Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗುತ್ತಿಗೆಯಲ್ಲಿ ಮೀಸಲಾತಿಗೆ ಸಂವಿಧಾನದಲ್ಲಿ ಅವಕಾಶವೇ ಇಲ್ಲ, ಸರ್ಕಾರವೇ ರಾಜೀನಾಮೆ ನೀಡ್ಬೇಕು: ಬೊಮ್ಮಾಯಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಗುತ್ತಿಗೆಯಲ್ಲಿ ಮೀಸಲಾತಿಗೆ ಸಂವಿಧಾನದಲ್ಲಿ ಅವಕಾಶವೇ ಇಲ್ಲ, ಸರ್ಕಾರವೇ ರಾಜೀನಾಮೆ ನೀಡ್ಬೇಕು: ಬೊಮ್ಮಾಯಿ

Karnataka

ಗುತ್ತಿಗೆಯಲ್ಲಿ ಮೀಸಲಾತಿಗೆ ಸಂವಿಧಾನದಲ್ಲಿ ಅವಕಾಶವೇ ಇಲ್ಲ, ಸರ್ಕಾರವೇ ರಾಜೀನಾಮೆ ನೀಡ್ಬೇಕು: ಬೊಮ್ಮಾಯಿ

Public TV
Last updated: March 24, 2025 8:13 pm
Public TV
Share
3 Min Read
Basavaraj Bommai 1
SHARE

– ಹನಿಟ್ರ್ಯಾಪ್‌ ಪ್ರಕರಣ ಕಾಂಗ್ರೆಸ್ ಬುಡಕ್ಕೆ ಬರುತ್ತೆ
– `ಕೈ’ ಹೈಕಮಾಂಡ್ ಸಿಎಂ ಜೊತೆ ಸೇರಿ ಪ್ರಕರಣ ಮುಚ್ಚಿ ಹಾಕಲು ನೋಡ್ತಿದೆ

ನವದೆಹಲಿ: ಮುಸ್ಲಿಮರಿಗೆ ಗುತ್ತಿಗೆಯಲ್ಲಿ 4% ಮೀಸಲಾತಿ ನೀಡುವ ಮೂಲಕ ಈ ಸರ್ಕಾರ ಸಂವಿಧಾನ ವಿರೋಧಿ ಕೆಲಸಗಳನ್ನು ಮಾಡುತ್ತಿದೆ. ಸಂವಿಧಾನ ವಿರೋಧಿ ಸರ್ಕಾರ ಕರ್ನಾಟಕದಲ್ಲಿದ್ದು, ಈ ಸರ್ಕಾರ ಆಡಳಿತ ನಡೆಸಲು ಯಾವುದೇ ನೈತಿಕ ಹಕ್ಕಿಲ್ಲ. ಇಡೀ ಸರ್ಕಾರವೇ ರಾಜೀನಾಮೆ ನೀಡಬೇಕು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಆಗ್ರಹಿಸಿದರು.

ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ ಆಂಧ್ರಪ್ರದೇಶ (Andhra Pradesh) ಹಾಗೂ ಪಶ್ಚಿಮ ಬಂಗಾಳ ಪ್ರಕರಣಗಳಲ್ಲಿ ಧರ್ಮಾಧಾರಿತ ಮೀಸಲಾತಿಗೆ ಸಂವಿಧಾನದಲ್ಲಿ ಅವಕಾಶ ಇಲ್ಲ ಎಂದು ಸುಪ್ರೀಂಕೋರ್ಟ್ ಬಹಳ ಸ್ಪಷ್ಟವಾಗಿ ಹೇಳಿದೆ. ಆದರೂ, ಇವರು ಧರ್ಮದ ಆಧಾರದಲ್ಲಿ ಮೀಸಲಾತಿ ತರುತ್ತಿದ್ದಾರೆ. ಅದೂ ಕೂಡ ಗುತ್ತಿಗೆಯಲ್ಲಿ ಮೀಸಲಾತಿ ನೀಡಲು ಹೊರಟಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಸಂವಿಧಾನ ತಿದ್ದುಪಡಿಯ ಅಗತ್ಯವೂ ಇಲ್ಲ, ಅನಿವಾರ್ಯತೆಯೂ ಇಲ್ಲ: ಬಿ.ಕೆ.ಹರಿಪ್ರಸಾದ್

