Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎಂಡೋಸಲ್ಫಾನ್ ನಿಂದ ಬಳಲುತ್ತಿರುವ ಮೂವರು ಮಕ್ಕಳನ್ನು ಸಲಹುವ ದಂಪತಿಗೆ ಬೇಕಿದೆ ಸಹಾಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | BELAKU | ಎಂಡೋಸಲ್ಫಾನ್ ನಿಂದ ಬಳಲುತ್ತಿರುವ ಮೂವರು ಮಕ್ಕಳನ್ನು ಸಲಹುವ ದಂಪತಿಗೆ ಬೇಕಿದೆ ಸಹಾಯ

BELAKU

ಎಂಡೋಸಲ್ಫಾನ್ ನಿಂದ ಬಳಲುತ್ತಿರುವ ಮೂವರು ಮಕ್ಕಳನ್ನು ಸಲಹುವ ದಂಪತಿಗೆ ಬೇಕಿದೆ ಸಹಾಯ

Public TV
Last updated: April 22, 2017 5:57 pm
Public TV
Share
3 Min Read
KWR 3
SHARE

ಕಾರವಾರ: ಮುಪ್ಪು ಆವರಿಸಿದಾಗ ಮಕ್ಕಳು ತಮ್ಮ ಆಸರೆಗೆ ಇರಬೇಕು ಎಂದು ಪ್ರತಿಯೊಬ್ಬ ಹೆತ್ತವರು ಬಯಸುತ್ತಾರೆ. ಆದರೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ತಲಗೇರಿ ಗ್ರಾಮದಲ್ಲಿರುವ ಕುಟುಂಬದಲ್ಲಿ ಬೆಳೆದು ನಿಂತ ಮೂವರು ಮಕ್ಕಳನ್ನ ಕಡು ಬಡತನದ ಮುಪ್ಪಿನಲ್ಲೂ ಪೊಷಕರೇ ನೋಡಿಕೊಳ್ಳಬೇಕಾದ ಸ್ಥಿತಿಯಿದೆ. ಎಂಡೋಸಲ್ಫಾನ್ ನಿಂದಾಗಿ ಮೂವರು ಮಕ್ಕಳಿಗೆ ಬುದ್ದಿಮಾಂದ್ಯತೆ ಆವರಿಸಿದ್ದು ಈ ಕುಟುಂಬದ ಬೆಳಕನ್ನೇ ಕಿತ್ತುಕೊಂಡಿದೆ.

kwr 1

ಕಿತ್ತು ತಿನ್ನುವ ಬಡತನದ ಸ್ಥಿತಿಯಲ್ಲೂ ತನ್ನ ಮೂವರು ಮಕ್ಕಳನ್ನು ಸಾಕಿ ಸಲುಹುತ್ತಿರುವ 52 ವರ್ಷದ ತಾಯಿ ವತ್ಸಲಾ. ತಂದೆ ಚಂದ್ರಕಾಂತ್ ಲಕ್ಷ್ಣಣ್ ಶೇಟ್ ವಯಸ್ಸು 60. ವತ್ಸಲಾ ಮತ್ತು ಚಂದ್ರಕಾಂತ್ ದಂಪತಿ ತಮ್ಮ ಮೂವರು ಮಕ್ಕಳಾದ ನಾಗರಾಜ್, ಹೇಮಲತಾ, ಜಗದೀಶ್ ಎಂಬುವವರೊಂದಿಗೆ ವಾಸವಾಗಿದ್ದಾರೆ. ಇನ್ನು ಈ ಕುಟುಂಬ ಜೀವನೋಪಯಾಕ್ಕಾಗಿ ಕೂಲಿ ಕೆಲಸವನ್ನು ನಂಬಿಕೊಂಡಿದೆ. ಲಕ್ಷ್ಮಣ್ ಅವರು ಚೀರೆಕಲ್ಲು ಕೋರೆಯಲ್ಲಿ ಕಲ್ಲು ಕೀಳುವ ಕೆಲಸ ಮಾಡಿದರೆ, ವತ್ಸಲಾ ಸಹ ಮಕ್ಕಳ ಆರೈಕೆ ಜೊತೆ ಕೂಲಿ ಕೆಲಸ ಮಾಡುತ್ತಾರೆ.

