Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Search
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಮಾ.24 ರಿಂದ 26ವರೆಗೂ ದೆಹಲಿ ಬಜೆಟ್ ಅಧಿವೇಶನ – ಸಾರ್ವಜನಿಕರಿಂದ ಸಲಹೆ ಕೇಳಿದ ಸಿಎಂ

Public TV
Last updated: March 3, 2025 12:51 pm
Public TV
Share
2 Min Read
Rekha Gupta
SHARE

– ಸಲಹೆ ಕಳುಹಿಸಲು ಇಮೇಲ್ ಐಡಿ, ವಾಟ್ಸಪ್ ಸಂಖ್ಯೆ ಬಿಡುಗಡೆ

ನವದೆಹಲಿ: ದೆಹಲಿ ಬಜೆಟ್ ಅಧಿವೇಶನ ಮಾರ್ಚ್ 24 ರಿಂದ 26 ರವರೆಗೆ ನಡೆಯಲಿದೆ ಎಂದು ಮುಖ್ಯಮಂತ್ರಿ ರೇಖಾ ಗುಪ್ತಾ (Rekha Gupta) ಸೋಮವಾರ ತಿಳಿಸಿದರು.

ಬಜೆಟ್‌ಗೆ ಸಂಬಂಧಿಸಿದಂತೆ ಸಿಎಂ ರೇಖಾ ಗುಪ್ತಾ ಸುದ್ದಿಗೋಷ್ಠಿ ನಡೆಸಿ, ಬಜೆಟ್ ಪ್ರಕ್ರಿಯೆಯಲ್ಲಿ ಸಾರ್ವಜನಿಕರು ತಮ್ಮ ಸಲಹೆಗಳನ್ನು ಕಳುಹಿಸಲು ಇಮೇಲ್ ಐಡಿ ಮತ್ತು ವಾಟ್ಸಾಪ್ ಸಂಖ್ಯೆಯನ್ನು ಬಿಡುಗಡೆ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಸಚಿವರಾದ ಪರ್ವೇಶ್ ಸಾಹಿಬ್ ಸಿಂಗ್, ಆಶಿಶ್ ಸೂದ್ ಮತ್ತು ಮಂಜಿಂದರ್ ಸಿಂಗ್ ಸಿರ್ಸಾ ಕೂಡ ಉಪಸ್ಥಿತರಿದ್ದರು.ಇದನ್ನೂ ಓದಿ: Oscars Award 2025: 97ನೇ ಸಾಲಿನ ಆಸ್ಕರ್‌ ಪ್ರಶಸ್ತಿ ಗೆದ್ದವರ ಲಿಸ್ಟ್‌ ಇಲ್ಲಿದೆ

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಂಬರುವ ಬಜೆಟ್ `ವಿಕ್ಷಿತ್ ದೆಹಲಿ’ಯ ದೃಷ್ಟಿಕೋನದಲ್ಲಿ ಸಮಗ್ರ ಬೆಳವಣಿಗೆ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳಲು ಸಮಾಜದ ವಿವಿಧ ವರ್ಗಗಳ ಒಳ ಮಾಹಿತಿಗಳಿಂದ ರೂಪಿಸಲ್ಪಡುತ್ತದೆ. ಸಮಾಜದ ಎಲ್ಲಾ ವರ್ಗಗಳ ಸಲಹೆಗಳನ್ನು ಸೇರಿಸಲು ಎಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಸರ್ಕಾರವು ತನ್ನ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸಲು ಕೆಲಸ ಮಾಡುತ್ತಿದೆ ಎಂದು ಹೇಳಿದರು.

ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಲು ಮಾರ್ಚ್ 5 ರಂದು ದೆಹಲಿಯಾದ್ಯಂತ ಮಹಿಳಾ ಸಂಘಟನೆಗಳನ್ನು ಬಜೆಟ್‌ಗಾಗಿ ಸಲಹೆಗಳನ್ನು ಪಡೆಯಲು ಆಹ್ವಾನಿಸಿದ್ದೇವೆ. ಅದೇ ದಿನ, ಶಿಕ್ಷಣ ತಜ್ಞರನ್ನು ಸಲಹೆಗಳಿಗಾಗಿ ಆಹ್ವಾನಿಸಲಾಗಿದೆ. ಮಾರ್ಚ್ 6 ರಂದು, ಅವರ ಕಾಳಜಿಗಳನ್ನು ಅರ್ಥಮಾಡಿಕೊಳ್ಳಲು ನಾವು ಕಾರ್ಮಿಕ ಸಂಘಗಳನ್ನು ಆಹ್ವಾನಿಸಿದ್ದೇವೆ ಎಂದು ತಿಳಿಸಿದರು.

