Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರಧಾನಿ ನರೇಂದ್ರ ಮೋದಿಯಿಂದ ಗುಜರಾತ್ ವಂತಾರದಲ್ಲಿ ವನ್ಯಜೀವಿ ಪುನವರ್ಸತಿ ಸಂರಕ್ಷಣಾ ಕೇಂದ್ರ ಉದ್ಘಾಟನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಪ್ರಧಾನಿ ನರೇಂದ್ರ ಮೋದಿಯಿಂದ ಗುಜರಾತ್ ವಂತಾರದಲ್ಲಿ ವನ್ಯಜೀವಿ ಪುನವರ್ಸತಿ ಸಂರಕ್ಷಣಾ ಕೇಂದ್ರ ಉದ್ಘಾಟನೆ

Latest

ಪ್ರಧಾನಿ ನರೇಂದ್ರ ಮೋದಿಯಿಂದ ಗುಜರಾತ್ ವಂತಾರದಲ್ಲಿ ವನ್ಯಜೀವಿ ಪುನವರ್ಸತಿ ಸಂರಕ್ಷಣಾ ಕೇಂದ್ರ ಉದ್ಘಾಟನೆ

Public TV
Last updated: March 4, 2025 4:22 pm
Public TV
Share
3 Min Read
Narendra Modi Vantara Animal Rescue Centre
SHARE

ಜಾಮ್ ನಗರ: ಗುಜರಾತ್‌ನ (Gujarat) ಜಾಮ್ ನಗರದಲ್ಲಿರುವ (Jamnagar) ವಂತಾರ ವನ್ಯಜೀವಿ ರಕ್ಷಣೆ (Vantara Animal Rescue Centre), ಪುನರ್ವಸತಿ ಮತ್ತು ಸಂರಕ್ಷಣಾ ಕೇಂದ್ರವನ್ನು ಪ್ರಧಾನಿ ನರೇಂದ್ರ ಮೋದಿ ಮಂಗಳವಾರದಂದು (ಮಾರ್ಚ್ 4) ಉದ್ಘಾಟಿಸಿದರು.

ವಂತಾರದಲ್ಲಿ ಎರಡು ಸಾವಿರಕ್ಕೂ ಹೆಚ್ಚು ಪ್ರಭೇದಗಳಿಗೆ ನೆಲೆ ಒದಗಿಸಲಾಗಿದೆ. ಒಂದೂವರೆ ಲಕ್ಷಕ್ಕೂ ಹೆಚ್ಚು ರಕ್ಷಣೆ ಮಾಡಲಾದ, ಅಳಿವಿನಂಚಿನಲ್ಲಿರುವ ಮತ್ತು ಅಪಾಯದಲ್ಲಿರುವ ಪ್ರಾಣಿಗಳಿಗೆ ನೆಲೆಯಾಗಿದೆ. ವಂತಾರದಲ್ಲಿ ಇರುವಂಥ ವಿವಿಧ ಸೌಲಭ್ಯಗಳ ಬಗ್ಗೆ ಪ್ರಧಾನಿ ಮೋದಿ ಮಾಹಿತಿ ಪಡೆದರು. ಇನ್ನು ಪುನರ್ವಸತಿ ಒದಗಿಸಲಾದ ವಿವಿಧ ಪ್ರಭೇದದ ಪ್ರಾಣಿಗಳೊಂದಿಗೆ ಅವರು ಸಮಯವನ್ನು ಕಳೆದರು.