ಈ ಕುಟುಂಬಕ್ಕೆ ಇರಲು ಸಹ ಒಂದು ಸ್ವಂತ ಮನೆಯಿಲ್ಲ. ಅರಣ್ಯ ಒತ್ತುವರಿ ಪ್ರದೇಶದಲ್ಲಿ ಚಿಕ್ಕ ಗೂಡನ್ನ ಕಟ್ಟಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಈ ದಂಪತಿಗೆ ಮೊದಲು ಒಂದು ಗಂಡುಮಗುವಿನ ಜನನವಾಯ್ತು. ಆದ್ರೆ ಆ ಮಗು ಎಂಡೋಸಲ್ಫಾನ್ ನಿಂದ ಬುದ್ದಿಮಾಂದ್ಯತೆಯಿಂದ ಹುಟ್ಟಿರುವುದನ್ನ ವೈದ್ಯರು ತಿಳಿಸಿದ್ರು. ಹೀಗಾಗಿ ಒಂದರ ಮೇಲಂತೆ ಮೂರು ಮಕ್ಕಳು ಜನಿಸಿದ್ರೂ ಎಲ್ಲಾ ಮಕ್ಕಳೂ ಬುದ್ದಿಮಾಂದ್ಯರಿದ್ದು ಇದರಲ್ಲಿ 31 ವರ್ಷದ ಹೇಮಲತಾ ಹಾಗೂ 29 ವರ್ಷದ ಜಗದೀಶ್ ಬುದ್ದಿಮಾಂದ್ಯತೆಯ ಜೊತೆಯಲ್ಲಿ ಇರುಳುಗಣ್ಣಿನ ಸಮಸ್ಯೆ ಯಿಂದ ಬಳಲಿದ್ರೆ 33 ವರ್ಷದ ಹಿರಿಯ ಮಗ ನಾಗರಾಜ್ ಬುದ್ದಿಮಾಂದ್ಯತೆಯನ್ನ ಹೊಂದಿದ್ದು ಇವರನ್ನ ನೋಡಿಕೊಳ್ಳುವ ಹೊಣೆಭಾರ ವತ್ಸಲಾ ಮೇಲಿದೆ.

KWR 1

ವಯೋಸಹಜ ಅನಾರೋಗ್ಯ: ಒಂದರ ನಂತರ ಹುಟ್ಟಿದ ಮೂರು ಮಕ್ಕಳೂ ಸಹ ಎಂಡೋಸಲ್ಫಾನ್ ಕಾಯಿಲೆಯಿಂದ ಬಳಲುತ್ತಿದ್ದರೆ, ಮನೆಯ ಯಜಮಾನ ಚಂದ್ರಕಾಂತ್ ಚಿಕ್ಕ ಅಪಘಾತದಲ್ಲಿ ಕೈಗೆ ಪೆಟ್ಟಾಗಿ ರಾಡನ್ನ ಹಾಕಿಸಿಕೊಳ್ಳಬೇಕಾಯ್ತು, ಇನ್ನು ಸರ್ಕಾರ ಚೀರೇಕಲ್ಲಿನ ಗಣಿಗಾರಿಕೆ ನಿಷೇಧಿಸಿದ್ದರಿಂದ ಇರುವ ಕೆಲಸವೂ ಇಲ್ಲದಂತಾಗಿದೆ. ಜೊತೆಯಲ್ಲಿ ಇಬ್ಬರಿಗೂ ವಯೋಸಹಜತೆಯಿಂದಾಗಿ ಆರೋಗ್ಯ ಹದಗೆಟ್ಟಿದ್ದು ಇಬ್ಬರೂ ಕೆಲಸ ಮಾಡಲು ಸಾಧ್ಯವಾಗದೇ ಮನೆಯಲ್ಲಿರುವಂತೆ ಮಾಡಿದೆ. ಒಂದು ಕಡೆ ಬೆಳದು ನಿಂತ ಈ ಮಕ್ಕಳ ಪೋಷಣೆ ಇನ್ನೊಂದೆಡೆ ತಮ್ಮ ನಂತರ ಇವರ ಪಾಲನೆಯ ಚಿಂತೆ ಹೀಗೆ ಎಂದು ಚಂದ್ರಕಾಂತ್ ಮತ್ತು ವತ್ಸಲಾ ದಂಪತಿ ಚಿಂತೆಯಲ್ಲಿದ್ದಾರೆ.

