೇಂದ್ರಗಳು (ಯುಎಲ್‌ಡಿ), ನೈಜ ಸಮಯದಲ್ಲಿ ಸರಕುಗಳ ದತ್ತಾಂಶ ಸಂಗ್ರಹಿಸುವ 40 ಹ್ಯಾಂಡ್‌ಹೆಲ್ಡ್ ಟರ್ಮಿನಲ್‌ ಸಾಧನಗಳು ಮತ್ತು ಏಜೆಂಟರಿಗೆ ಸ್ವಯಂ ಸೇವಾ ಕಿಯೋಸ್ಕ್‌ ಸೌಲಭ್ಯಗಳು ಈ ಹೊಸ ವಾಯುಯಾನ ಸರಕು ಸಾಗಣೆ ಟರ್ಮಿನಲ್‌ನಲ್ಲಿ ಇರಲಿದ್ದು, ಯಾವುದೇ ಅಡೆತಡೆಯಿಲ್ಲದ ಸುಲಲಿತ ಸೇವೆಯು ನೈಜ ಸಮಯದಲ್ಲಿ ದೊರೆಯಲಿದೆ.

green field cargo terminal bengaluru airport 2

ಅಷ್ಟೇ ಅಲ್ಲದೇ, ಅತ್ಯಾಧುನಿಕ ತಂತ್ರಜ್ಞಾನ ಹಾಗೂ ಡಿಜಿಟಲ್‌ ಸೌಲಭ್ಯಗಳ ಜೊತೆಗೆ ಸುಸಜ್ಜಿತಗೊಂಡಿರುವ ಈ ಹೊಸ ಕಾರ್ಗೋ ಟರ್ಮಿನಲ್‌ನಲ್ಲಿ, ಸರಕುಗಳ ಸಾಗಣೆಯ ನೈಜ ಸಮಯದ ಟ್ರ್ಯಾಕಿಂಗ್, ದತ್ತಾಂಶ ವಿಶ್ಲೇಷಣೆ ಪರಿಕರಗಳು, ಬಾರ್‌ಕೋಡ್‌ ಮತ್ತು ಕ್ಯೂಆರ್ ಕೋಡ್‌ಗಳೊಂದಿಗೆ ಸಂಯೋಜಿಸಲ್ಪಟ್ಟ ವರ್ಧಿತ ಸಂವಹನ ವ್ಯವಸ್ಥೆಗಳಂತಹ ನವೀನ ಸೌಲಭ್ಯಗಳನ್ನು ಪರಿಚಯಿಸಲಾಗಿದೆ. ಹೀಗೆ ಹಲವು ಸೌಲಭ್ಯಗಳು ಏಕೀಕರಣಗೊಂಡಿರುವುದು ತಡೆರಹಿತ ದತ್ತಾಂಶ ವಿನಿಮಯಕ್ಕೆ ಅವಕಾಶ ಕಲ್ಪಿಸಿ, ಒಟ್ಟಾರೆ ಸರಕು ಸಾಗಣೆ ಪ್ರಕ್ರಿಯೆಯ ಸಮಯವನ್ನು ಕಡಿಮೆಗೊಳಿಸುತ್ತದೆ. ಜೊತೆಗೆ, ಮಾನವನ ಅವಲಂಬನೆಯನ್ನು ಕಡಿಮೆ ಮಾಡಿ, ವೇಗ ಮತ್ತು ಸುರಕ್ಷಿತವಾಗಿ ಸರಕು ನಿರ್ವಹಣೆ ಮಾಡಲು ಅನುವು ಮಾಡಿಕೊಡಲಿದೆ. ಡಿಜಿಟಲೀಕರಣಕ್ಕೆ ಒತ್ತು ನೀಡಿರುವುದು ಕಾರ್ಯಾಚರಣೆ, ಪೂರೈಕೆ ಸರಪಳಿಗಳನ್ನು ಸುಲಲಿತಗೊಳಿಸುತ್ತದೆ. ಒಟ್ಟಾರೆಯಾಗಿ, ಹೊಸ ಟರ್ಮಿನಲ್‌ ವಿಮಾನಯಾನ ಸಂಸ್ಥೆಗಳು, ಸರಕು ಏಜೆಂಟರು, ಅಂತಿಮ ಬಳಕೆದಾರರ ಸರಕು ನಿರ್ವಹಣಾ ಅನುಭವವನ್ನು ಹೆಚ್ಚಿಸುತ್ತದೆ.