ವಂತಾರದಲ್ಲಿ ಇರುವ ವನ್ಯಜೀವಿ ಆಸ್ಪತ್ರೆಗೆ ಭೇಟಿ ನೀಡಿದ ಪ್ರಧಾನಿ ಮೋದಿ ಅವರು, ಎಂಆರ್‌ಐ, ಸಿಟಿ ಸ್ಕ್ಯಾನ್‌ಗಳು, ಐಸಿಯುಗಳು ಸೇರಿದಂತೆ ಪಶುವೈದ್ಯಕೀಯ ಸೌಲಭ್ಯಗಳನ್ನು ವೀಕ್ಷಿಸಿದರು. ವನ್ಯಜೀವಿ ಅರಿವಳಿಕೆ, ಹೃದಯಶಾಸ್ತ್ರ, ಮೂತ್ರಪಿಂಡಶಾಸ್ತ್ರ, ಎಂಡೋಸ್ಕೋಪಿ, ದಂತವೈದ್ಯಶಾಸ್ತ್ರ, ಆಂತರಿಕ ಔಷಧ ಇತ್ಯಾದಿಗಳನ್ನು ಹೊಂದಿರುವ ವಿವಿಧ ವಿಭಾಗಗಳಿಗೆ ಸಹ ಭೇಟಿ ನೀಡಿದರು. ಇಲ್ಲಿ ಅವರು ಏಷ್ಯಾಟಿಕ್ ಸಿಂಹದ ಮರಿಗಳು, ಬಿಳಿ ಸಿಂಹದ ಮರಿ, ಅಪರೂಪದ ಮತ್ತು ಅಳಿವಿನಂಚಿನಲ್ಲಿರುವ ಪ್ರಭೇದದ ಹಿಮಾಲಯದ ಚಿರತೆ ಮರಿ, ಕ್ಯಾರಕಲ್ಸ್ (ವಿಶಿಷ್ಟ ಬಗೆಯ ಕಾಡು ಬೆಕ್ಕು) ಸೇರಿದಂತೆ ವಿವಿಧ ಪ್ರಭೇದದ ಪ್ರಾಣಿಗಳಿಗೆ ಆಹಾರ ನೀಡಿದರು, ಸಂತಸದ ಕ್ಷಣಗಳನ್ನು ಕಳೆದರು.

Narendra Modi Vantara Animal Rescue Centre

ಇನ್ನು ಪ್ರಧಾನಿ ಮೋದಿ ಅವರು ಆಹಾರ ನೀಡಿದಂಥ ಬಿಳಿ ಸಿಂಹದ ಮರಿಯು ವಂತಾರದಲ್ಲಿಯೇ ಜನಿಸಿದಂಥದ್ದು. ಅದರ ತಾಯಿಯನ್ನು ರಕ್ಷಿಸಿ, ಆರೈಕೆಗಾಗಿ ವಂತಾರಕ್ಕೆ ಕರೆತಂದ ನಂತರದಲ್ಲಿ ಬಿಳಿ ಸಿಂಹದ ಮರಿಯು ಜನಿಸಿತು. ಭಾರತದಲ್ಲಿ ಹಿಂದೊಮ್ಮೆ ಹೇರಳವಾಗಿದ್ದ ಕ್ಯಾರಕಲ್‌ಗಳು ಈಗ ಕಂಡುಬರುವುದು ಅಪರೂಪವಾಗುತ್ತಿವೆ. ವಂತಾರದಲ್ಲಿ ಕ್ಯಾರಕಲ್‌ಗಳ ಸಂರಕ್ಷಣೆಗಾಗಿ ಸೆರೆಯಲ್ಲಿ ಸಂತಾನೋತ್ಪತ್ತಿ ಕಾರ್ಯಕ್ರಮದಡಿ ಸಾಕಲಾಗುತ್ತದೆ ಮತ್ತು ನಂತರ ಕಾಡಿಗೆ ಬಿಡಲಾಗುತ್ತದೆ.

ನರೇಂದ್ರ ಮೋದಿ ಅವರು ಆಸ್ಪತ್ರೆಯ ಎಂಆರ್‌ಐ ಕೋಣೆಗೆ ಭೇಟಿ ನೀಡಿದರು ಮತ್ತು ಏಷಿಯಾಟಿಕ್ ಸಿಂಹಕ್ಕೆ ಎಂಆರ್‌ಐ ಮಾಡುವುದನ್ನು ವೀಕ್ಷಿಸಿದರು. ಹೆದ್ದಾರಿಯಲ್ಲಿ ಕಾರಿಗೆ ಡಿಕ್ಕಿ ಹೊಡೆದ ನಂತರ, ಅದನ್ನು ರಕ್ಷಣೆ ಮಾಡಿ ಜೀವ ಉಳಿಸುವುದಕ್ಕಾಗಿ ಶಸ್ತ್ರಚಿಕಿತ್ಸೆ ಮಾಡಲಾದ ಚಿರತೆಯ ಆಪರೇಷನ್ ಥಿಯೇಟರ್‌ಗೆ ಭೇಟಿ ನೀಡಿದರು.