ಗುತ್ತಿಗೆಯಲ್ಲಿ ಮೀಸಲಾತಿ ನೀಡಲು ಸಂವಿಧಾನದಲ್ಲಿ ಯಾವುದೇ ಅವಕಾಶ ಇಲ್ಲ. ಟೆಂಡರ್‌ನಲ್ಲಿ ಪಾರದರ್ಶಕತೆ ಕಾಯ್ದೆಯನ್ನೇ ರದ್ದು ಪಡಿಸುವುದು ಒಳ್ಳೆಯದು. ಸುಮಾರು ಶೇ.30 ರಿಂದ 40ರಷ್ಟು ಮೀಸಲಾತಿ ನೀಡಿದರೆ ಪಾರದರ್ಶಕತೆಗೆ ಎಲ್ಲಿ ಗೌರವ ಇರುತ್ತದೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ:  ಮುಸ್ಲಿಂ ಮೀಸಲಾತಿ ಸಮರ್ಥನೆ ಭರದಲ್ಲಿ ಡಿಕೆ ವಿವಾದ- ಸಂಸತ್‌ನ ಉಭಯ ಸದನಗಳಲ್ಲಿ ಕೋಲಾಹಲ

ಅಲ್ಲದೇ ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿಯವರು (Rahul Gandhi) ಯಾವಾಗಲೂ ಸಂವಿಧಾನವನ್ನು ಕೈಯಲ್ಲಿ ಹಿಡಿದುಕೊಂಡು ಓಡಾಡುತ್ತಾರೆ. ಆದರೆ, ಕರ್ನಾಟಕ ಕಾಂಗ್ರೆಸ್ ಸರ್ಕಾರ ಅಂಬೇಡ್ಕರ್ ಅವರ ಸಂವಿಧಾನದ ವಿರುದ್ಧ ಕ್ರಮ ಕೈಗೊಂಡಿದ್ದಾರೆ. ಈ ಬಗ್ಗೆ ಕರ್ನಾಟಕ ಡಿಸಿಎಂ ಡಿ.ಕೆ.ಶಿವಕುಮಾರ್ (D K Shivakumar) ಮಾತನಾಡಿದ್ದಾರೆ. ಮುಸಲ್ಮಾನರಿಗೆ ಮೀಸಲಾತಿ ನೀಡಲು ಸಂವಿಧಾನದಲ್ಲಿ ಅವಕಾಶ ಇಲ್ಲ ಎಂದು ಡಿಕೆಶಿ ಅವರೇ ಒಪ್ಪಿಕೊಂಡಿದ್ದಾರೆ. ಸಂವಿಧಾನ ತಿದ್ದುಪಡಿ ತರುತ್ತೇವೆ ಎಂದು ಹೇಳಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಹಾಲಿನ ದರ ಏರಿಕೆಯ ಒತ್ತಡಕ್ಕೆ ಮಣಿಯದ ಸಿಎಂ – ಇಂದಿನ ಹೈವೋಲ್ಟೇಜ್ ಸಭೆಯಲ್ಲಿ ಏನಾಯ್ತು?

ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಚುನಾವಣೆಗೂ ಮುಂಚೆ ಬಿಜೆಪಿಯವರು ಸಂವಿಧಾನ ಬದಲಾವಣೆ ಮಾಡುತ್ತಾರೆ ಎಂದು ಹೇಳಿದ್ದರು. ಆದರೆ, ಸಂವಿಧಾನದ ಮೂಲ ಉದ್ದೇಶವನ್ನೇ ಬದಲಾವಣೆ ಮಾಡಿರುವುದು ಕಾಂಗ್ರೆಸ್ ಸರ್ಕಾರ. ಕಾಂಗ್ರೆಸ್ಸಿನ ಮುಖವಾಡ ಕಳಚಿ ಬಿದ್ದಿದೆ ಹೇಳಿದರು. ಇದನ್ನೂ ಓದಿ: 3.5 ಕೋಟಿಗೆ ಖರೀದಿಸಿದ್ದ ಅಪಾರ್ಟ್‌ಮೆಂಟ್‌ 6.6 ಕೋಟಿಗೆ ಮಾರಿದ ಅಕ್ಷಯ್ ಕುಮಾರ್

ಸಂವಿಧಾನದ ಮೇಲೆ ಪ್ರಮಾಣವಚನ ತೆಗೆದುಕೊಂಡು ಅದರ ವಿರುದ್ಧ ಕೆಲಸ ಮಾಡುತ್ತಾರೆ ಎಂದರೆ ಇದು ಸಂವಿಧಾನ ವಿರೋಧಿ ಅಷ್ಟೇ ಅಲ್ಲ. ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ವಿಚಾರಕ್ಕೂ ವಿರುದ್ಧವಾಗಿದೆ. ತುಷ್ಟೀಕರಣದ ಪರಾಕಾಷ್ಟೇ ಮೀರಿದೆ. ತುಷ್ಟೀಕರಣಕ್ಕಾಗಿ ದೇಶವನ್ನು ಒಡೆಯುವ ತೀರ್ಮಾನ ತೆಗೆದುಕೊಳ್ಳುವುದು ಸಂವಿಧಾನಿಕ ಹುದ್ದೆಯಲ್ಲಿರುವವರಿಗೆ ಇದು ನ್ಯಾಯಾನಾ ಎಂದು ಪ್ರಶ್ನಿಸಿದರು. ಇದನ್ನೂ ಓದಿ:  ಪತ್ನಿಗೆ 9 ಕೋಟಿ ಜೀವನಾಂಶ, ತಿಂಗಳಿಗೆ 4 ಲಕ್ಷ – ಭಾರೀ ಸಂಚಲನ ಸೃಷ್ಟಿಸಿದ ಟೆಕ್ಕಿ ಪೋಸ್ಟ್

ಸ್ವಾತಂತ್ರ‍್ಯ ಬಂದಾಗ ಕಾಂಗ್ರೆಸ್‌ನವರು ತನ್ನ ಆಡಳಿತಕ್ಕಾಗಿ ದೇಶ ವಿಭಜನೆ ಮಾಡಿದರು. ಶಾಭಾನು ಪ್ರಕರಣದಲ್ಲಿ ಕುರ್ಚಿ ಉಳಿಸಿಕೊಳ್ಳಲು ಕಾನೂನು ಬದಲಾವಣೆ ಮಾಡಿದ್ದರು. ಈಗ ಸಂವಿಧಾನವನ್ನೇ ಬದಲಾವಣೆ ಮಾಡಲು ಹೊರಟಿದ್ದಾರೆ. ರಾಹುಲ್ ಗಾಂಧಿಯವರಿಗೆ ಇನ್ನು ಮುಂದೆ ಸಂವಿಧಾನವನ್ನು ಹಿಡಿಕೊಳ್ಳುವ ಯಾವುದೇ ನೈತಿಕ ಹಕ್ಕಿಲ್ಲ. ಈ ಸರ್ಕಾರ ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಸಂಸದರ ಸಂಬಳ 24% ಏರಿಕೆ – ಈಗ ಎಷ್ಟಿದೆ? ಎಷ್ಟು ಏರಿಕೆಯಾಗಿದೆ?

