Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೇದಾರನಾಥ್‌ ರೋಪ್‌ವೇಗೆ ಕೇಂದ್ರ ಅಸ್ತು – ಈ ರೋಪ್‌ವೇಯ ವಿಶೇಷತೆಯೇನು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕೇದಾರನಾಥ್‌ ರೋಪ್‌ವೇಗೆ ಕೇಂದ್ರ ಅಸ್ತು – ಈ ರೋಪ್‌ವೇಯ ವಿಶೇಷತೆಯೇನು?

Latest

ಕೇದಾರನಾಥ್‌ ರೋಪ್‌ವೇಗೆ ಕೇಂದ್ರ ಅಸ್ತು – ಈ ರೋಪ್‌ವೇಯ ವಿಶೇಷತೆಯೇನು?

Public TV
Last updated: March 12, 2025 6:16 pm
Public TV
Share
3 Min Read
kedarnath ropeway
SHARE

ಪ್ರವಾಸೋದ್ಯಮವನ್ನು ಉತ್ತೇಜಿಸುವ ಸಲುವಾಗಿ ಉತ್ತರಾಖಂಡದಲ್ಲಿ 6,811 ಕೋಟಿ ರೂ. ವೆಚ್ಚದಲ್ಲಿ 2 ಹೊಸ ರೋಪ್‌ವೇ ಯೋಜನೆಗಳಿಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ಕೊಟ್ಟಿದೆ. ಸೋನ್‌ಪ್ರಯಾಗ್‌- ಕೇದಾರನಾಥ್‌ ಮತ್ತು ಹೇಮಕುಂಡ್‌ ಸಾಹಿಬ್‌- ಗೋವಿಂದಘಾಟ್‌ ನಡುವಿನ ರೋಪ್ವೇಗಳು ಮುಂದಿನ 4ರಿಂದ 6 ವರ್ಷಗಳೊಳಗೆ ಪೂರ್ಣಗೊಳಲಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್‌ ತಿಳಿಸಿದ್ದಾರೆ.

kedarnath

ಸೋನ್‌ಪ್ರಯಾಗ್-ಕೇದಾರನಾಥ್ 12.9 ಕಿ.ಮೀ.ವರೆಗಿನ ಮತ್ತು ಹೇಮಕುಂಡ್ ಸಾಹಿಬ್-ಗೋವಿಂದಘಾಟ್ 12.4 ಕಿ.ಮೀ. ನಡುವೆ ರೋಪ್‌ವೇ ನಿರ್ಮಿಸಲಾಗುತ್ತದೆ. ಇದರಿಂದಾಗಿ 8 ಗಂಟೆ ಬೇಕಾಗಿದ್ದ ಪ್ರಯಾಣದ ಅವಧಿ ಕೇವಲ 40 ನಿಮಿಷಕ್ಕೆ ಇಳಿಯಲಿದೆ. ಈ ರೋಪ್‌ವೇಯು ಭಾರತದ ಉದ್ದ ರೋಪ್ ವೇ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ.

ಕೇದಾರನಾಥ್‌ನಿಂದ ಸೋನ್‌ಪ್ರಯಾಗ್‌ ನಡುವಿನ ರೋಪ್‌ವೇ ಅನ್ನು 4,081 ಕೋಟಿ ರೂ. ವೆಚ್ಚದಲ್ಲಿ, ಖಾಸಗಿ ಮತ್ತು ಸರ್ಕಾರದ ಸಹಭಾಗಿತ್ವದಲ್ಲಿ ನಿರ್ಮಿಸಲಾಗುತ್ತದೆ. ಅತ್ಯಾಧುನಿಕ ಟ್ರೈಕೇಬಲ್‌ ಡಿಟ್ಯಾಚೇಬಲ್‌ ಗೊಂಡೋಲ (3ಎಸ್‌) ತಂತ್ರಜ್ಞಾನ ಬಳಸಿ ಇದರ ನಿರ್ಮಾಣವಾಗುತ್ತದೆ. ಪ್ರತಿ ಗಂಟೆಗೆ 1800 ಪ್ರಯಾಣಿಕರು, ಪ್ರತಿ ದಿನ ಸುಮಾರು 18,000 ಪ್ರಯಾಣಿಕರನ್ನು ಈ ಕೇಬಲ್‌ ಕಾರ್ ಹೊತ್ತೊಯ್ಯಲಿದೆ. ಹೇಮಕುಂಡ್‌ ಸಾಹಿಬ್‌ ಜಿ ಮತ್ತು ಗೋವಿಂದಘಾಟ್‌ ನಡುವಿನ ರೋಪ್‌ವೇ 2,730 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ.

rope way

ರೋಪ್‌ವೇನ ವಿಶೇಷತೆ ಏನು?