ವಂತಾರದಲ್ಲಿ ರಕ್ಷಿಸಲಾದ ಪ್ರಾಣಿಗಳನ್ನು ಅವುಗಳ ನೈಸರ್ಗಿಕ ಆವಾಸಸ್ಥಾನವನ್ನೇ ಬಹುತೇಕ ಪ್ರತಿಬಿಂಬಿಸುವ ಸ್ಥಳಗಳಲ್ಲಿ ಇರಿಸಲಾಗಿದೆ. ಇಲ್ಲಿ ಕೈಗೊಂಡ ಕೆಲವು ಪ್ರಮುಖ ಸಂರಕ್ಷಣಾ ಉಪಕ್ರಮಗಳಲ್ಲಿ ಏಷಿಯಾಟಿಕ್ ಸಿಂಹ, ಹಿಮ ಚಿರತೆ, ಒಂದು ಕೊಂಬಿನ ಘೇಂಡಾಮೃಗ ಇತರವು ಸೇರಿಕೊಂಡಿವೆ.

ನರೇAದ್ರ ಮೋದಿ ಅವರು ವಿವಿಧ ಉಗ್ರ ಸ್ವರೂಪದ- ಸ್ವಭಾವದ ಪ್ರಾಣಿಗಳೊಂದಿಗೆ ಸಮಯ ಕಳೆದರು. ಅದರಲ್ಲೂ ಗೋಲ್ಡನ್ ಟೈಗರ್‌ನೊಂದಿಗೆ ಮುಖಾಮುಖಿಯಾಗಿ ಕುಳಿತರು. ಒಂದೇ ತಾಯಿಯ ಮರಿಗಳಾದ 4 ಹಿಮ ಹುಲಿಗಳು ಇಲ್ಲಿ ಇದ್ದು, ಅವುಗಳನ್ನು ಸರ್ಕಸ್‌ನಿಂದ ರಕ್ಷಿಸಲಾಗಿದೆ. ಅಲ್ಲಿ ಅವುಗಳು ವಿವಿಧ ಪ್ರದರ್ಶನಗಳನ್ನು ನೀಡುತ್ತಿದ್ದವು, ಜೊತೆಗೆ ಬಿಳಿ ಸಿಂಹ ಮತ್ತು ಹಿಮ ಚಿರತೆಗಳಿದ್ದವು.

ಅಪರೂಪದ ಒಕಾಪಿಯ ಮೈ ದಡವಿದ ನರೇಂದ್ರ ಮೋದಿ ಅವರು, ಚಿಂಪಾಂಜಿಗಳಿಗೆ ಎದುರಾದರು. ಸಾಕುಪ್ರಾಣಿಗಳಾಗಿ ಇರಿಸಲಾಗಿದ್ದ ಒಂದ ಕಡೆಯಿಂದ ವಂತಾರಕ್ಕೆ ಅವುಗಳನ್ನು ತರಲಾಗಿದೆ. ಇನ್ನು ಒರಾಂಗುಟನ್‌ಗಳನ್ನು ಅಪ್ಪಿಕೊಂಡರು ಮತ್ತು ಪ್ರೀತಿಯಿಂದ ಆಟವಾಡಿದರು. ನೀರಿನ ಅಡಿಯಲ್ಲಿರುವ ನೀರಾನೆಯನ್ನು, ಮೊಸಳೆಗಳನ್ನು ನೋಡಿದರು. ಜೀಬ್ರಾಗಳ ನಡುವೆ ನಡೆದಾಡಿದರು. ಜಿರಾಫೆ ಮತ್ತು ಘೇಂಡಾಮೃಗದ ಮರಿಗಳಿಗೆ ಆಹಾರ ನೀಡಿದರು. ಇನ್ನು ಒಂದು ಕೊಂಬಿನ ಘೇಂಡಾಮೃಗದ ಮರಿಯೊಂದು ಅನಾಥವಾಗಿದ್ದು, ಅದರ ತಾಯಿಯು ವಂತಾರದಲ್ಲಿಯೇ ಸಾವನ್ನಪ್ಪಿತು.