ಕಾಂಗ್ರೆಸ್ ಬುಡಕ್ಕೆ ಹನಿಟ್ರ್ಯಾಪ್‌
ಹನಿಟ್ರ‍್ಯಾಪ್ ಕುರಿತು ಪ್ರತಿಕ್ರಿಯಿಸಿದ ಅವರು, ಹನಿಟ್ರ‍್ಯಾಪ್ ವಿಚಾರದಲ್ಲಿ ಮತ್ತೆ ರಾಜಕಾರಣ ಶುರುವಾಗಿದೆ. ಸಹಕಾರ ಸಚಿವ ಕೆ.ಎನ್.ರಾಜಣ್ಣ (K N Rajanna) ಅವರು ವಿಧಾನಸಭೆಯಲ್ಲಿ ತಮ್ಮದಷ್ಟೇ ಅಲ್ಲ 48 ಜನರ ಹನಿಟ್ರ‍್ಯಾಪ್ ಆಗಿದೆ ಅಂತ ಹೇಳಿದ್ದಾರೆ. ಇದು ಬಹಳ ಗಂಭೀರ ವಿಷಯ. ಅವರು ದೂರು ಕೊಡುತ್ತೇನೆ ಅಂತ ಹೇಳಿದ್ದರು. ಇನ್ನು ದೂರು ಕೊಟ್ಟಿಲ್ಲ. ತನಿಖೆಯೂ ನಡೆಯುತ್ತಿಲ್ಲ ಎಂದರು.

ಈಗ ಕಾಂಗ್ರೆಸ್ ಹೈಕಮಾಂಡ್ ಇದರಲ್ಲಿ ಮಧ್ಯ ಪ್ರವೇಶ ಮಾಡಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikharjun Kharge) ಹಾಗೂ ಸಿಎಂ ಸಿದ್ದರಾಮಯ್ಯ ಅವರ ನಡುವೆ ಈ ಪ್ರಕರಣ ಮುಚ್ಚಿಹಾಕುವ ಕುರಿತು ಚರ್ಚೆ ನಡೆದಿದೆ. ಕಾಂಗ್ರೆಸ್‌ನ ಬುಡಕ್ಕೆ ಈ ಪ್ರಕರಣ ಬರುತ್ತದೆ ಎಂದು ಅವರಿಗೆ ಗೊತ್ತಾಗಿದೆ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ರೀಲ್ಸ್ ತಂದ ಆಪತ್ತು- ರಜತ್, ವಿನಯ್‌ ಅರೆಸ್ಟ್‌

ಡಿಸಿಎಂ ಹೇಳಿಕೆಯನ್ನು ನೋಡಿದಾಗ ಇವರು ರಾಜ್ಯವನ್ನು ಆರ್ಥಿಕವಾಗಿ ಹಾಳು ಮಾಡಿದ್ದಾರೆ. ನೈತಿಕವಾಗಿಯೂ ರಾಜ್ಯವನ್ನು ಹಾಳು ಮಾಡಿದ್ದಾರೆ. ಈಗ ಸಂವಿಧಾನ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಇದು ಜನವಿರೋಧಿ ಸರ್ಕಾರ ಇದು ಎಷ್ಟು ಬೇಗ ತೊಲಗುತ್ತದೆಯೋ ಅಷ್ಟು ಕರ್ನಾಟಕಕ್ಕೆ ಒಳ್ಳೆಯದಾಗುತ್ತದೆ ಎಂದು ಹೇಳಿದರು.

TAGGED:Basavaraj Bommaibjpcongressd k shivakumarHanitrap casenewdelhiಕಾಂಗ್ರೆಸ್ಡಿ.ಕೆ.ಶಿವಕುಮಾರ್ನವದೆಹಲಿಬಜೆಪಿಬಸವರಾಜ್ ಬೊಮ್ಮಾಯಿಹನಿಟ್ರ್ಯಾಪ್
Share This Article
Facebook Whatsapp Whatsapp Telegram