ಈ ರೋಪ್‌ವೇ 10 ಆಸನಗಳ ಕ್ಯಾಬಿನ್‌ಗಳನ್ನು ಒಳಗೊಂಡಿರುತ್ತದೆ. ಎಲ್ಲಾ ಕ್ಯಾಬಿನ್‌ಗಳನ್ನು ಮುಚ್ಚಿರುತ್ತದೆ. ಸ್ವಯಂಚಾಲಿತ ತೆರೆಯುವ ಮತ್ತು ಮುಚ್ಚುವ ಬಾಗಿಲುಗಳನ್ನು ಹೊಂದಿರುತ್ತದೆ. ಇವು ಒಂದು ಗಂಟೆಯಲ್ಲಿ 1,800 ಪ್ರಯಾಣಿಕರನ್ನು ಕೊಂಡೊಯ್ಯುವ ಸಾಮರ್ಥ್ಯವನ್ನು ಹೊಂದಿದೆ. ಈ ರೋಪ್‌ವೇ ವರ್ಷವಿಡೀ ಕಾರ್ಯನಿರ್ವಹಿಸುತ್ತದೆ. ಮಳೆಗಾಲ, ಬೇಸಿಗೆ ಕಾಲದ ಸಮಯದಲ್ಲೂ ಕಾರ್ಯನಿರ್ವಹಿಸುತ್ತದೆ.

ರೋಪ್‌ವೇ ನಿರ್ಮಾಣದ ಲಾಭವೇನು?
ಹೇಮಕುಂಡ್‌ ಹಾಗೂ ಕೇದಾರನಾಥ ದೇವಸ್ಥಾನಕ್ಕೆ ತೆರಳುವ ದಾರಿ ಕಲ್ಲು ಬಂಡೆಗಳಿಂದ ಕೂಡಿದ್ದು, ಜನ ಕಾಲ್ನಡಿಗೆಯಲ್ಲಿ ಹೋಗುತ್ತಿದ್ದರು. ವೃದ್ಧರನ್ನು ಕುದುರೆಗಳ ಮೇಲೆ ಕೂರಿಸಿಕೊಂಡು ಅಥವಾ ಹೊತ್ತುಕೊಂಡು ಹೋಗಲಾಗುತ್ತಿತ್ತು. ಭೂಕುಸಿತ ಸಂಭವಿಸಿದಾಗ ಪರಿಸ್ಥಿತಿ ಇನ್ನೂ ಹದಗೆಟ್ಟಿತ್ತು. ಈ ರೋಪ್ ವೇಯು ಯಾತ್ರಾರ್ಥಿಗಳ ಪ್ರಯಾಣವನ್ನು ಸುಖಕರಗೊಳಿಸಲು ಹಾಗೂ ಎಲ್ಲಾ ಹವಾಮಾನದಲ್ಲೂ ಓಡಾಡಲು ಅನುಕೂಲವಾಗುತ್ತದೆ. ಇದು ಪರಿಸರ ಸ್ನೇಹಿ ಸಾರಿಗೆ ವ್ಯವಸ್ಥೆಯಾಗಿದ್ದರಿಂದ ಪ್ರಯಾಣದ ಸಮಯವೂ ಕಡಿಮೆಯಾಗಲಿದೆ.

kedarnath road

ವಿಶ್ವ ಪ್ರಸಿದ್ಧ ತೀರ್ಥ ಕ್ಷೇತ್ರಗಳಲ್ಲಿ ಒಂದಾದ ಕೇದಾರನಾಥ ದೇವಾಲಯಕ್ಕೆ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. 12 ಜ್ಯೋತಿರ್ಲಿಂಗಗಳಲ್ಲಿ ಒಂದಾದ ಕೇದಾರನಾಥಕ್ಕೆ 20 ಲಕ್ಷ ಯಾತ್ರಾಧಿಗಳು ಭೇಟಿ ನೀಡುತ್ತಾರೆ. ಇದೀಗ ಈ ದೇವಾಲಯಕ್ಕೆ ತೆರಳಲು ರೋಪ್ ವೇ ನಿರ್ಮಾಣ ಮಾಡುತ್ತಿರುವುದರಿಂದ ಭಕ್ತಾಧಿಗಳು ದುರ್ಗಮ ಹಾದಿಯಲ್ಲಿ ತೆರಳುವುದನ್ನು ತಪ್ಪಿಸುತ್ತದೆ.

ಭಾರತದ ಮೊದಲ ರೋಪ್‌ವೇ

1960ರಲ್ಲಿ ಭಾರತದ ಮೊದಲ ಆಧುನಿಕ ರೋಪ್‌ವೇ ಅನ್ನು ರಾಜ್‌ಗೀರ್‌ನಲ್ಲಿ ನಿರ್ಮಿಸಲಾಗಿತ್ತು. ಇದನ್ನು ಪ್ರಸಿದ್ಧ ಜಪಾನಿನ ಬೌದ್ಧ ಸನ್ಯಾಸಿ ಫ್ಯೂಜಿ ಅವರು ರಾಜ್‌ಗೀರ್‌ನ ವಿಶ್ವ ಶಾಂತಿ ಸ್ತೂಪಕ್ಕೆ ಉಡುಗೊರೆಯಾಗಿ ನೀಡಿದ್ದರು ಎಂದು ಕೆಲವು ಮೂಲಗಳು ತಿಳಿಸಿವೆ.

