Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಂಜಾನ್‌ ಹಬ್ಬದ ಸಮಯದಲ್ಲಿ 1 ತಿಂಗಳು ಉಪವಾಸ ಮಾಡುವುದೇಕೆ? ಖರ್ಜೂರ ತಿಂದು ಉಪವಾಸ ಮುರಿಯುವುದರ ಹಿಂದಿನ ಕಾರಣವೇನು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Special | ರಂಜಾನ್‌ ಹಬ್ಬದ ಸಮಯದಲ್ಲಿ 1 ತಿಂಗಳು ಉಪವಾಸ ಮಾಡುವುದೇಕೆ? ಖರ್ಜೂರ ತಿಂದು ಉಪವಾಸ ಮುರಿಯುವುದರ ಹಿಂದಿನ ಕಾರಣವೇನು?

Special

ರಂಜಾನ್‌ ಹಬ್ಬದ ಸಮಯದಲ್ಲಿ 1 ತಿಂಗಳು ಉಪವಾಸ ಮಾಡುವುದೇಕೆ? ಖರ್ಜೂರ ತಿಂದು ಉಪವಾಸ ಮುರಿಯುವುದರ ಹಿಂದಿನ ಕಾರಣವೇನು?

Public TV
Last updated: March 18, 2025 10:15 pm
Public TV
Share
4 Min Read
Ramzan Fasting Dates
SHARE

ಮುಸ್ಲಿಮರ ಪವಿತ್ರ ಹಬ್ಬಗಳ ಪೈಕಿ ಒಂದಾದ ರಂಜಾನ್ ಹಬ್ಬದ ಆಚರಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿದೆ. ರಂಜಾನ್ ಹಬ್ಬದ ಪ್ರಯುಕ್ತ ಮುಸ್ಲಿಮರು ಉಪವಾಸ ವೃತಗಳನ್ನು ಕೈಗೊಳ್ಳುತ್ತಾರೆ. ಈಗಾಗಲೇ ಮುಸ್ಲಿಂ ಬಾಂಧವರು ಈ ವರ್ಷದ ರಂಜಾನ್ ಹಬ್ಬಕ್ಕೆ ಉಪವಾಸ ವೃತವನ್ನು ಆರಂಭಿಸಿದ್ದಾರೆ. ಈ ಸಮಯದಲ್ಲಿ, ಮುಸ್ಲಿಮರು ಒಂದು ತಿಂಗಳ ಕಾಲ ಉಪವಾಸ ಮಾಡುತ್ತಾರೆ ಮತ್ತು ಸೂರ್ಯೋದಯ ಮತ್ತು ಸೂರ್ಯಾಸ್ತದ ನಡುವಿನ ಸಮಯದಲ್ಲಿ ತಿನ್ನುವುದಿಲ್ಲ. ಹಾಗಿದ್ರೆ ರಂಜನ್‌ ಹಬ್ಬದ ಸಮದಲ್ಲಿ 1 ತಿಂಗಳು ಉಪವಾಸ ಮಾಡುವುದರ ಹಿಂದಿನ ಮಹತ್ವವೇನು? ಉಪವಾಸ ಮುಗಿದ ಬಳಿಕ ಮುಸ್ಲಿಂ ಬಾಂಧವರು ಖರ್ಜೂರ ತಿನ್ನುವುದೇಕೆ ಎಂಬುದರ ಕುರಿತು ಇಲ್ಲಿ ವಿವರಿಸಲಾಗಿದೆ.