Cinema news

Bengaluru 17th Film Festival
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಸಿಎಂ ಚಾಲನೆ
Bengaluru City Cinema Districts Karnataka Latest Sandalwood Top Stories
PRAJWAL DEVARAJ 2
ಸಹೋದರನ ಚಿತ್ರಕ್ಕೆ ನಿರ್ಮಾಪಕನಾದ ಪ್ರಜ್ವಲ್ ದೇವರಾಜ್ – ಚಿತ್ರದ ಫಸ್ಟ್ ಲುಕ್ ಲಾಂಚ್
Cinema Latest Sandalwood Top Stories
actor mayur patel car accident
ಕುಡಿದು ವಾಹನ ಚಲಾಯಿಸಿ ಕಾರುಗಳಿಗೆ ಸರಣಿ ಅಪಘಾತ; ನಟ ಮಯೂರ್ ಪಟೇಲ್ ವಿರುದ್ಧ FIR
Cinema Crime Latest Main Post Sandalwood
Ranveer Singh Rishab Shetty Kantara
ತುಳುನಾಡಿನ ದೈವಕ್ಕೆ ʻಹೆಣ್ಣು ದೆವ್ವʼ ಅಂತ ಅಪಮಾನ – ರಣವೀರ್ ಸಿಂಗ್‌ ವಿರುದ್ಧ FIR
Bengaluru City Cinema Crime Latest Main Post

You Might Also Like

Bengaluru police crack down on one way violations nearly 11498 cases booked in four days
Bengaluru City

ಬೆಂಗಳೂರಿನಲ್ಲಿ ಒನ್‌ ವೇ ಸಂಚಾರದ ವಿರುದ್ಧ ಆಪರೇಷನ್‌ – ಬರೋಬ್ಬರಿ 23 ಸಾವಿರ ಕೇಸ್ ದಾಖಲು

Public TV
By Public TV
29 minutes ago
PT Usha VSrinivasan
Latest

IOA ಅಧ್ಯಕ್ಷೆ ಪಿ.ಟಿ ಉಷಾ ಪತಿ ಶ್ರೀನಿವಾಸನ್ ನಿಧನ

Public TV
By Public TV
32 minutes ago
inspector govindaraj
Bengaluru City

ಚೀಟಿ ವ್ಯವಹಾರದಲ್ಲಿ ವಂಚನೆ; ಕೇಸ್‌ನಿಂದ ಕೈಬಿಡಲು 5 ಲಕ್ಷಕ್ಕೆ ಡೀಲ್ ಮಾಡಿದ್ದ ಇನ್‌ಸ್ಪೆಕ್ಟರ್ ‘ಲೋಕಾ’ ಬಲೆಗೆ

Public TV
By Public TV
1 hour ago
Mohandas Pai Ramalinga Reddy
Districts

ಬಸ್‌ ವ್ಯವಸ್ಥೆ ಸರಿಯಿಲ್ಲ.. ನಿಮ್ಮ ಜೊತೆ ಚರ್ಚಿಸಲು BMTC ಎಂಡಿ ಸಾಕು – ಮೋಹನ್‌ದಾಸ್‌ ಪೈ Vs ರಾಮಲಿಂಗಾರೆಡ್ಡಿ

Public TV
By Public TV
2 hours ago
Pakistan Zindabad Naseer Hussain
Bengaluru City

ಪಾಕಿಸ್ತಾನ ಜಿಂದಾಬಾದ್ ಕೂಗಿದವರಿಗೆ ಇಲ್ಲ ಶಿಕ್ಷೆ – 3 ವರ್ಷಗಳಲ್ಲಿ ಒಂದು ಕೇಸ್‌ಗೂ ಶಿಕ್ಷೆ ಕೊಡಿಸದ ಪೊಲೀಸ್ ಇಲಾಖೆ

Public TV
By Public TV
2 hours ago
Vladimir Putin
Latest

4 ವರ್ಷಗಳ ಯುದ್ಧಕ್ಕೆ ಸಿಗುತ್ತಾ ಮುಕ್ತಿ? – ಶಾಂತಿ ಮಾತುಕತೆಗೆ ಉಕ್ರೇನ್‌ಗೆ ರಷ್ಯಾ ಆಹ್ವಾನ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?