ಮಹಿಳೆಯರಿಗೆ ಆರ್ಥಿಕ ನೆರವು, ಆರೋಗ್ಯ ಸೇವೆಗಳ ವಿಸ್ತರಣೆ, ಸಾರ್ವಜನಿಕ ಸಾರಿಗೆ ಉತ್ತೇಜನ, ಮಾಲಿನ್ಯ ನಿಯಂತ್ರಣ, ಉದ್ಯೋಗ ಸೃಷ್ಟಿ, ಉತ್ತಮ ಶಿಕ್ಷಣ ಸೌಲಭ್ಯಗಳು, ಹಿಂದುಳಿದವರಿಗೆ ಸಬ್ಸಿಡಿ ದರದ ಪೌಷ್ಟಿಕ ಆಹಾರ, ಹಿರಿಯ ನಾಗರಿಕರ ಕಲ್ಯಾಣ ಮತ್ತು ಯಮುನಾ ನದಿಯ ಶುಚಿಗೊಳಿಸುವಿಕೆ ಸೇರಿದಂತೆ ಹಲವು ವಿಷಯಗಳು ಬಜೆಟ್‌ನಲ್ಲಿ ಇರಲಿವೆ ಎಂದರು.

ಸಿಎಜಿ ವರದಿ ಬಗ್ಗೆ ಮಾತನಾಡಿದ ಅವರು, ವಿಧಾನಸಭೆಯಲ್ಲಿ ಮಂಡಿಸಲಾದ ಎರಡು ವರದಿಗಳು ಈಗಾಗಲೇ ಹಿಂದಿನ ಎಎಪಿ ಸರ್ಕಾರದ ವಿರುದ್ಧ ಅನೇಕ ಭ್ರಷ್ಟಾಚಾರ ಆರೋಪಗಳನ್ನು ಬಹಿರಂಗಪಡಿಸಿವೆ. ಇನ್ನೂ ಹನ್ನೆರಡು ಸಿಎಜಿ ವರದಿಗಳನ್ನು ಮಂಡಿಸಬೇಕಾಗಿದೆ ಮತ್ತು ಹೆಚ್ಚಿನ ಅಕ್ರಮಗಳು ಹೊರಬರುವ ಸಾಧ್ಯತೆಯಿದೆ ಎಂದು ಹೇಳಿದರು.ಇದನ್ನೂ ಓದಿ:  ಸಿನಿಮಾದವರು ಬಾಯಿಮುಚ್ಚಿಕೊಂಡು ಇರಬೇಕು – ರಶ್ಮಿಕಾ ವಿರುದ್ಧ ಕೆಂಡ ಕಾರಿದ ಗಣಿಗ ರವಿ

TAGGED:bjpCM Rekha GuptaDelhi BudgetDelhi Budget Sessionದೆಹಲಿ ಬಜೆಟ್‌ದೆಹಲಿ ಬಜೆಟ್ ಅಧಿವೇಶನನವದೆಹಲಿಸಿಎಂ ರೇಖಾ ಗುಪ್ತಾ
Share This Article
Facebook Whatsapp Whatsapp Telegram

You Might Also Like

Ahmedabad Air India Plane Crash 4
Latest

Ahmedabad Tragedy | ಮೃತರ ಕುಟುಂಬಗಳಿಗೆ 25 ಲಕ್ಷ ಮಧ್ಯಂತರ ಪರಿಹಾರ ಘೋಷಿಸಿದ ಏರ್‌ ಇಂಡಿಯಾ

Public TV
By Public TV
21 seconds ago
Tata Group Air India
Latest

ಮೃತ ಪ್ರಯಾಣಿಕರ ಕುಟುಂಬಕ್ಕೆ 1 ಕೋಟಿ ಪರಿಹಾರ: ಟಾಟಾ ಗ್ರೂಪ್‌ ಘೋಷಣೆ

Public TV
By Public TV
23 minutes ago
WTC SA 3
Cricket

ಚೋಕರ್ಸ್‌ ಹಣೆಪಟ್ಟಿ ಕಳಚಿದ ಹರಿಣರು – ದ. ಆಫ್ರಿಕಾಗೆ ವಿಶ್ವ ಟೆಸ್ಟ್‌ ಚಾಂಪಿಯನ್‌ ಕಿರೀಟ, ದಶಕಗಳ ಕನಸು ನನಸು

Public TV
By Public TV
33 minutes ago
M.P Renukacharya
Davanagere

ಜಾತಿಗಣತಿ ವರದಿ ಬಿಡುಗಡೆ ಮಾಡ್ತೀನಿ ಎಂದಿದ್ದ ಸಿಎಂ ಪೌರುಷ ಏನಾಯ್ತು? – ರೇಣುಕಾಚಾರ್ಯ

Public TV
By Public TV
40 minutes ago
Forever Naveen Kumar Kannada Cinema Sandalwood
Cinema

ಸೆಲೆಬ್ರಿಟಿ ವಸ್ತ್ರವಿನ್ಯಾಸಕ ನವೀನ್ ಕುಮಾರ್‌ಗೆ ಅಮೆರಿಕ ಗೌರವ

Public TV
By Public TV
58 minutes ago
Mangaluru Rain
Dakshina Kannada

ಮಂಗಳೂರಿನಲ್ಲಿ ಭಾರೀ ಮಳೆ – ಪಂಪ್‌ವೆಲ್ ಸರ್ಕಲ್ ಮತ್ತೆ ಮುಳುಗಡೆ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?