ಉಪವಾಸ ಮಾಡುವುದೇಕೆ?
ಈ ತಿಂಗಳಲ್ಲಿ ಪ್ರವಾದಿ ಮೊಹಮ್ಮದ್ ಪವಿತ್ರ ಕುರಾನ್‌ನ ಮೊದಲ ಸಿದ್ಧಾಂತಗಳನ್ನು ಸ್ವೀಕರಿಸಿದರು.ಪುರಾತನ ನಂಬಿಕೆಗಳ ಪ್ರಕಾರ, ಅರೇಬಿಯನ್ ನಗರ – ಮೆಕ್ಕಾ ನಿವಾಸಿ ಮುಹಮ್ಮದ್ ಎಂಬ ವ್ಯಕ್ತಿ ಗೇಬ್ರಿಯಲ್ ಎಂಬ ದೇವತೆಯ ಮೂಲಕ ಅಲ್ಲಾ ಅಥವಾ ದೇವರಿಂದ ಸಿದ್ಧಾಂತಗಳನ್ನು ಸ್ವೀಕರಿಸಲು ಪ್ರಾರಂಭಿಸಿದರು. ಈ ಸಂದೇಶಗಳನ್ನು 114 ಅಧ್ಯಾಯಗಳಲ್ಲಿ ಸಂಗ್ರಹಿಸಲಾಯಿತು, ಈ ಅಧ್ಯಾಯಗಳನ್ನು ನಂತರ ಒಂದು ಪುಸ್ತಕದಲ್ಲಿ ಸಂಯೋಜಿಸಲಾಯಿತು. ಅದುವೇ ಮುಸಲ್ಮಾನರ ಪವಿತ್ರ ಗ್ರಂಥ ಕುರಾನ್.

ರಂಜಾನ್ ತಿಂಗಳಲ್ಲಿ ರೋಜಾ ಅಥವಾ ಉಪವಾಸಕ್ಕೆ ಅದರದೇ ಆದ ಮಹತ್ವವಿದೆ. ಸೂರ್ಯೋದಯಕ್ಕೆ ಮುಂಚಿನ ತಿಂಡಿಯನ್ನು ಸೋಹರ್ ಎಂದು ಕರೆಯಲಾಗುತ್ತದೆ ಮತ್ತು ಸೂರ್ಯಾಸ್ತದ ನಂತರ ಉಪವಾಸವನ್ನು ಮುಕ್ತಾಯಗೊಳಿಸುವ ಪ್ರಕ್ರಿಯೆಯನ್ನು ಇಫ್ತಾರ್ ಎಂದು ಕರೆಯಲಾಗುತ್ತದೆ. ಇನ್ನು ರಂಜಾನ್ ಸಮಯದಲ್ಲಿ ಕೇವಲ ದೇಹಕ್ಕೆ ಮಾತ್ರವಲ್ಲ ಮನಸ್ಸಿಗೂ ಉಪವಾಸ ಮಾಡಿಸಲಾಗುತ್ತದೆ. ಮುಸ್ಲಿಮರು ಉಪವಾಸದ ವೇಳೆ ಸಿಗರೇಟ್, ಮದ್ಯ, ತಂಬಾಕು ಸೇವನೆ, ಲೈಂಗಿಕ ಸಂಬಂಧವನ್ನು ಬೆಳೆಸುವುದನ್ನೂ ಕೂಡ ತಪ್ಪಿಸುತ್ತಾರೆ. ಏಕೆಂದರೆ ಉಪವಾಸದ ಸಮಯದಲ್ಲಿ ಇಂಥ ಚಟುವಟಿಕೆಗಳನ್ನು ಪಾಪ ಎಂದು ಪರಿಗಣಿಸಲಾಗುತ್ತದೆ. ರಂಜಾನ್ ತಿಂಗಳಲ್ಲಿ ಮುಸ್ಲಿಮರು ತಮ್ಮನ್ನು ಅಧ್ಯಾತ್ಮ ಪ್ರವೃತ್ತಿಗೆ ಅರ್ಪಿಸಿಕೊಳ್ಳುತ್ತಾರೆ.