kwr 2

ಹುಸಿ ಭರವಸೆ: ಇವರಿಗೆ ಸ್ಥಳೀಯ ಶಾಸಕರಿಂದ ಹಿಡಿದು ಕೆಲವು ರಾಜಕಾರಣಿಗಳು ಸಹಾಯ ಮಾಡುವ ಭರವಸೆ ನೀಡಿದ್ರು. ಆದ್ರೆ ಕೇವಲ ಪ್ರಚಾರಕ್ಕೆ ಇವರನ್ನ ಬಳಸಿಕೊಂಡು ನಂತರ ಯಾವ ಸಹಾಯವನ್ನೂ ಮಾಡಲಿಲ್ಲ. ಇನ್ನು ಕೂಲಿ ಕೆಲಸ ಮಾಡುತಿದ್ದ ಇವರಿಗೆ ಆರೋಗ್ಯ ಹದಗೆಟ್ಟು ಜೀವನ ನೆಡೆಸದಷ್ಟು ಸಂಕಷ್ಟ ಎದುರಾಗಿದೆ. ಜೊತೆಯಲ್ಲಿ ಜೀವನ ಸಾಗಿಸಲು ಇದ್ದ ಮನೆಕೂಡ ಶಿಥಿಲಾವಸ್ಥೆ ತಲುಪಿದ್ದು ಆಗಲೋ ಈಗಲೂ ಬೀಳುವ ಸ್ಥಿತಿಯಲ್ಲಿದೆ.

ಪುಟ್ಟ ಅಂಗಡಿಯ ಕನಸು: ಮೂರು ಮಕ್ಕಳ ವೈದ್ಯಕೀಯ ವೆಚ್ಚ ನೋಡಿಕೊಲ್ಳಲು ಕಷ್ಟವಾಗುತಿದ್ದು, ಸರ್ಕಾರದಿಂದ ಬರುತ್ತಿರುವ ಸಹಾಯ ಹಣವೂ ಸಾಲುತಿಲ್ಲ. ತಮ್ಮ ಆರೋಗ್ಯ ಹದಗೆಡುತ್ತಿರುವುದರಿಂದ ಮೂರು ಮಕ್ಕಳ ಮುಂದಿನ ಭವಿಷ್ಯದ ಚಿಂತೆ ಇವರನ್ನ ಕಾಡುತ್ತಿದೆ. ಊರಿನಲ್ಲಿ ಚಿಕ್ಕದೊಂದು ಅಂಗಡಿ ಇಟ್ಟು ಮಕ್ಕಳ ಭವಿಷ್ಯ ರೂಪಿಸುವುದರ ಜೊತೆ ತಮ್ಮ ಬದುಕು ಕಟ್ಟಿಕೊಳ್ಳು ಹಂಬಲ ಈ ದಂಪತಿಯದು. ಹೀಗಾಗಿ ಬೆಳಕು ಕಾರ್ಯಕ್ರಮದ ಮೂಲಕ ಆರ್ಥಿಕ ಸಹಾಯ ಬಯಸಿದ್ದಾರೆ. ಇನ್ನು ಇದೇ ಊರಿನ ವೆಂಕಟರಮಣ ವೈದ್ಯ ಎಂಬುವವರು ಇವರ ಸಹಾಯಕ್ಕೆ ಬಂದಿದ್ದು ಅಂಗಡಿ ನೆಡೆಸಲು ಜಾಗವನ್ನು ಒದಗಿಸಿಕೊಡುವ ಭರವಸೆ ನೀಡಿದ್ದಲ್ಲದೇ ಗ್ರಾಮ ಪಂಚಾಯ್ತಿಯಿಂದ ಮನೆ ಕಟ್ಟಿಸಿಕೊಡುವ ಪ್ರಯತ್ನದಲ್ಲಿದ್ದಾರೆ.