ನಿರ್ವಹಣಾ ಸಾಮರ್ಥ್ಯ ಇನ್ನಷ್ಟು ಹೆಚ್ಚಳ:
ಮಾವಿನಹಣ್ಣು, ಕೊತ್ತಂಬರಿ ಸೊಪ್ಪು ಸೇರಿದಂತೆ ಕೊಳೆತು ಹೋಗುವ ಹಲವು ಸರಕುಗಳ ರಫ್ತಿನಲ್ಲಿ ಬೆಂಗಳೂರಿನ ವಿಮಾನ ನಿಲ್ದಾಣವು ಈಗಾಗಲೇ ಖ್ಯಾತಿ ಪಡೆದಿದೆ. ಇದೀಗ, ಹೊಸದಾಗಿ ದೇಶೀಯ ಕಾರ್ಗೋ ಟರ್ಮಿನಲ್‌ನ್ನು ಆರಂಭಿಸಿರುವುದರಿಂದ ಬೆಂಗಳೂರು ವಿಮಾನ ನಿಲ್ದಾಣದ ಸರಕು ಸಾಗಣೆ ನಿರ್ವಹಣಾ ಸಾಮರ್ಥ್ಯ ಇನ್ನಷ್ಟು ಹೆಚ್ಚಲಿದೆ. ಇದಷ್ಟೇ ಅಲ್ಲದೆ, ಬೆಲೆಬಾಳುವ ವಸ್ತುಗಳು, ದುರ್ಬಲ ವಸ್ತುಗಳು, ಜೀವಂತ ಪ್ರಾಣಿಗಳು, ಅಪಾಯಕಾರಿ ಸರಕುಗಳು ಮತ್ತು ವಿಕಿರಣಶೀಲ ವಸ್ತುಗಳಂತಹ ವಿಶೇಷ ಸರಕುಗಳಿಗೆ ಮೀಸಲಾದ ಶೇಖರಣಾ ವ್ಯವಸ್ಥೆಯನ್ನು ಸಹ ಟರ್ಮಿನಲ್ ಒಳಗೊಂಡಿದ್ದು, ಇದು ಸಮಗ್ರ ಸರಕು ನಿರ್ವಹಣಾ ಸಾಮರ್ಥ್ಯವನ್ನು ಬಲಪಡಿಸುತ್ತದೆ.