ರಂಜಾನ್ ತಿಂಗಳ ಉಪವಾಸವನ್ನು ಆರಾಧನೆಯ ಕ್ರಮವಾಗಿ ನೋಡಲಾಗುತ್ತದೆ. ಉಪವಾಸ ಮಾಡುವುದರಿಂದ ತಾವು ಮಾಡಿದ ಪಾಪಗಳನ್ನು ಕಳೆದುಕೊಂಡು ದೇವರಿಗೆ ಇನ್ನಷ್ಟು ಹತ್ತಿರವಾಗಬಹುದು ಎಂಬ ನಂಬಿಕೆಯಿದೆ. ಉಪವಾಸವು ಬಳಲುತ್ತಿರುವವರ ಕಡೆಗೆ ಹೆಚ್ಚು ಸಹಾನುಭೂತಿ ಹೊಂದಲು, ನಿಮ್ಮ ದಾನ ಕಾರ್ಯಗಳನ್ನು ಹೆಚ್ಚಿಸಲು, ತಾಳ್ಮೆಯನ್ನು ಕಲಿಯಲು ಮತ್ತು ಕೆಟ್ಟ ಅಭ್ಯಾಸಗಳನ್ನು ತೊರೆಯಲು ನೆನಪು ಮಾಡಿಕೊಡುತ್ತದೆ. ಪ್ರತಿ ದಿನವೂ ಸುಹೂರ್ ಎಂದು ಕರೆಯಲ್ಪಡುವ ಮುಂಜಾನೆಯ ಊಟದಿಂದ ಉಪವಾಸ ಪ್ರಾರಂಭವಾಗುತ್ತದೆ ಮತ್ತು ಪ್ರತಿ ಸಂಜೆ, ಇಫ್ತಾರ್ ಎಂಬ ಸಂಜೆಯ ಊಟದೊಂದಿಗೆ ಉಪವಾಸವನ್ನು ಮುರಿಯಲಾಗುತ್ತದೆ.

ಹಸಿದ ಹೊಟ್ಟೆಯ ಕಷ್ಟ ಅದನ್ನು ಅನುಭವಿಸಿದವನಿಗೆ ಮಾತ್ರ ಗೊತ್ತು. ಅದಕ್ಕಾಗಿಯೇ ತಿಂಗಳುಗಳ ಕಾಲ ಉಪವಾಸವಿದ್ದು, ಹಸಿದವನ ಕಷ್ಟವನ್ನು ಸ್ವತ: ಅನುಭವಿಸಿ, ಹಸಿದವರ ಪಾಲಿಗೆ ನೆರವಾಗಬೇಕೆಂದು ಕೂಡ ಖುರಾನ್‌ ತಿಳಿಸುತ್ತದೆ. ಅಲ್ಲದೆ ಪ್ರತೀ ಕ್ಷಣವೂ ಅಕ್ರಮ ಅಧರ್ಮಗಳಿಂದ ದೂರ ಉಳಿದು ಧರ್ಮನಿಷ್ಟನಂತೆತೆ ಬದುಕಲು ಪ್ರೇರೇಪಿಸುತ್ತದೆ

ಸಾಮಾನ್ಯವಾಗಿ ಮುಸ್ಲಿಮರು ತಮ್ಮ ಉಪವಾಸವನ್ನು ಖರ್ಜೂರ ಸೇವಿಸುವ ಮೂಲಕ ಪೂರ್ಣಗೊಳಿಸುತ್ತಾರೆ. 12 ರಿಂದ 17 ಗಂಟೆಗಳ ಕಠಿಣ ಉಪವಾಸದ ಬಳಿಕ ಮುಸ್ಲಿಮರು ಖರ್ಜೂರವನ್ನೇ ಸೇವಿಸುವುದರ ಹಿಂದೆ ದೊಡ್ಡ ಇತಿಹಾಸವೇ ಇದೆ.

