ಡೆಹ್ರಾಡೂನ್: ಹಿಂದೂಯೇತರರು ಕೇದಾರನಾಥ (Kedarnath) ಧಾಮದ ಪ್ರತಿಷ್ಠೆಗೆ ಧಕ್ಕೆ ತರುತ್ತಿದ್ದಾರೆ. ಆದ್ದಿರಿಂದ ಇಲ್ಲಿಗೆ ಹಿಂದೂ ಅಲ್ಲದವರ ಪ್ರವೇಶ ನಿಷೇಧಿಸಬೇಕು ಎಂದು ಬಿಜೆಪಿ ಶಾಸಕಿ ಆಶಾ ನೌಟಿಯಾಲ್ (Asha Nautiyal) ವಿವಾದಿತ ಹೇಳಿಕೆ ನೀಡಿದ್ದಾರೆ.
ಕೇದಾರನಾಥ ವಿಧಾನಸಭಾ ಕ್ಷೇತ್ರದ ಶಾಸಕಿಯಾಗಿರುವ ಆಶಾ ನೌಟಿಯಾಲ್ ಅವರು ಕೇದಾರನಾಥದಲ್ಲಿ ಚಾರ್ ಧಾಮ್ ‘ಯಾತ್ರೆ’ (Chardham Yatra) ನಿರ್ವಹಣೆ ಕುರಿತು ಸಭೆ ನಡೆಸಿದರು. ಇದೇ ವೇಳೆ ಮಾತನಾಡಿದ ಅವರು, ಜನರು ಎತ್ತಿರುವ ಸಮಸ್ಯೆಗಳಿಗೆ ನಾನು ಸ್ಪಂದಿಸುತ್ತೇನೆ ಮತ್ತು ಕೇದಾರನಾಥ ಧಾಮದ ಪ್ರತಿಷ್ಠೆಗೆ ಕಳಂಕ ತರುವ ಕೆಲವು ಜನರು ಇದ್ದಾರೆ. ಅಂತಹವರು ದೇವಾಲಯದ ಆವರಣ ಪ್ರವೇಶಿಸದಂತೆ ನಿಷೇಧಿಸಬೇಕೆಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಕಾಡಾನೆ ಸೆರೆ ಮೊದಲ ದಿನದ ಕಾರ್ಯಾಚರಣೆ ಯಶಸ್ವಿ – ಸತತ 4 ಗಂಟೆಗಳ ನಂತರ ಒಂಟಿಸಲಗ ಸೆರೆ
ಮುಂದುವರಿದು… ಹಿಂದೂಯೇತರರು ದೇವಾಲಯದ ಪ್ರತಿಷ್ಠೆಗೆ ಧಕ್ಕೆ ತರುತ್ತಿದ್ದಾರೆ. ಧಕ್ಕೆ ತರುವಂತಹ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ. ಹೀಗಾಗಿ ಅವರಿಗೆ ಪ್ರವೇಶ ನಿರಾಕರಿಸಬೇಕು ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಸರ್ಕಾರದ ನಿರ್ಲಕ್ಷ್ಯಕ್ಕೆ ಸರ್ಕಾರಿ ಶಾಲೆಗಳಿಗೆ ಆಪತ್ತು – ಜಿಲ್ಲೆಯಲ್ಲಿ 579 ಶಾಲೆಗಳಲ್ಲಿ 10ಕ್ಕಿಂತ ಕಡಿಮೆ ದಾಖಲಾತಿ