Bengaluru Kempegowda International Airport 5

ಸುಸ್ಥಿರತೆಯ ಬಲ:
ಭಾರತೀಯ ಹಸಿರು ಕಟ್ಟಡ ಮಂಡಳಿಯ (ಇಂಡಿಯನ್ ಗ್ರೀನ್ ಬಿಲ್ಡಿಂಗ್ ಕೌನ್ಸಿಲ್) ಮಾನದಂಡಗಳಿಗೆ ಅನುಗುಣವಾಗಿ ಭವಿಷ್ಯದ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು, ಪರಿಸರ ಪರವಾಗಿ ಹೊಸ ಕಾರ್ಗೋ ಟರ್ಮಿನಲ್‌ನ ವಿನ್ಯಾಸ ಮಾಡಲಾಗಿದೆ. ಪೂರೈಕೆ ಸರಪಳಿ ಸ್ಥಿತಿಸ್ಥಾಪಕತ್ವವನ್ನು ಹೆಚ್ಚಿಸುವುದು, ಉದ್ಯೋಗಾವಕಾಶಗಳನ್ನು ಸೃಷ್ಟಿಸುವುದು, ವ್ಯಾಪಾರ-ವಾಣಿಜ್ಯ ವಹಿವಾಟುಗಳಿಗೆ ಹೊಸ ಮಾರ್ಗಗಳನ್ನು ಹೆಚ್ಚಿಸುವ ಮೂಲಕ, ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹೊಸ ಕಾರ್ಗೋ ಟರ್ಮಿನಲ್ ಸುಸ್ಥಿರ ಆರ್ಥಿಕ ಬೆಳವಣಿಗೆಗೆ ಕಾರಣವಾಗಲಿದೆ. ಅಷ್ಟೇ ಅಲ್ಲದೇ, ಹೊಸ ಕಾರ್ಗೋ ಟರ್ಮಿನಲ್ ಪರಿಸರ ಸ್ನೇಹಿ ವೈಶಿಷ್ಟ್ಯಗಳಾದ ಸ್ಕೈಲೈಟಿಂಗ್, ಸುಧಾರಿತ ವಾತಾಯನ ವ್ಯವಸ್ಥೆ, ನೀರು ಸಂರಕ್ಷಣಾ ಅಭ್ಯಾಸಗಳು ಮತ್ತು ಇಂಧನ-ಸಮರ್ಥ ಮೂಲಸೌಕರ್ಯಗಳನ್ನು ಒಳಗೊಂಡಿದೆ. ಇವೆಲ್ಲವೂ ವಾಯುಯಾನ ಸರಕು ಸಾರಿಗೆ ಪ್ರಕ್ರಿಯೆಯಿಂದ ಪರಿಸರದ ಮೇಲೆ ಬೀರುವ ಪರಿಣಾಮವನ್ನು ಕಡಿಮೆ ಮಾಡಲು ಸಹಕರಿಸುತ್ತವೆ. ಪರಿಸರ ಸುಸ್ಥಿರತೆ, ಸಿಬ್ಬಂದಿಗಳ ಯೋಗಕ್ಷೇಮ ಎರಡಕ್ಕೂ ಆದ್ಯತೆ ನೀಡಿ, ನವೀಕರಿಸಬಹುದಾದ ಇಂಧನ ಪರಿಹಾರಗಳನ್ನು ಹೊಸ ಟರ್ಮಿನಲ್‌ನಲ್ಲಿ ಸಂಯೋಜಿಸುವ ಮೂಲಕ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಪರಿಸರ ಸ್ನೇಹಿ ಸರಕು ಕಾರ್ಯಾಚರಣೆಗಳಿಗೆ ವೇದಿಕೆ ಕಲ್ಪಿಸಿಕೊಡಲಿದೆ.

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತದ ಮುಖ್ಯ ಕಾರ್ಯಾಚರಣಾ ಅಧಿಕಾರಿ (ಸಿಒಒ) ಸತ್ಯಕಿ ರಘುನಾಥ್ ಅವರು ಮಾತನಾಡಿ, ಹೊಸ ದೇಶೀಯ ಕಾರ್ಗೋ ಟರ್ಮಿನಲ್ ಆರಂಭವು ಸುಸ್ಥಿರ ಬೆಳವಣಿಗೆಯನ್ನು ಸಾಧಿಸಲು ನಾವು ಹೊಂದಿರುವ ಅಚಲ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ. ಅತ್ಯಾಧುನಿಕ ತಂತ್ರಜ್ಞಾನ ಮತ್ತು ಪರಿಸರ ಸ್ನೇಹಿ ವಾತಾವರಣವನ್ನು ಅಳವಡಿಸಿಕೊಳ್ಳುವ ಮೂಲಕ, ದೇಶೀಯವಾಗಿ ವಾಯುಮಾರ್ಗ ಸರಕು ಸಾಗಣೆಗೆ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು ನಾವು ಈ ಹೊಸ ಹೆಜ್ಜೆ ಇಟ್ಟಿದ್ದೇವೆ. ಈ ಸೌಲಭ್ಯವು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಪ್ರಮುಖ ವಾಯು ಸರಕು ಸಾಗಣೆ ಕೇಂದ್ರವಾಗಿಸಲಿದ್ದು, ಹೊಸ ಅವಕಾಶಗಳಿಗೆ ವೇದಿಕೆ ಕಲ್ಪಿಸಿ ಆರ್ಥಿಕ ಬೆಳವಣಿಗೆಯನ್ನು ಹೆಚ್ಚಿಸಲಿದೆ ಎಂದು ತಿಳಿಸಿದರು.