ಪಶ್ಚಿಮ ಏಷ್ಯಾಗಳಲ್ಲಿ ಈ ಸಮಯದಲ್ಲಿ ಖರ್ಜೂರವು ಹೆಚ್ಚಾಗಿ ಸಿಗುವುದರಿಂದ ರೋಜಾ ಮುಗಿದ ಬಳಿಕ ಮುಸ್ಲಿಮರು ಖರ್ಜೂರವನ್ನು ಸೇವಿಸುವ ಮೂಲಕ ಉಪವಾಸ ಮುರಿಯುತ್ತಾರೆ. ಪ್ರವಾದಿಗಳೇ ರಂಜಾನ್ ಸಮಯದಲ್ಲಿ ರಸಭರಿತವಾದ ಖರ್ಜೂರಗಳನ್ನು ಸೇವನೆ ಮಾಡುವ ಮೂಲಕ ಉಪವಾಸ ಮುರಿಯುತ್ತಿದ್ದರು. ಪ್ರವಾದಿ ಮೊಹಮ್ಮದ್ ಅವರ ನೆಚ್ಚಿನ ಹಾಗೂ ಅವರು ಹೆಚ್ಚಾಗಿ ಇಷ್ಟಪಟ್ಟು ತಿನ್ನುತ್ತಿದ್ದ ಆಹಾರ ಪದಾರ್ಥ ಖರ್ಜೂರವಾಗಿತ್ತು. ಹೀಗಾಗಿ ಇಫ್ತಾರ್ ಸಮಯದಲ್ಲಿ ಮುಸ್ಲಿಮರು ಖರ್ಜೂರವನ್ನು ಸೇವಿಸುವ ಮೂಲಕ ತಮ್ಮ ಉಪವಾಸವನ್ನು ಮುರಿಯುತ್ತಾರೆ. ರಂಜಾನ್ ಸಮಯದಲ್ಲಿ ಅಥವಾ ವರ್ಷದ ಯಾವುದೇ ದಿನಗಳಲ್ಲಿ ಖರ್ಜೂರ ಸೇವನೆ ಮಾಡುವುದರಿಂದ ನಾವು ನಮ್ಮ ಪ್ರವಾದಿಗಳಿಗೆ ಹಾಗೂ ನಮ್ಮ ಧರ್ಮಕ್ಕೆ ಇನ್ನಷ್ಟು ಹತ್ತಿರವಾಗುತ್ತೇವೆ ಎನ್ನುವುದು ಇಸ್ಲಾಂ ಧರ್ಮದಲ್ಲಿರುವ ನಂಬಿಕೆಯಾಗಿದೆ. ಹೀಗಾಗಿ ಮುಸ್ಲಿಮರು ತಮ್ಮ ಧರ್ಮದಲ್ಲಿ ಖರ್ಜೂರಕ್ಕೆ ವಿಶೇಷ ಸ್ಥಾನ ನೀಡಿದ್ದಾರೆ.

ವೈಜ್ಞಾನಿಕ ಕಾರಣವೇನು?
ಇನ್ನು ವೈಜ್ಞಾನಿಕ ರೀತಿಯಲ್ಲಿ ನೋಡುವುದಾದರೆ ಖರ್ಜೂರದಲ್ಲಿ ಪ್ರೋಟೀನ್, ವಿವಿಧ ಜೀವಸತ್ವಗಳು ಹಾಗೂ ಖನಿಜಾಂಶಗಳು ಅಗಾಧ ಪ್ರಮಾಣದಲ್ಲಿ ಇರುತ್ತದೆ. ಖರ್ಜೂರದಲ್ಲಿ ಪಾಲಿಫಿನಾಲ್, ಮ್ಯಾಂಗನೀಸ್, ಪೊಟ್ಯಾಷಿಯಂ ಹಾಗೂ ಕಬ್ಬಿಣಾಂಶ ಕೂಡ ಇದೆ. ದಿನವಿಡೀ ಖಾಲಿ ಹೊಟ್ಟೆಯಿಂದ ಇರುವವರು ಒಮ್ಮೆಲೆ ಸಿಕ್ಕಿದ್ದೆಲ್ಲ ತಿಂದರೆ ಅಜೀರ್ಣ ಹಾಗೂ ಆಸಿಡಿಟಿ ಸಮಸ್ಯೆ ಕಾಡುವ ಸಾಧ್ಯತೆ ಹೆಚ್ಚಿರುತ್ತದೆ. ಖರ್ಜೂರ ವಿವಿಧ ಪೋಷಕಾಂಶಗಳಿಂದ ಸಮೃದ್ಧವಾಗಿದ್ದು ಯಾವುದೇ ರೀತಿಯ ಆರೋಗ್ಯ ಸಮಸ್ಯೆಯನ್ನು ನೀಡದೆಯೇ ದೇಹಕ್ಕೆ ಹೆಚ್ಚಿನ ಶಕ್ತಿ ಕೊಡುತ್ತದೆ.