ದೊಡ್ಡ ಹೆಬ್ಬಾವು, ವಿಶಿಷ್ಟವಾದ ಎರಡು ತಲೆಯ ಹಾವು, ಎರಡು ತಲೆಯ ಆಮೆ, ಟ್ಯಾಪಿರ್ ಅನ್ನು ಮೋದಿ ನೋಡಿದರು. ಇನ್ನು ಚಿರತೆ ಮರಿಗಳನ್ನು ಕೃಷಿ ಜಮೀನಿನಲ್ಲಿ ಬಿಡಲಾಗಿತ್ತು. ಆ ನಂತರ ಗ್ರಾಮಸ್ಥರು ಅವುಗಳನ್ನು ಗುರುತಿಸಿ ರಕ್ಷಿಸಿದರು. ದೈತ್ಯ ನೀರುನಾಯಿ, ಬೊಂಗೊ (ಹುಲ್ಲೆ), ಸೀಲುಗಳು ಸಹ ನೋಡಿದ ನಂತರದಲ್ಲಿ ಸ್ನಾನ ಮಾಡುತ್ತಾ ಆಟವಾಡುತ್ತಿದ್ದ ಆನೆಗಳನ್ನು ಸಹ ನರೇಂದ್ರ ಮೋದಿ ವೀಕ್ಷಿಸಿದರು.

ಅಂದ ಹಾಗೆ ಈ ಹೈಡ್ರೋಥೆರಪಿ ಕೊಳಗಳು ವಿಶಿಷ್ಟವಾದವು. ಇವುಗಳಿಂದ ಸಂಧಿವಾತ ಮತ್ತು ಕಾಲು ಸಮಸ್ಯೆಗಳಿಂದ ಬಳಲುತ್ತಿರುವ ಆನೆಗಳ ಚೇತರಿಕೆಗೆ ಸಹಾಯ ಮಾಡುತ್ತವೆ ಮತ್ತು ಅವುಗಳ ಚಲನಶೀಲತೆಯನ್ನು ಸುಧಾರಿಸುತ್ತವೆ.

ಆನೆ ಆಸ್ಪತ್ರೆಯ ಕಾರ್ಯನಿರ್ವಹಣೆಯನ್ನು ಅವರು ನೋಡಿದರು. ಅಂದ ಹಾಗೆ ಇದು ಇಂಥದ್ದರ ಪೈಕಿ ವಿಶ್ವದ ಅತಿದೊಡ್ಡ ಆಸ್ಪತ್ರೆಯಾಗಿದೆ. ವಂತಾರದಲ್ಲಿ ರಕ್ಷಿಸಲಾದ ಗಿಳಿಗಳನ್ನು ಅವರು ಬಿಡುಗಡೆ ಮಾಡಿದರು. ವಂತಾರದಲ್ಲಿ ವಿವಿಧ ವಿವಿಧ ಕೇಂದ್ರಗಳ- ವಿಭಾಗಗಳನ್ನು ನಿರ್ವಹಿಸುತ್ತಿರುವ ವೈದ್ಯರು, ಸಹಾಯಕ ಸಿಬ್ಬಂದಿ ಮತ್ತು ಕಾರ್ಮಿಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಿದರು.

