ಹುಟ್ಟೂರಿನ ರಥೋತ್ಸವದಲ್ಲಿ ತೇರು ಎಳೆದ ಅರ್ಜುನ್ ಸರ್ಜಾ, ಧ್ರುವ ಸರ್ಜಾ

Public TV
1 Min Read
dhruva sarja 1

ಸ್ಯಾಂಡಲ್‌ವುಡ್ ನಟ ಅರ್ಜುನ್ ಸರ್ಜಾ (Arjun Sarja) ಹಾಗೂ ಧ್ರುವ ಸರ್ಜಾ (Dhruva Sarja) ಅವರು ಹುಟ್ಟೂರಿನ ರಥೋತ್ಸವದಲ್ಲಿ ಭಾಗಿಯಾಗಿ ತೇರು ಎಳೆದಿದ್ದಾರೆ. ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕು ಜಕ್ಕೇನಹಳ್ಳಿಯಲ್ಲಿರುವ ಅಹೋಬಲ ನರಸಿಂಹ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಇದನ್ನೂ ಓದಿ:ಡೆಲ್ಲಿ ಅಂಗಳ ತಲುಪಿದ ನಟಿ ರನ್ಯಾ ರಾವ್ ಕೇಸ್: ಇಬ್ಬರು ಸಚಿವರು ಸೇಫ್

dhruva sarja

ಇಂದು ಜಕ್ಕೇನಹಳ್ಳಿಯಲ್ಲಿ ನಡೆದ ಜಾತ್ರಾ ಮಹೋತ್ಸವದಲ್ಲಿ ಅರ್ಜುನ್ ಸರ್ಜಾ ಕುಟುಂಬಸ್ಥರು ಭಾಗಿಯಾಗಿದ್ದಾರೆ. ಮನೆ ದೇವರು ಅಹೋಬಲ ನರಸಿಂಹ ಸ್ವಾಮಿಯ ರಥ ಎಳೆದಿದ್ದಾರೆ. ಈ ವೇಳೆ, ಸ್ಟಾರ್ ನಟರಾದ ಅರ್ಜುನ್ ಸರ್ಜಾ ಮತ್ತು ಧ್ರುವರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಫ್ಯಾನ್ಸ್ ಕಂಟ್ರೋಲ್‌ಗೆ ಪೊಲೀಸರು ಹರಸಾಹಸ ಮಾಡಿದ್ದಾರೆ.

ಇನ್ನೂ ಅರ್ಜುನ್ ಸರ್ಜಾ ಅವರು ಮಗಳು ಐಶ್ವರ್ಯಾ ಮತ್ತು ನಿರಂಜನ್ ಸುಧೀಂದ್ರ ನಟನೆಯ ‘ಸೀತಾ ಪಯಣ’ ಸಿನಿಮಾಗೆ ನಿರ್ದೇಶನ ಮಾಡುತ್ತ ಬ್ಯುಸಿಯಾಗಿದ್ದಾರೆ. ಇತ್ತ ಧ್ರುವ ‘ಕೆಡಿ’ ಸಿನಿಮಾದ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ.

Share This Article