ಖರ್ಜೂರವು ನೈಸರ್ಗಿಕ ಸಕ್ಕರೆಯಂತೆ ಕಾರ್ಯ ನಿರ್ವಹಿಸುತ್ತದೆ. ಇದರಲ್ಲಿರುವ ವಿಟಮಿನ್ ಬಿ 6, ಹಾಗೂ ಕಬ್ಬಿಣಾಂಶ ಹಾಗೂ ಫೈಬರ್ ದೇಹವನ್ನು ಹೆಚ್ಚು ಸಮಯಗಳ ಕಾಲ ಹಸಿವೆಯಾಗದಂತೆ ನೋಡಿಕೊಳ್ಳುತ್ತದೆ. ಇದರಿಂದ ಜನರಿಗೆ ಹೆಚ್ಚುಕಾಲ ಹೊಟ್ಟೆ ತುಂಬಿದಂತಹ ಅನುಭವ ಕೂಡ ನೀಡುತ್ತದೆ. ಆದ್ದರಿಂದ ಮುಸ್ಲಿಂಮರು ಖರ್ಜೂರ ಸೇವಿಸುವ ಮೂಲಕ ರಂಜಾನ್ ಉಪವಾಸ ಮುರಿಯುತ್ತಾರೆ.

ಈ ಹಬ್ಬದಲ್ಲಿ ಶ್ರೀಮಂತ, ಬಡವ, ಬಲ್ಲಿದ ಎನ್ನದೇ ಎಲ್ಲರೂ ಕೂಡ ತಮ್ಮ ಕೈಲಾದಷ್ಟು ದಾನವನ್ನನು ಮಾಡುತ್ತಾರೆ. ಅದರಲ್ಲೂ ಮುಖ್ಯವಾಗಿ ನಿರಾಶ್ರಿತರಿಗೆ, ತುಂಬಾ ಬಡವರಿಗೆ ಈ ಸಮಯದಲ್ಲಿ ದಾನವನ್ನು ಮಾಡಲಾಗುತ್ತದೆ. ಇದಕ್ಕೆ ಜಕಾತ್‌ ಎಂದೂ ಹೇಳುತ್ತಾರೆ. ಈ ದಾನದಲ್ಲಿ 2 ರಿಂದ 5 ಕೆ.ಜಿಯಷ್ಟು ಅಕ್ಕಿ ಅಥವಾ ಗೋಧಿಯನ್ನು ಬಡವರಿಗೆ ಹಂಚಲಾಗುತ್ತದೆ. ಹಬ್ಬದ ದಿನ ಮಾಡುವ ವಿಶೇಷ ಪ್ರಾರ್ಥನೆ ಅಥವಾ ನಮಾಜ್‌ ಗೂ ಮುನ್ನವೇ ಈ ದಾನವನ್ನು ನೀಡಬೇಕು. ಈ ಈದ್‌ ಹಬ್ಬವು ಚಂದ್ರನನ್ನು ಆಧರಿಸಿರುತ್ತದೆ.