ಮೆನ್ಜೀಸ್ ಏವಿಯೇಷನ್‌ ಸಂಸ್ಥೆಯ ಮಧ್ಯಪ್ರಾಚ್ಯ, ಆಫ್ರಿಕಾ ಮತ್ತು ಏಷ್ಯಾ ವಿಭಾಗಗಳ ಕಾರ್ಯನಿರ್ವಾಹಕ ಉಪಾಧ್ಯಕ್ಷ ಚಾರ್ಲ್ಸ್ ವೈಲಿ ಅವರು ಮಾತನಾಡಿ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರಿನಲ್ಲಿ ಆರಂಭವಾದ ಪರಿಸರ ಸ್ನೇಹಿ ದೇಶೀಯ ಕಾರ್ಗೋ ಟರ್ಮಿನಲ್‌; ಪರಿಣಾಮಕಾರಿ, ವಿಶ್ವಾಸಾರ್ಹ ಮತ್ತು ಭವಿಷ್ಯದ ಸರಕು ಸಾಗಣೆ ಬೇಡಿಕೆಯನ್ನು ಪೂರೈಸುವ ನಮ್ಮ ಬದ್ಧತೆಯನ್ನು ಪ್ರತಿಬಿಂಬಿಸುವ ಪ್ರಮುಖ ಹೆಜ್ಜೆಯಾಗಿದೆ. ಭಾರತದಲ್ಲಿ ವಾಯುಯಾನ ಸರಕು ಸಾಗಣೆಯಲ್ಲಿ ತ್ವರಿತ ಬೆಳವಣಿಗೆ ಆಗುತ್ತಿದ್ದು, ಬೇಡಿಕೆಯು 2029 ರ ವೇಳೆಗೆ 5.8 ದಶಲಕ್ಷ ಟನ್ ತಲುಪುವುದರಲ್ಲಿ ಯಾವುದೇ ಅನುಮಾನವಿಲ್ಲ. ಇಂದಿನ ಬೇಡಿಕೆಯ ಪೂರೈಕೆಗಷ್ಟೇ ಅಲ್ಲದೆ, ಭವಿಷ್ಯದ ಅಗತ್ಯತೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ನೂತನ ಕಾರ್ಗೋ ಟರ್ಮಿನಲ್‌ನ್ನು ವಿನ್ಯಾಸಗೊಳಿಸಲಾಗಿದೆ ಎಂದರು.

TAGGED:bengalurubengaluru airportGreen Field Cargo Terminalಗ್ರೀನ್‌ಫೀಲ್ಡ್‌ ಕಾರ್ಗೊ ಟರ್ಮಿನಲ್‌ಬೆಂಗಳೂರುಬೆಂಗಳೂರು ವಿಮಾನ ನಿಲ್ದಾಣ
Share This Article
Facebook Whatsapp Whatsapp Telegram