TAGGED:gujaratJam Nagarnarendra modiVantara Animal Rescue Centreಗುಜರಾತ್ಜಾಮ್ ನಗರನರೇಂದ್ರ ಮೋದಿವಂತಾರ ವನ್ಯಜೀವಿ ರಕ್ಷಣೆ
Share This Article
Facebook Whatsapp Whatsapp Telegram

Cinema news

Mahesh Babus AMB Cinemas
ಯುಗಾದಿಗೆ ಬಂಪರ್ ಆಫರ್ ಕೊಟ್ಟ ಮಹೇಶ್ ಬಾಬು ‘ಎಎಂಬಿ ಸಿನಿಮಾಸ್’
Cinema Latest South cinema Top Stories
Ranveer Singh in Dhurandhar 2
ಜಾಗಿಂಗ್‌ ಮಾಡುತ್ತಾ ‘ಧುರಂಧರ್’‌ ಸಿನಿಮಾ ಬಗ್ಗೆ ಮಾತನಾಡಿದ ಕೆನಡಾ ಪ್ರಧಾನಿ, ಫಿನ್‌ಲ್ಯಾಂಡ್‌ ಅಧ್ಯಕ್ಷ
Bollywood Cinema Latest Main Post World
I Want Nayanthara AIADMK MPs Dig At MK Stalins Initiative Sparks Row
ನನಗೆ ನಯನತಾರ ಬೇಕು, ಕನಸು ಈಡೇರಿಸುವಿರಾ – ಎಐಎಡಿಎಂಕೆ ಸಂಸದನ ಪ್ರಶ್ನೆ
Cinema Latest National South cinema Top Stories
darshan 1
ದರ್ಶನ್ ಒಳಸಂದರ್ಶನಕ್ಕೆ ಕೋರ್ಟ್ ಅಸ್ತು – ಅಂತಿಮ ನಿರ್ಧಾರ ಜೈಲು ಅಧೀಕ್ಷಕರಿಗೆ ಬಿಟ್ಟದ್ದು ಎಂದ ನ್ಯಾಯಾಲಯ
Bengaluru City Cinema Court Districts Karnataka Latest Top Stories

You Might Also Like

LPG Commercial Cylinder
Bengaluru City

ರಾಜ್ಯದಲ್ಲಿ ಗ್ಯಾಸ್ ವಿತರಣೆಗೆ ಗೈಡ್‌ಲೈನ್ಸ್ ಬಿಡುಗಡೆ – ಹೋಟೆಲ್‌ಗಳಿಗೆ ಕೇವಲ 10%

Public TV
By Public TV
12 minutes ago
Haveri Tractor Driver Death
Crime

ಇಟ್ಟಿಗೆ ತುಂಬಿದ ಟ್ರ‍್ಯಾಕ್ಟರ್ -‌ ಟ್ರೇಲರ್ ಮಧ್ಯೆ ಸಿಲುಕಿ ಚಾಲಕ ದುರ್ಮರಣ

Public TV
By Public TV
1 hour ago
Kolar Head Constable Heart Arttack
Districts

ಹೃದಯಾಘಾತದಿಂದ ಹೆಡ್‌ ಕಾನ್ಸ್‌ಟೇಬಲ್ ಸಾವು

Public TV
By Public TV
2 hours ago
PRAJWAL REVANNA 1
Bengaluru City

ಪ್ರಜ್ವಲ್ ರೇವಣ್ಣ ಕೇಸ್ – ಪೆನ್‌ಡ್ರೈವ್ ಹಂಚಿಕೆ ಪ್ರಕರಣದಲ್ಲಿ 13,712 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ

Public TV
By Public TV
3 hours ago
Delhi Palam Residential Building Fire
Latest

Delhi | ಪಾಲಂನ ವಸತಿ ಕಟ್ಟಡದಲ್ಲಿ ಅಗ್ನಿ ಅವಘಡ – 8 ಮಂದಿ ಸಾವು

Public TV
By Public TV
3 hours ago
KIM JONG UN
Latest

ಉ.ಕೊರಿಯಾ ಚುನಾವಣೆ: 99.93% ಮತ ಪಡೆದು ಮತ್ತೆ ಭರ್ಜರಿ ಗೆಲುವು ಸಾಧಿಸಿದ ಕಿಮ್‌ ಜಾಂಗ್‌ ಉನ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?