ಅರುಣಾಚಲದ ತವಾಂಗ್ ಬೌದ್ಧ ಧಾರ್ಮಿಕ ಸ್ಥಳದ ರೋಪ್‌ವೇಯನ್ನು ಸಮುದ್ರ ಮಟ್ಟದಿಂದ 11,000 ಅಡಿ ಎತ್ತರದಲ್ಲಿ 2010ರಲ್ಲಿ ನಿರ್ಮಿಸಲಾಗಿದೆ. ಇದು ವಿಶ್ವದ ಅತಿ ಎತ್ತರದ ರೋಪ್‌ವೇಗಳಲ್ಲಿ ಒಂದಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿರುವ ಗುಲ್ಮಾರ್ಗ್‌ ರೋಪ್‌ವೇಯು ವಿಶ್ವದ 2 ನೇ ಅತಿ ಎತ್ತರದ ಕೇಬಲ್ ಕಾರನ್ನು ಹೊಂದಿದೆ. ಏಷ್ಯಾದ ಅತಿ ಎತ್ತರದ ಮತ್ತು ಉದ್ದವಾದ ಕೇಬಲ್ ಕಾರನ್ನು ಹೊಂದಿದೆ.

gulmang ropeway

ಕೇಬಲ್ ಲಿಫ್ಟ್ ಅನ್ನು ವಿಶ್ವದಲ್ಲೇ ಮೊದಲ ಬಾರಿಗೆ ಕ್ರೊಯೇಷಿಯಾದ ಪಾಲಿಮ್ಯಾತ್ ಫೌಸ್ಟೊ ವೆರಾಂಜಿಯೊ ನಿರ್ಮಾಣ ಮಾಡಿದ್ದರು. ಮೊದಲ ಕಾರ್ಯಾಚರಣಾ ವೈಮಾನಿಕ ಲಿಪ್ಟ್ ಅನ್ನು 1644 ರಲ್ಲಿ ಪೋಲೆಂಡ್‌ನ ಗ್ಡಾನ್ಸ್ಕ್ ನಲ್ಲಿ ಆಡಮ್ ವೈಬೆ ನಿರ್ಮಿಸಿದ್ದರು. ಇದನ್ನು ಯುರೋಪಿಯನ್ ಇತಿಹಾಸದಲ್ಲಿ ಮೊದಲ ಕೇಬಲ್ ಲಿಫ್ಟ್ ಎಂದು ಕರೆಯಲಾಗಿತ್ತು.

TAGGED:Central GovernmentKedarnath TempleRope WayUttarkandಉತ್ತರಾಖಂಡಕೇದಾರನಾಥ ದೇವಾಲಯಕೇಂದ್ರ ಸರ್ಕಾರರೋಪ್ ವೇ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

North Western Road Transport Corporation
Bagalkot

ಉಪಚುನಾವಣೆ | ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯ ಲಿಖಿತ ಪರೀಕ್ಷೆ ಏ.10ಕ್ಕೆ ಮುಂದೂಡಿಕೆ

Public TV
By Public TV
6 minutes ago
dk shivakumar
Bengaluru City

ಶಿವಶಂಕರಪ್ಪಗಿಂತ ಹೆಚ್ಚು ಮತಗಳ ಅಂತರದಿಂದ ಸಮರ್ಥ್ ಗೆಲುವು – ಡಿಕೆಶಿ

Public TV
By Public TV
11 minutes ago
RCB 3
Cricket

ನಾಳಿನ ಆರ್‌ಸಿಬಿ ಪಂದ್ಯಕ್ಕೆ ಶಾಸಕರಿಗೆ ಸಿಗಲಿದೆ 1+1 ಟಿಕೆಟ್‌

Public TV
By Public TV
29 minutes ago
S Madhu Bangarappa
Bengaluru City

ಕರ್ನಾಟಕದಲ್ಲೂ ದ್ವಿಭಾಷಾ ಸೂತ್ರ ಜಾರಿಗೆ ಚಿಂತನೆ – ಹಿಂದಿ ಹೇರಿಕೆಗೆ ಬ್ರೇಕ್?

Public TV
By Public TV
1 hour ago
Ramnavami in raichuru
Districts

ರಾಮನವಮಿ ಸಡಗರ – ರಾಯಚೂರಿನ ದೇವಾಲಯಗಳಲ್ಲಿ ನಿರಂತರ ಪೂಜೆ, ಭಕ್ತರಿಗೆ ಅನ್ನಸಂತರ್ಪಣೆ

Public TV
By Public TV
2 hours ago
Ricky Rai 4
Bengaluru City

ಡ್ರಿಫ್ಟಿಂಗ್ ಬಳಿಕ ರಿಕ್ಕಿ ರೈ ವಿರುದ್ಧ ಮತ್ತೊಂದು FIR – ಕಾರು ರಿಜಿಸ್ಟರ್ ಮಾಡದೇ ಟ್ಯಾಕ್ಟ್ ಕಟ್ಟದೇ ಸರ್ಕಾರಕ್ಕೆ ವಂಚನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?