ರಂಜಾನ್ ತಿಂಗಳ ಉಪವಾಸ ಕೊನೆಗೊಂಡ ನಂತರ ಈದ್-ಉಲ್-ಫಿತರ್ ಹಬ್ಬವನ್ನು ಆಚರಿಸಲಾಗುತ್ತದೆ. ಇಸ್ಲಾಮಿಕ್ ಧರ್ಮದಲ್ಲಿ ಅತ್ಯಂತ ಮಹತ್ವದ ಹಬ್ಬಗಳಲ್ಲಿ ಇದು ಕೂಡಾ ಒಂದು. ಈ ದಿನದಂದು ಮುಸ್ಲಿಮರು ತಮ್ಮ ಉಪವಾಸ( ರೋಜಾ) ಕೊನೆಗೊಳಿಸುತ್ತಾರೆ. ರಂಜಾನ್ ಸಮಯದಲ್ಲಿ ಹೊಸ ಬಟ್ಟೆಯನ್ನು ಧರಿಸುತ್ತಾರೆ. ವಿಶೇಷ ಭಕ್ಷ್ಯಗಳನ್ನು ತಯಾರಿಸಿ ಕುಟುಂಬ ಮತ್ತು ಸ್ನೇಹಿತರ ಜೊತೆ ಸೇರಿ ಸಮಯವನ್ನು ಕಳೆಯುತ್ತಾರೆ.

TAGGED:DatesfastingmuslimsRamadanRamzan festival
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

West Bengal Election Election elephant appeared at a booth in the Jangalmahal forest region during the first phase of voting
Latest

West Bengal Election | ಮತದಾನ ಆರಂಭವಾಗುವ ಮೊದಲೇ ಮತಗಟ್ಟೆಗೆ ಆಗಮಿಸಿದ ಆನೆ!

Public TV
By Public TV
5 minutes ago
G Parameshwar 1
Bengaluru City

ಕಬಡ್ಡಿ ಬೆಟ್ಟಿಂಗ್ ಕೇಸ್‌ನಲ್ಲಿ ಪರಮೇಶ್ವರ್‌ಗೆ ಬಿಗ್ ರಿಲೀಫ್ – FIR ದಾಖಲಿಸದಂತೆ ಹೈಕೋರ್ಟ್ ತಡೆ

Public TV
By Public TV
8 minutes ago
SSLC Results Chikkodis Prathana who studied in a government school secured first place in Karnataka
Belgaum

SSLC Results| ಸರ್ಕಾರಿ ಶಾಲೆಯಲ್ಲಿ ಓದಿದ ಚಿಕ್ಕೋಡಿಯ ಪ್ರಾರ್ಥನಾ ರಾಜ್ಯಕ್ಕೆ ಫಸ್ಟ್‌

Public TV
By Public TV
32 minutes ago
kea
Bengaluru City

ಸಿಇಟಿ ಪರೀಕ್ಷೆಯ ಮೊದಲ ದಿನ 96% ಹಾಜರಾತಿ – ಕೊನೆಕ್ಷಣದಲ್ಲಿ ಬಂದವರಿಗೂ ಬರೆಯಲು ಅವಕಾಶ: KEA

Public TV
By Public TV
34 minutes ago
tirupati father kills wife and mother dies by suicide with children
Crime

ಪತ್ನಿ, ತಾಯಿಯನ್ನು ಕೊಂದು ಮಕ್ಕಳೊಂದಿಗೆ ರೈಲಿಗೆ ತಲೆ ಕೊಟ್ಟ ವ್ಯಕ್ತಿ

Public TV
By Public TV
50 minutes ago
india china map
Latest

ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾ ಪುನರಾರಂಭಿಸಲು ಕೇಂದ್ರ ಸರ್ಕಾರ ಸಿದ್ಧತೆ

Public TV
By Public TV
56 minutes ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?