ಆರೋಗ್ಯ ಸರಿಯಿಲ್ಲದ ಕಾರಣ ಕೂಲಿ ಕೆಲಸ ಕಷ್ಟಸಾಧ್ಯ. ಹೀಗಾಗಿ ಚಿಕ್ಕದೊಂದು ಅಂಗಡಿ ಇಟ್ಟುಕೊಂಡರೆ ಕುಳಿತಲ್ಲಿ ಕೆಲಸ ಮಾಡಿಕೊಳ್ಳಬಹುದು. ಜೊತೆಯಲ್ಲಿ ಮಕ್ಕಳನ್ನೂ ಇದರಲ್ಲಿ ತೊಡಗಿಸಿಕೊಂಡು ಕ್ರೀಯಾ ಶೀಲರಾಗಿರುವಂತೆ ನೋಡಿಕೊಂಡು ಬದುಕು ರೂಪಿಸಿಕೊಳ್ಳುವ ಆಸೆಯಿದೆ.

 

TAGGED:belakuEndosulfanhealthhomePublic TVtreatmentUttara Kannadaಆರೋಗ್ಯಉತ್ತರ ಕನ್ನಡಎಂಡೋಸಲ್ಫಾನ್ಚಿಕಿತ್ಸೆಪಬ್ಲಿಕ್ ಟಿವಿಬೆಳಕುಮನೆ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ʻಕಾಂತಾರʼ ದೈವ ನಿಂದಿಸಿದ್ದ ರಣವೀರ್‌ಗೆ ಪಾಪಪ್ರಜ್ಞೆ – ಚಾಮುಂಡಿ ದೇಗುಲದಲ್ಲೇ ಕ್ಷಮೆ ಕೇಳಲು ನಿರ್ಧಾರ
Cinema Districts Karnataka Latest National Sandalwood South cinema Top Stories
Badshah Isha Rikhi Marriage
ಡಿವೋರ್ಸ್ ಪಡೆದು 6 ವರ್ಷಗಳ ಬಳಿಕ ರ‍್ಯಾಪರ್ ಬಾದ್‌ಶಾ ಎರಡನೇ ಮದುವೆ
Cinema Latest Top Stories
Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories

You Might Also Like

R Ashok E Khata Bribe
Bengaluru City

ಇ ಖಾತಾದಲ್ಲಿ ಲಂಚಾವತಾರ – ಸಾರ್ವಜನಿಕರಿಗೆ ಅಧಿಕಾರಿಗಳಿಂದ ಹಣಕ್ಕೆ ಬೇಡಿಕೆ: ಅಶೋಕ್

Public TV
By Public TV
8 minutes ago
Jakkur Flying School R Ashok
Bengaluru City

ಜಕ್ಕೂರು ಫ್ಲೈಯಿಂಗ್ ಸ್ಕೂಲ್ ಮೇಲೆ ರಿಯಲ್ ಎಸ್ಟೇಟ್ ಕಣ್ಣು – ಸರ್ಕಾರದ ಮೇಲೆಯೇ ಕಬಳಿಕೆ ಆರೋಪ

Public TV
By Public TV
29 minutes ago
narendra modi trump
Latest

ಪ್ರಧಾನಿ ಮೋದಿಗೆ ಟ್ರಂಪ್‌ ಕಾಲ್‌ – ಮಧ್ಯಪ್ರಾಚ್ಯ, ಹಾರ್ಮುಜ್‌ ಜಲಸಂಧಿ ಬಿಕ್ಕಟ್ಟಿನ ಬಗ್ಗೆ ಮಹತ್ವದ ಮಾತುಕತೆ

Public TV
By Public TV
39 minutes ago
Crude Oil 2
Latest

ಅಮೆರಿಕ ವಿನಾಯ್ತಿ ಬೆನ್ನಲ್ಲೇ ಇರಾನ್‌ನಿಂದ 50 ಲಕ್ಷ ಬ್ಯಾರಲ್‌ ಕಚ್ಚಾ ತೈಲ ಖರೀದಿಸಿದ ರಿಲಯನ್ಸ್

Public TV
By Public TV
1 hour ago
Weather 1
Bengaluru City

ಮುಂದಿನ 3 ಗಂಟೆಯಲ್ಲಿ ರಾಜ್ಯದ ಹಲವೆಡೆ ಭಾರೀ ಮಳೆ ಎಚ್ಚರಿಕೆ

Public TV
By Public TV
2 hours ago
PM Modi
Latest

ಭಾರತದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ – ರಾಷ್ಟ್ರಕ್ಕೆ ಮೋದಿ ಅಭಯ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?