Cinema Updates

prithwi bhat reception
ಪೋಷಕರ ವಿರೋಧದ ನಡುವೆಯೂ ಗಾಯಕಿ ಪೃಥ್ವಿ ಭಟ್‌ ಅದ್ದೂರಿ ರಿಸೆಪ್ಷನ್‌
3 hours ago
pawan kalyan
ಆಪರೇಷನ್ ಸಿಂಧೂರದ ಬಗ್ಗೆ ಸೆಲೆಬ್ರಿಟಿಗಳು ಮಾತಾಡ್ತಿಲ್ಲ: ಪವನ್ ಕಲ್ಯಾಣ್ ಅಸಮಾಧಾನ
3 hours ago
amid calls for boycott aamir khan productions changes display pic to indian flag internet calls it damage control
‘ಸಿತಾರೆ ಜಮೀನ್ ಪರ್’ ಗೆ ಬಾಯ್ಕಾಟ್‌ ಭಯ – ತ್ರಿವರ್ಣ ಧ್ವಜ ಡಿಪಿ ಹಾಕಿದ ಆಮೀರ್ ಖಾನ್!
17 hours ago
Rani Mukerji Shah Rukh Khan
ʻಕಿಂಗ್’ ಜೊತೆ ಮತ್ತೆ ಒಂದಾಗಲಿದ್ದಾರೆ ರಾಣಿ ಮುಖರ್ಜಿ!
19 hours ago

You Might Also Like

Shobha Karandlaje 1
Bengaluru City

ಸಾಕ್ಷಿ ಕೇಳೋರನ್ನ ಪಾಕಿಸ್ತಾನಕ್ಕೆ ಕಳಿಸಿ: ಕಾಂಗ್ರೆಸ್ ನಾಯಕರ ವಿರುದ್ಧ ಶೋಭಾ ಕಿಡಿ

Public TV
By Public TV
25 minutes ago
pratap simha
Latest

ಸಂತೋಷ್ ಲಾಡ್ ಮೈತುಂಬಾ ಮೈನಿಂಗ್ ದುಡ್ಡು ಅಂಟಿಕೊಂಡಿದೆ, ಹೊರಗಡೆ ಸಾಚಾ ಅಂತ ಬಿಲ್ಡಪ್: ಪ್ರತಾಪ್ ಸಿಂಹ ಕೆಂಡ

Public TV
By Public TV
34 minutes ago
Train
Dakshina Kannada

ಹಾಸನ ಜಿಲ್ಲೆಯಲ್ಲಿ ಪ್ರಮುಖ ರೈಲುಗಳ ಸಂಚಾರ ರದ್ದು – ಸುಬ್ರಹ್ಮಣ್ಯ, ಮಂಗಳೂರು, ಕಾರವಾರಕ್ಕೆ ಸಂಚಾರದಲ್ಲಿ ವ್ಯತ್ಯಯ

Public TV
By Public TV
1 hour ago
Hebbal Flyover Closure 1
Bengaluru City

ಇಂದಿನಿಂದ 5 ದಿನ 3 ಗಂಟೆಗಳ ಕಾಲ ಹೆಬ್ಬಾಳ ಫ್ಲೈಓವರ್ ಬಂದ್

Public TV
By Public TV
1 hour ago
Mysuru Gas Leak
Crime

Mysuru | ಸಿಲಿಂಡರ್ ಬದಲಾಯಿಸುವಾಗ ಗ್ಯಾಸ್ ಸೋರಿಕೆಯಾಗಿ ಬೆಂಕಿ – ಐವರಿಗೆ ಗಾಯ

Public TV
By Public TV
2 hours ago
Shashi Tharoor
Latest

ಭಯೋತ್ಪಾದನೆ ವಿರುದ್ಧ ಸರ್ವಪಕ್ಷ ನಿಯೋಗ – ಕಾಂಗ್ರೆಸ್‌ ಕೊಟ್ಟ 4 ಹೆಸರು ಬಿಟ್ಟು ಶಶಿ ತರೂರ್‌ ಆಯ್ಕೆಮಾಡಿದ ಕೇಂದ್ರ!

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?